ಭಯೋತ್ಪಾದನೆಯ ಪರ ವಕಾಲತ್ತು ಬೇಡ: ಅಂತರಾಷ್ಟ್ರೀಯ ಇಸ್ಲಾಮಿಕ್ ಸಹಕಾರ ಸಂಘಟನೆಗೆ ಭಾರತದ ಛಾಟಿ ಏಟು

ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ, ಲಕ್ಷಾಂತರ ಕಾಶ್ಮೀರಿ ಪಂಡಿತರ ನರಮೇಧ ಮತ್ತು ಪಲಾಯನಕ್ಕೆ ಕಾರಣನಾದ ಯಾಸಿನ್ ಮಲಿಕ್ ವಿರುದ್ಧದ ನ್ಯಾಯಾಲಯದ ತೀರ್ಪಿನ ವಿರುದ್ದ ನವದೆಹಲಿಯನ್ನು ಟೀಕಿಸಿದ ಇಸ್ಲಾಮಿಕ್ ಸಹಕಾರ ಸಂಘಟನೆ- ಸ್ವತಂತ್ರ ಶಾಶ್ವತ ಮಾನವ ಹಕ್ಕುಗಳ ಆಯೋಗದ ಟಿಪ್ಪಣಿಗಳನ್ನು ಭಾರತವು “ಸ್ವೀಕಾರಾರ್ಹವಲ್ಲ” ಎಂದು ಬಣ್ಣಿಸಿದೆ. ವಿಶ್ವವು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯನ್ನು ಬಯಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ ಮತ್ತು ಯಾವುದೇ ರೀತಿಯಲ್ಲಿ ಅದನ್ನು ಸಮರ್ಥಿಸಬೇಡಿ ಎಂದು ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) […]

ಮೇಡ್ ಇನ್ ಇಂಡಿಯಾ ಟೆಸ್ಲಾ ಇವಿ ಕಾರಿಗೆ ಕೂಡಿ ಬಂದಿಲ್ಲ ಕಾಲ: ಮೊದಲು ಮಾರಾಟ ಮತ್ತು ಸೇವೆಗೆ ಪಟ್ಟು ಹಿಡಿದ ಮಸ್ಕ್!

ನವದೆಹಲಿ: “ಕಾರುಗಳನ್ನು ಮಾರಾಟ ಮಾಡಲು ಮತ್ತು ಸೇವೆ ನೀಡಲು ಮೊದಲು ನಮಗೆ ಅನುಮತಿ ನೀಡದ ಹೊರತು ಭಾರತದ ಯಾವುದೇ ಸ್ಥಳದಲ್ಲಿ ಟೆಸ್ಲಾ ಉತ್ಪಾದನಾ ಘಟಕವನ್ನು ಹಾಕುವುದಿಲ್ಲ” ಎಂದು ಎಲೆಕ್ಟ್ರಿಕ್ ಕಾರು ಟೆಸ್ಲಾದ ನಿರ್ಮಾತ ಏಲನ್ ಮಸ್ಕ್ ಹೇಳಿದ್ದಾರೆ. ಟೆಸ್ಲಾ ಸಂಸ್ಥಾಪಕರು ಭಾರತದಲ್ಲಿ ಇವಿ ಕಾರುಗಳನ್ನು ತಯಾರಿಸುವ ಯಾವುದೇ ಯೋಜನೆಯನ್ನು ಹೊಂದಿಲ್ಲ, ಮಾರಾಟ ಮತ್ತು ಸೇವೆಯನ್ನು ಅನುಮತಿಸುವವರೆಗೆ, ಭಾರತದಲ್ಲಿ ಯಾವುದೇ ಸ್ಥಾವರವನ್ನು ಸ್ಥಾಪಿಸುವುದಿಲ್ಲ ಎಂದು ಟ್ವಿಟರ್ ಬಳಕೆದಾರರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. 2016 ರಿಂದಲೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲು […]

ರಾಷ್ಟ್ರರಾಜಧಾನಿಯಲ್ಲಿ ‘ಭಾರತ ಡ್ರೋನ್ ಮಹೋತ್ಸವ’: ದೇಶದ ಅತಿದೊಡ್ಡ ಡ್ರೋನ್ ಉತ್ಸವವನ್ನು ಉದ್ಘಾಟಿಸಲಿರುವ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರದಂದು ದೆಹಲಿಯ ಪ್ರಗತಿ ಮೈದಾನದಲ್ಲಿ ದೇಶದ “ಅತಿದೊಡ್ಡ ಡ್ರೋನ್ ಉತ್ಸವ” ಎಂದು ಕರೆಯಲ್ಪಡುವ ಭಾರತ್ ಡ್ರೋನ್ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ವಲಯದಲ್ಲಿ ಭಾರತದ ಉಪಸ್ಥಿತಿಯನ್ನು ಹೆಚ್ಚಿಸುವ ಉದ್ದೇಶದಿಂದ ಸ್ಟಾರ್ಟ್‌ಅಪ್‌ಗಳು ಸೇರಿದಂತೆ ಪ್ರಮುಖ ಪಾಲುದಾರರನ್ನು ಈ ವೇದಿಕೆ ಒಟ್ಟುಗೂಡಿಸುತ್ತದೆ. ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿ ಆಸಕ್ತಿ ಹೊಂದಿರುವ ಎಲ್ಲರೂ ಕಾರ್ಯಕ್ರಮವನ್ನು ವೀಕ್ಷಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಮೋದಿ ಅವರು ಕಿಸಾನ್ ಡ್ರೋನ್ […]

26 ವರ್ಷದ ಕ್ಯಾಪ್ಟನ್ ಅಭಿಲಾಶಾ ಬರಾಕ್: ಭಾರತೀಯ ಸೇನೆಯ ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್!

ನವದೆಹಲಿ: ಬುಧವಾರ, ಹರಿಯಾಣದ 26 ವರ್ಷದ ಕ್ಯಾಪ್ಟನ್ ಅಭಿಲಾಶಾ ಬರಾಕ್ ಭಾರತೀಯ ಸೇನೆಯ ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್ ಆಗಿ ಹೊರಹೊಮ್ಮಿದ್ದಾರೆ. ನಾಸಿಕ್‌ನ ಯುದ್ಧ ಸೇನಾ ವಿಮಾನಯಾನ ತರಬೇತಿ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಕ್ಯಾಪ್ಟನ್ ಅಭಿಲಾಷಾ ಬರಾಕ್ ಪೈಲಟ್ ಪದವಿ ಪಡೆದರು. ಆರ್ಮಿ ಏವಿಯೇಷನ್‌ನ ಡಿಜಿ ಎ ಕೆ ಸೂರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕ್ಯಾಪ್ಟನ್ ಬರಾಕ್ ಸನಾವರ್‌ನ ಲಾರೆನ್ಸ್ ಶಾಲೆಯ ಹಳೆಯ ವಿದ್ಯಾರ್ಥಿ. ಅವರು 2016 ರಲ್ಲಿ ದೆಹಲಿ ತಾಂತ್ರಿಕ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್ ಮತ್ತು […]

ಆರು ವರ್ಷಗಳಲ್ಲಿ ಮೊದಲ ಬಾರಿಗೆ ಸಕ್ಕರೆ ರಫ್ತಿಗೆ ನಿರ್ಬಂಧ ಹೇರಲು ಕೇಂದ್ರ ಯೋಚನೆ: ಬೆಲೆ ಏರಿಕೆ ತಡೆಗಟ್ಟಲು ಕ್ರಮ

ನವದೆಹಲಿ: ಸಚಿವಾಲಯದ ಅಧಿಕಾರಿಗಳ ಪ್ರಕಾರ, ದೇಶೀಯ ಬೆಲೆಗಳ ಏರಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರವು ಆರು ವರ್ಷಗಳಲ್ಲಿ ಮೊದಲ ಬಾರಿಗೆ ಸಕ್ಕರೆ ರಫ್ತುಗಳನ್ನು ನಿರ್ಬಂಧಿಸಲು ಯೋಚಿಸುತ್ತಿದೆ. ವಿಶ್ವದ ಅತಿದೊಡ್ಡ ಸಕ್ಕರೆ ಉತ್ಪಾದಕ ಮತ್ತು ಬ್ರೆಜಿಲ್‌ನ ನಂತರ ಎರಡನೇ ಅತಿದೊಡ್ಡ ರಫ್ತುದಾರ ರಾಷ್ಟ್ರವಾದ ಭಾರತ, ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯನ್ನು ತಡೆಗಟ್ಟಲು ಸಕ್ಕರೆ ರಫ್ತನ್ನು 10 ಮಿಲಿಯನ್ ಟನ್‌ಗಳಿಗೆ ಸೀಮಿತಗೊಳಿಸಬಹುದು ಎಂದು ಸರ್ಕಾರಿ ಮೂಲವೊಂದು ಮಂಗಳವಾರ ತಿಳಿಸಿದೆ ಎಂದು ರಾಯಿಟರ್ಸ್‌ ವರದಿ ಮಾಡಿದೆ. ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣದ ನಂತರ, […]