ಗಡಿಯಲ್ಲಿ ಚೀನಾ ದಾರ್ಷ್ಟ್ಯ ಪ್ರದರ್ಶನ: ಮೊತ್ತೊಮ್ಮೆ ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಮರುನಾಮಕರಣ

ಗುವಾಹಟಿ: ಅರುಣಾಚಲ ಪ್ರದೇಶದ ಮೇಲಿನ ತನ್ನ ಹಕ್ಕನ್ನು ಮತ್ತೊಮ್ಮೆ ಒತ್ತಿಹೇಳುವ ಪ್ರಯತ್ನದ ಭಾಗವಾಗಿ ಚೀನಾವು ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಹೊಸ ಹೆಸರುಗಳನ್ನು ಬಿಡುಗಡೆ ಮಾಡಿದೆ. ಇದೀಗ ಮೂರನೇ ಬಾರಿಗೆ ಚೀನಾವು ಅರುಣಾಚಲ ಪ್ರದೇಶದ ಸ್ಥಳಗಳಿಗೆ ‘ಮರುನಾಮಕರಣ’ ಮಾಡಿದ್ದು, ಅದನ್ನು “ಜಂಗ್ನಾನ್, ಟಿಬೆಟ್‌ನ ದಕ್ಷಿಣ ಭಾಗ” ಎಂದು ಕರೆದಿದೆ. ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ನಿನ್ನೆ ಚೀನಾದ ಕ್ಯಾಬಿನೆಟ್, ಸ್ಟೇಟ್ ಕೌನ್ಸಿಲ್ ನೀಡಿದ ಭೌಗೋಳಿಕ ಹೆಸರುಗಳ ಮೇಲಿನ ನಿಯಮಗಳಿಗೆ ಅನುಸಾರವಾಗಿ ಚೀನಾ, ಟಿಬೆಟ್ ಮತ್ತು ಪಿನ್ಯಿನ್ ಅಕ್ಷರಗಳಲ್ಲಿ […]

ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆ: ಜಾಮೀನು ವಿಸ್ತರಣೆ; ಏಪ್ರಿಲ್ 13 ರಂದು ಮುಂದಿನ ವಿಚಾರಣೆ

ನವದೆಹಲಿ: ಸೂರತ್ ಸೆಷನ್ಸ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜಾಮೀನನ್ನು ವಿಸ್ತರಿಸಿದೆ ಮತ್ತು ಮುಂದಿನ ವಿಚಾರಣೆಗೆ ಏಪ್ರಿಲ್ 13 ರಂದು ದಿನಾಂಕ ನಿಗದಿಪಡಿಸಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ತನಗೆ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಮೇಲ್ಮನವಿ ಸಲ್ಲಿಸಿದ ನಂತರ ನ್ಯಾಯಾಲಯವು ಜಾಮೀನು ವಿಸ್ತರಿಸಿದೆ. 2019 ರ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾಂಗ್ರೆಸ್ ನಾಯಕ ಇಂದು ಮಧ್ಯಾಹ್ನ 3 ಗಂಟೆಗೆ ಸೂರತ್ ಸೆಷನ್ಸ್ ನ್ಯಾಯಾಲಯವನ್ನು ತಲುಪಿದರು. […]

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ

ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಂದಿನಿಂದ ಅಂದರೆ ಏಪ್ರಿಲ್ 1ರಿಂದ ಇಳಿಕೆಯಾಗಲಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರ ಕಡಿಮೆ ಮಾಡಿದೆ. ಇಂದಿನಿಂದಲೇ ಹೊಸ ದರಗಳನ್ನು ಜಾರಿಗೆ ತರಲಾಗಿದೆ. ಕಳೆದ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 350 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈಗ 91.50 ರೂಪಾಯಿ ಇಳಿಕೆಯಾಗಲಿದೆ. ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 2024 ರ ಆರ್ಥಿಕ ವರ್ಷದ ಮೊದಲ ದಿನದಂದು ಕಡಿತಗೊಳಿಸಲಾಗಿದೆ. ಈ ಬದಲಾವಣೆಯನ್ನು ವಾಣಿಜ್ಯ ಅನಿಲ ಸಿಲಿಂಡರ್‌ಗಳ ವೆಚ್ಚದಲ್ಲಿ ಮಾತ್ರ ಮಾಡಲಾಗಿದೆ. ಮನೆಗಳಲ್ಲಿ ಬಳಸುವ 14.2 ಕೆಜಿ […]

ಬಜೆಟ್‌ನ ಹೊಸ ದರ ನಾಳೆಯಿಂದ ಜಾರಿ-ಯಾವುದು ದುಬಾರಿ? ಯಾವುದು ಅಗ್ಗ?

ಈಗಾಗಲೇ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.ಇದೇ ಶನಿವಾರದಿಂದ (ಏಪ್ರಿಲ್‌ 1) ಹೊಸ ಹಣಕಾಸು ವರ್ಷ ಆರಂಭವಾಗಲಿದ್ದು, ಕೇಂದ್ರ ಬಜೆಟ್‌ನಲ್ಲಿ ಘೋಷಿಸಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಲಿದ್ದು, ಕೆಲವು ವಸ್ತುಗಳ ಬೆಲೆ ಇಳಿಕೆಯಾಗಲಿದೆ. ಹೊಸ ಹಣಕಾಸು ವರ್ಷದ ಆರಂಭದೊಂದಿಗೆ ಹಲವು ಬದಲಾವಣೆಗಳು ಆಗಲಿವೆ. ಹಣದುಬ್ಬರದ ಹೊರೆ ಶ್ರೀಸಾಮಾನ್ಯನ ಮೇಲೆ ಹೆಚ್ಚಾಗಲಿದೆ. ಹೊಸ ಹಣಕಾಸು ವರ್ಷದ ಆರಂಭದೊಂದಿಗೆ ಹಲವು ವಸ್ತುಗಳು ದುಬಾರಿಯಾಗಲಿವೆ. ಇದು ನೇರವಾಗಿ ಜನಸಾಮಾನ್ಯರ […]

ಇಂದೋರ್: ಮಂದಿರದೊಳಿದ್ದ 100 ವರ್ಷಕ್ಕೂ ಹಳೆಯದಾದ 60 ಅಡಿ ಆಳದ ಬಾವಿಯೊಳಗೆ ಬಿದ್ದು 35 ಜನರ ಸಾವು

ಇಂದೋರ್‌: ಇಲ್ಲಿನ ಸ್ನೇಹ ನಗರದ ಪಟೇಲ್ ನಗರದಲ್ಲಿರುವ ಬೇಲೇಶ್ವರ ಮಹಾದೇವ ದೇವಾಲಯದಲ್ಲಿ 100 ವರ್ಷಕ್ಕೂ ಹಳೆಯದಾದ 60 ಅಡಿ ಆಳದ ಮೆಟ್ಟಿಲುಬಾವಿಯೊಳಗೆ ಹಠಾತ್ತಾಗಿ ಬಿದ್ದು, 35 ಜನರು ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ರಾಮನವಮಿಯನ್ನು ಸಂಭ್ರಮದಿಂದ ಆಚರಿಸಲು ದೇವಸ್ಥಾನದಲ್ಲಿ ಜನ ಜಮಾಯಿಸಿದ್ದರು. ತಾವು ಕುಳಿತಿದ್ದ ನೆಲದ ಕೆಳಗೆ 60 ಅಡಿಯ ಬಾವಿ ಇರುವುದು ಅವರಿಗೆ ತಿಳಿದಿರಲಿಲ್ಲ. ಈ ಹಳೆಯ ಬಾವಿಯನ್ನು ತಂತಿ ಜಾಲರಿ ಮತ್ತು ಟೈಲ್ಸ್ ಗಳಿಂದ ಮುಚ್ಚಲಾಗಿತ್ತು. ರಾಮನವಮಿಯಾದ್ದರಿಂದ ಸಾಮರ್ಥ್ಯಕ್ಕಿಂತ ಹೆಚ್ಚು ಜನರು […]