ಚೆನ್ನೈನಲ್ಲಿ ಎನ್‌ಐಎ ತಂಡ ದಾಳಿ: ಬೆಂಗಳೂರು ಸ್ಪೋಟ ಪ್ರಕರಣದ ಐವರು ಶಂಕಿತರು ವಶಕ್ಕೆ

ಚೆನ್ನೈ: ಎನ್‌ಐಎ ತಂಡ ಚೆನ್ನೈನಲ್ಲಿ ದಾಳಿ ನಡೆಸಿದ್ದು, ರಾಮೇಶ್ವರಂನ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಚೆನ್ನೈ ನಗರದ ಐವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ರಾತ್ರಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಚೆನ್ನೈ ನಗರದ ದೇವಸ್ಥಾನವೊಂದರ ಬಳಿ ಐವರನ್ನು ಎನ್‌ಐಎ ವಶಕೆ ಪಡೆದಿದೆ. ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಬೆಂಗಳೂರು ಜೈಲಿನಲ್ಲಿ ಮೂಲಭೂತವಾದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 7 ರಾಜ್ಯಗಳ ವಿವಿಧ […]

ಮತದಾನ ಯಾ ಭಾಷಣಕ್ಕಾಗಿ ಲಂಚ; ಜನಪ್ರತಿನಿಧಿಗಳಿಗೆ ಕಾನೂನು ವಿನಾಯಿತಿ ಇಲ್ಲ: ಸುಪ್ರೀಂ ತೀರ್ಪು

ನವದೆಹಲಿ: ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಜನಪ್ರತಿನಿಧಿಗಳಿಗೆ ಕಾನೂನು ಕ್ರಮದಿಂದ ಯಾವುದೇ ವಿನಾಯಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಸೋಮವಾರ ಹೇಳಿದೆ. ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ಏಳು ಮಂದಿ ಇದ್ದ ಸಾಂವಿಧಾನಿಕ ಪೀಠವು, 1998ರಲ್ಲಿ ಜೆಎಂಎಂ ಲಂಚ ಪ್ರಕರಣದಲ್ಲಿ ಪಂಚ ಸದಸ್ಯ ಪೀಠ ನೀಡಿದ್ದ ತೀರ್ಪನ್ನು ಸರ್ವಾನುಮತದಿಂದ ರದ್ದು ಮಾಡಿದೆ. ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಶಾಸಕರಿಗೆ ಆ ತೀರ್ಪಿನಲ್ಲಿ ಕಾನೂನು […]

ಲೋಕಸಭೆ ಚುನಾವಣೆ: ಮೊದಲ ಪಟ್ಟಿಯಲ್ಲಿ 195 ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ; ವಾರಾಣಾಸಿಯಿಂದ ಮೋದಿ ಮತ್ತೊಮ್ಮೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಬಿಜೆಪಿಯು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆಯೇ ಬಿಜೆಪಿಯು ಹಲವು ಬದಲಾವಣೆಗಳನ್ನು ಮಾಡಿದೆ. ಮೊದಲ ಪಟ್ಟಿಯಲ್ಲಿ 195 ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ವಾರಾಣಸಿಯಿಂದ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುಜರಾತ್‌ನ ಗಾಂಧಿನಗರ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಲಖನೌ, ಸ್ಮೃತಿ ಇರಾನಿ ಅಮೇಥಿಯಿಂದ, ಕಿರಣ್‌ ರಿಜಿಜು ಅರುಣಾಚಲ ಪಶ್ಚಿಮ, ಪೋರ್‌ಬಂದರ್‌ನಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವಿಯ, […]

ಆರ್‌ಎಸ್‌ಎಸ್ ನಾಯಕ ರುದ್ರೇಶ್ ಕೊಲೆಗಾರ ಮೊಹಮ್ಮದ್ ಘೌಸ್ ನಯಾಜಿ ಬಂಧನ: ದ. ಆಫ್ರಿಕಾದಿಂದ ಭಾರತಕ್ಕೆ ಹಸ್ತಾಂತರ

ನವದೆಹಲಿ: ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪದಾಧಿಕಾರಿಯನ್ನು ಕೊಂದ ಆರೋಪಿ ಮೊಹಮ್ಮದ್ ಘೌಸ್ ನಯಾಜಿಯನ್ನು ಬಂಧಿಸಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನಿಷೇಧಿತ ಉಗ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಕ್ರಿಯ ಸದಸ್ಯ ನಯಾಜಿ 2016ರಲ್ಲಿ ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಮುಖಂಡ ರುದ್ರೇಶ್ ಆರ್ ರನ್ನು ಸಂಚು ರೂಪಿಸಿ ಹತ್ಯೆಗೈದಿದ್ದ. 35 ವರ್ಷದ ರುದ್ರೇಶ್ ಆರ್‌ಎಸ್‌ಎಸ್‌ನ ಶಿವಾಜಿನಗರ ಶಾಖೆಯ ಮಂಡಲ ಅಧ್ಯಕ್ಷ ಮತ್ತು ಬಿಜೆಪಿ ಶಿವಾಜಿನಗರ ಕಾರ್ಯದರ್ಶಿಯಾಗಿದ್ದರು. ಘಟನೆಯ ನಂತರ, […]

ರಷ್ಯಾದ “ಡ್ಯಾಡಿ” ಬಾಟ್ಸ್ ಅನ್ನು ಸೋಲಿಸಿದ ಭಾರತದ “ಗಾಡ್‌ಸ್ಪೀಡ್”: ರೋಬೋಟ್ ಸ್ಪರ್ಧೆಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಡಿಎಸ್ ರೋಬೋಟಿಕ್ಸ್

ಮಾಸ್ಕೋ: ಕೌಶಲ್ಯ ಮತ್ತು ಕಾರ್ಯತಂತ್ರದ ಅದ್ಭುತ ಪ್ರದರ್ಶನದಲ್ಲಿ, ಭಾರತದ ಡಿಎಸ್ ರೋಬೋಟಿಕ್ಸ್ ರೋಬೋಟ್ ಯುದ್ಧದಲ್ಲಿ ರಷ್ಯಾದ ಅತ್ಯುತ್ತಮ ತಂಡ ಡ್ಯಾಡಿ ಬಾಟ್ಸ್ ಅನ್ನು ಸೋಲಿಸಿ ವಿಜಯಶಾಲಿಯಾಗಿ ಹೊರಹೊಮ್ಮಿದೆ. ರಷ್ಯಾದಲ್ಲಿ ನಡೆದ ‘ಗೇಮ್ಸ್ ಆಫ್ ದಿ ಫ್ಯೂಚರ್’ ಪಂದ್ಯಾವಳಿಯಲ್ಲಿ ಮಾಸ್ಕೋದ ಟರ್ಬೊಮೆಕಾಟ್ರೊನಿಕಿ ನಂತರದ ಸ್ಥಾನವನ್ನು ಗಳಿಸಿದ ರಷ್ಯಾದ ಡ್ಯಾಡಿ ಬಾಟ್ಸ್ ತಂಡವನ್ನು ಹಿಂದಿಕ್ಕಿ ಭಾರತದ ಡಿಎಸ್ ರೋಬೋಟಿಕ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫಿನಾಲೆಯಲ್ಲಿ, ಭಾರತದ ಡಿಎಸ್ ರೋಬೋಟಿಕ್ಸ್, ತಮ್ಮ “ಗಾಡ್‌ಸ್ಪೀಡ್” ಎಂಬ ರೋಬೋಟ್‌ನೊಂದಿಗೆ, ರಷ್ಯಾದ “ಡ್ಯಾಡಿ” ಎಂಬ […]