ಅಮೆರಿಕ ದಾಳಿಯ ಬೆನ್ನಲ್ಲೇ ಬಹ್ರೇನ್‌, ಕುವೈಟ್ ಮೇಲೆ ಇರಾನ್ ಪ್ರತಿದಾಳಿ: ಮೊಳಗಿದ ಸೈರನ್

ದುಬೈ: ಅಮೆರಿಕವು ಇರಾನ್ ಮೇಲೆ ಭಾರೀ ವೈಮಾನಿಕ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಬುಧವಾರ(ಜು. 8) ಬಹ್ರನ್ ಹಾಗೂ ಕುವೈಟ್ ಅನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿರುವುದಾಗಿ ಘೋಷಿಸಿದೆ.ದಾಳಿಯ ಹಿನ್ನೆಲೆಯಲ್ಲಿ ಬಹೇನ್‌ನಲ್ಲಿ ಎರಡನೇ ಬಾರಿಗೆ ಕ್ಷಿಪಣಿ ದಾಳಿ ಎಚ್ಚರಿಕೆ ಸೈರನ್ ಮೊಳಗಿಸಲಾಗಿದ್ದು, ಸಾರ್ವಜನಿಕರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸರಕಾರ ಸೂಚನೆ ನೀಡಿದೆ.ಬಹ್ರನ್ ಹಾಗೂ ಕುವೈಟ್ ಮೇಲೆ ದಾಳಿ ನಡೆದಿರುವುದಾಗಿ ಇರಾನ್ ಹೇಳಿಕೊಂಡಿದ್ದರೂ, ಎರಡೂ ದೇಶಗಳಲ್ಲಿ ಸಂಭವಿಸಿದ ಹಾನಿ ಅಥವಾ ಗಾಯಾಳುಗಳ ಕುರಿತು ತತ್ ಕ್ಷಣದ ಅಧಿಕೃತ […]

ಕಸದ ರಾಶಿಯೇ ಇಂಧನ! ದೆಹಲಿ ಬಸ್ ಗಳು ಇನ್ನು ಹೈಡ್ರೋಜನ್ನಲ್ಲಿ ಸಂಚಾರ; ನಿತಿನ್ ಗಡ್ಕರಿ ಘೋಷಣೆ

ನವದೆಹಲಿ: ಭವಿಷ್ಯದಲ್ಲಿ ದೆಹಲಿಯ (Delhi) ಸಾರ್ವಜನಿಕ ಸಾರಿಗೆ ಬಸ್ಗಳು ಘನತ್ಯಾಜ್ಯದಿಂದ (Garbage) ಉತ್ಪಾದಿಸಿದ ಹೈಡ್ರೋಜನ್(Hydrogen) ಇಂಧನ ಬಳಸಿ ಚಲಿಸಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ(Nitin Gadkari) ಪ್ರಕಟಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಆಯೋಜಿಸಿದ್ದ ಯುವ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ನಗರಗಳಲ್ಲಿ ಸಂಗ್ರಹವಾಗುವ ಮುನ್ಸಿಪಲ್ ಘನತ್ಯಾಜ್ಯವನ್ನು (Municipal Solid Waste) ಬಳಸಿಕೊಂಡು ಹಸಿರು ಹೈಡ್ರೋಜನ್ (Green Hydrogen) ಇಂಧನವನ್ನು ಉತ್ಪಾದಿಸುವ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತದೆ. ಇದರಿಂದ ಕಸದ ವಿಲೇವಾರಿ ಸಮಸ್ಯೆಯೂ ಬಗೆಹರಿಯಲಿದ್ದು, ಇಂಧನವೂ ಸಿಗಲಿದೆ. […]

ವಯನಾಡಿನಲ್ಲಿ ಮತ್ತೆ ಭಾರೀ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ, 30 ಮಂದಿ ನಾಪತ್ತೆ

ಕೇರಳದ Kerala ರಾಜ್ಯದ ವಯನಾಡು Wayanad ಜಿಲ್ಲೆಯ ಮೆಪ್ಪಾಡಿ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಭೂಕುಸಿತ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ. ಭೂಕುಸಿತವು ವಯನಾಡ್ ಸುರಂಗ ನಿರ್ಮಾಣ ಯೋಜನೆಯ ಮೀನಾಕ್ಷಿ ಸೇತುವೆ ಸಮೀಪ ಸಂಭವಿಸಿದೆ. ಎರಡು ವರ್ಷಗಳ ಹಿಂದೆ ಚೂರಲ್ಮಲದಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತದ ನೆನಪು ಇನ್ನೂ ಮಾಸದಿರುವಾಗಲೇ ಮತ್ತೊಮ್ಮೆ ಈ […]

ಮುಂಬೈನಲ್ಲಿ ಮುಂದುವರಿದ ಭಾರೀ ಮಳೆ, ಭೂಕುಸಿತಕ್ಕೆ 8 ಸಾವು, ಘಾಟಿ ರಸ್ತೆಗಳು ಬಂದ್, ರೈಲು, ಬಸ್ ಸಂಚಾರವೂ ಅಸ್ತವ್ಯಸ್ತ

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾನುವಾರ ಒಂದೇ ದಿನ ಮಳೆಗೆ ಸಂಬಂಧಿಸಿದ ವಿವಿಧ ಅವಘಡಗಳಲ್ಲಿ ಎಂಟು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸೋಮವಾರವೂ ಮಳೆಯ ಅಬ್ಬರ ಮುಂದುವರಿದ ಪರಿಣಾಮ ಭೂಕುಸಿತ, ಪ್ರವಾಹ ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಮುಂಖುರ್ಡ್ ಪ್ರದೇಶದಲ್ಲಿ ಚಾಲ್ ಕಟ್ಟಡದ ಒಂದು ಭಾಗ ಕುಸಿದು ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಂದೆಡೆ ಮರ ಬಿದ್ದು ಒಬ್ಬರು ಹಾಗೂ ಕಟ್ಟಡದ ಗ್ರಿಲ್ […]

ಭಾರತದಲ್ಲಿ ಪಾಕಿಸ್ತಾನದ ಫೇಸ್ ಕ್ರೀಂ ಅವಾಂತರ,18 ಮಹಿಳೆಯರಿಗೆ ಶುರುವಾಯ್ತು ಮೂತ್ರಪಿಂಡದ ಸಮಸ್ಯೆ, ಭಾರತದ ಈ ಉತ್ಪನ್ನಗಳೂ ಕೂಡ ಡೇಂಜರ್!

ನಾಗ್ಪುರ: ಬೆಳ್ಳಗಿನ ಚರ್ಮದ ಆಸೆ ಆರೋಗ್ಯಕ್ಕೆ ಮುಳುವಾಗಬಹುದು ಎಂಬ ಆತಂಕಕಾರಿ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಬೆಳಕಿಗೆ ಬಂದಿದೆ. ಚರ್ಮ ಬಿಳಿಯಾಗಿಸುವ ಕ್ರೀಮ್ ಬಳಸುತ್ತಿದ್ದ 18 ಮಹಿಳೆಯರು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವುದು ವೈದ್ಯಕೀಯ ತನಿಖೆಯಲ್ಲಿ ಪತ್ತೆಯಾಗಿದೆ. ವರದಿಗಳ ಪ್ರಕಾರ, ಈ ಮಹಿಳೆಯರೆಲ್ಲರೂ ಪಾಕಿಸ್ತಾನದಲ್ಲಿ ತಯಾರಾಗುವ ‘ಗೋರಿ ಬ್ಯೂಟಿ ಕ್ರೀಮ್’ ಬಳಸುತ್ತಿದ್ದರು. ಪ್ರಯೋಗಾಲಯ ಪರೀಕ್ಷೆಯಲ್ಲಿ ಈ ಕ್ರೀಮ್‌ನಲ್ಲಿ ಪಾದರಸದ (Mercury) ಪ್ರಮಾಣ ಕಾನೂನುಬದ್ಧ ಮಿತಿಗಿಂತ ಹೆಚ್ಚಿರುವುದು ಪತ್ತೆಯಾಗಿದ್ದು, ಇದೇ ಆರೋಗ್ಯ ಸಮಸ್ಯೆಗೆ ಕಾರಣವಾಗಿರಬಹುದು ಎಂದು ತಜ್ಞರು ಶಂಕಿಸಿದ್ದಾರೆ. ಎಫ್‌ಡಿಎ ನಿಷೇಧ […]