ಒಂದು ಜಿಲ್ಲೆ ಒಂದು ಉತ್ಪನ್ನ ಉಡುಗೊರೆ ಕ್ಯಾಟಲಾಗ್ನ ಡಿಜಿಟಲ್ ಆವೃತ್ತಿ ಬಿಡುಗಡೆ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವ ಪಿಯೂಷ್ ಗೋಯಲ್ ಅವರು ‘ಒಂದು ಜಿಲ್ಲೆ ಒಂದು ಉತ್ಪನ್ನ’ ಉಡುಗೊರೆ ಕ್ಯಾಟಲಾಗ್ನ ಡಿಜಿಟಲ್ ಆವೃತ್ತಿಯನ್ನು ಅನಾವರಣಗೊಳಿಸಿದರು. 5 ಆಗಸ್ಟ್ 2022 ರಂದು ವಾಣಿಜ್ಯ ಭವನದಲ್ಲಿ ರಫ್ತು ಉತ್ತೇಜನಾ ಮಂಡಳಿಗಳು ಮತ್ತು ಉದ್ಯಮ ಸಂಘಗಳೊಂದಿಗಿನ ಸಭೆಯಲ್ಲಿ ಡಿಜಿಟಲ್ ಆವೃತ್ತಿ ಬಿಡುಗಡೆ ಗೊಳಿಸಲಾಯಿತು. ಉಡುಗೊರೆ ಕ್ಯಾಟಲಾಗ್ ಸುಗಂಧ ದ್ರವ್ಯಗಳು ಮತ್ತು ತೈಲಗಳು, ಭಾರತೀಯ ಸ್ಪಿರಿಟ್ ಗಳು, ಗೃಹಾಲಂಕಾರ ಉತ್ಪನ್ನಗಳು, ಬಟ್ಟೆಗಳು ಮತ್ತು […]
ಬಾಹ್ಯಾಕಾಶದಲ್ಲಿಯೂ ಹಾರುತ್ತಿದೆ ತ್ರಿವರ್ಣ ಧ್ವಜ: ಇಸ್ರೋದಿಂದ ಎಸ್.ಎಸ್.ಎಲ್.ವಿ ಯಶಸ್ವಿ ಉಡಾವಣೆ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಭೂಮಿಯ ವೀಕ್ಷಣಾ ಉಪಗ್ರಹವನ್ನು ಹೊತ್ತೊಯ್ಯುವ ತನ್ನ ಚಿಕ್ಕ ವಾಣಿಜ್ಯ ರಾಕೆಟ್ ಮತ್ತು 750 ಶಾಲಾ ಬಾಲಕಿಯರು ನಿರ್ಮಿಸಿದ ‘ಆಜಾದಿ ಸ್ಯಾಟ್’ ಉಪಗ್ರಹವನ್ನು ಶ್ರೀಹರಿಕೋಟಾದಿಂದ ಉಡಾವಣೆ ಮಾಡಿದೆ. ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು ಬಾಹ್ಯಾಕಾಶ ಸಂಸ್ಥೆಯ ಮೊದಲ ಸಣ್ಣ ಉಪಗ್ರಹ ಉಡಾವಣಾ ವಾಹನ (ಎಸ್.ಎಸ್.ಎಲ್.ವಿ) – ಎಸ್.ಎಸ್.ಎಲ್.ವಿ-ಡಿ1/ಇಒಎಸ್ 02 ಬಗ್ಗೆ ಮಾಹಿತಿ ನೀಡಿದರು. CONGRATULATIONS !!SSLV-D1/EOS-02 Mission : #ISRO launches the smallest commercial rocket to unfurl […]
ಸ್ವಾತಂತ್ರ್ಯ ದಿನದವರೆಗೆ ರಜಾದಿನಗಳಲ್ಲೂ ತೆರೆದಿರಲಿವೆ ಅಂಚೆ ಕಚೇರಿಗಳು: ಹರ್ ಘರ್ ತಿರಂಗ ಅಭಿಯಾನಕ್ಕಾಗಿ ವ್ಯವಸ್ಥೆ

ನವದೆಹಲಿ: ಹರ್ ಘರ್ ತಿರಂಗ ಅಭಿಯಾನದ ಅಡಿಯಲ್ಲಿ ರಾಷ್ಟ್ರೀಯ ಧ್ವಜಗಳ ಮಾರಾಟ ಮತ್ತು ವಿತರಣೆಗೆ ಅನುಕೂಲವಾಗುವಂತೆ ದೇಶದಾದ್ಯಂತ ಎಲ್ಲಾ ಅಂಚೆ ಕಛೇರಿಗಳು ಸ್ವಾತಂತ್ರ್ಯ ದಿನದ ಮೊದಲಿನ ಎಲ್ಲಾ ರಜಾದಿನಗಳಲ್ಲಿ ತೆರೆದಿರುತ್ತವೆ. ಈ ಬಗ್ಗೆ ಸಂಪರ್ಕ ಸಚಿವಾಲಯವು ಪ್ರಕಟಣೆ ಹೊರಡಿಸಿದ್ದು, ಈ ತಿಂಗಳ 7, 9 ಮತ್ತು 14 ರಂದು ಅಂಚೆ ಕಚೇರಿಗಳಲ್ಲಿ ಕನಿಷ್ಠ ಒಂದು ಕೌಂಟರ್ ಮೂಲಕ ರಾಷ್ಟ್ರಧ್ವಜಗಳ ಮಾರಾಟಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದೆ. ಎಲ್ಲಾ ವಿತರಣಾ ಅಂಚೆ ಕಚೇರಿಗಳಲ್ಲಿ ರಾಷ್ಟ್ರೀಯ ಧ್ವಜಗಳನ್ನು ತಲುಪಿಸಲು […]
ಭಾರತದ 14 ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ: ಕಳೆದ ಆರು ಉಪರಾಷ್ಟ್ರಪತಿ ಚುನಾವಣೆಗಳಲ್ಲಿ ಅತ್ಯಾಧಿಕ ಅಂತರದ ಗೆಲುವು

ನವದೆಹಲಿ: ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್ಡಿಎ) ಅಭ್ಯರ್ಥಿ ಜಗದೀಪ್ ಧನಕರ್ ಅವರು ಭಾರತದ 14 ನೇ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಧನಕರ್ 528 ಮತಗಳನ್ನು ಪಡೆದು ವಿರೋಧ ಪಕ್ಷದ ಅಭ್ಯರ್ಥಿ, 182 ಮತ ಪಡೆದ ಶ್ರೀಮತಿ ಮಾರ್ಗರೆಟ್ ಆಳ್ವ ಅವರನ್ನು ಸೋಲಿಸಿದರು. ನಿನ್ನೆ ನಡೆದ ಮತದಾನದಲ್ಲಿ ಶೇ.72.8 ರಷ್ಟು ಮಾನ್ಯವಾದ ಮತಗಳೊಂದಿಗೆ ಧನಕರ್ ಅವರ ಗೆಲುವು ಕಳೆದ ಆರು ಉಪರಾಷ್ಟ್ರಪತಿ ಚುನಾವಣೆಗಳಲ್ಲಿ ಪಡೆದ ಅತ್ಯಾಧಿಕ ಗೆಲುವಿನ ಅಂತರವಾಗಿದೆ. ಮೂಲತಃ ಲೋಕದಳ ಪಕ್ಷ ಆ ಬಳಿಕ ಕಾಂಗ್ರೆಸ್ ನಲ್ಲಿದ್ದು, ನಂತರ […]
ಸರ್ಕಾರಿ ಧೋರಣೆ ಬಿಟ್ಟು ಕೆಲಸ ಮಾಡಿ ಅಥವಾ ಗಂಟುಮೂಟೆ ಕಟ್ಟಿ: ಬಿಎಸ್ಎನ್ಎಲ್ ಉದ್ಯೋಗಿಗಳಿಗೆ ಸಚಿವ ವೈಷ್ಣವ್ ಖಡಕ್ ಎಚ್ಚರಿಕೆ

ನವದೆಹಲಿ: ಸಂಕಷ್ಟದಲ್ಲಿರುವ ಟೆಲಿಕಾಂ ಪಿಎಸ್ಯುವಾದ ಬಿಎಸ್ಎನ್ಎಲ್ನ ಉದ್ಯೋಗಿಗಳಿಗೆ ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಉದ್ಯೋಗಿಗಳು ತಮ್ಮ ‘ಸರ್ಕಾರಿ’ ಧೋರಣೆಯನ್ನು ತ್ಯಜಿಸುವಂತೆ ಹೇಳಿದ ಅವರು, ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸದವರಿಗೆ ಕಡ್ಡಾಯ ನಿವೃತ್ತಿ ನೀಡಲಾಗುತ್ತದೆ ಮತ್ತು ಗಂಟು ಮೂಟೆ ಕಟ್ಟಿ ಮನೆಗೆ ಕಳುಹಿಸಲಾಗುತ್ತದೆ ಎಂದಿದ್ದಾರೆ. ಎಂಟಿಎನ್ಎಲ್ಗೆ ‘ಭವಿಷ್ಯವಿಲ್ಲ’ ಹಾಗಾಗಿ ನಾವು ಅಲ್ಲಿ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ. ಎಂಟಿಎನ್ಎಲ್ ನ ನಿರ್ಬಂಧಗಳು ಮತ್ತು ಅದು ಯಾವ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಅದಕ್ಕಾಗಿ ವಿಭಿನ್ನ ಕಸರತ್ತು […]