ಸರ್ವೋಚ್ಛ ನ್ಯಾಯಾಲಯದ ಮುಖ್ಯನ್ಯಾಯಾಧೀಶರಾಗಿ ನ್ಯಾಯಮೂರ್ತಿ ಡಾ. ಡಿ.ವೈ ಚಂದ್ರಚೂಡ್ ನೇಮಕ

ನವದೆಹಲಿ: ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಡಾ. ಡಿ.ವೈ ಚಂದ್ರಚೂಡ್ ಅವರನ್ನು ನವೆಂಬರ್ 9, 2022 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಿದ್ದಾರೆ. ನವೆಂಬರ್ 9 ರಂದು ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಔಪಚಾರಿಕ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕೋಹ್ಲಿ ಅಭಿಮಾನಿಯಿಂದ ರೋಹಿತ್ ಶರ್ಮಾ ಬೆಂಬಲಿಗನ ಹತ್ಯೆ: ಟ್ವಿಟರ್ ನಲ್ಲಿ ಅರೆಸ್ಟ್ ಕೊಹ್ಲಿ ಟ್ರೆಂಡ್

ಚೆನ್ನೈ: ಐಪಿಲ್ ಕ್ರಿಕೆಟ್ ನ ಹುಚ್ಚು ಅಭಿಮಾನವು ಯುವಕನೊಬ್ಬನ ಹತ್ಯೆಯಲ್ಲಿ ದುರಂತ ಅಂತ್ಯ ಕಂಡಿದೆ. ತಮಿಳುನಾಡಿನಲ್ಲಿ ರೋಹಿತ್ ಶರ್ಮಾ ಬೆಂಬಲಿಗನನ್ನು ವಿರಾಟ್ ಅಭಿಮಾನಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಘಟನೆಯಲ್ಲಿ 24 ವರ್ಷದ ಪಿ ವಿಘ್ನೇಶ್ ಅನ್ನು ಎಸ್ ಧರ್ಮರಾಜ್ ಎನ್ನುವವನು ಕೊಲೆಮಾಡಿದ್ದಾನೆ. ಈ ಇಬ್ಬರೂ ಅರಿಯಲೂರು ಜಿಲ್ಲೆಯ ಪೊಯ್ಯೂರು ಗ್ರಾಮದವರು. ವಿಘೇಶ್ ಮುಂಬೈ ಇಂಡಿಯನ್ ಅಭಿಮಾನಿಯಾಗಿದ್ದರೆ, ಧರ್ಮರಾಜ್ ಆರ್.ಸಿ.ಬಿಯ ಕಟ್ಟರ್ ಅಭಿಮಾನಿ. ಈ ಇಬ್ಬರೂ ಕೂಡಾ ಮದ್ಯ ಸೇವಿಸಿದ್ದರು. ಆರಂಭಿಕ ತನಿಖೆಯ ಪ್ರಕಾರ, ಇಂಡಿಯನ್ ಪ್ರೀಮಿಯರ್ […]
ಹಿಜಾಬ್ ಪ್ರಕರಣದಲ್ಲಿ ಭಿನ್ನ ತೀರ್ಪು: ಪ್ರಕರಣ ಮುಖ್ಯ ನ್ಯಾಯಾಧೀಶರ ಅಂಗಳದ ಮುಂದೆ

ನವದೆಹಲಿ: ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣ ಸಂಸ್ಥೆಯಲ್ಲಿ ಹಿಜಾಬ್ ಧರಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಗಳ ಮೇಲೆ ಸುಪ್ರೀಂ ಕೋರ್ಟ್ ಇಂದು ವಿಭಜಿತ ತೀರ್ಪು ನೀಡಿದೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆಯಲ್ಲ ಮತ್ತು ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲು ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ 26 ಮೇಲ್ಮನವಿಗಳನ್ನು ನ್ಯಾಯಮೂರ್ತಿ ಹೇಮಂತ್ ಗುಪ್ತಾ ವಜಾಗೊಳಿಸಿದ್ದಾರೆ. ತಮ್ಮ ಅಭಿಪ್ರಾಯದಲ್ಲಿನ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ತೀರ್ಪನ್ನು ತಳ್ಳಿಹಾಕಿದರು ಮತ್ತು […]
ಉಜ್ಜಯಿನಿಯಲ್ಲಿ ಮಹಾಕಾಲ್ ಲೋಕ್ ಕಾರಿಡಾರ್ 1 ನೇ ಹಂತವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಉಜ್ಜಯಿನಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಲೇಶ್ವರ ದೇವಸ್ಥಾನದಲ್ಲಿ ಮಹಾಕಾಲ್ ಲೋಕ್ ಯೋಜನೆಯ ಮೊದಲ ಹಂತವನ್ನು ದೇಶಕ್ಕೆ ಸಮರ್ಪಿಸಿದರು. ಮಹಾಕಾಲ್ ದೇವಸ್ಥಾನದಲ್ಲಿ ಪೂಜೆ ನಡೆಸಿ ಆರತಿಯನ್ನು ಬೆಳಗಿದರು. ಉದ್ಘಾಟನಾ ಸಮಾರಂಭದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಉಜ್ಜಯಿನಿಯು ಸಾವಿರಾರು ವರ್ಷಗಳಿಂದ ಭಾರತದ ಸಂಪತ್ತು ಮತ್ತು ಸಮೃದ್ಧಿ, ಜ್ಞಾನ ಮತ್ತು ಘನತೆ, ನಾಗರಿಕತೆ ಮತ್ತು ಸಾಹಿತ್ಯವನ್ನು ಮುನ್ನಡೆಸಿದೆ. ಉಜ್ಜಯಿನಿಯ ಪ್ರತಿಯೊಂದು ಕಣವೂ ಆಧ್ಯಾತ್ಮಿಕತೆಯಲ್ಲಿ ಮುಳುಗಿದೆ ಮತ್ತು ಅದು ಪ್ರತಿ ಮೂಲೆ ಮೂಲೆಯಲ್ಲಿಯೂ ಅಲೌಕಿಕ […]
ಜಸ್ಟಿಸ್ ಡಿವೈ ಚಂದ್ರಚೂಡ್ ಸುಪ್ರೀಂಕೋರ್ಟಿನ ಮುಂದಿನ ಮುಖ್ಯನ್ಯಾಯಮೂರ್ತಿ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸಿದ್ದಾರೆ. ಅವರು ಮಂಗಳವಾರ ಬೆಳಗ್ಗೆ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರವನ್ನು ಹಸ್ತಾಂತರಿಸಿ, ಅವರನ್ನು ಮುಂದಿನ ಸಿಜೆಐ ಎಂದು ಗೊತ್ತುಪಡಿಸಿದರು. ಸುಪ್ರೀಂ ಕೋರ್ಟ್ನ ಇತರ ನ್ಯಾಯಾಧೀಶರ ಸಮ್ಮುಖದಲ್ಲಿ ಪತ್ರವನ್ನು ಹಸ್ತಾಂತರಿಸಲಾಯಿತು. ನ್ಯಾಯಮೂರ್ತಿ ಲಲಿತ್ ಅವರು ಈ ವಿಷಯದ ಬಗ್ಗೆ ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆಯಲಿದ್ದಾರೆ. ನವೆಂಬರ್ 8 ರಂದು ನಿವೃತ್ತಿಯಾಗಲಿರುವ ಅವರು ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಕೇಂದ್ರ […]