ಬಾಬರಿ ನಂತರ ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ಮುಸ್ಲಿಮರು ತಯಾರಿಲ್ಲ: ಅಸಾದುದ್ದೀನ್ ಓವೈಸಿ

ವಾರಣಾಸಿ: ಬಾಬರಿ ಮಸೀದಿಯ ನಂತರ ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ಮುಸ್ಲಿಮರು ತಯಾರಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೋಮವಾರ ಹೇಳಿದ್ದಾರೆ. ನ್ಯಾಯಾಲಯದ ಆದೇಶದನ್ವಯ ವಾರಣಾಸಿಯ ಜ್ಞಾನವಾಪಿ ಸಂಕೀರ್ಣದ ಸಮೀಕ್ಷೆಯ ಸಮಯದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಲಾಗಿರುವ ಬಳಿಕ ಅವರು ಪ್ರತಿಕ್ರಿಯಿಸಿದ್ದಾರೆ. ಬಾಬರಿ ಮಸೀದಿ ಧ್ವಂಸ ಮತ್ತು 1949 ರಲ್ಲಿ ಹಿಂದೂ ದೇವತೆಗಳ ವಿಗ್ರಹಗಳು ಕಾಣಿಸಿಕೊಂಡಾಗ ನಡೆದ ಘಟನೆಯನ್ನು ಉಲ್ಲೇಖಿಸಿದ ಓವೈಸಿ, ವಾರಣಾಸಿಯಲ್ಲಿ ಅದನ್ನು ಪುನರಾವರ್ತಿಸಲು ಬಿಡುವುದಿಲ್ಲ ಎಂದು ಮುಸ್ಲಿಮರು ಪ್ರತಿಜ್ಞೆ ಮಾಡಬೇಕೆಂದಿದ್ದಾರೆ. ತಮ್ಮ ಟ್ವಿಟರ್ ಹ್ಯಾಂಡಲ್ನಲ್ಲಿ […]
ವಿಶ್ರಾಂತಿ ಪಡೆಯಲು ಸಮಯವಿಲ್ಲ, 2024 ಕ್ಕೆ ಸಿದ್ಧರಾಗಿ: ಯೋಗಿ ಸಂಪುಟ ಭೇಟಿಯಾದ ಪ್ರಧಾನಿಯಿಂದ ‘ಬುಲ್ಡೋಜರ್ ಅಭಿಯಾನಕ್ಕೆ’ ಶ್ಲಾಘನೆ

ಉತ್ತರ ಪ್ರದೇಶ: ಸೋಮವಾರ ಸಂಜೆ ಲಕ್ನೋನಲ್ಲಿ ಯೋಗಿ ಆದಿತ್ಯನಾಥ್ ಸಂಪುಟದೊಂದಿಗೆ ಚಿಂತನ-ಮಂಥನ ಸಭೆ ನಡೆಸಿದ ಪ್ರಧಾನಿ ಮೋದಿ, ಉತ್ತಮ ಆಡಳಿತದಿಂದ ಮಾತ್ರ ಅಧಿಕಾರದ ಹಾದಿ ಸುಗಮವಾಗುತ್ತದೆ ಎಂದು ಕಿವಿಮಾತು ಹೇಳಿದ್ದಾರೆ. ಯೋಗಿ ಸಂಪುಟದ ಸಚಿವರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಸಚಿವರು ಸಾರ್ವಜನಿಕರ ಸೇವೆಗೆ ಮುಡುಪಾಗಿರಬೇಕು. ವಿಶ್ರಾಂತಿಗೆ ಸಮಯ ಉಳಿದಿಲ್ಲ, 2024 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಎಲ್ಲರೂ ಸಿದ್ಧತೆಗಳನ್ನು ಪ್ರಾರಂಭಿಸಬೇಕು ಎಂದಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ. ಅಪರಾಧಿಗಳ ವಿರುದ್ಧ ಯೋಗಿ ಆದಿತ್ಯನಾಥ್ ಸರ್ಕಾರದ […]
ಪ್ರಧಾನಿ ಮೋದಿ ಹಿಂದಿನವರಿಗಿಂತ ಭಿನ್ನ; ಅವರು ಭಯೋತ್ಪಾದನೆಯನ್ನು ಕಡೆಗಣಿಸುವುದಿಲ್ಲ ಅಥವಾ ಸಹಿಸುವುದಿಲ್ಲ: ಜೈಶಂಕರ್

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದನೆಯನ್ನು, ವಿಶೇಷವಾಗಿ ಗಡಿಯಾಚೆಗಿನ ಆಕ್ರಾಮಕ ಸ್ವಭಾವವನ್ನು ಸಾಮಾನ್ಯವೆಂದು ಎಂದಿಗೂ ಪರಿಗಣಿಸುವುದಿಲ್ಲವೆಂದು ‘ಸ್ಫಟಿಕದಷ್ಟು ಸ್ಪಷ್ಟವಾಗಿ’ ಹೇಳಿದ್ದಾರೆ. ಈ ನಿರ್ಣಯವು 2014 ರಿಂದ ಈಚೆಗೆ ಪಾಕಿಸ್ತಾನದ ಬಗ್ಗೆ ಭಾರತದ ನೀತಿಯನ್ನು ರೂಪಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. “ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ” ಪುಸ್ತಕದಲ್ಲಿ ಈ ಬಗ್ಗೆ ಬರೆದಿರುವ ಜೈಶಂಕರ್, 2015 ರಲ್ಲಿ ವಿದೇಶಾಂಗ ಕಾರ್ಯದರ್ಶಿಯಾದ ನಂತರ ತಮ್ಮ ‘ಸಾರ್ಕ್ ಯಾತ್ರೆ’ಗೆ ಸಿದ್ಧವಾಗುತ್ತಿರುವಾಗ, ಮೋದಿ ನೀಡಿದ ಸೂಚನೆಗಳನ್ನು ನೆನಪಿಸಿಕೊಂಡಿದ್ದಾರೆ. “ನನ್ನ ಅನುಭವ […]
‘ಒಂದು ಕುಟುಂಬ ಒಂದು ಟಿಕೆಟ್’ ಗೆ ಜೈ ಎಂದ ಕಾಂಗ್ರೆಸ್: ಚಿಂತನ ಶಿಬಿರದಲ್ಲಿ ಪಕ್ಷ ಪುನಶ್ಚೇತನದ ಮಂಥನ?

ಉದಯಪುರ: ಮೂರು ದಿನಗಳ ನವ ಸಂಕಲ್ಪ ಶಿಬಿರದ ಸಮಾರೋಪದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಭಾನುವಾರ ಉದಯಪುರದಲ್ಲಿ ‘ಒಂದು ಕುಟುಂಬ ಒಂದು ಟಿಕೆಟ್’ ಘೋಷಣೆಯನ್ನು ಅಂಗೀಕರಿಸಿತು. ಪಕ್ಷದ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕನ್ ಘೋಷಣೆಯನ್ನು ವಾಚಿಸಿದರು. ಘೋಷಣೆಯನ್ನು ಓದಿದ ಮಾಕನ್, ಕಾಂಗ್ರೆಸ್ ಎಲ್ಲಾ ಸಮಾನ ಮನಸ್ಕ ಪಕ್ಷಗಳನ್ನು ತಲುಪುತ್ತದೆ ಮತ್ತು ಮೈತ್ರಿಗೆ ಮುಕ್ತವಾಗಿದೆ ಎಂದು ಹೇಳಿದರು. ಪಕ್ಷ ಪುನಶ್ಚೇತನಕ್ಕಾಗಿ ಕಾಂಗ್ರೆಸ್ ಪಕ್ಷವು ಮೂರು ಹೊಸ ಇಲಾಖೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮೊದಲನೆಯದ್ದು ಸಾರ್ವಜನಿಕ ಒಳನೋಟ, ಎರಡನೆಯದ್ದು ಚುನಾವಣಾ ನಿರ್ವಹಣೆ ಮತ್ತು […]
ದೇಶದಲ್ಲಿ ಏರುತ್ತಿರುವ ಗೋಧಿ ಬೆಲೆ ತಗ್ಗಿಸಲು ರಫ್ತಿಗೆ ನಿಷೇಧ ಹೇರಿದ ಭಾರತ: ನಿರ್ಧಾರದಿಂದ ಯೂರೋಪಿನಲ್ಲಿ ತಳಮಳ!

ದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಗೋಧಿ ಮತ್ತು ಅದರ ಉತ್ಪನ್ನಗಳ ಬೆಲೆಗಳನ್ನು ತಗ್ಗಿಸುವ ನಿಟ್ಟಿನಲ್ಲಿ ತತ್ಕಾಲದಿಂದಲೇ ಜಾರಿಗೆ ಬರುವಂತೆ ಗೋದಿಯ ರಫ್ತನ್ನು ನಿಷೇಧಿಸಿ ಭಾರತ ಸರಕಾರದ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಆದೇಶ ಹೊರಡಿಸಿದ್ದಾರೆ. ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ದ, ಹಾಗೂ ಏರುತ್ತಿರುವ ತಾಪಮಾನದಿಂದಾಗಿ ವಿದೇಶೀ ಮಾರುಕಟ್ಟೆಗಳಲ್ಲಿ ಗೋಧಿಯ ಆವಕ ಕಡಿಮೆಯಾಗುತ್ತಿದ್ದು, ಯೂರೋಪ್, ಅಮೇರಿಕಾ ಮತ್ತಿತರ ದೇಶಗಳಿಗೆ ಗೋಧಿಯನ್ನು ರಫ್ತು ಮಾಡುವ ಉದ್ದೇಶದಲ್ಲಿದ್ದ ಭಾರತವು ಇದೀಗ ರಫ್ತಿನ ಮೇಲೆ ನಿಷೇಧ ಹೇರಿರುವುದು ಯೂರೋಪ್ ಮುಂತಾದ ದೇಶಗಳಲ್ಲಿ ತಳಮಳವನ್ನು […]