ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ದ ಎಸ್‌ಎಫ್‌ಐ ಪ್ರತಿಭಟನೆ: Z+ ಭದ್ರತೆ ಒದಗಿಸಲು ಕೇಂದ್ರ ನಿರ್ಧಾರ

ತಿರುವನಂತಪುರ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಅವರ ನಿವಾಸಕ್ಕೆ ಸಿಆರ್‌ಪಿಎಫ್ ಪಡೆಗಳ Z+ ಭದ್ರತೆ ಒದಗಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಕೇರಳ ರಾಜಭವನ ಶನಿವಾರ ಪ್ರಕಟಿಸಿದೆ. ಶನಿವಾರ ಮುಂಜಾನೆ ಕೊಲ್ಲಂ ಜಿಲ್ಲೆಯ ನಿಲಮೇಲ್‌ನಲ್ಲಿ ತಮ್ಮ ವಿರುದ್ಧ ಪ್ರತಿಭಟನೆ ನಡೆಸಿದ ಎಸ್‌ಎಫ್‌ಐ ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿ ಗವರ್ನರ್ ಖಾನ್ ಅವರು ತಮ್ಮ ವಾಹನದಿಂದ ಇಳಿದು ಬೀದಿ ಬದಿಯ ಅಂಗಡಿಯ ಮುಂದೆ ಕುರ್ಚಿ ಹಾಕಿ ಕುಳಿತು ಧರಣಿ ನಡೆಸಿದ್ದಾರೆ. ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ […]

ಜ್ಞಾನವಾಪಿ ಪ್ರಕರಣ: ಅಸ್ತಿತ್ವದಲ್ಲಿರುವ ಕಟ್ಟಡ ನಿರ್ಮಾಣದ ಮೊದಲು ದೊಡ್ಡ ಹಿಂದೂ ದೇವಾಲಯವಿತ್ತೆಂದ ಎ.ಎಸ್.ಐ ವರದಿ

ವಾರಣಾಸಿ: ಜ್ಞಾನವಾಪಿ ಪ್ರಕರಣದಲ್ಲಿ, ಅಸ್ತಿತ್ವದಲ್ಲಿರುವ ಕಟ್ಟಡವನ್ನು ನಿರ್ಮಿಸುವ ಮೊದಲಿಗೂ ಅಲ್ಲೊಂದು ದೊಡ್ಡ ಹಿಂದೂ ದೇವಾಲಯವಿತ್ತು ಎಂದು ಭಾರತೀಯ ಪುರಾತತ್ವ ಇಲಾಖೆಯ ಸರ್ವೆಯ ವರದಿ ತಿಳಿಸಿದೆ ಹಿಂದೂ ಪಕ್ಷದ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ. ಪುರಾತತ್ವ ಇಲಾಖೆಯ ಸಮೀಕ್ಷೆಯು ಶಿವಲಿಂಗ-ಕಾರಂಜಿ ಚರ್ಚೆಗೆ ಪೂರ್ಣವಿರಾಮ ನೀಡಲಿದೆ ಎಂದು ಹಿಂದೂ ಅರ್ಜಿದಾರರ ಪಕ್ಷವನ್ನು ಪ್ರತಿನಿಧಿಸುವ ವಕೀಲರು ಹೇಳಿದ್ದಾರೆ. ವಾರಣಾಸಿ ನ್ಯಾಯಾಲಯವು ಈ ವಾರದ ಆರಂಭದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ವರದಿಯನ್ನು ಸಾರ್ವಜನಿಕಗೊಳಿಸುವಂತೆ ಮತ್ತು ಎರಡೂ ಕಡೆಯವರಿಗೆ ಅದರ ಪ್ರತಿಗಳನ್ನು […]

ಭಾರತದ ಏಕೈಕ ರಾಜ್ಯದಲ್ಲಿದೆ ಅಪರೂಪದ ‘ಚಿನ್ನದ ಬಣ್ಣದ ಹುಲಿ’: ಅಪರೂಪದಲ್ಲಿ ಅಪರೂಪ ಚಿನ್ನದ ಹುಲಿಗಳ ದರ್ಶನ; ಚಿತ್ರ ಹಂಚಿಕೊಂಡ ಹಿಮಂತ ಬಿಸ್ವಾ ಶರ್ಮಾ

ಗುವಾಹಟಿ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಇತ್ತೀಚೆಗೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಕಂಡುಬಂದ ಅಪರೂಪದ ಚಿನ್ನದ ಹುಲಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ವನ್ಯಜೀವಿ ಛಾಯಾಗ್ರಾಹಕ ಮಯೂರೇಶ್ ಹೆಂಡ್ರೆ ಅವರು ಈ ಚಿತ್ರಗಳನ್ನು ಸೆರೆಹಿಡಿದಿದ್ದಾರೆ. ಕಾಜಿ 106-ಎಫ್ ಎಂದು ಕರೆಯಲ್ಪಡುವ ಈ ಅಪರೂಪದ ಹುಲಿಯನ್ನು ವೀಕ್ಷಿಸುವ ಅದೃಷ್ಟವನ್ನು ಹೊಂದಿದ್ದಾರೆ. ಅಸ್ಸಾಂನ ಹೃದಯಭಾಗದಲ್ಲಿ ನೆಲೆಸಿರುವ ಕಾಜಿರಂಗ ರಾಷ್ಟ್ರೀಯ ಉದ್ಯಾನವನವು ತನ್ನ ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ ಮತ್ತು ಸ್ಟ್ರಾಬೆರಿ ಟೈಗರ್ ಅಥವಾ ಗೋಲ್ಡನ್ ಟ್ಯಾಬಿ ಟೈಗರ್ ಎಂದೂ ಕರೆಯಲ್ಪಡುತ್ತದೆ. ಅಪರೂಪದ ಚಿನ್ನದ […]

ಭಕ್ತರ ನೂಕುನುಗ್ಗಲು: ರಾಮಮಂದಿರ ಭೇಟಿಯನ್ನು ಮಾರ್ಚ್ ವರೆಗೆ ಮುಂದೂಡಲು ಕೇಂದ್ರ ಸಚಿವರಿಗೆ ಪ್ರಧಾನಿ ಮೋದಿ ಸಲಹೆ

ನವದೆಹಲಿ: ರಾಮಲಲ್ಲಾನನ್ನು ಕಣ್ತುಂಬಿಕೊಳ್ಳಲು ಅಯೋಧ್ಯೆಯ ರಾಮ ಮಂದಿರಕ್ಕೆ ಲಕ್ಷಾಂತರ ಜನರು ಆಗಮಿಸುತ್ತಿದ್ದು, ವಿಐಪಿ ಮತ್ತು ವಿವಿಐಪಿ ಸಂಬಂಧಿತ ಭಕ್ತರ ಅನಾನುಕೂಲತೆಯನ್ನು ತಪ್ಪಿಸಲು ದೇವಾಲಯಕ್ಕೆ ಭೇಟಿ ನೀಡುವುದನ್ನು ವಿಳಂಬಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವರನ್ನು ಒತ್ತಾಯಿಸಿದ್ದಾರೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯ ನೇತೃತ್ವದ ವೇಳೆ ಪ್ರಧಾನಿ ಮೋದಿ, ದೇವಸ್ಥಾನದಲ್ಲಿ ಭಕ್ತರ ಭಾರೀ ನೂಕುನುಗ್ಗಲು ಮತ್ತು ದೇವಾಲಯದ ಪಟ್ಟಣಕ್ಕೆ ವಿವಿಐಪಿ ಮತ್ತು ವಿಐಪಿ ಭೇಟಿಗಳಿಂದ ಸಾರ್ವಜನಿಕರಿಗೆ ಉಂಟಾಗುವ ಅನಾನುಕೂಲತೆಗಳ ಬಗ್ಗೆ ಹಾಗೂ ಭದ್ರತೆಯ ಬಗ್ಗೆ ಕಳವಳ […]

ಪ.ಬಂಗಾಳ, ಪಂಜಾಬ್ ನಲ್ಲಿ “ಕೈ” ಕಿರಿಕಿರಿ: ಏಕಾಂಗಿ ಸ್ಪರ್ಧೆಗೆ ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಒಲವು

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪ. ಬಂಗಾಳದ 42 ಲೋಕಸಭಾ ಸ್ಥಾನಗಳಿಗೆ ತನ್ನ ಸ್ವಂತ ಬಲದ ಮೇಲೆ ಚುನಾವಣೆಯನ್ನು ಎದುರಿಸಲಿದೆ ಮತ್ತು ಫಲಿತಾಂಶ ಪ್ರಕಟವಾದ ನಂತರವೇ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಪರಿಗಣಿಸಲಿದೆ ಎಂದು ಉಗ್ರ ಮಮತಾ ಬ್ಯಾನರ್ಜಿ ಬುಧವಾರ ಘೋಷಿಸಿದ್ದಾರೆ. “ನಾನು ಕಾಂಗ್ರೆಸ್ ಜೊತೆ ಯಾವುದೇ ಚರ್ಚೆ ನಡೆಸಿಲ್ಲ. ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ನಾನು ಅವರಿಗೆ (ಕಾಂಗ್ರೆಸ್‌ಗೆ) ಹಲವು ಪ್ರಸ್ತಾವನೆಗಳನ್ನು ನೀಡಿದ್ದೆ. ಆದರೆ ಅವರು ತಿರಸ್ಕರಿಸಿದರು. (ಉಳಿದ) ದೇಶದಲ್ಲಿ ಏನು ಮಾಡಲಾಗುವುದು […]