ಔಷಧಿಗಳಿಗಾಗಿ ಭಾರತಕ್ಕೆ ಮನವಿ ಮಾಡಿದ ಶ್ರೀಲಂಕಾ ಕ್ರಿಕೆಟಿಗ ಸನತ್ ಜಯಸೂರ್ಯ

ದೆಹಲಿ: ಶ್ರೀಲಂಕಾದ ಮಾಜಿ ನಾಯಕ ಸನತ್ ಜಯಸೂರ್ಯ ಶ್ರೀಲಂಕಾದ ಭಾರತೀಯ ಹೈಕಮಿಷನರ್ ಗೋಪಾಲ್ ಬಾಗ್ಲೇ ಅವರನ್ನು ಭೇಟಿಯಾಗಿ ದ್ವೀಪ ರಾಷ್ಟ್ರಕ್ಕೆ ಅಗತ್ಯವಾದ ಔಷಧಿಗಳನ್ನು ಪೂರೈಸಲು ಭಾರತದ ಸಹಾಯವನ್ನು ಕೇಳಿದ್ದಾರೆ. ಗುರುವಾರ (ಏಪ್ರಿಲ್ 28) ಭಾರತೀಯ ಹೈಕಮಿಷನರ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಸನತ್ ಅವರು ಮನವಿ ಮಾಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಶ್ರೀಲಂಕಾದ ನ್ಯೂಸ್ವೈರ್ ವರದಿ ಮಾಡಿದೆ. ಈ ಸಂದರ್ಭದಲ್ಲಿ ಔಷಧಿಗಳು ಸೇರಿದಂತೆ ಅಗತ್ಯ ಸಾಮಗ್ರಿಗಳ ರೂಪದಲ್ಲಿ ಭಾರತದ ಬೆಂಬಲವನ್ನು ಅವರು ಶ್ಲಾಘಿಸಿದ್ದಾರೆ. “ಹೈ ಕಮಿಷನರ್ ಅವರು ಕ್ರಿಕೆಟ್ […]
ಕೊರೋನಾ ಮಣಿಸಲು ಲಸಿಕೆಯೊಂದೆ ಪರಿಹಾರ: ನರೇಂದ್ರ ಮೋದಿ

ದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಹಿನ್ನೆಲೆಯಲ್ಲಿ, ನಾಲ್ಕನೇ ಅಲೆ ಶುರುವಾಗಿರುವ ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿದ್ದು, ವೀಡಿಯೋ ಕಾನ್ಪರೆನ್ಸ್ ಮೂಲಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದೇಶದಲ್ಲಿ ಕೊರೋನಾ ಸಂಕಟ ಇನ್ನೂ ತಗ್ಗಿಲ್ಲ, ಕೊರೋನಾ ಮಣಿಸಲು ಇರುವ ಒಂದೇ ದಾರಿಯೆಂದರೆ ಎಲ್ಲರೂ ಲಸಿಕೆಯನ್ನು ಹಾಕಿಸಿಕೊಳ್ಳುವುದು ಎಂದರು. ರಾಜ್ಯ ಮತ್ತು ಕೇಂದ್ರ ಸರಕಾರಗಳು ಜೊತೆಗೂಡಿ ಕೊರೋನಾ ಜೊತೆ ಹೋರಾಡಬೇಕು. ಹೆಚ್ಚುತ್ತಿರುವ ಕೊರೋನಾ ಕೇಸ್ ಗಳ […]
370 ನೇ ವಿಧಿಯ ರದ್ದತಿಯನ್ನು ಪ್ರಶ್ನಿಸುವ ಅರ್ಜಿಗಳ ಆಲಿಕೆ: 5 ನ್ಯಾಯಾಧೀಶರ ಪೀಠವನ್ನು ಮರು-ರಚಿಸಲು ಒಪ್ಪಿದ ಸುಪ್ರೀಂ ಕೋರ್ಟ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಬೇಸಿಗೆ ರಜೆಯ ನಂತರ ಆಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ರಾಜ್ಯದಲ್ಲಿ ನಡೆಸಲಾಗುತ್ತಿರುವ ಡಿಲಿಮಿಟೇಶನ್ ಕಸರತ್ತನ್ನು ಗಮನದಲ್ಲಿಟ್ಟುಕೊಂಡು ಅರ್ಜಿಯನ್ನು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ಶೇಖರ್ ನಾಫಡೆ ಅವರ ಸಲ್ಲಿಕೆಗಳನ್ನು […]
ನಾಲ್ಕನೇ ಅಲೆ ಭೀತಿ: ಭಾರತದಲ್ಲಿ 2,527 ಹೊಸ ಕೋವಿಡ್ -19 ಪ್ರಕರಣ, ಕಳೆದ 24 ಗಂಟೆಗಳಲ್ಲಿ 33 ಸಾವು

ನವದೆಹಲಿ: ಭಾರತದಲ್ಲಿ 2,527 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ, ಕಳೆದ 24 ಗಂಟೆಗಳಲ್ಲಿ 33 ಸಾವುಗಳು, ಒಟ್ಟು ಸಾವಿನ ಸಂಖ್ಯೆಯನ್ನು 5,22,149 ಕ್ಕೆ ಏರಿಸಿದೆ ಎಂದು ಆರೋಗ್ಯ ಸಚಿವಾಲಯವು ಮಾಹಿತಿ ಬಿಡುಗಡೆ ಮಾಡಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,079. ದೇಶವು ಒಂದು ದಿನದಲ್ಲಿ 1,656 ಚೇತರಿಕೆ ದಾಖಲಿಸಿದ್ದು, ಒಟ್ಟು ಚೇತರಿಕೆಯ ಸಂಖ್ಯೆ 4,25,17,724. ದೇಶಾದ್ಯಂತ ಅದರಲ್ಲೂ ವಿಶೇಷವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ ದಾಖಲಾಗುತ್ತಿದ್ದರೂ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಬೇಕಾಗುವವರ ಸಂಖ್ಯೆ […]
ಉಕ್ರೇನ್ ರಾಜಧಾನಿಯಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು !

ರಷ್ಯಾ ಮತ್ತು ಉಕ್ರೇನ್ ನಡುವಿನ ಕದನದ ಭಾರತೀಯ ವಿದ್ಯಾರ್ಥಿ ನವೀನ್ ಸಾವಿನ ಪ್ರಕರಣ ಇನ್ನೂ ಮಾಸಿಲ್ಲ. ಅಷ್ಟರಲ್ಲಿ ಉಕ್ರೇನ್ ರಾಜಧಾನಿ ಕೀವ್ದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು ಬಿದ್ದಿದ್ದು, ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ. ಕೀವ್ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಗುಂಡು ತಗುಲಿದ್ದು, ಆತ ಮಾರ್ಗ ಮಧ್ಯದಲ್ಲಿ ವಾಪಸ್ಸಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯುದ್ಧ ಪೀಡಿತ ದೇಶ ಉಕ್ರೇನ್ನಿಂದ ವಿದ್ಯಾರ್ಥಿಗಳು ಪಲಾಯನ ಮಾಡುತ್ತಿದ್ದು, ಭಾರತಕ್ಕೆ ಸುರಕ್ಷಿತವಾಗಿ ಮರಳಲು ಪೋಲೆಂಡ್ನ ಗಡಿಯನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ.