ಕೊನೆಗೂ ಮ್ಯಾಜಿಕ್ ನಂಬರ್ ಗೆದ್ದು ಬೀಗಿದ ದಳಪತಿ, 121 ಶಾಸಕರ ಬಲ, ಶೀಘ್ರದಲ್ಲಿ ತಮಿಳುನಾಡಿನ ಸಿಎಂ ಪಟ್ಟವೇರಲಿದ್ದಾರೆ ವಿಜಯ್ ?

ಚೆನ್ನೈ: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗುವ ಕ್ಷಣ ಸಮೀಪಿಸಿದೆ. ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ ರಚನೆಯ ಹಕ್ಕು ಮಂಡಿಸಲು ಇಂದು ಚೆನ್ನೈನ ರಾಜಭವನಕ್ಕೆ ಆಗಮಿಸಿದೆ. ಚೊಚ್ಚಲ ವಿಧಾನಸಭಾ ಚುನಾವಣೆಯಲ್ಲೇ 108 ಸ್ಥಾನಗಳನ್ನು ಗೆದ್ದು ಸಂಚಲನ ಮೂಡಿಸಿದ್ದ ಟಿವಿಕೆಗೆ ಇದೀಗ ಮಿತ್ರಪಕ್ಷಗಳ ಬೆಂಬಲದೊಂದಿಗೆ ಒಟ್ಟು 121 ಶಾಸಕರ ಬಲ ದೊರೆತಿದ್ದು, ಸರ್ಕಾರ ರಚನೆ ಬಹುತೇಕ ಖಚಿತವಾಗಿದೆ. ಟಿವಿಕೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ 5 ಶಾಸಕರು, ಭಾರತೀಯ ಕಮ್ಯುನಿಸ್ಟ್ ಪಕ್ಷನ 2 […]

ಭಾರತೀಯ ರೈಲ್ವೆಯಿಂದ ಪ್ರಯಾಣಿಕರಿಗೆ ಸಿಹಿ ಸುದ್ದಿ: ಹೊಸ AI ಆಧಾರಿತ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ!

ನವದೆಹಲಿ: Indian Railways ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಆಗಸ್ಟ್ 2026ರಿಂದ ಹೊಸ ತಲೆಮಾರಿನ ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್ (PRS) ಅನ್ನು ಹಂತ ಹಂತವಾಗಿ ಜಾರಿಗೆ ತರಲು ಸಿದ್ಧವಾಗಿದೆ. ಸುಮಾರು 40 ವರ್ಷಗಳ ಹಳೆಯ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ನವೀಕರಿಸಲಾಗುತ್ತಿದ್ದು, ಇದರ ಮೂಲಕ ವೇಗವಾದ ಟಿಕೆಟ್ ಬುಕ್ಕಿಂಗ್, ಹೆಚ್ಚಿದ ಪಾರದರ್ಶಕತೆ ಹಾಗೂ ಉತ್ತಮ ಪ್ರಯಾಣಿಕ ಸೇವೆ ದೊರೆಯಲಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ರೈಲ್ವೆ ಮೂಲಗಳ ಪ್ರಕಾರ, ಹೊಸ PRS ವ್ಯವಸ್ಥೆ ಒಂದು ನಿಮಿಷಕ್ಕೆ […]

ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರಿಗೆ 3 ನೇ ಸ್ಥಾನ!

ಬೆಂಗಳೂರು: ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ಜಾರಿಗೊಳಿಸಿದ್ದರೂ, ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (NCRB) 2024ರ ವರದಿ ಆತಂಕಕಾರಿ ಅಂಶಗಳನ್ನು ಬಹಿರಂಗಪಡಿಸಿದೆ. ದೇಶದ 19 ಮಹಾನಗರಗಳ ಪೈಕಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ಈ ಪಟ್ಟಿಯಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದ್ದು, ಮುಂಬೈ ಎರಡನೇ ಸ್ಥಾನದಲ್ಲಿದೆ. ವರದಿ ಪ್ರಕಾರ, 2024ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ಒಟ್ಟು 4,748 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 2023ರಲ್ಲಿ ಈ ಸಂಖ್ಯೆ 4,870 ಆಗಿದ್ದು, ಕಳೆದ ವರ್ಷಕ್ಕೆ […]

ಕೃಷಿ ಭೂಮಿಯಲ್ಲಿ ಮನೆ ಕಟ್ಟೋ ಪ್ಲಾನ್ ನಿಮಗಿದ್ಯಾ? ಹಾಗಾದ್ರೆ ಈ ನಿಯಮ ನಿಮಗೆ ತಿಳಿದಿರ್ಲೇಬೇಕು

ಒಂದು ಸಣ್ಣದಾದರೂ ತೋಟ, ಜಮೀನು ಖರೀದಿಸುವುದು, ಅಲ್ಲೊಂದು ಪುಟ್ಟದಾದರೂ ಮನೆ ಕಟ್ಟಿ ನೆಮ್ಮದಿಯಿಂದ ಜೀವನ ನಡೆಸೋದು ಪ್ರತಿಯೊಬ್ಬರ ಕನಸು. ಭೂಮಿ ಖರೀದಿ ಅಥವಾ ಮನೆ ನಿರ್ಮಾಣ ಮಾಡುವ ಮುನ್ನ ಬಹುತೇಕ ಜನರಿಗೆ ಎದುರಾಗುವ ಸಾಮಾನ್ಯ ಪ್ರಶ್ನೆಗಳಲ್ಲಿಕೃಷಿ ಭೂಮಿಯಲ್ಲಿ ಮನೆ ಕಟ್ಟಬಹುದೇ? ಎಂಬುದೂ ಒಂದು. ಇದರ ಉತ್ತರ ಸರಳವಾಗಿಲ್ಲ. ಕೆಲವು ಕಾನೂನು ಕ್ರಮಗಳನ್ನು ಪಾಲಿಸಿದರೆ ಮಾತ್ರ ಮನೆ ನಿರ್ಮಾಣ ಸಾಧ್ಯ. ಕೃಷಿ ಭೂಮಿ ಎಂದರೇನು? ಕೃಷಿ ಭೂಮಿ ಎಂದರೆ ಬೆಳೆ ಬೆಳೆಸಲು, ಹಣ್ಣು-ತರಕಾರಿಗಳು ಬೆಳೆಯಲು, ಹೈನುಗಾರಿಕೆ ಅಥವಾ ಕೋಳಿ […]

ಮಕ್ಕಳಿಗೆ ಚಿನ್ನದ ಉಂಗುರ, ನವವಧುಗಳಿಗೆ ಕೈ ತುಂಬಾ ಚಿನ್ನ, ರೇಶ್ಮೆಸೀರೆ ಕೊಡ್ತಾರಂತೆ ವಿಜಯ್, ಇದೇನು ಸಿನಿಮಾ ಸ್ಟೋರಿ ಅಲ್ಲ ತಮಿಳುನಾಡಿಗೆ ವಿಜಯ್ ಕೊಟ್ಟ ಬಂಪರ್ ಭರವಸೆ!

ತಮಿಳುನಾಡಿನಲ್ಲಿ ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಈ ಬಾರಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಭರ್ಜರಿ ಜಯಭೇರಿ ಭಾರಿಸಿದೆ. ಈಗ ವಿಶೇಷವಾಗಿ ವಿಜಯ್ ಪ್ರಣಾಳಿಕೆಯಲ್ಲಿ ಘೋಷಿಸಿದ ಭರ್ಜರಿ “ಚಿನ್ನದ ಭರವಸೆಗಳು” ಜನರ ಗಮನ ಸೆಳೆಯುತ್ತಿದೆ.ಚಿನ್ನಕ್ಕೆ ಸಂಬಂಧಿಸಿದ ಭರವಸೆಗಳ ಸರಮಾಲೆಯನ್ನೇ ನೀಡಿದ್ದು, ಇದೀಗ ಇದರ ವೆಚ್ಚದ ಬಗ್ಗೆ ಚರ್ಚೆ ಶುರುವಾಗಿದೆ. ನವಜಾತ ಶಿಶುಗಳಿಗೆ ಚಿನ್ನದ ಉಂಗುರ, ವಧುಗಳಿಗೆ 8 ಗ್ರಾಂ ಚಿನ್ನ ಮತ್ತು ರೇಷ್ಮೆ ಸೀರೆ ನೀಡುವಂತಹ ಯೋಜನೆಗಳು ಜನರಲ್ಲಿ ಆಕರ್ಷಣೆ ಹುಟ್ಟಿಸಿದರೂ, […]