ನವೆಂಬರ್ 19 ರಂದು ಬ್ಯಾಂಕ್ ಮುಷ್ಕರ: ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಸಾಧ್ಯತೆ

ನವದೆಹಲಿ: ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಮುಷ್ಕರದ ಕರೆಯಿಂದಾಗಿ ನವೆಂಬರ್ 19, ಶನಿವಾರದಂದು ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮುಷ್ಕರದ ದಿನಗಳಲ್ಲಿ ಬ್ಯಾಂಕಿನ ಶಾಖೆಗಳು ಮತ್ತು ಕಚೇರಿಗಳ ಸುಗಮ ಕಾರ್ಯನಿರ್ವಹಣೆಗೆ ಬ್ಯಾಂಕ್ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ, ಮುಷ್ಕರವು ಕಾರ್ಯರೂಪಕ್ಕೆ ಬಂದರೆ, ಶಾಖೆಗಳು ಮತ್ತು ಕಚೇರಿಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಬಹುದು ಎಂದು ಎಐಬಿಇಎ ತಿಳಿಸಿದೆ. ರಾಷ್ಟ್ರವ್ಯಾಪಿ ಮುಷ್ಕರಕ್ಕೂ ಮುನ್ನ ಎಐಬಿಇಎ ಸದಸ್ಯರು ವಿವಿಧ ರೀತಿಯ ಪ್ರತಿಭಟನೆಗಳನ್ನು ನಡೆಸಲಿದೆ ಎಂದು ವರದಿಯಾಗಿದೆ. ಬ್ಯಾಂಕಿಂಗ್ […]

ಚೀನಾ ಮೇಲೆ ಹದ್ದಿನ ಕಣ್ಣು: ಇದೇ ಮೊದಲ ಬಾರಿಗೆ 3ಡಿ-ಮುದ್ರಿತ ಬಂಕರ್ ನಿರ್ಮಿಸಲಿರುವ ಭಾರತೀಯ ಸೇನೆ

ಲಡಾಕ್: ಕಳೆದ ಎರಡು ವರ್ಷಗಳಿಂದ ಭಾರತ-ಚೀನಾ ಗಡಿ ಬಿಕ್ಕಟ್ಟು ಮುಂದುವರಿದಿದ್ದು, ಶತ್ರುಗಳೊಂದಿಗೆ ಸೆಣಸಾಡಲು ಮತ್ತು ಯಾವುದೇ ಸಮಯದಲ್ಲಿ ಯಾವುದೇ ವಿಷಮ ಪರಿಸ್ಥಿತಿಗೆ ಸಿದ್ಧರಾಗಿರಲು ಭಾರತೀಯ ಸೇನೆಯು ಲೈನ್ ಆಫ್ ಆಕ್ಚುವಲ್ ಕಂಟೋಲ್(ಎಲ್.ಎ.ಸಿ)ನಲ್ಲಿ ಪ್ರಮುಖ ಮೂಲಸೌಕರ್ಯ ನಿರ್ಮಾಣ ಯೋಜನೆಯನ್ನು ರೂಪಿಸಿದೆ. ಭಾರತೀಯ ಸೇನೆಯು ಚೀನಾದ ಎದುರು ಪೂರ್ವ ಲಡಾಖ್ ಸೆಕ್ಟರ್‌ನಲ್ಲಿ 450 ಟ್ಯಾಂಕ್‌ಗಳು ಮತ್ತು 22000 ಕ್ಕೂ ಹೆಚ್ಚು ಸೈನಿಕರಿಗೆ ವಸತಿಗಾಗಿ ಮೂಲಸೌಕರ್ಯಗಳನ್ನು ನಿರ್ಮಿಸಲಿದೆ ಎಂದು ವರದಿಯಾಗಿದೆ. ಸೇನೆಯು 3ಡಿ-ಮುದ್ರಿತ ಶಾಶ್ವತ ರಕ್ಷಣೆಗಳನ್ನು ನಿರ್ಮಿಸಲಿದೆ. ಲಡಾಕ್ ನಲ್ಲಿ ಭಾರತೀಯ […]

ವಾರ್ಷಿಕ 3,000 ಭಾರತೀಯ ವೃತ್ತಿಪರರಿಗೆ ವೀಸಾ ನೀಡಿಕೆ: ಯುಕೆ ಪ್ರಧಾನಿ ರಿಷಿ ಸುನಕ್ ರಿಂದ ಹಸಿರು ನಿಶಾನೆ

ಲಂಡನ್: ಯುಕೆ ಪ್ರಧಾನಿ ರಿಷಿ ಸುನಕ್ ಅವರು ಪ್ರತಿ ವರ್ಷ ಭಾರತದ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿದ್ದಾರೆ. ಇಂತಹ ಯೋಜನೆಯಿಂದ ಪ್ರಯೋಜನ ಪಡೆಯುವ ಮೊದಲ ವೀಸಾ-ರಾಷ್ಟ್ರೀಯ ದೇಶ ಭಾರತ ಎಂದು ಬ್ರಿಟಿಷ್ ಸರ್ಕಾರ ಹೇಳಿದ್ದು, ಕಳೆದ ವರ್ಷ ಒಪ್ಪಿಕೊಂಡ ಯುಕೆ-ಭಾರತ ವಲಸೆ ಮತ್ತು ಚಲನಾ ಪಾಲುದಾರಿಕೆಯ ಬಲವನ್ನು ಇದು ಎತ್ತಿ ತೋರಿಸುತ್ತದೆ ಎಂದಿದೆ. “ಇಂದು ಯುಕೆ-ಇಂಡಿಯಾ ಯಂಗ್ ಪ್ರೊಫೆಷನಲ್ಸ್ ಸ್ಕೀಮ್ ಅನ್ನು ದೃಢೀಕರಿಸಲಾಗಿದೆ, 18-30 ವರ್ಷ ವಯಸ್ಸಿನ ಪದವೀಧರ ಭಾರತೀಯ […]

ಸ್ಪೋಟಕಗಳನ್ನಿಟ್ಟು ಉದಯಪುರ-ಅಹಮದಾಬಾದ್ ರೈಲ್ವೆ ಹಳಿ ಘಾಸಿ ಪ್ರಕರಣ: ಭಯೋತ್ಪಾದಕ ಕೃತ್ಯದ ಅನುಮಾನ

ಉದಯಪುರ: ಅಕ್ಟೋಬರ್ 31 ರಂದು ಅಸರ್ವ ರೈಲು ನಿಲ್ದಾಣದಿಂದ ಉದಯಪುರ-ಅಹಮದಾಬಾದ್ ರೈಲ್ವೆ ಹಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದು, ಈ ಹಳಿಯಲ್ಲಿ ಸ್ಪೋಟಕಗಳನ್ನಿರಿಸಿ ರೈಲ್ವೆ ಹಳಿಯನ್ನು ಘಾಸಿಗೊಳಿಸಿ ರೈಲು ಅಪಘಾತ ನಡೆಸಿ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಪ್ರಾಣಾಪಾಯ ಮಾಡುವ ಸಂಚು ನಡೆಸಿದ್ದು, ಸ್ಥಳೀಯರ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಉದಯಪುರ ಮತ್ತು ಅಹಮದಾಬಾದ್ ನಡುವೆ ಹೊಸದಾಗಿ ತೆರೆಯಲಾದ ರೈಲು ಮಾರ್ಗದಲ್ಲಿ “ಡಿಟೋನೇಟರ್” ಬಳಸಿ ಸ್ಫೋಟ ನಡೆಸಿದ್ದರಿಂದ ರೈಲ್ವೆ ಟ್ರ್ಯಾಕ್‌ನಲ್ಲಿ ಬಿರುಕುಗಳು ಕಂಡುಬಂದಿದ್ದವು. ಇದು ಉದ್ದೇಶಪೂರ್ವಕವಾಗಿ […]

ಪಾಲಿಗ್ರಾಫ್ ಪರೀಕ್ಷೆಗೆ ಸಿದ್ಧ ಎಂದ ಸುಕೇಶ್ ಚಂದ್ರಶೇಖರ್: ಸತ್ಯಪರೀಕ್ಷೆ ತೆಗೆದುಕೊಳ್ಳಲು ಮುಖ್ಯಮಂತ್ರಿ ಕೇಜ್ರಿವಾಲ್ ಗೂ ಪಂಥಾಹ್ವಾನ

ನವದೆಹಲಿ: ಬಹುಕೋಟಿ ವಂಚನೆ ಪ್ರಕರಣದ ಆರೋಪದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್ ಶುಕ್ರವಾರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿಕೆ ಸಕ್ಸೇನಾ ಅವರಿಗೆ ಬರೆದಿರುವ ಹೊಸ ಪತ್ರದಲ್ಲಿ, ತಮ್ಮ ಭ್ರಷ್ಟಾಚಾರದ ಆರೋಪಗಳನ್ನು ದೃಢೀಕರಿಸಲು ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿಗೆ ನೀಡಿದ್ದಾರೆ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ಕೂಡಾ ತನ್ನ ಜೊತೆ ಪರೀಕ್ಷೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. “ಕೇಜ್ರಿವಾಲ್ ಜಿ, ಸುಳ್ಳು ಎಂದು ಅಳುವ ಬದಲು, ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿಕೊಳ್ಳಲು ಎದೆಗಾರಿಕೆ ಮತ್ತು […]