ಅಂತರಾಷ್ಟ್ರೀಯ ಡ್ರಗ್ಸ್ ಜಾಲದ ಕಿಂಗ್ ಪಿನ್ ತಮಿಳು ಚಿತ್ರ ನಿರ್ಮಾಪಕ ಜಾಫರ್ ಸಾದಿಕ್ ಬಂಧನ: ಎನ್‌ಸಿಬಿ ಕಾರ್ಯಾಚರಣೆ

ಚೆನ್ನೈ: 2,000 ಕೋಟಿ ರೂಪಾಯಿಗಳ ಮಾದಕವಸ್ತು ಕಳ್ಳಸಾಗಣೆ ದಂಧೆಯಲ್ಲಿ ಮಾಜಿ ಡಿಎಂಕೆ ನಾಯಕ ಮತ್ತು ತಮಿಳು ಚಲನಚಿತ್ರ ನಿರ್ಮಾಪಕ ಜಾಫರ್ ಸಾದಿಕ್ ನನ್ನು ಎನ್‌ಸಿಬಿ ಬಂಧಿಸಿದೆ. ಕಳೆದ ತಿಂಗಳು 2,000 ಕೋಟಿ ರೂ. ಮಾದಕ ವಸ್ತು ಕಳ್ಳಸಾಗಣೆ ದಂಧೆಗೆ ಸಂಬಂಧಿಸಿದಂತೆ ದ್ರಾವಿಡ ಮುನ್ನೇತ್ರ ಕಳಗಂ (DMK) ಮಾಜಿ ಪದಾಧಿಕಾರಿ ಮತ್ತು ತಮಿಳು ಚಲನಚಿತ್ರ ನಿರ್ಮಾಪಕ ಜಾಫರ್ ಸಾದಿಕ್ ನನ್ನು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. NCB ಉಪ ಮಹಾನಿರ್ದೇಶಕ (ಕಾರ್ಯಾಚರಣೆ) […]

ಮುಂಬೈನ ಧಾರಾವಿಯ ಹುಡುಗ ಇದೀಗ ಭಾರತೀಯ ಸೇನೆಯಲ್ಲಿ ಕಮಿಷನ್ಡ್ ಆಫೀಸರ್: ಲೆಫ್ಟಿನೆಂಟ್ ಉಮೇಶ್ ಕೀಲು ಸಾಧನೆ ಯುವಕರಿಗೆ ಮಾದರಿ

ಮುಂಬೈ: ಪ್ರಪ್ರಂಚದ ಅತಿದೊಡ್ಡ ಸ್ಲಮ್ ಎನ್ನುವ ಕುಖ್ಯಾತಿ ಪಡೆದ ಧಾರಾವಿಯ(Dharavi) ಕಠಿಣ ಪರಿಸರದಲ್ಲಿ ಬೆಳೆದ ಲೆಫ್ಟಿನೆಂಟ್ ಉಮೇಶ್ ಕೀಲು ಇಂದು ಭಾರತೀಯ ಸೇನೆಯಲ್ಲಿ(Indian Army) ಕಮಿಷನ್ಡ್ ಆಫೀಸರ್ ಆಗಿ ನಿಯುಕ್ತಿಗೊಂಡಿದ್ದಾರೆ. ಸಯಾನ್ ಕೋಳಿವಾಡದ ಕೊಳೆಗೇರಿಯಲ್ಲಿ ಹುಟ್ಟಿ ಬೆಳೆದ ಉಮೇಶ್, ಶನಿವಾರ ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಿಂದ ಭಾರತೀಯ ಸೇನೆಯಲ್ಲಿ ಕಮಿಷನ್ಡ್ ಆಫೀಸರ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದಾರೆ. ಧಾರಾವಿಯ 10* 5 ಅಡಿಯ ಮನೆಯಲ್ಲಿ ನಾಲ್ಕು ಜನರ ಪರಿವಾರದಿಂದ ಬಂದ ಉಮೇಶ್ ಕೀಲು ಎಲ್ಲ ಸಂಕಷ್ಟಗಳನ್ನು ಮೀರಿ […]

ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಿ ಮೋದಿ ಜಂಬೂ ಸವಾರಿ, ಜೀಪ್ ಸಫಾರಿ

ಗುವಾಹಾಟಿ: ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿರುವ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಮಾರ್ಚ್ 9 ರಂದು ಪ್ರಧಾನಿ ನರೇಂದ್ರ ಮೋದಿ ಆನೆ ಸವಾರಿ ಮಾಡಿದರು. ಪಾರ್ಕ್‌ನ ಸೆಂಟ್ರಲ್ ಕೊಹೊರಾ ರೇಂಜ್‌ನ ಮಿಹಿಮುಖ್ ವಿಭಾಗದಲ್ಲಿ, ಮೊದಲು ಆನೆ ಸಫಾರಿ, ನಂತರ ಅದೇ ವ್ಯಾಪ್ತಿಯಲ್ಲಿ ಅವರು ಜೀಪ್ ಸಫಾರಿ ನಡೆಸಿದರು. ಅವರ ಭೇಟಿಯ ಸಂದರ್ಭದಲ್ಲಿ, ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ಅರಣ್ಯ ರಕ್ಷಕರ ತಂಡ ‘ವನ ದುರ್ಗ’ ದೊಂದಿಗೆ ಸಂವಾದ ನಡೆಸಿದರು. ಲಖಿಮಾಯಿ, ಪ್ರದ್ಯುಮ್ನ ಮತ್ತು […]

ರಾಮಲಲ್ಲಾನ ದರ್ಶನ ಪಡೆದು ಮಂತ್ರಮುಗ್ದರಾದ ರಕ್ಷಿತ್ ಶೆಟ್ಟಿ; ಅರುಣ್ ಯೋಗಿರಾಜ್ ಅವರನ್ನು ಭೇಟಿಯಾಗುವ ಬಯಕೆ ತೋಡಿಕೊಂಡ ಸಿಂಪಲ್ ಹುಡುಗ

ಅಯೋಧ್ಯಾ: ಕನ್ನಡ ಚಿತ್ರನಟ-ನಿರ್ದೇಶಕ ರಕ್ಷಿತ್ ಶೆಟ್ಟಿ ಅಯೋಧ್ಯಾ ರಾಮಜನ್ಮಸ್ಥಾನದಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರಕ್ಕೆ ಭೇಟಿ ನೀಡಿದ್ದು, ರಾಮಲಲ್ಲಾನ ದರ್ಶನ ಪಡೆದು ಮಂತ್ರಮುಗ್ಧರಾಗಿದ್ದಾರೆ. ಪ್ರಾಣಪ್ರತಿಷ್ಠೆ ನಡೆದಾಗಿನಿಂದಲೂ ರಾಮನನ್ನು ನೇರವಾಗಿ ನೋಡಬೇಕುನ್ನುವ ಹಂಬಲವನ್ನು ನಿಜವಾಗಿಸಿಕೊಂಡಿರುವ ರಕ್ಷಿತ್, ಸುಮಾರು ಅರ್ಧ ಗಂಟೆಗಳ ಕಾಲ ರಾಮನ ಮೂರ್ತಿಯನ್ನು ಆತನ ಸೂಜಿಗಲ್ಲಿನಂತೆ ಆಕರ್ಷಿಸುವ ಕಣ್ಣುಗಳನ್ನು ತದೇಕಚಿತ್ತದಿಂದ ನೋಡಿ ಶಿಲ್ಪಕಾರನ ಕಲಾ ನೈಪುಣ್ಯಕ್ಕೆ ತಲೆದೂಗಿದ್ದಾರೆ. ರಾಮ ಕೇವಲ ದೇವರಾಗಿರದೆ, ಜೀವ ತುಂಬಿರುವ ಒಂದು ಕಲಾಪ್ರಕಾರದಂತೆ ಕಂಡಿದ್ದು, ಮೂರ್ತಿಯನ್ನು ಕೆತ್ತಿದ ಅರುಣ್ ಯೋಗಿರಾಜ್ ಒಂದು ದಂತ ಕತೆಯಾಗಿ […]

ಮೊಡವೆಗಾಗಿ ಮುಖಕ್ಕೆ ಹಚ್ಚುವ ಉತ್ಪನ್ನಗಳಲ್ಲಿದೆ ಕ್ಯಾನ್ಸರ್ ಕಾರಕ ಅಂಶಗಳು!! ಅಮೇರಿಕಾದ ಸ್ವತಂತ್ರ ಪರೀಕ್ಷಾ ಪ್ರಯೋಗಾಲಯದ ವರದಿಯಲ್ಲಿ ಬಹಿರಂಗ

ಪ್ರೊಆಕ್ಟಿವ್, ಟಾರ್ಗೆಟ್ ಕಾರ್ಪೊರೇಷನ್‌ನ ಅಪ್ & ಅಪ್ ಮತ್ತು ಕ್ಲಿನಿಕ್ ಸೇರಿದಂತೆ ಹಲವು ಬ್ರಾಂಡ್‌ಗಳ ಮೊಡವೆ ಉತ್ಪನ್ನಗಳು ಕ್ಯಾನ್ಸರ್ ಕಾರಕ ಅಂಶಗಳ ಮಟ್ಟವನ್ನು ಹೆಚ್ಚಿಸಿವೆ ಎಂದು ಸ್ವತಂತ್ರ ಪರೀಕ್ಷಾ ಪ್ರಯೋಗಾಲಯವು US ಆಹಾರ ಮತ್ತು ಔಷಧ ಮಂಡಳಿಗೆ ಸಲ್ಲಿಸಿದ ಅರ್ಜಿಯಲ್ಲಿ ಮಂಗಳವಾರ ತಡರಾತ್ರಿ ತಿಳಿಸಿದೆ ಎಂದು ವರದಿಯಾಗಿದೆ. ನಿಯಂತ್ರಕರು ತನಿಖೆ ನಡೆಸಿ ಸಕ್ರಿಯ ಘಟಕಾಂಶವಾದ ಬೆಂಜಾಯ್ಲ್ ಪೆರಾಕ್ಸೈಡ್ ಅನ್ನು ಒಳಗೊಂಡಿರುವ ಎಲ್ಲಾ ಸಂಬಂಧಿತ ಚಿಕಿತ್ಸೆಗಳನ್ನು ಹಿಂಪಡೆಯಲು ಲ್ಯಾಬ್ FDA ಯನ್ನು ಕೇಳಿದೆ. ಹ್ಯಾಂಡ್ ಸ್ಯಾನಿಟೈಸರ್‌ಗಳು, ಸನ್‌ಸ್ಕ್ರೀನ್‌ಗಳು ಮತ್ತು […]