ಕೊಚ್ಚಿ: ದೇಶದ ಪ್ರಪ್ರಥಮ ವಾಟರ್ ಮೆಟ್ರೋಗೆ ಚಾಲನೆ: ಪ್ರವಾಸೋದ್ಯಮಕ್ಕೆ ಉತ್ತೇಜನ

ಕೊಚ್ಚಿ: ಕೇರಳದ ಬಂದರು ನಗರವಾದ ಕೊಚ್ಚಿಯ ಸುತ್ತಲಿನ ಹತ್ತು ಸಣ್ಣ ದ್ವೀಪಗಳನ್ನು ಸಂಪರ್ಕಿಸುವ ದೇಶದ ಮೊದಲ ವಾಟರ್ ಮೆಟ್ರೋಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಲಿದ್ದಾರೆ. ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ತಯಾರಿಸಿದ ಎಂಟು ಎಲೆಕ್ಟ್ರಿಕ್ ಹೈಬ್ರಿಡ್ ಬೋಟ್‌ಗಳೊಂದಿಗೆ ಮೆಟ್ರೋ ಯೋಜನೆಯು ಪ್ರಾರಂಭವಾಗಲಿದೆ ಎಂದು ವಾಟರ್ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ರೈಲು, ರಸ್ತೆ ಮತ್ತು ನೀರನ್ನು ಸಂಪರ್ಕಿಸುವ ಇಂಟಿಗ್ರೇಟೆಡ್ ಮೆಟ್ರೋ ವ್ಯವಸ್ಥೆಯು ರಾಜ್ಯದ ಅಭಿವೃದ್ದಿಗೆ ವೇಗ ನೀಡಲಿದೆ. ರಸ್ತೆ ಸಾರಿಗೆ ವ್ಯವಸ್ಥೆಯ ಮೇಲಿನ ಒತ್ತಡಗಳನ್ನು ಕಡಿಮೆಗೊಳಿಸಲು ಜಲ […]

ಲೋಕಸಭಾ ಸದಸ್ಯತ್ವ ಅನರ್ಹತೆ: ಅಧಿಕೃತ ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ

ನವದೆಹಲಿ: ಏಪ್ರಿಲ್ 22 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿರುವ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿ ತಮ್ಮ ತಾಯಿ ಸೋನಿಯಾ ಗಾಂಧಿಯವರ ನಿವಾಸಕ್ಕೆ ತೆರಳಿದರು. ಕಳೆದ ತಿಂಗಳು ಮಾನನಷ್ಟ ಮೊಕದ್ದಮೆಯಲ್ಲಿ ಕೆಳ ನ್ಯಾಯಾಲಯವು ಶಿಕ್ಷೆ ವಿಧಿಸಿದ ನಂತರ ಲೋಕಸಭೆಯಿಂದ ಅನರ್ಹಗೊಂಡಿದ್ದರಿಂದ ಏಪ್ರಿಲ್ 22 ರೊಳಗೆ ಅಧಿಕೃತ 12, ತುಘಲಕ್ ಲೇನ್ ನಿವಾಸವನ್ನು ಖಾಲಿ ಮಾಡುವಂತೆ ಕೇಳಿಕೊಳ್ಳಲಾಗಿತ್ತು. “ಸತ್ಯವನ್ನು ಹೇಳಿದ್ದಕ್ಕೆ ನಾನು ಬೆಲೆ ತೆರುತ್ತಿದ್ದೇನೆ, ಇದಕ್ಕಾಗಿ ಯಾವುದೇ ಬೆಲೆ ತೆರಲು ನಾನು ಸಿದ್ಧ, ”ಎಂದು ಅವರು […]

ಪ್ರಾಣಕ್ಕೆ ಮುಳುವಾಯ್ತು ಏರಿಯಲ್ ಆಕ್ರೋಬ್ಯಾಟ್ ಟ್ರಾಪೀಜ್: ಪ್ರದರ್ಶನ ವೇಳೆಯಲ್ಲಿ ಬಿದ್ದು ಪ್ರಾಣ ಕಳೆದುಕೊಂಡು ಮಹಿಳೆ

ಬೀಜಿಂಗ್: ಚೈನೀಸ್ ಆಕ್ರೋಬ್ಯಾಟ್ ಟ್ರಾಪೀಜ್ ಪ್ರದರ್ಶನದ ಸಮಯದಲ್ಲಿ ಚೀನಾದ ಮಹಿಳಾ ಜಿಮ್ನಾಸ್ಟ್ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಸನ್ ಎಂಬ ಉಪನಾಮದ ಮಹಿಳೆ, ಚೀನಾದ ಸೆಂಟ್ರಲ್ ಅನ್ಹುಯಿ ಪ್ರಾಂತ್ಯದ ಸುಝೌ ನಗರದಲ್ಲಿ ಫ್ಲೈಯಿಂಗ್-ಟ್ರಾಪೀಸ್ ಆಕ್ಟ್ ಸಮಯದಲ್ಲಿ ಕೆಳಗೆ ಬಿದ್ದಿದ್ದಾಳೆ ಎಂದು ಬಿಬಿಸಿ ವರದಿ ಮಾಡಿದೆ. ಕಾರ್ಯಕ್ರಮದ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಿಮ್ನಾಸ್ಟ್ ಹಾಗೂ ಪತಿಯೂ ಆಗಿರುವ ಜಾಂಗ್ ಜೊತೆ ಏರಿಯಲ್ ಆಕ್ರೋಬ್ಯಾಟ್ ಮಾಡುತ್ತಿದ್ದ ವೇಳೆ ಕೈಜಾರಿ ಕೆಳಗೆ ಬಿದ್ದಿದ್ದಾರೆ ಸುರಕ್ಷತಾ ಬೆಲ್ಟ್ ಧರಿಸದಿರುವುದೇ […]

RTE ದಾಖಲಾತಿ’ಗಾಗಿ ದಿನಾಂಕ 10-05-2023 ರವರೆಗೆ ಅರ್ಜಿ ಸಲ್ಲಿಕೆ ಅವದಿ ವಿಸ್ತರಣೆ…!!

ಬೆಂಗಳೂರು: ನಿನ್ನೆ ಆರ್ ಟಿ ಇ ಅಡಿಯಲ್ಲಿ ಮಕ್ಕಳ ದಾಖಲಾತಿಗಾಗಿ ಅರ್ಜಿ ( RTE Admission Application ) ಸಲ್ಲಿಸಲು ಕೊನೆಯ ದಿನವಾಗಿತ್ತು. ಈ ಅವದಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಮಾಹಿತಿ ನೀಡಿದ್ದು, 2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ದಾಖಲಾತಿಗಾಗಿ ಅರ್ಜಿಗಳನ್ನು ಸಲ್ಲಿಸಲು ದಿನಾಂಕ 20-04-2023ರವರೆಗೆ ನೀಡಲಾಗಿತ್ತು ಎಂದಿದ್ದಾರೆ. ಹೆಚ್ಚು ಹೆಚ್ಚು ವಿದ್ಯಾರ್ಥಿಗಳು, ಪೋಷಕರು ದಿನಾಂಕ ವಿಸ್ತರಣೆ ಕೋರಿ ಇಲಾಖೆಗೆ ಮನವಿ ಮಾಡಿದ್ದರು. ಈ […]

ದೇಶಾದ್ಯಂತ ಈದ್- ಉಲ್-ಫಿತ್ರ್ ಆಚರಣೆ

ಈದ್ ಉಲ್ ಫಿತ್ರ್ ವಿಶ್ವಾದ್ಯಂತ ಮುಸ್ಲಿಮರು ಆಚರಿಸುವ ಪ್ರಮುಖ ಧಾರ್ಮಿಕ ಹಬ್ಬವಾಗಿದೆ. ಹಬ್ಬವು ಪವಿತ್ರ ರಂಜಾನ್ ತಿಂಗಳ ಅಂತ್ಯವನ್ನು ಸೂಚಿಸುತ್ತದೆ. ಇದು ಉಪವಾಸ, ಪ್ರಾರ್ಥನೆ ಮತ್ತು ಆತ್ಮಾವಲೋಕನದ    ಅವಧಿಯಾಗಿದೆ. ಈದ್ ಉಲ್ ಫಿತರ್ ಅನ್ನು ಏಪ್ರಿಲ್ 22 ರಂದು ಆಚರಿಸಲಾಗುತ್ತಿದೆ. ಮುಸ್ಲಿಂ ಸಂಪ್ರದಾಯದ ಪ್ರಕಾರ ಈದ್ ಉಲ್-ಫಿತರ್ ಇಸ್ಲಾಮಿಕ್ ಪ್ರವಾದಿ ಮುಹಮ್ಮದ್ ಅವರಿಂದ ಹುಟ್ಟಿಕೊಂಡಿತು. ಕೆಲವು ಸಂಪ್ರದಾಯಗಳ ಪ್ರಕಾರ, ಮುಹಮ್ಮದ್ ಅವರು ಮೆಕ್ಕಾದಿಂದ ವಲಸೆ ಬಂದ ನಂತರ ಈ ಹಬ್ಬಗಳನ್ನು ಮದೀನಾದಲ್ಲಿ ಪ್ರಾರಂಭಿಸಲಾಯಿತು. ಸಾಂಪ್ರದಾಯಿಕವಾಗಿ, ಈದ್ ಉಲ್-ಫಿತರ್  ಸೂರ್ಯಾಸ್ತದ […]