ಚಂಡೀಗಢದ ಮೇಯರ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಗೆಲುವು; ಇಂಡಿಯಾ ಬಣಕ್ಕೆ ಸೋಲು

ನವದೆಹಲಿ: ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜ್ ಸೋಂಕರ್ ಗೆಲುವು ಸಾಧಿಸಿದ್ದು ‘ಇಂಡಿಯಾ’ ಬಣಕ್ಕೆ ಸೋಲುಂಟಾಗಿದೆ. ಚಂಡೀಗಢದಲ್ಲಿ ಮಂಗಳವಾರ ನಡೆದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಮನೋಜ್ ಸೋಂಕರ್ ಅವರು ಎಎಪಿಯ ಕುಲದೀಪ್ ಕುಮಾರ್ ಅವರನ್ನು ಸೋಲಿಸಿದರು. ಎಎಪಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಮನೋಜ್ ಸೋಂಕರ್ 16 ಮತಗಳನ್ನು ಪಡೆದರೆ, ಕುಮಾರ್ 12 ಮತಗಳನ್ನು ಪಡೆದರು. ಎಂಟು ಮತಗಳು ಅಸಿಂಧುವಾಗಿವೆ. ಹೊಸದಾಗಿ ಆಯ್ಕೆಯಾದ ಮೇಯರ್ ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಚುನಾವಣೆ […]

ಕೇರಳ ಬಿಜೆಪಿ ಒಬಿಸಿ ನಾಯಕ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣ: ಪಿಎಫ್‌ಐ ನಂಟಿದ್ದ15 ಆರೋಪಿಗಳಿಗೆ ಮರಣದಂಡನೆ ವಿಧಿಸಿದ ಕೇರಳ ಹೈಕೋರ್ಟ್

ತಿರುವನಂತಪುರ: ಅಲಪ್ಪುಳ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಒಬಿಸಿ ವಿಭಾಗದ ನಾಯಕ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಈಗ ನಿಷೇಧಿತ ಇಸ್ಲಾಮಿಸ್ಟ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಬಂಧ ಹೊಂದಿದ್ದ 15 ಆರೋಪಿಗಳಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ. ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಿಜಿ ಶ್ರೀದೇವಿ ಶಿಕ್ಷೆಯನ್ನು ಪ್ರಕಟಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಪ್ರಾಸಿಕ್ಯೂಷನ್ ಕೋರಿತ್ತು. ಅಪರಾಧಿಗಳು “ತರಬೇತಿ […]

ವಿಶ್ವದ ಮೊದಲ ರೋಗಿಯಲ್ಲಿ ನ್ಯೂರಾಲಿಂಕ್ ಬ್ರೈನ್-ಚಿಪ್ ಅಳವಡಿಕೆ ಯಶಸ್ವಿ: ಪಾರ್ಶ್ವವಾಯು, ನರವೈಜ್ಞಾನಿಕ ಕಾಯಿಲೆಯ ರೋಗಿಗಳಿಗೆ ವರದಾನ

ನ್ಯೂಯಾರ್ಕ್: ಮೊದಲ ಮಾನವ ರೋಗಿಯು ಭಾನುವಾರ ಬ್ರೈನ್-ಚಿಪ್ ಸ್ಟಾರ್ಟ್ಅಪ್ ನ್ಯೂರಾಲಿಂಕ್‌ನಿಂದ ( Neuralink) ಇಂಪ್ಲಾಂಟ್ ಅನ್ನು ಸ್ವೀಕರಿಸಿದ್ದಾರೆ ಮತ್ತು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕಂಪನಿಯ ಸಂಸ್ಥಾಪಕ ಎಲೋನ್ ಮಸ್ಕ್ (Elon Musk) ಹೇಳಿದ್ದಾರೆ. ಆರಂಭಿಕ ಫಲಿತಾಂಶಗಳು ಭರವಸೆಯ ನ್ಯೂರಾನ್ ಸ್ಪೈಕ್ ಪತ್ತೆಯನ್ನು ತೋರಿಸುತ್ತವೆ” ಎಂದು ಮಸ್ಕ್ ಸೋಮವಾರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸ್ಪೈಕ್‌ಗಳು ನ್ಯೂರಾನ್‌ಗಳ ಚಟುವಟಿಕೆಯಾಗಿದೆ, ಮೆದುಳಿನ ಸುತ್ತ ಮತ್ತು ದೇಹಕ್ಕೆ ಮಾಹಿತಿಯನ್ನು ಕಳುಹಿಸಲು ವಿದ್ಯುತ್ ಮತ್ತು ರಾಸಾಯನಿಕ ಸಂಕೇತಗಳನ್ನು ಬಳಸುವ ಜೀವಕೋಶಗಳು […]

ರಾಮಲಲ್ಲಾನಿಗೆ 1.751 ಕೆಜಿ ತೂಕದ ಬೆಳ್ಳಿ ಪೊರಕೆ ನೀಡಿದ ಅಖಿಲ ಭಾರತೀಯ ಮಾಂಗ್ ಸಮಾಜದ ರಾಮ ಭಕ್ತರು

ಅಯೋಧ್ಯೆ: ‘ಅಖಿಲ ಭಾರತೀಯ ಮಾಂಗ್ ಸಮಾಜ’ಕ್ಕೆ ಸೇರಿದ ರಾಮನ ಭಕ್ತರು 1.751 ಕೆಜಿ ತೂಕದ ಬೆಳ್ಳಿ ಪೊರಕೆಯನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ದಾನ ಮಾಡಿದರು. ಪೊರಕೆಯನ್ನು ಗರ್ಭ ಗೃಹವನ್ನು ಸ್ವಚ್ಛಗೊಳಿಸಲು ಬಳಸಬೇಕೆಂದು ಈ ಭಕ್ತರು ವಿನಂತಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ವೀಡಿಯೋ ತುಣುಕಿನಲ್ಲಿ, ಭಕ್ತರು ಬೆಳ್ಳಿ ಪೊರಕೆಯನ್ನು ಎತ್ತರಕ್ಕೆ ಎತ್ತಿ ಹಾರಗಳಿಂದ ಅಲಂಕರಿಸಿ ಮೆರವಣಿಗೆಯನ್ನು ಮುನ್ನಡೆಸುತ್ತಿರುವುದನ್ನು ಕಾಣಬಹುದು. #WATCH | Ayodhya: Devotees of Shri Ram from the 'Akhil Bharatiya […]

ಸಾಧಿಸುವ ಛಲವೊಂದಿದ್ದರೆ ವಯಸ್ಸು ಅಡ್ಡಿಯಾಗಲಾರದು ಎಂದು ಜಗತ್ತಿದೆ ಸಾರಿದ ರೋಹನ್ ಬೋಪಣ್ಣ: ಗ್ರ್ಯಾಂಡ್ ಸ್ಲಾಮ್ ಗೆದ್ದ ಅತ್ಯಂತ ಹಿರಿಯ ವ್ಯಕ್ತಿ ಹೆಗ್ಗಳಿಕೆ

ಮೆಲ್ಬರ್ನ್: ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ 2024 ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದ ನಂತರ ಭಾರತದ ರೋಹನ್ ಬೋಪಣ್ಣ ಗ್ರ್ಯಾಂಡ್ ಸ್ಲಾಮ್ ಗೆದ್ದ ಅತ್ಯಂತ ಹಿರಿಯ ವ್ಯಕ್ತಿ ಎನಿಸಿಕೊಂಡಿದ್ದು, ಸಾಧನೆಗೆ ವಯಸ್ಸು ಅಡ್ಡಿಯಾಗಲಾರದು ಎನ್ನುವುದನ್ನು ಪ್ರಮಾಣೀಕರಿಸಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ 44 ನೇ ವರ್ಷಕ್ಕೆ ಕಾಲಿಡಲಿರುವ ಬೋಪಣ್ಣ, ಶನಿವಾರ ಮೆಲ್ಬೋರ್ನ್‌ನಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಪುರುಷರ ಡಬಲ್ಸ್ ಇತಿಹಾಸದಲ್ಲಿ ಅತ್ಯಂತ ಹಿರಿಯ ನಂಬರ್ ಒನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಡ್ ಲೇವರ್ ಅರೆನಾದಲ್ಲಿ ಶ್ರೇಯಾಂಕ […]