ಬಿಜೆಪಿಗೆ ಗುಡ್ ಬೈ ಹೇಳಿದ ಅಣ್ಣಾಮಲೈ, ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಸೂಚನೆ!

ನವದೆಹಲಿ: ಕಳೆದ ಕೆಲವು ದಿನಗಳಿಂದ ತಮಿಳುನಾಡು ಬಿಜೆಪಿ ನಾಯಕ ಕೆ ಅಣ್ಣಾಮಲೈ K. Annamalai ಅವರು ಬಿಜೆಪಿ ತೊರೆಯಲಿದ್ದಾರೆ ಎಂಬ ಊಹಾಪೋಹಗಳಿಗೆ ಇದೀಗ ಅಧಿಕೃತ ರೂಪ ಸಿಕ್ಕಿದೆ. ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಅವರು ಮಂಗಳವಾರ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮಾಹಿತಿಯ ಪ್ರಕಾರ, ಅಣ್ಣಾಮಲೈ ಅವರು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ Nitin Nabin ಅವರಿಗೆ ಐದು ಪುಟಗಳ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ […]

ಒಂದು ಕುಟುಂಬಕ್ಕೆ ಒಂದೇ ಗ್ಯಾಸ್, ಗಮನಿಸಿ ಇಂದಿನಿಂದ ಬದಲಾಗಿದೆ LPG ನಿಯಮಗಳು

ನವದೆಹಲಿ: ದೇಶದಾದ್ಯಂತ ಎಲ್ಪಿಜಿ (LPG) ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿಯಮವೊಂದನ್ನು ಜಾರಿಗೆ ತಂದಿದ್ದು, ಇಂದಿನಿಂದ “ಒಂದು ಕುಟುಂಬಕ್ಕೆ ಒಂದೇ ಎಲ್ಪಿಜಿ ಸಂಪರ್ಕ” (One Household, One Connection) ನಿಯಮ ಕಡ್ಡಾಯವಾಗಿದೆ. ಗೃಹಬಳಕೆಯ ಗ್ಯಾಸ್ ಸಬ್ಸಿಡಿ ದುರ್ಬಳಕೆ ತಡೆದು, ಕಪ್ಪು ಮಾರುಕಟ್ಟೆಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಹೊಸ ನಿಯಮದ ಅನ್ವಯ, ಪತಿ-ಪತ್ನಿ, ಅವಿವಾಹಿತ ಮಕ್ಕಳು ಹಾಗೂ ಅವಲಂಬಿತ ಪೋಷಕರನ್ನೊಳಗೊಂಡ ಒಂದು ಕುಟುಂಬಕ್ಕೆ ಕೇವಲ ಒಂದು ಎಲ್ಪಿಜಿ ಸಂಪರ್ಕ ಮಾತ್ರ ಮಾನ್ಯವಾಗಲಿದೆ. ಒಂದೇ […]

Oil Price Hike: ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡ‌ರ್ ಬೆಲೆ 3,113 ರೂಪಾಯಿಗೆ ಏರಿಕೆಯಾಗಿದ್ದು, ತೈಲ ಕಂಪನಿಗಳಿಗೆ 30 ದಿನಗಳ ದಾಸ್ತಾನು ಇರಿಸಿಕೊಳ್ಳಲು ಸುಜಾತಾ ಶರ್ಮಾ ಅವರು ಸೂಚನೆ ನೀಡಿದ್ದಾರೆ.

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ತೈಲ ಸರಬರಾಜಿಗೆ ಅಡ್ಡಿಯಾಗಿದ್ದು, ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡ‌ರ್ ಬೆಲೆಯಲ್ಲಿ ಮತ್ತೆ ಏರಿಕೆ ಕಂಡಿದೆ. ದೇಶದಾದ್ಯಂತ ಸಿಲಿಂಡ‌ರ್ ಬೆಲೆಯಲ್ಲಿ ₹42ರಿಂದ ₹53 ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಗೃಹ ಬಳಕೆಯ ಅಡುಗೆ ಅನಿಲ ದರದಲ್ಲಿ ಯಾವುದೇ ವ್ಯತ್ಯಾಸಕಂಡುಬಂದಿಲ್ಲ.

IPL 2026: RCBಗೆಲುವಿನ ಬೆನ್ನಲ್ಲೇ ಪತ್ನಿ ಅನುಷ್ಕಾ ಜೊತೆ ಕೊಹ್ಲಿ ಸಖತ್ ಡ್ಯಾನ್ಸ್!

ಅಹಮದಾಬಾದ್: ಭಾನುವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದೆ.ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಅನುಷ್ಕಾ ಶರ್ಮಾ ಸಂಭ್ರಮಾಚರಣೆಯಲ್ಲಿ ಕುಣಿದ ವಿಡಿಯೋ […]

ಭಾರತದಲ್ಲಿ ಶೀಘ್ರವೇ ಪ್ಲಾಸ್ಟಿಕ್ ನೋಟುಗಳನ್ನು ಪರಿಚಯಿಸಲಿದೆ ಆರ್ ಬಿ ಐ!

ನವದೆಹಲಿ: ಭಾರತದಲ್ಲಿ ಶೀಘ್ರದಲ್ಲೇ ₹100, ₹200 ಮತ್ತು ₹500 ಮುಖಬೆಲೆಯ ಪ್ಲಾಸ್ಟಿಕ್ (ಪಾಲಿಮರ್) ನೋಟುಗಳು ಚಲಾವಣೆಗೆ ಬರಬಹುದೆಂಬ ಚರ್ಚೆಗಳು ಮತ್ತೆ ಜೋರಾಗಿವೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಪಾಲಿಮರ್ ನೋಟುಗಳ ಪರಿಚಯಕ್ಕೆ ಸಂಬಂಧಿಸಿದ ತನ್ನ ಬಹುಕಾಲದ ಯೋಜನೆಯನ್ನು ಪುನರುಜ್ಜೀವನಗೊಳಿಸಿದ್ದು, ಶೀಘ್ರದಲ್ಲೇ ಪೈಲಟ್ ಯೋಜನೆ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಇತ್ತೀಚೆಗೆ ನಡೆದ ಆರ್‌ಬಿಐ ಮಂಡಳಿಯ ಸಭೆಗಳಲ್ಲಿ ಪಾಲಿಮರ್ ಕರೆನ್ಸಿ ಕುರಿತು ಮಹತ್ವದ ಚರ್ಚೆಗಳು ನಡೆದಿವೆ. ಯೋಜನೆ ಯಶಸ್ವಿಯಾದರೆ ಭಾರತೀಯ ಕರೆನ್ಸಿ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ […]