ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರಿಗೆ 3 ನೇ ಸ್ಥಾನ!

ಬೆಂಗಳೂರು: ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ಜಾರಿಗೊಳಿಸಿದ್ದರೂ, ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (NCRB) 2024ರ ವರದಿ ಆತಂಕಕಾರಿ ಅಂಶಗಳನ್ನು ಬಹಿರಂಗಪಡಿಸಿದೆ. ದೇಶದ 19 ಮಹಾನಗರಗಳ ಪೈಕಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ಈ ಪಟ್ಟಿಯಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದ್ದು, ಮುಂಬೈ ಎರಡನೇ ಸ್ಥಾನದಲ್ಲಿದೆ. ವರದಿ ಪ್ರಕಾರ, 2024ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ಒಟ್ಟು 4,748 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 2023ರಲ್ಲಿ ಈ ಸಂಖ್ಯೆ 4,870 ಆಗಿದ್ದು, ಕಳೆದ ವರ್ಷಕ್ಕೆ […]

ಕೃಷಿ ಭೂಮಿಯಲ್ಲಿ ಮನೆ ಕಟ್ಟೋ ಪ್ಲಾನ್ ನಿಮಗಿದ್ಯಾ? ಹಾಗಾದ್ರೆ ಈ ನಿಯಮ ನಿಮಗೆ ತಿಳಿದಿರ್ಲೇಬೇಕು

ಒಂದು ಸಣ್ಣದಾದರೂ ತೋಟ, ಜಮೀನು ಖರೀದಿಸುವುದು, ಅಲ್ಲೊಂದು ಪುಟ್ಟದಾದರೂ ಮನೆ ಕಟ್ಟಿ ನೆಮ್ಮದಿಯಿಂದ ಜೀವನ ನಡೆಸೋದು ಪ್ರತಿಯೊಬ್ಬರ ಕನಸು. ಭೂಮಿ ಖರೀದಿ ಅಥವಾ ಮನೆ ನಿರ್ಮಾಣ ಮಾಡುವ ಮುನ್ನ ಬಹುತೇಕ ಜನರಿಗೆ ಎದುರಾಗುವ ಸಾಮಾನ್ಯ ಪ್ರಶ್ನೆಗಳಲ್ಲಿಕೃಷಿ ಭೂಮಿಯಲ್ಲಿ ಮನೆ ಕಟ್ಟಬಹುದೇ? ಎಂಬುದೂ ಒಂದು. ಇದರ ಉತ್ತರ ಸರಳವಾಗಿಲ್ಲ. ಕೆಲವು ಕಾನೂನು ಕ್ರಮಗಳನ್ನು ಪಾಲಿಸಿದರೆ ಮಾತ್ರ ಮನೆ ನಿರ್ಮಾಣ ಸಾಧ್ಯ. ಕೃಷಿ ಭೂಮಿ ಎಂದರೇನು? ಕೃಷಿ ಭೂಮಿ ಎಂದರೆ ಬೆಳೆ ಬೆಳೆಸಲು, ಹಣ್ಣು-ತರಕಾರಿಗಳು ಬೆಳೆಯಲು, ಹೈನುಗಾರಿಕೆ ಅಥವಾ ಕೋಳಿ […]

ಮಕ್ಕಳಿಗೆ ಚಿನ್ನದ ಉಂಗುರ, ನವವಧುಗಳಿಗೆ ಕೈ ತುಂಬಾ ಚಿನ್ನ, ರೇಶ್ಮೆಸೀರೆ ಕೊಡ್ತಾರಂತೆ ವಿಜಯ್, ಇದೇನು ಸಿನಿಮಾ ಸ್ಟೋರಿ ಅಲ್ಲ ತಮಿಳುನಾಡಿಗೆ ವಿಜಯ್ ಕೊಟ್ಟ ಬಂಪರ್ ಭರವಸೆ!

ತಮಿಳುನಾಡಿನಲ್ಲಿ ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಈ ಬಾರಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಭರ್ಜರಿ ಜಯಭೇರಿ ಭಾರಿಸಿದೆ. ಈಗ ವಿಶೇಷವಾಗಿ ವಿಜಯ್ ಪ್ರಣಾಳಿಕೆಯಲ್ಲಿ ಘೋಷಿಸಿದ ಭರ್ಜರಿ “ಚಿನ್ನದ ಭರವಸೆಗಳು” ಜನರ ಗಮನ ಸೆಳೆಯುತ್ತಿದೆ.ಚಿನ್ನಕ್ಕೆ ಸಂಬಂಧಿಸಿದ ಭರವಸೆಗಳ ಸರಮಾಲೆಯನ್ನೇ ನೀಡಿದ್ದು, ಇದೀಗ ಇದರ ವೆಚ್ಚದ ಬಗ್ಗೆ ಚರ್ಚೆ ಶುರುವಾಗಿದೆ. ನವಜಾತ ಶಿಶುಗಳಿಗೆ ಚಿನ್ನದ ಉಂಗುರ, ವಧುಗಳಿಗೆ 8 ಗ್ರಾಂ ಚಿನ್ನ ಮತ್ತು ರೇಷ್ಮೆ ಸೀರೆ ನೀಡುವಂತಹ ಯೋಜನೆಗಳು ಜನರಲ್ಲಿ ಆಕರ್ಷಣೆ ಹುಟ್ಟಿಸಿದರೂ, […]

ಸಿನಿಮಾ ಬಳಿಕ ರಾಜಕೀಯದಲ್ಲೂ ಹೀರೋ ಆದ ವಿಜಯ್: ತಮಿಳು ನಾಡಿನಲ್ಲಿ ಅಬ್ಬರಿಸಿದ TVK

ಚೆನ್ನೈ: ತಮಿಳುನಾಡಿನ ನಟ Vijay ನೇತೃತ್ವದ Tamilaga Vettri Kazhagam (ಟಿವಿಕೆ) ಪಕ್ಷವು ದಶಕಗಳಿಂದ ಪ್ರಭುತ್ವ ಸಾಧಿಸಿದ್ದ Dravida Munnetra Kazhagam ಮತ್ತು All India Anna Dravida Munnetra Kazhagam ಪಕ್ಷಗಳ ಲೆಕ್ಕಾಚಾರವನ್ನು ತಲೆಕೆಳಗು ಮಾಡಿ ಭರ್ಜರಿ ಜಯ ದಾಖಲಿಸಿದೆ. ದೀರ್ಘಕಾಲದಿಂದ ಡಿಎಂಕೆ–ಎಐಎಡಿಎಂಕೆ ನಡುವಿನ ಪೈಪೋಟಿಯಲ್ಲೇ ಸೀಮಿತವಾಗಿದ್ದ ತಮಿಳುನಾಡಿನ ರಾಜಕೀಯದಲ್ಲಿ, ವಿಜಯ್ ಅವರ ಪ್ರವೇಶವು ಮಹತ್ವದ ಬದಲಾವಣೆಗೆ ಕಾರಣವಾಗಿದೆ. ಯುವಜನತೆ ಮತ್ತು ಮಹಿಳೆಯರ ಭಾರೀ ಬೆಂಬಲದೊಂದಿಗೆ ವಿಜಯ್ ‘ಕಿಂಗ್‌ಮೇಕರ್’ ಅಲ್ಲ, ನೇರವಾಗಿ ‘ಕಿಂಗ್’ ಆಗಿ ಹೊರಹೊಮ್ಮಿದ್ದಾರೆ […]

ಪಂಚ ರಾಜ್ಯಗಳ ಮತ ಎಣಿಕೆ: ಈ ಕ್ಷಣದ ಅಪ್ ಡೇಟ್ ಹೀಗಿದೆ

ಭಾರತದ ಐದು ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಜಕೀಯ ಕಣ ಸಾಕಷ್ಟು ರೋಚಕ ತಿರುವು ಪಡೆದುಕೊಂಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಹಾಗೂ ಪುದುಚೆರಿ ರಾಜ್ಯಗಳ ಜೊತೆಗೆ ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಈ ಬಾರಿ ಮತದಾನದ ಪ್ರಮಾಣ ಹೆಚ್ಚಾಗಿರುವುದರಿಂದ ಅಚ್ಚರಿಯ ಫಲಿತಾಂಶಗಳ ನಿರೀಕ್ಷೆ ಹೆಚ್ಚಾಗಿದೆ. ಈ ಕ್ಷಣದ ಸುದ್ದಿ ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಓಟದತ್ತ- ಅಸ್ಸಾಂನಲ್ಲಿ ಬಿಜೆಪಿ […]