ಇಸ್ರೇಲ್-ಇರಾನ್ ಸಂಘರ್ಷ: ಒಮಾನ್‌’ನಲ್ಲಿ 15 ಭಾರತೀಯರಿದ್ದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ; ನಾಲ್ವರಿಗೆ ಗಾಯ

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಬೆನ್ನಲ್ಲೇ ಇರಾನ್ ಕೆರಳಿದೆ. ತನ್ನ ಸಂಪೂರ್ಣ ಶಕ್ತಿಯೊಂದಿಗೆ ಪ್ರತಿಕಾರಕ್ಕೆ ಇಳಿದಿರುವ ಇರಾನ್ ಸೇನೆಯು, ಒಮಾನ್‌ನ ಮುಸಂದಮ್ ಪೆನಿನ್ಸುಲಾ ಬಳಿ ಸಂಚರಿಸುತ್ತಿದ್ದ ಪಲಾವ್ ಧ್ವಜದ ‘ಸ್ಕೈಲೈಟ್’ ಎಂಬ ತೈಲ ಟ್ಯಾಂಕರ್ ಅನ್ನು ಗುರಿಯಾಗಿಸಿ ದಾಳಿ ಮಾಡಿದೆ. ಈ ದಾಳಿಯಲ್ಲಿ ಕನಿಷ್ಠ ನಾಲ್ವರು ನಾವಿಕರು ಗಾಯಗೊಂಡಿದ್ದಾರೆ ಎಂದು ಒಮಾನ್‌ನ ಕಡಲ ಭದ್ರತಾ ಕೇಂದ್ರ (MSC) ದೃಢಪಡಿಸಿದೆ. ತೈಲ ಹಡಗಿನಲ್ಲಿ 15 ಭಾರತೀಯರು:ಈ ತೈಲ […]

ಟೆಹ್ರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ; ಇರಾನ್‌ ಸರ್ವೋಚ್ಛ ನಾಯಕ ಅಯತೊಲ್ಲಾ ಖಮೇನಿ ಹತ್ಯೆ.

ಟೆಹ್ರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಹಲವಾರು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ರಾಷ್ಟ್ರದ ಮೇಲೆ ಅಮೆರಿಕ-ಇಸ್ರೇಲಿ ಜಂಟಿ ದಾಳಿಯ ನಂತರ ಖಮೇನಿ ಕೊಲ್ಲಲ್ಪಟ್ಟರು ಎಂದು ಅಮೆರಿಕದ ಹೇಳಿಕೆಯ ನಂತರ ಈ ಘೋಷಣೆ ಹೊರಬಿದ್ದಿದೆ. ಇರಾನ್‌ ಘೋಷಣೆ ಮಾಡುವುದಕ್ಕೂ ಮೊದಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಖಮೇನಿಯನ್ನು ಹೊಡೆದುರುಳಿಸಿದ್ದೇವೆ ಎಂದು ತಿಳಿಸಿದ್ದರು. ಶನಿವಾರ ಬೆಳಿಗ್ಗೆ ಪ್ರಾರಂಭವಾದ ದಾಳಿಯಲ್ಲಿ ಖಮೇನಿ ಅವರ ಮಗಳು, ಮೊಮ್ಮಗಳು, ಸೊಸೆ […]

ಅಬುಧಾಬಿಯಲ್ಲಿ 45 ಕೋಟಿ ರೂ. ಲಾಟರಿ ಗೆದ್ದ ಉಡುಪಿ ಮೂಲದ ಯುವಕ!

ಅಬುಧಾಬಿ: ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಲೈವ್ ಡ್ರಾದಲ್ಲಿ ಉಡುಪಿಯ ಉದ್ಯಾವರದ ವ್ಯಕ್ತಿಯೊಬ್ಬರು 20 ಮಿಲಿಯನ್ ದಿರ್ಹಮ್ (ಸುಮಾರು 45 ಕೋಟಿ ರೂಪಾಯಿಗೂ ಅಧಿಕ) ಮೊತ್ತದ ಬೃಹತ್‌ ಬಹುಮಾನವನ್ನು ಗೆದ್ದಿರುವುದಾಗಿ ವರದಿಯಾಗಿದೆ.ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಅನಿವಾಸಿ ಭಾರತೀಯ ಶಂತನು ಶೆಟ್ಟಿಗಾರ್ ಈ ಲಾಟರಿ ಗೆದ್ದಿದ್ದಾರೆ. ಪ್ರಸ್ತುತ ಓಮನ್‌ನ ರಿಟೇಲ್ ವಲಯದಲ್ಲಿ ಕೆಲಸ ಮಾಡುತ್ತಿರುವ ಇವರು ಖರೀದಿಸಿದ್ದ 305810 ಸಂಖ್ಯೆಯ ಟಿಕೆಟ್‌ಗೆ ‘ಸರಣಿ 283’ರ ಈ ಬೃಹತ್ ಮೊತ್ತ ಒಲಿದಿದೆ. ಇದು ಯುಎಇಯ ದೀರ್ಘಕಾಲದ ರಾಫೆಲ್ ಡ್ರಾಗಳಲ್ಲಿ […]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ದಾಖಲೆ ಮೊತ್ತದ ಹಣ ಸಂಗ್ರಹ!

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39 ಕೋಟಿ ರೂ.ಗಳ ಹುಂಡಿ ಸಂಗ್ರಹ ದಾಖಲಾಗಿದೆ. ದೇವಾಲಯಕ್ಕೆ 350 ಗ್ರಾಂ ಚಿನ್ನ ಮತ್ತು 1,670 ಗ್ರಾಂ ಬೆಳ್ಳಿ ಕಾಣಿಕೆಯಾಗಿ ಬಂದಿತ್ತು. ಡಿಸೆಂಬರ್ 2025 ರಲ್ಲಿ 1.64 ಕೋಟಿ ರೂ., ಮತ್ತು 695 ಗ್ರಾಂ ಚಿನ್ನ ಮತ್ತು 2,985 ಗ್ರಾಂ ಬೆಳ್ಳಿ ಸಂಗ್ರಹವಾಗಿತ್ತು. ಒಟ್ಟಾರೆಯಾಗಿ, ಕಳೆದ ಎರಡು ತಿಂಗಳಲ್ಲಿ 3.03 ಕೋಟಿ ರೂ.ಗಳ ಸಂಗ್ರಹವು ಒಂದು ರೀತಿಯ ದಾಖಲೆಯಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಕಳೆದ […]

ಬೆಂಗಳೂರಿನಲ್ಲಿ ‘ಕಾನ್ಪಿಡೆಂಟ್‌ ಗ್ರೂಪ್‌’ ಚೇರ್‌ಮನ್ ಸಿಜೆ ರಾಯ್ ಆತ್ಮಹತ್ಯೆ; ಅಧಿಕಾರಿಗಳ ಎದುರೆ ಎದೆಗೆ ಗುಂಡು ಹಾರಿಸಿಕೊಂಡ ಉದ್ಯಮಿ!

ಬೆಂಗಳೂರು: ಐಟಿ ದಾಳಿಗೆ ಹೆದರಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ (CJ Roy) ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಲ್ಯಾಂಡ್ ಫರ್ಡ್ ರಸ್ತೆಯಲ್ಲಿ ನಡೆದಿದೆ. ಆದಾಯ ತೆರಿಗೆ ಇಲಾಖೆಯಿಂದ ಪದೇ ಪದೇ ಆದ ದಾಳಿಗೆ ಹೆದರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಭಾರತದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರು:ಸಿ.ಜೆ. ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಮತ್ತು ಸಂಸ್ಥಾಪಕರಾಗಿದ್ದರು. ಅವರು ಭಾರತದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದು, […]