ಹುಬ್ಬಳ್ಳಿ: 4 ಗಂಟೆ ಆಗಸದಲ್ಲೇ ತೇಲಾಡಿದ ವಿಮಾನ, ಪ್ರಯಾಣಿಕರ ಬೆಚ್ಚಿಬೀಳಿಸಿ ಕೊನೆಗೂ ಲ್ಯಾಂಡ್ ಆದ FLY91 ವಿಮಾನ!

ಹುಬ್ಬಳ್ಳಿ: ಇತ್ತೀಚೆಗೆ ದೇಶದಲ್ಲಿ ವಿಮಾನ ದುರಂತಗಳ ಆತಂಕ ಹೆಚ್ಚುತ್ತಿರುವ ನಡುವೆಯೇ, ರಾಜ್ಯದಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ಕೊನೆಯ ಕ್ಷಣದಲ್ಲಿ ತಪ್ಪಿದ ಘಟನೆ ಬೆಳಕಿಗೆ ಬಂದಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ಬರುತ್ತಿದ್ದ Fly91 ಏರ್ ಲೈನ್ಸ್ನ IC3401 (ATRTurboprop AT7) ವಿಮಾನವು ಮಧ್ಯ ಗಗನದಲ್ಲೇ ತಾಂತ್ರಿಕ ದೋಷಕ್ಕೆ ಒಳಗಾಗಿ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮವಾಗಿ ವಿಮಾನವು ಗಗನದಲ್ಲೇ ಸುಮಾರು 4 ಗಂಟೆಗಳ ಕಾಲ ಸುತ್ತಾಡಿ, ಪ್ರಯಾಣಿಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಯಿತು. ಮಧ್ಯಾಹ್ನ 4 ಗಂಟೆಗೆ […]
ಇಂದು ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅವರ ಕಚೇರಿ ಮೂಲಗಳು ತಿಳಿಸಿದೆ. ಲೋಕಸಭೆಯಲ್ಲಿ ನಿನ್ನೆ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾದ ಬೆನ್ನಲ್ಲೇ ಮೋದಿ ಅವರು ಇಂದು ರಾತ್ರಿ ದೇಶ ಉದ್ದೇಶಿಸಿ ಮಾತನಾಡುತ್ತಿದ್ದು, ಪ್ರಧಾನಿ ನಡೆ ತೀವ್ರ ಕುತೂಹಲ ಕೆರಳಿಸಿದೆ. ಅವರು ಏನು ಮಾತನಾಡುತ್ತಾರೆ ಎಂಬ ಬಗ್ಗೆ ಇನ್ನೂ ಯಾವುದೇ ಖಚಿತ ಮಾಹಿತಿ ಇಲ್ಲ. ಕೇಂದ್ರ ಸರ್ಕಾರ, ವಿರೋಧ ಪಕ್ಷಗಳಿಂದ ತೀವ್ರ ಟೀಕೆಗಳ ನಡುವೆ […]
ಮಾರುಕಟ್ಟೆ ಆಳುತ್ತಿದೆ ಕೆಮಿಕಲ್ ಮಿಶ್ರಿತ ಮಾವಿನಹಣ್ಣು: ಕೃತಕ ಬಣ್ಣದ ಮಾವಿನ ಮೇಲೆ ಕೇಂದ್ರ ಆಹಾರ ಇಲಾಖೆ ಹದ್ದಿನ ಕಣ್ಣು

ನವದೆಹಲಿ: Food Safety and Standards Authority of India (FSSAI) ದೇಶದ ಎಲ್ಲಾ ರಾಜ್ಯಗಳಿಗೆ ತುರ್ತು ಎಚ್ಚರಿಕೆ ನೀಡಿದ್ದು, ಹಣ್ಣುಗಳನ್ನು ಮಾಗಿಸಲು ನಿಷೇಧಿತ ಹಾಗೂ ಅಪಾಯಕಾರಿ ರಾಸಾಯನಿಕಗಳ ಬಳಕೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ರಾಜ್ಯಗಳ ಆಹಾರ ಆಯುಕ್ತರಿಗೆ ಕಳುಹಿಸಿರುವ ಪತ್ರದಲ್ಲಿ, ಹಣ್ಣು ಮಾರುಕಟ್ಟೆಗಳು ಮತ್ತು ಮಾಗಿಸುವ ಗೋದಾಮುಗಳ ಮೇಲೆ ಕಡ್ಡಾಯವಾಗಿ ಕಟ್ಟುನಿಟ್ಟಿನ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ವಿಶೇಷವಾಗಿ ಕ್ಯಾಲ್ಸಿಯಮ್ ಕಾರ್ಬೈಡ್ ಬಳಕೆ ಪ್ರಕರಣಗಳು ಹೆಚ್ಚುತ್ತಿರುವುದು ಗಮನಕ್ಕೆ ಬಂದಿದ್ದು, ಮಾವು, ಬಾಳೆ, ಪಪ್ಪಾಯ ಹಣ್ಣುಗಳನ್ನು ಬೇಗ […]
ಬೆಂಗಳೂರಿನ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ ಪತ್ತೆಯಾಯ್ತು ಬರ್ಡ್ ವೈರಸ್! ಚಿಕನ್ ಪ್ರಿಯರಿಗೆ ಅಲರ್ಟ್!

ಬೆಂಗಳೂರು: ಬೆಂಗಳೂರಿನ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ H5N1 (Bird Flu) ವೈರಸ್ ಪತ್ತೆಯಾಗಿದೆ. ಇದು ರಾಜ್ಯದಲ್ಲಿ ಆತಂಕ ಹುಟ್ಟಿಸಿದ್ದು, ತಕ್ಷಣವೇ ಫಾರಂ ಅನ್ನು ಮುಚ್ಚಲಾಗಿದೆ. ಫಾರಂನಲ್ಲಿದ್ದ ಕೋಳಿಗಳನ್ನು ಹತ್ಯೆ ಮಾಡಿ ನೆಲದಲ್ಲಿ ಹೂತು ವಿಲೇವಾರಿ ಮಾಡಲಾಗಿದೆ. ಸರ್ಕಾರದ ತುರ್ತು ಕ್ರಮಗಳು ವೈರಸ್ ಹರಡುವ ಬಗ್ಗೆ ಮಾಹಿತಿ ಜನರಿಗೆ ಸೂಚನೆಗಳು ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಹಕ್ಕಿ ಜ್ವರ (H5N1) ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪ್ರಯತ್ನ ನಡೆಯುತ್ತಿದೆ, ಆದರೆ ಸಾರ್ವಜನಿಕರು […]
ತಾಯಿ ಕೊಟ್ಟ ದೋಸೆ ತಿಂದು ಮಕ್ಕಳ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್: ಡೈರಿಯಿಂದ ಬಯಲಾದ ಅಸಲಿ ಸತ್ಯ!

ಅಹಮದಾಬಾದ್: ಇತ್ತೀಚೆಗೆ ನಡೆದ, ದೋಸೆ ಹಿಟ್ಟು ತಿಂದ ಬಳಿಕ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಸಾವನಪ್ಪಿದ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ತಾಯಿಯ ಡೈರಿಯಲ್ಲಿ ದೊರೆತ ಮಾಹಿತಿಯ ಆಧಾರದಲ್ಲಿ ಪ್ರಕರಣದ ಅಸಲಿ ಸತ್ಯ ಬಹಿರಂಗವಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ವಿವರ ಏಪ್ರಿಲ್ 1ರಂದು ಸ್ಥಳೀಯ ಮಾರಾಟಗಾರನಿಂದ ದೋಸೆ ಹಿಟ್ಟು ಖರೀದಿಸಿ ಮನೆಯಲ್ಲಿ ದೋಸೆ ಮಾಡಿ ತಿಂದಿದ್ದರು. ದೋಸೆ ತಿಂದ ಕೆಲವೇ ಸಮಯದಲ್ಲಿ ಅಜ್ಜಿ ಹಾಗೂ ಇಬ್ಬರು ಹೆಣ್ಣುಮೊಮ್ಮಕ್ಕಳಿಗೆ ತೀವ್ರ ವಾಂತಿ ಆರಂಭವಾಗಿ, ಅವರ ಆರೋಗ್ಯ ಸ್ಥಿತಿ […]