ಹೈಕಮಾಂಡ್ ಸೂಚನೆ ಕೊಟ್ರೂ ಇಂದು ಡಿಕೆಶಿ ಸಿಎಂ ಆಗೋದು ಕಷ್ಟ! ಇಲ್ಲಿದೆ ಪ್ರಮುಖ ಕಾರಣಗಳು

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ತೀವ್ರಗೊಂಡಿದೆ. ಡಿ.ಕೆ.ಶಿವಕುಮಾರ್ D. K. Shivakumar ಅವರು ಮುಂದಿನ ಮುಖ್ಯಮಂತ್ರಿ ಆಗುವ ಸಾಧ್ಯತೆ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದರೂ, ತಕ್ಷಣವೇ ಅಧಿಕಾರ ಹಸ್ತಾಂತರವಾಗುವುದು ಅಸಾಧ್ಯ ಎನ್ನಲಾಗುತ್ತಿದೆ. ರಾಜ್ಯಪಾಲರ ಮುಂಬೈ ಪ್ರವಾಸ ಪ್ರಮುಖ ಅಡ್ಡಿ ಮುಖ್ಯಮಂತ್ರಿ ರಾಜೀನಾಮೆ ಸ್ವೀಕರಿಸುವುದು, ಹೊಸ ಸಿಎಂಗೆ ಆಹ್ವಾನ ನೀಡುವುದು ಹಾಗೂ ಪ್ರಮಾಣವಚನ ದಿನಾಂಕ ನಿಗದಿ ಮಾಡುವ ಪ್ರಕ್ರಿಯೆ ರಾಜ್ಯಪಾಲರ ಮೂಲಕವೇ ನಡೆಯಬೇಕು. ಆದರೆ ರಾಜ್ಯಪಾಲರು ಮುಂಬೈ ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ತಕ್ಷಣದ ರಾಜಕೀಯ […]

ಬೈಜುಸ್ ಸಂಸ್ಥಾಪಕ ರವೀಂದ್ರನ್ ಗೆ ಆರು ತಿಂಗಳು ಜೈಲು,ನ್ಯಾಯಾಲಯ ನಿಂದನೆ ಆರೋಪದಡಿ ಬಂಧನ

ಸಿಂಗಾಪುರ: ಒಂದು ಕಾಲದಲ್ಲಿ ಭಾರತದ ಅತ್ಯಂತ ಮೌಲ್ಯಯುತ ಎಡ್ಟೆಕ್ ಸಂಸ್ಥೆಗಳಲ್ಲೊಂದಾಗಿದ್ದ BYJU’S ಸಂಸ್ಥೆಯ ಸ್ಥಾಪಕ ರವೀಂದ್ರನ್ Byju Raveendran ಅವರಿಗೆ ಸಿಂಗಾಪುರ ನ್ಯಾಯಾಲಯದಿಂದ ಭಾರೀ ಹಿನ್ನಡೆ ಎದುರಾಗಿದೆ. ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಅವರನ್ನು ನ್ಯಾಯಾಲಯ ನಿಂದನೆ ಆರೋಪದಡಿಯಲ್ಲಿ ತಪ್ಪಿತಸ್ಥರೆಂದು ಘೋಷಿಸಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಸಿಂಗಾಪುರ ನ್ಯಾಯಾಲಯದ ಪ್ರಕಾರ, ಏಪ್ರಿಲ್ 2024ರಿಂದ ತಮ್ಮ ಆಸ್ತಿಪಾಸ್ತಿಗಳಿಗೆ ಸಂಬಂಧಿಸಿದಂತೆ ನೀಡಲಾಗಿದ್ದ ಹಲವು ಆದೇಶಗಳನ್ನು ಬೈಜು ರವೀಂದ್ರನ್ ಉದ್ದೇಶಪೂರ್ವಕವಾಗಿ ಪಾಲಿಸಿಲ್ಲ. ನ್ಯಾಯಾಲಯದ ಸೂಚನೆಗಳಿಗೆ ಸ್ಪಂದಿಸಲು ವಿಫಲವಾದ ಹಿನ್ನೆಲೆಯಲ್ಲಿ […]

“ಬೈಜುಸ್‌ ಸಂಸ್ಥಾಪಕ ರವೀಂದ್ರನ್ ಗೆ 6 ತಿಂಗಳ ಜೈಲು ಶಿಕ್ಷೆ”

ನವದೆಹಲಿ: ಬೈಜುಸ್‌ಗೆ ಹೊಸ ಸಂಕಷ್ಟ ಎದುರಾಗಿದ್ದು, ಅದರ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಬ್ಲೂಮ್‌ಬರ್ಗ್ ವರದಿಗಳ ಪ್ರಕಾರ, ಎಡ್‌ಟೆಕ್ ಸಂಸ್ಥಾಪಕರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಲಾಗಿದೆ.ಸಿಂಗಾಪುರ ನ್ಯಾಯಾಲಯವು ರವೀಂದ್ರನ್ ಅವರಿಗೆ ಅಧಿಕಾರಿಗಳಿಗೆ ಶರಣಾಗುವಂತೆ, 5$90,000 ($70,500) ಕಾನೂನು ವೆಚ್ಚವನ್ನು ಪಾವತಿಸುವಂತೆ ಮತ್ತು ಸಂಬಂಧಿತ ಕಂಪನಿಯಲ್ಲಿ ಷೇರುಗಳನ್ನು ಹೊಂದಿರುವ ಕಾರ್ಪೊರೇಟ್ ಸಂಸ್ಥೆಯಾದ ಬೀಯರ್ ಇನ್ವೆಸ್ಕೊ ಪ್ರೈವೇಟ್ ಲಿಮಿಟೆಡ್‌ ಮಾಲೀಕತ್ವವನ್ನು ಸಾಬೀತುಪಡಿಸುವ ದಾಖಲೆಗಳನ್ನು ಒದಗಿಸುವಂತೆ ನಿರ್ದೇಶಿಸಿದೆ ಎಂದು […]

‘ಜಿರಳೆ ಜನತಾ ಪಕ್ಷ’ ಕುರಿತ ಆರೋಪಗಳ ತನಿಖೆ ಸಾಧ್ಯವಿಲ್ಲ ಎಂದ ಸುಪ್ರಿಂ ಕೋರ್ಟ್

ನವದೆಹಲಿ: ಸುಪ್ರಿಂ ಕೋರ್ಟ್ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿರುವ “ಜಿರಳೆ ಜನತಾ ಪಕ್ಷ” ಕುರಿತ ಆರೋಪಗಳ ತನಿಖೆಯನ್ನು ತುರ್ತು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ Surya Kant ಹಾಗೂ ನ್ಯಾಯಮೂರ್ತಿ ಜೋಯ್ಮಾಲ್ಯ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್.ಕೆ. ಗೋಸ್ವಾಮಿ ಅವರಿಗೆ, “ಈ ವಿಷಯವನ್ನು ಅತಿಯಾಗಿ ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ” ಎಂದು ಪೀಠ ತಿಳಿಸಿತು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ “ಜಿರಳೆ ಜನತಾ ಪಕ್ಷ” ಚಟುವಟಿಕೆಗಳ […]

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ಮುಸ್ಲಿಂ ಸಂಘಟನೆಯಿಂದ ಸರಕಾರಕ್ಕೆ ಆಗ್ರಹ

ನವದೆಹಲಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಜಮೀಯತ್ ಉಲೇಮಾ-ಎ-ಹಿಂದ್‌ (ಅರ್ಶದ್ ಮದನಿ ಬಣ) ಅಧ್ಯಕ್ಷ ಮೌಲಾನಾ ಅರ್ಶದ್ ಮದನಿ ಅವರು ಸರಕಾರವನ್ನು ವಿನಂತಿಸಿದ್ದಾರೆ. ಅವರ ಈ ಹೇಳಿಕೆಗೆ ದೇಶದ ವಿವಿಧ ಮುಸ್ಲಿಂ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಮುಸ್ಲಿಂ ಮುಖಂಡರು ಹಾಗೂ ಸಂಘಟನೆಗಳು ಈ ಪ್ರಸ್ತಾಪವನ್ನು ಸ್ವಾಗತಿಸಿವೆ. ಗೋಹತ್ಯೆ ವಿಚಾರವನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಪ್ರವೃತ್ತಿಗೆ ಈ ಕ್ರಮ ಕಡಿವಾಣ ಹಾಕಬಹುದು ಎಂದು ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಈ ವಿಷಯದಲ್ಲಿ ಮುಸ್ಲಿಂ […]