ದೇಶದಾದ್ಯಂತ ವಿಧ್ವಂಸಕ ಕೃತ್ಯ ನಡೆಸಲು ಉಗ್ರರ ಸಂಚು: ಬಂಧಿತ ಶಂಕಿತ ಉಗ್ರ ಅಬ್ದುರ್ ರೆಹಮಾನ್ ನಿಂದ ಸ್ಫೋಟಕ ಸಂಗತಿ ಬಹಿರಂಗ

ಬೆಂಗಳೂರು: ದೇಶದಾದ್ಯಂತ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ಸಂಗತಿ ಈಗ ಬಂಧಿತ ಶಂಕಿತ ಉಗ್ರ ಅಬ್ದುರ್ ರೆಹಮಾನ್ ನಿಂದ ಹೊರಬಿದ್ದಿದೆ. ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಎಂಬ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ಶಾಸ್ತ್ರಜ್ಞನಾಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ರೆಹಮಾನ್ ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದರು. ಇದೀಗ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಭಯಾನಕ ಸಂಗತಿಗಳು ಬೆಳಕಿಗೆ ಬಂದಿದೆ. ದೇಶದಾದ್ಯಂತ ವಿಧ್ವಂಸಕ […]

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನಾಚರಣೆ: ಪ್ರಧಾನಿ ಮೋದಿ ಅವರಿಂದ ಗೌರವ ಸಲ್ಲಿಕೆ

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 76ನೇ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಗೌರವ ಸಲ್ಲಿಸಿದರು. ಜನ್ಮ ದಿನಾಚರಣೆಯಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಗೌರವ ಸಲ್ಲಿಸಲಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ತಂದೆಗೆ ಜನ್ಮದಿನಾಚರಣೆಯ ಗೌರವ ಸಲ್ಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜೀವ್ ಗಾಂಧಿ ಅವರು ಕಾಲಕ್ಕಿಂತ ಬಹಳ ಮುಂದಿರುವ ಪ್ರಚಂಡ ದೃಷ್ಟಿ ಹೊಂದಿದ್ದ ವ್ಯಕ್ತಿ. ಆದರೆ […]

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಹಿಂದೂಗಳ ಓಲೈಕೆಯಲ್ಲಿ ತೊಡಗಿದ ರಾಜಕೀಯ ನಾಯಕರು

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷೀಯ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಹಾಲಿ ಅಧ್ಯಕ್ಷ , ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹಾಗೂ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರು ‍ಚುನಾವಣಾ ಪ್ರಚಾರದಲ್ಲಿ ಹಿಂದೂಗಳ ಓಲೈಕೆಯಲ್ಲಿ ತೊಡಗಿದ್ದಾರೆ. ಅಮೆರಿಕದ ಒಟ್ಟು ಜನಸಂಖ್ಯೆಯಲ್ಲಿ (2016ರ ಪ್ರಕಾರ) ಶೇ. 1ರಷ್ಟಿರುವ ಹಿಂದೂ ಸಮುದಾಯವರನ್ನು ರಾಜಕೀಯ ನಾಯಕರು ಆಕರ್ಷಿಸುವ ಪ್ರಯತ್ನದಲ್ಲಿದ್ದಾರೆ. ನಮ್ಮ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದರೆ ಅಮೆರಿಕದಲ್ಲಿ ಹಿಂದೂಗಳಿಗೆ ಧಾರ್ಮಿಕ ಸ್ವಾತಂತ್ರ್ಯಕ್ಕಿರುವ ಅಡೆತಡೆಗಳನ್ನು ನಿವಾರಿಸುತ್ತೇವೆ ಎಂದು ಟ್ರಂಪ್ ಪರ […]

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಕಳೆದ ಮೂರ್ನಾಲ್ಕು ದಿನಗಳಿಂದ ಮೈ-ಕೈ ನೋವು, ಸುಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮಧ್ಯಾಹ್ನ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತ್ ಶಾ ಅವರ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಏಮ್ಸ್ ಆಸ್ಪತ್ರೆಯ ಪೋಸ್ಟ್ ಕೋವಿಡ್ ಕೇರ್ ಗೆ ದಾಖಲಿಸಿಕೊಳ್ಳಲಾಗಿದೆ. ಅವರು ಆರೋಗ್ಯವಾಗಿದ್ದು, ಆಸ್ಪತ್ರೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇಡುಕ್ಕಿ ಭೂಕುಸಿತ: ಮೃತರ ಸಂಖ್ಯೆ 61 ಏರಿಕೆ

ಕೇರಳ (ಇಡುಕ್ಕಿ): ಇಲ್ಲಿನ ಪೆಟ್ಟಿಮುಡಿ ಎಂಬಲ್ಲಿ ಆ.7ರಂದು ಸಂಭವಿಸಿದ್ದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಇಂದು ಮತ್ತೆ ಮೂರು ಶವಗಳು ಪತ್ತೆಯಾಗಿದ್ದು, ಇನ್ನೂ 9 ಜನರು ನಾಪತ್ತೆಯಾಗಿದ್ದಾರೆ. ಆರು ವರ್ಷದ ಬಾಲಕನ ಶವ ಹಾಗೂ 57 ವರ್ಷದ ವ್ಯಕ್ತಿಯೊಬ್ಬರ ಶವವನ್ನು ಗುರುತಿಸಲಾಗಿದ್ದು, ಮತ್ತೊಂದು ಶವದ ಗುರುತು ಇನ್ನಷ್ಟೇ ಸಿಗಬೇಕಿದೆ. ಭೂಕುಸಿತದಲ್ಲಿ 20 ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದವು. ಘಟನೆಯಲ್ಲಿ 12 ಜನರನ್ನು ರಕ್ಷಿಸಲಾಗಿದೆ.   ಎನ್‌ಡಿಆರ್‌ಎಫ್‌, ಅಗ್ನಿಶಾಮಕ ದಳ, ಪೊಲೀಸ್‌ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣಾ […]