“ಒಂದು ವರ್ಷ ಚಿನ್ನ ಖರೀದಿಸಬೇಡಿ!”- ಯಾಕೆ ಗೊತ್ತಾ?

ದೇಶದ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಒಂದು ವರ್ಷದವರೆಗೆ ಚಿನ್ನ ಖರೀದಿಯನ್ನು ತಪ್ಪಿಸಲು ಮನವಿ ಮಾಡಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ ಹಾಗೂ ಜಾಗತಿಕ ತೈಲ ಬಿಕ್ಕಟ್ಟಿನ ಹಿನ್ನೆಲೆ ವಿದೇಶಿ ವಿನಿಮಯ ಉಳಿಸುವ ಅಗತ್ಯವಿದೆ ಎಂದು ಹೇಳಿದರು. “ದೇಶಭಕ್ತಿಯ ದೃಷ್ಟಿಯಿಂದ ವಿದೇಶಿ ವಿನಿಮಯ ಉಳಿಸೋಣ” ಎಂದು ಕರೆ ನೀಡಿದ ಅವರು, ಮದುವೆ ಸೇರಿದಂತೆ ವಿವಿಧ ಸಮಾರಂಭಗಳಲ್ಲಿ ಚಿನ್ನ ಖರೀದಿಯನ್ನು ಮಿತಿಗೊಳಿಸುವಂತೆ […]

ಧಾರವಾಡದ ಅಪೂಸ್‌ಗೆ ವಿದೇಶಗಳಲ್ಲಿ ಭಾರೀ ಡಿಮ್ಯಾಂಡ್, ಸಿಂಗಾಪುರಕ್ಕೆ 2 ಟನ್ ರಫ್ತು, ರೈತರಿಗೆ ಭರ್ಜರಿ ಲಾಭ

ಬೆಂಗಳೂರು: ಪೇಡಾ ನಗರಿ ಧಾರವಾಡದ ಮಾವಿನ ಸುವಾಸನೆ ಇದೀಗ ವಿದೇಶಿಗರ ಮನಸೆಳೆಯುತ್ತಿದೆ. ಮಾವಿನಹಣ್ಣುಗಳ ರಾಜ ಎಂದೇ ಖ್ಯಾತಿಯಾಗಿರುವ ಅಪೂಸ್ ಮಾವು ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಪಡೆದುಕೊಂಡಿದ್ದು, ಧಾರವಾಡದ ಅಪೂಸ್ ಮಾವು ವಿದೇಶಿ ಗ್ರಾಹಕರ ಬಾಯಿ ಚಪ್ಪರಿಸುವಂತೆ ಮಾಡಿದೆ. ಈ ಬಾರಿ ಜಿಲ್ಲೆಯಲ್ಲಿ ಸುಮಾರು 30 ಸಾವಿರ ಎಕರೆ ಪ್ರದೇಶದಲ್ಲಿ ಮಾವು ಬೆಳೆ ಬೆಳೆದಿದ್ದು, ಮಾರುಕಟ್ಟೆ ವಿಸ್ತರಣೆ ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಆದರೆ ಹವಾಮಾನ ವೈಪರೀತ್ಯದಿಂದ ನಿರೀಕ್ಷಿತ ಇಳುವರಿ ಸಿಗದೆ ರೈತರು ಸಂಕಷ್ಟ ಅನುಭವಿಸಿದ್ದರೂ, […]

ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣವಚನ: ತಮಿಳುನಾಡಿನಲ್ಲಿ ಹೊಸ ರಾಜಕೀಯ ಅಧ್ಯಾಯ ಶುರು

ತಮಿಳುನಾಡು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿ ಜೊಸೆಫ್ ವಿಜಯ್ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. Tamilaga Vettri Kazhagam (ಟಿವಿಕೆ) ಪಕ್ಷದ ಮುಖ್ಯಸ್ಥರಾಗಿರುವ ವಿಜಯ್ ಅವರ ರಾಜಕೀಯ ಪ್ರವೇಶ ಇದೀಗ ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯಕ್ಕೆ ಕಾರಣವಾಗಿದೆ. ಪ್ರಾರ್ಥನೆಯೊಂದಿಗೆ ಆರಂಭವಾದ ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಪಾಲರು ವಿಜಯ್ ಅವರಿಗೆ ಅಧಿಕಾರ ಮತ್ತು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. “ನಾನು ಸಿ. ಜೋಸೆಫ್ ವಿಜಯ್ ಎನ್ನುವ ನಾನು…” ಎಂದು ಪ್ರಮಾಣ ವಚನ ಆರಂಭಿಸಿದ ವೇಳೆ ಸಭಾಂಗಣದಲ್ಲಿ ಭಾರೀ […]

ಕೊನೆಗೂ ಮ್ಯಾಜಿಕ್ ನಂಬರ್ ಗೆದ್ದು ಬೀಗಿದ ದಳಪತಿ, 121 ಶಾಸಕರ ಬಲ, ಶೀಘ್ರದಲ್ಲಿ ತಮಿಳುನಾಡಿನ ಸಿಎಂ ಪಟ್ಟವೇರಲಿದ್ದಾರೆ ವಿಜಯ್ ?

ಚೆನ್ನೈ: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗುವ ಕ್ಷಣ ಸಮೀಪಿಸಿದೆ. ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ ರಚನೆಯ ಹಕ್ಕು ಮಂಡಿಸಲು ಇಂದು ಚೆನ್ನೈನ ರಾಜಭವನಕ್ಕೆ ಆಗಮಿಸಿದೆ. ಚೊಚ್ಚಲ ವಿಧಾನಸಭಾ ಚುನಾವಣೆಯಲ್ಲೇ 108 ಸ್ಥಾನಗಳನ್ನು ಗೆದ್ದು ಸಂಚಲನ ಮೂಡಿಸಿದ್ದ ಟಿವಿಕೆಗೆ ಇದೀಗ ಮಿತ್ರಪಕ್ಷಗಳ ಬೆಂಬಲದೊಂದಿಗೆ ಒಟ್ಟು 121 ಶಾಸಕರ ಬಲ ದೊರೆತಿದ್ದು, ಸರ್ಕಾರ ರಚನೆ ಬಹುತೇಕ ಖಚಿತವಾಗಿದೆ. ಟಿವಿಕೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ 5 ಶಾಸಕರು, ಭಾರತೀಯ ಕಮ್ಯುನಿಸ್ಟ್ ಪಕ್ಷನ 2 […]

ಭಾರತೀಯ ರೈಲ್ವೆಯಿಂದ ಪ್ರಯಾಣಿಕರಿಗೆ ಸಿಹಿ ಸುದ್ದಿ: ಹೊಸ AI ಆಧಾರಿತ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ!

ನವದೆಹಲಿ: Indian Railways ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಆಗಸ್ಟ್ 2026ರಿಂದ ಹೊಸ ತಲೆಮಾರಿನ ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್ (PRS) ಅನ್ನು ಹಂತ ಹಂತವಾಗಿ ಜಾರಿಗೆ ತರಲು ಸಿದ್ಧವಾಗಿದೆ. ಸುಮಾರು 40 ವರ್ಷಗಳ ಹಳೆಯ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ನವೀಕರಿಸಲಾಗುತ್ತಿದ್ದು, ಇದರ ಮೂಲಕ ವೇಗವಾದ ಟಿಕೆಟ್ ಬುಕ್ಕಿಂಗ್, ಹೆಚ್ಚಿದ ಪಾರದರ್ಶಕತೆ ಹಾಗೂ ಉತ್ತಮ ಪ್ರಯಾಣಿಕ ಸೇವೆ ದೊರೆಯಲಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ರೈಲ್ವೆ ಮೂಲಗಳ ಪ್ರಕಾರ, ಹೊಸ PRS ವ್ಯವಸ್ಥೆ ಒಂದು ನಿಮಿಷಕ್ಕೆ […]