ಇಂದು ಜನಪ್ರಿಯ ನಾಯಕ ನರೇಂದ್ರ ಮೋದಿ ಹುಟ್ಟುಹಬ್ಬ: ಪ್ರಧಾನಿ ಬಗ್ಗೆ ಒಂದಷ್ಟು ಮಾಹಿತಿ

ದೇಶದ ಅಪ್ರತಿಮ ಜನನಾಯಕ, ಭಾರತವನ್ನು ವಿಶ್ವಗುರುವನ್ನಾಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಸೆ.17) 70ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ರಾಜಕೀಯ ಹಾದಿಯಲ್ಲಿ ಬಿಜೆಪಿಯ ಸಂಘಟನೆ ಹೊಣೆಯನ್ನು ಯಶಸ್ವಿಯಾಗಿ ನಿಭಾಯಿಸಿ, ಪಕ್ಷವನ್ನು ಸಂಸತ್​ನ ಗದ್ದುಗೆಗೇರಿಸುವಲ್ಲಿ ಯಶಸ್ವಿಯಾಗಿರುವ ಮೋದಿ ಅವರು ಎರಡನೇ ಅವಧಿಗೂ ಅಭೂತಪೂರ್ವ ಬಹುಮತದೊಂದಿಗೆ ಅಧಿಕಾರಕ್ಕೆ ತರುವಲ್ಲಿ ಸಫಲರಾಗಿದ್ದಾರೆ. ಇಡೀ ಜಗತ್ತಿಗೆ ಕಂಟಕವಾಗಿದ್ದ ಕೊರೊನಾ ಮಹಾಮಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ದೇಶವನ್ನು ಸುರಕ್ಷತೆಯ ಕಡೆಗೆ ಕೊಂಡೊಯ್ಯುವಲ್ಲಿ ಸಫಲರಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಉಗ್ರರ ಸದ್ದು ಅಡಗಿಸುವ ಮೂಲಕ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. […]

ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ: ಉಚಿತವಾಗಿ ಐದು ಕೆಜಿ ಅಕ್ಕಿ ಪಡೆಯಿರಿ

ಪುದುಚೇರಿ: ಕೊರೊನಾ ಪರೀಕ್ಷಾ ಕೇಂದ್ರಗಳಿಗೆ ಬರುವಂತೆ ಜನರನ್ನು ಆಕರ್ಷಿಸುವ ಸಲುವಾಗಿ ಸಂಬಂಧಪಟ್ಟ ಅಧಿಕಾರಿಗಳು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೆ ಪುದುಚೇರಿಯ ಎಐಎಡಿಎಂಕೆ ಶಾಸಕರೊಬ್ಬರು ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಕೊರೊನಾ ಪರೀಕ್ಷೆಗೆ ಒಳಪಡುವ ಜನರಿಗೆ ಅಕ್ಕಿ ವಿತರಿಸಲು ಮುಂದಾಗಿದ್ದಾರೆ. ಎಐಎಡಿಎಂಕೆ ಶಾಸಕ ಅನ್ಬಗಳನ್ ತಮ್ಮ ಸ್ವಕ್ಷೇತ್ರದಲ್ಲಿ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವವರಿಗೆ ಉಚಿತವಾಗಿ 5 ಕೆಜಿ ಅಕ್ಕಿ ನೀಡುತ್ತಿದ್ದಾರೆ. ಪುದುಚೆರಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪುದುಚೆರಿ ಜಿಲ್ಲಾಡಳಿತ ಐಸಿಎಂಆರ್ ಆದೇಶದಂತೆ ಪರೀಕ್ಷೆ ನಡೆಸಲು […]

ಸುದರ್ಶನ ನ್ಯೂಸ್ ವಾಹಿನಿಯ ‘ಬಿಂದಾಸ್ ಬೋಲ್’ ಕಾರ್ಯಕ್ರಮದ ಎರಡು ಎಪಿಸೋಡ್ ಪ್ರಸಾರಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಹಿಂದಿಯ ಸುದರ್ಶನ ನ್ಯೂಸ್ ವಾಹಿನಿಯ ವಿವಾದಿತ ‘ಬಿಂದಾಸ್ ಬೋಲ್’ ಕಾರ್ಯಕ್ರಮದ ಎರಡು ಎಪಿಸೋಡ್ ಪ್ರಸಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಮುಸ್ಲಿಂ ಸಮುದಾಯವನ್ನು ‘ಕೆಟ್ಟದಾಗಿ’ ಬಿಂಬಿಸಲಾಗುತ್ತಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಇಂದು ಮತ್ತು ನಾಳೆ ಪ್ರಸಾರವಾಗಬೇಕಿದ್ದ ಎಪಿಸೋಡ್ ಗಳಿಗೆ ನಿರ್ಬಂಧ ವಿಧಿಸಿದೆ. ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠವು ಈ ಕಾರ್ಯಕ್ರಮದ ಬಗ್ಗೆ  ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿತ್ತು. ಸದ್ಯ ಕಾರ್ಯಕ್ರಮಕ್ಕೆ ತಡೆ ನೀಡಿ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ಮುಂದೂಡಿದೆ. […]

ಮದ್ಯಪ್ರಿಯರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ: ಯುಕೆಯಿಂದ ಬರಲಿದೆ ಸ್ಕ್ವಾಚ್ ವಿಸ್ಕಿ!

ನವದೆಹಲಿ: ಇಷ್ಟು ದಿನ ಅಬಕಾರಿ ಸುಂಕವನ್ನು ಹೆಚ್ಚಿಸಿ ಮದ್ಯಪ್ರಿಯರಿಗೆ ಶಾಕ್ ನೀಡುತ್ತಿದ್ದ ಕೇಂದ್ರ ಸರ್ಕಾರವು, ಇದೀಗ ಸಿಹಿ ಸುದ್ದಿಯೊಂದನ್ನು ನೀಡಲು ಮುಂದಾಗಿದೆ. ಯುಕೆಯಿಂದ ಸ್ಕ್ವಾಚ್ ವಿಸ್ಕಿಯನ್ನು ದೊಡ್ಡ ಪ್ರಮಾಣದಲ್ಲಿ ಭಾರತಕ್ಕೆ ಆಮದು ಮಾಡಿಕೊಳ್ಳಲು ಚಿಂತನೆ ನಡೆಸಿದೆ. ಮಂಗಳವಾರ ನಡೆದ ಸಿಐಐನ ಭಾರತ-ಯುಕೆ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಈ ಬಗ್ಗೆ ಮಾಹಿತಿ ನೀಡಿದರು. ‘ನಾನು ಸ್ಕ್ವಾಚ್ ವಿಸ್ಕಿಯನ್ನು ಕುಡಿಯುವುದಿಲ್ಲ. ಆದರೆ ಸ್ಕ್ವಾಚ್ ವಿಸ್ಕಿಯ ಹೆಸರಿನಲ್ಲಿ ಭಾರತದಲ್ಲಿ ಮಾರಾಟ ಆಗುತ್ತಿರುವ […]

ಭಾರತದಲ್ಲಿ ಚೀನಾ ಕಂಪೆನಿಯ ಬೇಹುಗಾರಿಕೆ: ಪ್ರಧಾನಿ, ರಾಷ್ಟ್ರಪತಿ, ಸೇನಾ ಮುಖ್ಯಸ್ಥರ ಮಾಹಿತಿ ಸಂಗ್ರಹಕ್ಕೆ ಸಂಚು

ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿಗಳು, ಮಿಲಿಟರಿ, ಉದ್ಯಮಿಗಳು, ರಕ್ಷಣಾ ಸಚಿವಾಲಯ ಸಿಬ್ಬಂದಿ, ಸಂಸದರು ಕೆಲವು ರೌಡಿಶೀಟರ್ ಗಳು ಸೇರಿದಂತೆ ಪ್ರತಿದಿನ ಭಾರತದ 150 ದಶಲಕ್ಷಗಳ ಆನ್ ಲೈನ್ ಡೇಟಾವನ್ನು ಚೀನಾ ಮೂಲದ ಸಂಸ್ಥೆ ಕಲೆಹಾಕಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಭಾರತದೊಂದಿಗೆ ಪೂರ್ವ ಲಡಾಖ್ ಗಡಿಯಲ್ಲಿ ಸಂಘರ್ಷಕ್ಕೆ ಇಳಿದಿರುವ ಚೀನಾ ಇದೀಗ ದೇಶದ ಪ್ರತಿಷ್ಠಿತ ವ್ಯಕ್ತಿಗಳ ಮೇಲೆ ಕಳ್ಳಗಣ್ಣು ನೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸೇರಿದಂತೆ ಬರೋಬ್ಬರಿ 1,350ಕ್ಕೂ […]