ವಿಜಯ್ ಮಲ್ಯ ಮತ್ತು ನೀರವ್ ಮೋದಿ ಹಸ್ತಾಂತರವನ್ನು ತ್ವರಿತಗೊಳಿಸಿ: ಯುಕೆ ಅಧಿಕಾರಿಗಳಿಗೆ ಭಾರತ ತಾಕೀತು

ನವದೆಹಲಿ: ಭಾರತದ ಕಾನೂನು ಜಾರಿ ಅಧಿಕಾರಿಗಳು ದ್ವಿಪಕ್ಷೀಯ ಸಭೆಯಲ್ಲಿ ಭೂಗತ ಪಾತಕಿ ಇಕ್ಬಾಲ್ ಮಿರ್ಚಿ ಅವರ ಪತ್ನಿ ಹಜ್ರಾ ಮೆಮನ್ ಮತ್ತು ಅವರ ಪುತ್ರರಾದ ಆಸಿಫ್ ಮತ್ತು ಜುನೈದ್ ಸೇರಿದಂತೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ಹಸ್ತಾಂತರವನ್ನು “ತ್ವರಿತಗೊಳಿಸುವಂತೆ” ಯುಕೆ ಅಧಿಕಾರಿಗಳನ್ನು ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮಲ್ಯ ಅವರ ಹಸ್ತಾಂತರವನ್ನು ಯುಕೆ ಹೈಕೋರ್ಟ್ ಏಪ್ರಿಲ್ 2020 ರಲ್ಲಿ ತೆರವುಗೊಳಿಸಿದೆ. ಆದರೆ ಅಜ್ಞಾತವಾದ ಯಾವುದೋ “ರಹಸ್ಯ ಪ್ರಕ್ರಿಯೆಗಳಿಂದ” ಎರಡೂವರೆ ವರ್ಷಗಳ ಕಾಲದಿಂದ ಹಸ್ತಾಂತರ ಪ್ರಕ್ರಿಯೆ ವಿಳಂಬವಾಗುತ್ತಿದೆ. ಯುಕೆ […]

ಬೌದ್ಧ ಸನ್ಯಾಸಿಯ ವೇಷದಲ್ಲಿದ್ದ ಚೀನಾದ ಗೂಢಚಾರಿಣಿಯ ಬಂಧನ: ದೆಹಲಿ ಪೋಲೀಸರಿಂದ ಕಾರ್ಯಾಚರಣೆ

ನವದೆಹಲಿ: ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಚೀನಾದ ಮಹಿಳೆಯೊಬ್ಬಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬೌದ್ಧ ಸನ್ಯಾಸಿ ಎಂದು ಹೇಳಿಕೊಂಡ ಕೈ ರೂವೋ ಚೀನಾದ ಗೂಢಚಾರಿ ಎಂದು ಶಂಕಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ ಮಾಡಿದೆ. ಕೈ ರೂವೋ ಒಬ್ಬ ಸುಶಿಕ್ಷಿತ ಮತ್ತು ಕುತಂತ್ರಿ ಮಹಿಳೆಯಾಗಿದ್ದು, ಚೀನಾದ ಕಮ್ಯುನಿಸ್ಟ್ ನಾಯಕರು ತನ್ನನ್ನು ಕೊಲ್ಲಲು ಬಯಸಿದ್ದರು ಹಾಗಾಗಿ ತಾನು ತಪ್ಪಿಸಿಕೊಂಡು ಭಾರತಕ್ಕೆ ಓಡಿ ಬಂದಿದ್ದೆ ಎಂದು ಹೇಳುವ ಮೂಲಕ ತನಿಖಾಧಿಕಾರಿಗಳನ್ನು ದಾರಿತಪ್ಪಿಸಲು ಪ್ರಯತ್ನಿಸಿದ್ದಳು ಎಂದು ಮೂಲವೊಂದು […]

ಆರಂಭಿಕ ವರ್ಷಗಳಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ; ಇಂಗ್ಲಿಷ್ ಎರಡನೇ ಭಾಷೆಯ ಆಯ್ಕೆಯಲ್ಲಿ ಒಂದಾಗಿರಲಿ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ಬಿಡುಗಡೆ ಮಾಡಿದ ಅಡಿಪಾಯ ಹಂತದ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (ಎನ್‌ಸಿಎಫ್) ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಎಂಟು ವರ್ಷ ವಯಸ್ಸಿನ ಮಕ್ಕಳಿಗೆ ಮಾತೃಭಾಷೆಯನ್ನು ಪ್ರಾಥಮಿಕ ಶಿಕ್ಷಣ ಮಾಧ್ಯಮವಾಗಿಸಬೇಕು ಎಂದು ಶಿಫಾರಸು ಮಾಡಿದೆ. ಆರಂಭಿಕ ವರ್ಷಗಳಲ್ಲಿ ಹೊಸ ಭಾಷೆಯನ್ನು ಕಲಿಯುವುದು “ಇಡೀ ಕಲಿಕೆಯ ಪ್ರಕ್ರಿಯೆಯನ್ನು ಹಿಮ್ಮುಖಗೊಳಿಸುತ್ತದೆ” ಎಂದು ಅದು ಹೇಳಿದೆ. ಇಂಗ್ಲಿಷ್ ಅನ್ನು ಎರಡನೇ ಭಾಷೆಯ ಆಯ್ಕೆಗಳಲ್ಲಿ ಒಂದಾಗಿಸಬಹುದು ಎಂದು ಅದು ಸೇರಿಸಿದೆ. 2005 ರಲ್ಲಿ […]

ದೀಪಾವಳಿಗೆ ಭರ್ಜರಿ ಉಡುಗೊರೆ: 75,000 ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ಹಸ್ತಾಂತರಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತದ ಸುಮಾರು 75,000 ಯುವಕರು ಮತ್ತು ಅವರ ಕುಟುಂಬಗಳಿಗೆ ದೀಪಾವಳಿಯನ್ನು ವಿಶೇಷವಾಗಿಸಿದ್ದು, ಅಕ್ಟೋಬರ್ 22 ರಂದು ಯುವಕರಿಗೆ ಅವರ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಿದ್ದಾರೆ. ಪಟ್ಟಿ ಮಾಡಲಾದ ಯುವಕರಿಗೆ ಪ್ರಧಾನಿ ಮೋದಿ ವರ್ಚುವಲ್ ಕಾರ್ಯಕ್ರಮದ ಮೂಲಕ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಿದ್ದಾರೆ. ಪ್ರಧಾನ ಮಂತ್ರಿಗಳ ಕಚೇರಿಯು ಎಲ್ಲಾ ಸಚಿವಾಲಯಗಳಿಗೆ ಆಯಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಪತ್ತೆಹಚ್ಚಲು ಮತ್ತು ನಿಗದಿತ ಸಮಯದಲ್ಲಿ ಭರ್ತಿ ಮಾಡಲು ಹೇಳಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. […]

ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ: 24 ವರ್ಷಗಳ ಬಳಿಕ ಗಾಂಧಿಯೇತರ ಅಧ್ಯಕ್ಷ

ನವದೆಹಲಿ: ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ಅವರನ್ನು ಸೋಲಿಸಿ 24 ವರ್ಷಗಳ ಬಳಿಕ ಮೊದಲ ಗಾಂಧಿಯೇತರ ಮತ್ತು ನಾಲ್ಕು ದಶಕಗಳ ಬಳಿಕ ಮೊದಲ ಪರಿಶಿಷ್ಟ ಜಾತಿಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 1988 ರಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ನಿರ್ಣಯದ ಮೂಲಕ ಸೋನಿಯಾ ಗಾಂಧಿ ಅವರನ್ನು ಪಕ್ಷದ ಮುಖ್ಯಸ್ಥರಾಗಲು ಆಹ್ವಾನಿಸಿ, ಸೀತಾರಾಮ್ ಕೇಸರಿ ಅವರನ್ನು ಅನೌಪಚಾರಿಕವಾಗಿ ಪದಚ್ಯುತಗೊಳಿಸಿದ ನಂತರ 24 ವರ್ಷಗಳಲ್ಲಿ ಕಾಂಗ್ರೆಸ್ ಅನ್ನು ಮುನ್ನಡೆಸುವ ಮೊದಲ ಗಾಂಧಿಯೇತರ ವ್ಯಕ್ತಿಯಾಗಿ […]