ಕಾಡನ್ನು ಉಳಿಸಿ ಬೆಳೆಸಿ ,ವನ್ಯಜೀವಿಗಳನ್ನು ಸಂರಕ್ಷಿಸಿ : ಇದು ಉಡುಪಿxpress ಕಾಳಜಿ

 ಕಾರಿಗೆ ಸಿಕ್ಕ ಪ್ರಾಮುಖ್ಯತೆ ಕಾಡಿಗೆ ಸಿಗುತ್ತಿಲ್ಲ ನೂರಾರು ಎಕರೆ ಅರಣ್ಯ ಪ್ರದೇಶ ಬಂಡೀಪುರದಲ್ಲಿ ಕಾಳ್ಗಿಚ್ಚಿಗೆ ಬೂದಿಯಾಗಿದೆ. ಹಲವು ಜೀವ ಸಂಕುಲಗಳು ಅಪಾಯಕ್ಕೆ ಸಿಲುಕಿವೆ. ಆದರೆ ನಮಗೆ  ಕಾರುಗಳು ಕಾಣುತ್ತಿವೆ ಹೊರತು, ಹಲವು ಜೀವ ಸಂಕುಲಗಳನ್ನು ಪೋಷಿಸುತ್ತಾ ನಮ್ಮನ್ನು ಪೊರೆಯುತ್ತಿರುವ ಕಾಡುಗಳು ಕಾಣುತ್ತಿಲ್ಲ. ಕಾಡನ್ನು ಉಳಿಸಿ ಬೆಳೆಸಿ ,ವನ್ಯಜೀವಿಗಳನ್ನು ಸಂರಕ್ಷಿಸಿ ಯಾರದ್ದೋ ನಿರ್ಲಕ್ಷವೊ,ಕಿಡಿಗೇಡಿಗಳ ಕೃತ್ಯವೋ ಒಟ್ಟಿನಲ್ಲಿ ಮುಗ್ಧ ಪ್ರಾಣಿಗಳು ಪಕ್ಷಿಗಳು ಮರಗಿಡಗಳು ಬೆಂಕಿಗಾಹುತಿ ಆಗಿವೆ. ಇದೇ ಪರಿಸ್ಥಿತಿ  ಮನುಷ್ಯರಿಗೆ ಆಗುತ್ತಿದ್ದರೆ ಎಲ್ಲರೂ ನ್ಯಾಯ ಬೇಕು ಅಂತ ರಸ್ತೆಗಿಳಿಯುತಿದ್ದರು. ಆದರೆ ಮೂಕ […]

ಪ್ರಯಾಗದ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಧಾನಿ ಮೋದಿ

ಪ್ರಯಾಗರಾಜ್: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಿಡುವಿಲ್ಲದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕುಂಭಮೇಳದಲ್ಲಿ ಭಾಗವಹಿಸಿ ಗಂಗಾನದಿಗೆ ಗಂಗಾರತಿ ಮಾಡಿದ ಪ್ರಧಾನಿ ಮೋದಿ, ಪೌರ ಕಾರ್ಮಿಕರ ಪಾದತೊಳೆದದ್ದು ವಿಶೇಷವಾಗಿತ್ತು. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಗೆ ಆಗಮಿಸಿದ ಮೋದಿ, ಗಂಗಾ ನದಿಯಲ್ಲಿ ಪುಣ್ಯಸ್ನಾನವನ್ನೂ ಮಾಡಿದರು. ಇದಾದ ನಂತರ ಸಂಗಂ ಘಾಟ್ ನಲ್ಲಿ ಗಂಗಾನದಿಗೆ ಪೂಜೆ ಸಲ್ಲಿಸಿದರು. ಇದಾದ ನಂತರ ಓರ್ವ ಮಹಿಳೆಯೂ ಸೇರಿದಂತೆ ಪೌರ ಕಾರ್ಮಿಕರ ಪಾದವನ್ನು ಪ್ರಧಾನಿ ತೊಳೆದರು. ತನ್ನ ಪಾದವನ್ನು ತೊಳೆದ ಬಗ್ಗೆ ಮಹಿಳೆ ಪ್ರತಿಕ್ರಿಯಿಸಿ, ಇದು […]

ಪಾಕಿಸ್ತಾನ ವಿರುದ್ಧ ಭಾರತೀಯ ಯುವಕನ ಸರ್ಜಿಕಲ್ ಸ್ಟ್ರೈಕ್

ಹೊಸದಿಲ್ಲಿ: ಉಗ್ರದಾಳಿಗೆ ಪ್ರತೀಕಾರದ ಉರಿ ದೇಶದೆಲ್ಲೆಡೆ ಕೇಳಿಬರುತ್ತಿದ್ದರೆ ಅಂಶುಲ್ ಸಕ್ಸೇನಾ ಎಂಬ ಯುವಕನೋರ್ವ ಸದ್ದಿಲ್ಲದೇ ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ದಾಳಿ ನಡೆಸಿದ್ದಾನೆ. ಪಾಕ್ ವಿರುದ್ಧ ಸೈಬರ್ ಯುದ್ಧ ನಡೆಸುತ್ತಿರುವ ಅಂಶುಲ್, ಗುರುವಾರದಿಂದಲೇ ಕಾರ್ಯಪ್ರವೃತ್ತನಾಗಿದ್ದು, ಪಾಕಿಸ್ತಾನ ಸರಕಾರಕ್ಕೆ ಸಂಬಂಧಪಟ್ಟ ಕೆಲವು ಪ್ರಮುಖ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಿದ್ದಾನೆ. ಉಗ್ರರು ದಾಳಿ ನಡೆಸಿದ 24 ಗಂಟೆಯೊಳಗೆ ಪಾಕಿಸ್ತಾನದ ಪ್ರಧಾನಿ ಸೇರಿದಂತೆ ಪ್ರಮುಖ ಸರ್ಕಾರಿ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡಿ “ನಾನು ಯುದ್ಧ ಭೂಮಿಯಲ್ಲಿ ನಿಂತು ಯುದ್ಧ ಮಾಡಲು ಸಾಧ್ಯವಿಲ್ಲ. ಆದರೆ ನನ್ನಿಂದ […]

ಉಗ್ರರ ಸೆದೆಬಡಿಯಲು ಸೈನ್ಯಕ್ಕೆ ಸಂಪೂರ್ಣ ಸ್ವಾತಂತ್ರ… ಮೊದಲ ಬಾರಿಗೆ ಸ್ವಾತಂತ್ರ್ಯ ನೀಡಿದ ಮೋದಿ ಸರ್ಕಾರ….!

ನವದೆಹಲಿ: ಉಗ್ರರ  ಅಟ್ಟಹಾಸಕ್ಕೆ ಬಲಿಯಾದ ಯೋದರನ್ನು ನೆನೆದು ಇಡೀ ದೇಶವೇ ಕಣ್ಣೀರು ಹಾಕಿದ್ದು, ಯಾವ ರೀತಿ‌ ಪ್ರತಿಕಾರ ನೀಡಬಹುದು ಎಂದು ಇಡೀ ದೇಶ ಎದುರು ನೋಡುತ್ತಿದೆ. ಈ ಮಧ್ಯೆ ದೇಶದ ಜನತೆಗೆ ಮೋದಿ ಸಂದೇಶ ರವಾನಿಸಿದ್ದು, ಪಾಕಿಸ್ತಾನದ ವಿರುದ್ದ ಪ್ರತಿಕಾರ ತೀರಿಸಲು ಭಾರತೀಯ ಸೈನ್ಯಕ್ಕೆ ಪೂರ್ಣ ಸ್ವತಂತ್ರ ನೀಡಿದ್ದಾರೆ. ಪಾಪಿ ಪಾಕಿಸ್ತಾನವನ್ನು ಒಬ್ಬಂಟಿ ಮಾಡಲು ಕೇಂದ್ರ ಸರಕಾರ ವಿವಿಧ ತಂತ್ರ ರೂಪಿಸುತ್ತಿದೆ. ಹೇಡಿ ಉಗ್ರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದು ನಿಮ್ಮ ಕೊನೆಗಾಲ ಸನ್ನಿಹಿತವಾಗಿದೆ ಎಂದು ಮೋದಿ ತಿಳಿಸಿದ್ದಾರೆ. ದುಷ್ಕೃತ್ಯದ […]

ದೇಶದ ಇತಿಹಾಸದಲ್ಲಿ ಅತಿ ದೊಡ್ಡ ಉಗ್ರರ ಕೃತ್ಯ

ಶ್ರೀನಗರ: ಸರ್ಜಿಕಲ್ ಸ್ಟ್ರೈಕ್ ನಡೆದರೂ ಪಾಕಿಸ್ತಾನ ಪ್ರಾಯೋಜಿತ ಉಗ್ರರಿಗೆ ಬುದ್ಧಿ ಬಂದಿಲ್ಲ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಬಸ್ಸಿನಲ್ಲಿದ್ದ 42 ಮಂದಿ ಸಿಆರ್‌ಪಿಎಫ್‌ ಯೋಧರು ಹುತಾತ್ಮರಾಗಿದ್ದಾರೆ. ಸಾವು ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ದೇಶದ ಸೇನಾ ಇತಿಹಾಸದಲ್ಲಿ ಅತಿ ದೊಡ್ಡ ಉಗ್ರರ ದಾಳಿ ಇದಾಗಿದೆ. ದಾಳಿಯಲ್ಲಿ 45 ಮಂದಿ ಗಾಯಗೊಂಡಿದ್ದು, 18 ಯೋಧರ ಸ್ಥಿತಿ ಗಂಭೀರವಾಗಿದೆ. ಗೋರಿಪೋರ ಪ್ರದೇಶದಲ್ಲಿ ಉಗ್ರರು ಸುಧಾರಿತ ಸ್ಫೋಟಕ ಬಳಸಿ ಸಿಆರ್‌ಪಿಎಫ್‌ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ […]