Karnataka Election ನಾಲ್ಕು ದಿನ ಬಾಕಿ: ರೋಡ್ ಶೋ ಮೂಲಕ ಮೋದಿ, ಭರ್ಜರಿ ಮೋಡಿ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೇವಲ ನಾಲ್ಕು ದಿನಗಳು ಬಾಕಿ ಉಳಿದಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯ ರಾಜಧಾನಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು, ಮಾರ್ಗದ ಎರಡೂ ಬದಿಗಳಲ್ಲಿ ಸಾಲುಗಟ್ಟಿ ನಿಂತಿದ್ದ ಅಪಾರ ಸಂಖ್ಯೆಯ ಉತ್ಸಾಹಿ ಜನರತ್ತ ಕೈ ಬೀಸಿದರು.ಬೆಂಗಳೂರು ದಕ್ಷಿಣದ ಸೋಮೇಶ್ವರ ಭವನ ಆರ್ಬಿಐ ಮೈದಾನದಿಂದ ಮಲ್ಲೇಶ್ವರದ ಸ್ಯಾಂಕಿ ಟ್ಯಾಂಕ್ವರೆಗೆ 26 ಕಿ.ಮೀ ರೋಡ್ಶೋ ಸುಮಾರು ಮೂರು ಗಂಟೆಗಳಲ್ಲಿ ಮುಕ್ತಾಯವಾಯಿತು. ರೋಡ್ಶೋ ದಕ್ಷಿಣ ಮತ್ತು ಮಧ್ಯ ಬೆಂಗಳೂರಿನ ಭಾಗಗಳಲ್ಲಿ ಸಂಚರಿಸಿ ಸುಮಾರು ಹನ್ನೆರಡು ವಿಧಾನಸಭಾ […]
ಹರೀಶ್ ಪೂಂಜ ಪರವಾಗಿ ಬೃಹತ್ ರೋಡ್ ಶೋ ಮೂಲಕ ಮತಯಾಚಿಸಿದ ಹಿಂದೂ ಫಯರ್ ಬ್ರಾಂಡ್ ಖ್ಯಾತಿಯ ಅಸ್ಸಾಂ ಮುಖ್ಯಮಂತ್ರಿ

ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ ಅವರ ಪರವಾಗಿ ಹಿಂದೂ ಫಯರ್ ಬ್ರಾಂಡ್ ಖ್ಯಾತಿಯ, ಬೆಂಕಿ ಚೆಂಡಿನ ಮಾತುಗಳಿಂದ ಪ್ರಸಿದ್ಧಿ ಪಡೆದಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ್ ಬಿಸ್ವಾ ಶರ್ಮಾ ಅವರು ಇಂದು ದಿನಾಂಕ 06.05.2023 ರಂದು ಉಜಿರೆಯಲ್ಲಿ ಬೃಹತ್ ರೋಡ್ ಶೋ ಮೂಲಕ ಮತಯಾಚಿಸಿದರು. ಉಜಿರೆ ಎಸ್ಡಿಎಂ ಕಾಲೇಜು ಮೈದಾನದಿಂದ ಆರಂಭಗೊಂಡು ಜನಾರ್ಧನ ಸ್ವಾಮಿ ದೇವಸ್ಥಾನದ ಬೀದಿಯವರೆಗೆ ಬೃಹತ್ ರೋಡ್ ಶೋ ನಡೆಯಿತು. ಉಜಿರೆ ಮತ್ತು ಧರ್ಮಸ್ಥಳ ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ […]
ಎನ್ಸಿಪಿ ಪಕ್ಷದ ಅಧ್ಯಕ್ಷ ಸ್ಥಾನದಿಂದ ನಿವೃತ್ತಿ, ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಶರದ್ ಪವಾರ್ ಘೋಷಣೆ

ಮುಂಬಯಿ: ಅನುಭವಿ ಹಾಗ್ಊ ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಮಂಗಳವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಎರಡು ದಶಕಗಳ ಹಿಂದೆ ತಾವೇ ಕಟ್ಟಿ ಬೆಳೆಸಿದ ಪಕ್ಷದ ಚುಕ್ಕಾಣಿಯನ್ನು ಈ ಮೂಲಕ ಬಿಟ್ಟುಕೊಟ್ಟರು. ನಾನು ಎನ್ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಪವಾರ್ ತಮ್ಮ ಆತ್ಮಚರಿತ್ರೆಯ ‘ಲೋಕ್ ಮಾಝೆ ಸಂಗತಿ’ಯ ಎರಡನೇ ಆವೃತ್ತಿಯ ಬಿಡುಗಡೆ ಸಮಾರಂಭದಲ್ಲಿ ಹೇಳಿದರು. ಮಹಾರಾಷ್ಟ್ರ ರಾಜಕೀಯದ ಧೀಮಂತ ನಾಯಕ, 82 ವರ್ಷದ ಪವಾರ್ ಅವರು ಇನ್ನು ಮುಂದೆ […]
ಆಪರೇಶನ್ ಕಾವೇರಿ: ರಾತ್ರಿ ದೃಷ್ಟಿ ಕನ್ನಡಕಗಳನ್ನು ಬಳಸಿ ಭಾರತೀಯರನ್ನು ಸುಡಾನ್ ನಿಂದ ಪಾರು ಮಾಡಿದ ಭಾರತೀಯ ವಾಯುಸೇನೆ

ನವದೆಹಲಿ: ಸುಡಾನ್ನ ಸೇನೆ ಮತ್ತು ಅರೆಸೇನಾಪಡೆಯು ಅಧಿಕಾರಕ್ಕಾಗಿ ಹಿಂಸಾಚಾರದಲ್ಲಿ ತೊಡಗಿದ್ದು, ಇದು 400 ಕ್ಕೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡಿದೆ. ಹಿಂಸಾಚಾರ ಸಂತ್ರಸ್ತ ಸುಡಾನ್ ನಲ್ಲಿ ಕರ್ನಾಟಕವೂ ಸೇರಿದಂತೆ ಭಾರತದ ಹಲವಾರು ರಾಜ್ಯಗಳ ನಾಗರಿಕರು ಸಿಲುಕಿದ್ದು, ಸುಡಾನ್ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ರಕ್ಷಿಸಲು ಭಾರತವು “ಆಪರೇಷನ್ ಕಾವೇರಿ” ಅನ್ನು ಪ್ರಾರಂಭಿಸಿತು. ಶುಕ್ರವಾರ, ಸುಡಾನ್ ನಲ್ಲಿ ಸಿಕ್ಕಿಬಿದ್ದ 135 ಭಾರತೀಯರನ್ನು ಹೊತ್ತ ಸಿ-130ಜೆ ವಿಮಾನದ ಎರಡನೇ ಬ್ಯಾಚ್ ಬಿಕ್ಕಟ್ಟಿನ ರಾಷ್ಟ್ರದಿಂದ ನಿರ್ಗಮಿಸಿದೆ. #OperationKaveri#ModiHainToMumkinHain Salute to our brave officers […]
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಧಿಕೃತ ನಿವಾಸದ ‘ಸುಂದರೀಕರಣ’ಕ್ಕೆ 45 ಕೋಟಿ ಖರ್ಚು! ಕೊರೋನಾ ಸಂಕಷ್ಟ ಕಾಲದಲ್ಲಿ ದುಂದುವೆಚ್ಚ?

ಹೊಸದಿಲ್ಲಿ: ನಗರದ ಸಿವಿಲ್ ಲೈನ್ಸ್ನಲ್ಲಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕೃತ ನಿವಾಸದ ‘ಸುಂದರೀಕರಣ’ಕ್ಕೆ 45 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಬಿಜೆಪಿ ಮಂಗಳವಾರ ಹೇಳಿಕೊಂಡಿದ್ದು, ‘ನೈತಿಕ’ ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ. ವರದಿಗಳ ಪ್ರಕಾರ ಅರವಿಂದ್ ಕೇಜ್ರಿವಾಲ್ ಅವರ ವಸತಿ ಗೃಹದ ನವೀಕರಣಕ್ಕೆ ರೂ 44.78 ಕೋಟಿ ಖರ್ಚು ಮಾಡಲಾಗಿದೆ. ಕೊರೋನಾ ಸಂಕಷ್ಟ ಕಾಲದಲ್ಲಿ ಆಮ್ಲಜನಕ ಟ್ಯಾಂಕರ್ಗಳನ್ನು ಖರೀದಿಸಲು ಹಣವಿಲ್ಲ ಎಂದಿದ್ದ ದೆಹಲಿ ಎಎಪಿ ಸರ್ಕಾರವು ತಲಾ 5 ಲಕ್ಷ ರೂಪಾಯಿ ಮೌಲ್ಯದ […]