ರಾಮನ ಪ್ರಾಣಪ್ರತಿಷ್ಠೆಯಂದು ವಿತರಿಸಲು ಒಂದು ಲಕ್ಷ ಲಡ್ಡುಗಳನ್ನು ರವಾನಿಸಿದ ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್

ಹೈದರಾಬಾದ್: ತಿರುಮಲ ತಿರುಪತಿ ದೇವಸ್ಥಾನವು ಶುಕ್ರವಾರ ತನ್ನ ಪ್ರಸಿದ್ಧ ತಿರುಪತಿ ಲಡ್ಡುಗಳನ್ನು ಜನವರಿ 22 ರಂದು ರಾಮ ಮಂದಿರ ಪ್ರಾಣ ಪ್ರತಿಷ್ಠೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಅಯೋಧ್ಯೆಗೆ ರವಾನಿಸಿದೆ. ಲಡ್ಡುಗಳನ್ನು ಶುದ್ಧ ತುಪ್ಪದಲ್ಲಿ ತಯಾರಿಸಲಾಗುತ್ತದೆ ಎಂದು ಖಚಿತಪಡಿಸಿಕೊಳ್ಳಲು ಟ್ರಸ್ಟ್ ಬೋರ್ಡ್ ಅಧ್ಯಕ್ಷ ಕರುಣಾಕರ್ ರೆಡ್ಡಿ ಮತ್ತು ಇಒ ಧರ್ಮಾ ರೆಡ್ಡಿ ವಿಶೇಷ ಪ್ರಯತ್ನ ನಡೆಸಿದ್ದಾರೆ ಎಂದು ಟಿಟಿಡಿ ಹೆಚ್ಚುವರಿ ಇಒ ವೀರ ಬ್ರಹ್ಮಂ ಹೇಳಿದ್ದಾರೆ. ಟಿಟಿಡಿ ಟ್ರಸ್ಟ್ ಬೋರ್ಡ್ ಸದಸ್ಯ ಸೌರಭ್ ಬೋರಾ ಮತ್ತು ಮಾಜಿ ಮಂಡಳಿಯ […]

ಬಿಲ್ಕಿಸ್ ಬಾನೊ ಪ್ರಕರಣ: ಅಪರಾಧಿಗಳ ಶರಣಾಗತಿಯ ಗಡುವನ್ನು ವಿಸ್ತರಿಸಲು ‘ಸುಪ್ರೀಂ’ ನಕಾರ

ನವದೆಹಲಿ: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಶರಣಾಗತಿಯ ಗಡುವನ್ನು ವಿಸ್ತರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಈ ಹಿಂದೆ, ಕುಟುಂಬದ ಜವಾಬ್ದಾರಿಗಳು, ವಯಸ್ಸಾದ ಪೋಷಕರ ಆರೈಕೆ, ಚಳಿಗಾಲದ ಬೆಳೆಗಳ ಕೊಯ್ಲು ಮತ್ತು ಆರೋಗ್ಯ ಪರಿಸ್ಥಿತಿಗಳಂತಹ ಕಾರಣಗಳನ್ನು ಉಲ್ಲೇಖಿಸಿ 10 ಅಪರಾಧಿಗಳು ಶರಣಾಗಲು ಹೆಚ್ಚಿನ ಸಮಯ ಕೋರಿ ಅರ್ಜಿಗಳನ್ನು ಸಲ್ಲಿಸಿದ್ದರು. ತಮ್ಮ ಅರ್ಜಿಯಲ್ಲಿ, ಒಂಬತ್ತು ಅಪರಾಧಿಗಳು ಇನ್ನೂ ಆರು ವಾರಗಳ ವಿಸ್ತರಣೆಯನ್ನು ಕೋರಿದ್ದರೆ, ಒಬ್ಬರು ನಾಲ್ಕು ವಾರಗಳ ಹೆಚ್ಚುವರಿ ಸಮಯವನ್ನು ಕೇಳಿದ್ದರು. ಅರ್ಜಿಯನ್ನು ತಿರಸ್ಕರಿಸುವ […]

ಶಾಲಾ ಪ್ರವಾಸದ ದೋಣಿ ಮಗುಚಿ ಇಬ್ಬರು ಶಿಕ್ಷಕರ ಸಹಿತ 12 ಶಾಲಾ ಮಕ್ಕಳ ಸಾವು; ವಡೋದರಾದಲ್ಲೊಂದು ದಾರುಣ ಘಟನೆ

ಅಹಮದಾಬಾದ್: ಗುರುವಾರ ಶಾಲಾ ಪ್ರವಾಸದ ವೇಳೆ ವಡೋದರಾದ ಹರ್ನಿ ಸರೋವರದಲ್ಲಿ ದೋಣಿಯೊಂದು ಮಗುಚಿಬಿದ್ದ ಪರಿಣಾಮ 10-13 ವರ್ಷದೊಳಗಿನ ಕನಿಷ್ಠ 12 ಶಾಲಾ ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸಾವನ್ನಪ್ಪಿರುವ ದುರ್ಘಟನೆ ವರದಿಯಾಗಿದೆ. ದೋಣಿಯು 16 ಪ್ರಯಾಣಿಕರನ್ನು ಸಾಗಿಸುವ ಸಾಮರ್ಥ್ಯವನ್ನು ಹೊಂದಿದ್ದರೆ, ಘಟನೆಯ ಸಮಯದಲ್ಲಿ ಅದರಲ್ಲಿ 34 ಪ್ರಯಾಣಿಕರಿದ್ದರು. ಒಟ್ಟು 30 ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರು ದೋಣಿಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪಲ್ಟಿಯಾದ ನಂತರ 18 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರನ್ನು ರಕ್ಷಿಸಲಾಗಿದೆ. ಕೆರೆಯ ಕೆಳಭಾಗದಲ್ಲಿರುವ ಹೂಳಿನಿಂದಾಗಿ […]

ಕೋಚಿಂಗ್ ಸೆಂಟರ್ ಗಳ ಆಟಾಟೋಪಕ್ಕೆ ಕಡಿವಾಣ: ನಿಯಮ ಜಾರಿಗೊಳಿಸಿದ ಕೇಂದ್ರ ಶಿಕ್ಷಣ ಸಚಿವಾಲಯ

ನವದೆಹಲಿ: ದೇಶಾದ್ಯಂತ ಅಣಬೆಗಳಂತೆ ತಲೆ ಎತ್ತಿರುವ ಕೋಚಿಂಗ್ ಕೇಂದ್ರಗಳಿಗೆ ಮಾರ್ಗಸೂಚಿಗಳನ್ನು ಕೇಂದ್ರ ಶಿಕ್ಷಣ ಸಚಿವಾಲಯ ಜಾರಿಗೊಳಿಸಿದೆ. ದೇಶದ ಕೋಚಿಂಗ್ ಕ್ಯಾಪಿಟಲ್ ಎಂದು ಕರೆಯಲ್ಪಡುವ ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗಳ ಆತಂಕಕಾರಿ ಏರಿಕೆ ಪ್ರಕರಣದ ನಡುವೆ ಈ ಕ್ರಮವು ಬಂದಿದೆ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಥವಾ ತಮ್ಮ ಮಾಧ್ಯಮಿಕ ಶಿಕ್ಷಣವನ್ನು ಇನ್ನೂ ಪೂರ್ಣಗೊಳಿಸದ ಯಾವುದೇ ವಿದ್ಯಾರ್ಥಿಗಳ ಪ್ರವೇಶಾತಿ ಅತಿಯಾದ ಶುಲ್ಕ ವಸೂಲಿ, ಮೂಲಸೌಕರ್ಯ, ಸರಿಯಾದ ದೂರು ಪರಿಹಾರ ವ್ಯವಸ್ಥೆ, ತಪ್ಪುದಾರಿಗೆಳೆಯುವ ಜಾಹೀರಾತುಗಳ ಪ್ರಕಟಣೆ ಮತ್ತು ಪ್ರವೇಶಾತಿಗೂ ಮುನ್ನ […]

ರಾಮ ಮಂದಿರದ ಗರ್ಭಗುಡಿಯೊಳಗೆ ಶ್ರೀರಾಮಚಂದ್ರನ ಮೊದಲ ನೋಟದ ಅನಾವರಣ

ಅಯೋಧ್ಯೆ: ರಾಮ ಮಂದಿರ ಗರ್ಭಗುಡಿಯಲ್ಲಿ ರಾಮನ ಮೂರ್ತಿಯನ್ನು ಸ್ಥಾಪನೆ ಮಾಡಲಾಗಿದ್ದು, ಅದರ ಮೊದಲನೆ ಫೋಟೋವನ್ನು ವಿಶ್ವ ಹಿಂದೂ ಪರಿಷತ್ತಿನ ಮಾಧ್ಯಮ ಉಸ್ತುವಾರಿ ಶರದ್ ಶರ್ಮಾ ಬಹಿರಂಗಪಡಿಸಿದ್ದಾರೆ. ಐದು ತಲೆಮಾರಿನ ಪ್ರಸಿದ್ಧ ಶಿಲ್ಪಿಗಳ ಕುಟುಂಬದ ಹಿನ್ನೆಲೆಯುಳ್ಳ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ 51 ಇಂಚಿನ ಕೃಷ್ಣಶಿಲೆಯ ಶ್ರೀರಾಮನ ವಿಗ್ರಹವನ್ನು ಗುರುವಾರದಂದು ಗರ್ಭಗೃಹದೊಳಗೆ ಇರಿಸಲಾಗಿದೆ. ದೇವಾಲಯದ ಪವಿತ್ರ ಆವರಣದಲ್ಲಿ ವೈದಿಕ ಬ್ರಾಹ್ಮಣರು ಮತ್ತು ಆಚಾರ್ಯರು ಪ್ರಮುಖ ಪೂಜಾ ವಿಧಿಗಳನ್ನು ಕೈಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎ.ಎನ್.ಐ ವರದಿ ಮಾಡಿದೆ. […]