ಮಾಜಿ ಪ್ರಧಾನಿ Dr.Manmohan Singh ನಿಧನ; ಆರ್ಥಿಕ ಸುಧಾರಣೆಯ ಹರಿಕಾರ ಇನ್ನಿಲ್ಲ!

ನವದೆಹಲಿ: ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ವಯೋಸಹಜ ಕಾಯಿಲೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನ ಹೊಂದಿದರು. 92 ವರ್ಷ ವಯಸ್ಸಿನ ಮನಮೋಹನ್ ಸಿಂಗ್ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ರಾತ್ರಿ ಇಹಲೋಕ ತ್ಯಜಿಸಿದರು. 2004ರಿಂದ 2014ರ ವರೆಗೆ ಭಾರತ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಅದಕ್ಕೂ ಮೊದಲು ಇಂದಿರಾ ಗಾಂಧಿ ಪ್ರಧಾನಿ ಆಗಿದ್ದ ಸಂದರ್ಭದಲ್ಲಿ ಆರ್ಥಿಕ ಸಲಹೆಗಾರರಾಗಿ […]
ತಿರುಪತಿ ಪ್ರಸಾದ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ.

ತಿರುಪತಿ: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಧಿಕಾರಿಗಳು ವಾದಿಸಿದ್ದರು. ಟಿಟಿಡಿ ಮಾಜಿ ಮುಖ್ಯಸ್ಥರು ಚಂದ್ರಬಾಬು ನಾಯ್ಡು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಎಚ್ಚರಿಕೆ ನೀಡಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ […]
ಭಾರತದಲ್ಲಿ ಮೊದಲ ‘ಮಂಕಿಪಾಕ್ಸ್’ ಪ್ರಕರಣ ಪತ್ತೆ: ಭಯ ಪಡುವ ಅಗತ್ಯವಿಲ್ಲ; ಕೇಂದ್ರ ಆರೋಗ್ಯ ಸಚಿವಾಲಯ.

ನವದೆಹಲಿ: ಇತ್ತೀಚಿಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಯೋರ್ವನಿಗೆ ‘ಮಂಕಿಪಾಕ್ಸ್ ‘ ತಗುಲಿರುವುದಾಗಿ ಶಂಕಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ರೋಗಿಯನ್ನು ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಆತನ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದೆ. ಮಂಕಿಪಾಕ್ಸ್ ಇದೆಯೇ ಎಂಬುದನ್ನು ತಿಳಿಯಲು ರೋಗಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಶಿಷ್ಟಾಚಾರದ ಪ್ರಕಾರ ಪ್ರಕರಣವನ್ನು ನಿರ್ವಹಿಸಲಾಗುತ್ತಿದೆ ಮತ್ತು ಮಂಕಿಪಾಕ್ಸ್ ಮೂಲ ತಿಳಿಯಲು ಹಾಗೂ ದೇಶದೊಳಗೆ ಅದರ ಪರಿಣಾಮವನ್ನು ನಿರ್ಣಯಿಸಲು ಸಂಪರ್ಕ ಪತ್ತೆ […]
IC 814 ವೆಬ್ ಸೀರೀಸ್ ವಿವಾದ: ತಪ್ಪನ್ನು ಸರಿಪಡಿಸುವುದಾಗಿ ಭಾರತ ಸರ್ಕಾರಕ್ಕೆ Netflix India ಭರವಸೆ.

ನವದೆಹಲಿ: ಒಟಿಟಿ Netflix India “IC 814 ವೆಬ್ ಸೀರೀಸ್” ನ ಕಂಟೆಂಟ್ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ತಪ್ಪನ್ನು ಸರಿಪಡಿಸುವುದಾಗಿ ಭಾರತ ಸರ್ಕಾರಕ್ಕೆ ಭರವಸೆ ನೀಡಿದೆ. IC-814- ದಿ ಕಂದಹಾರ್ ಹೈಜಾಕ್ ಕುರಿತ ವೆಬ್ ಸೀರೀಸ್ ನಲ್ಲಿ ಹೈಜಾಕ್ ಮಾಡಿದವರನ್ನು ಚಿತ್ರಿಸಿದ ರೀತಿ ವಿವಾದಕ್ಕೀಡಾಗಿರುವ ಹಿನ್ನೆಲೆಯಲ್ಲಿ Netflix India ಮುಖ್ಯಸ್ಥರಿಗೆ ಭಾರತ ಸರ್ಕಾರ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದ್ದ Netflix India ಮುಖ್ಯಸ್ಥರು ಕಂಟೆಂಟ್ ನ್ನು ಪರಿಷ್ಕರಿಸುವುದಾಗಿ […]
ಪ್ಯಾರಿಸ್ ಪ್ಯಾರಾಲಿಂಪಿಕ್ಸ್’ನಲ್ಲಿ ಭಾರತಕ್ಕೆ ಐದನೇ ಪದಕ: ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿಸ್.

ಪ್ಯಾರಿಸ್: ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಶೂಟರ್ಗಳು ಉತ್ತಮ ಪ್ರದರ್ಶನ ಮುಂದುವರಿಸಿದ್ದು, ರುಬಿನಾ ಫ್ರಾನ್ಸಿಸ್ ಅವರು ಮಹಿಳೆಯರ ಏರ್ ಪಿಸ್ತೂಲ್ SH1 ಸ್ಪರ್ಧೆಯ ಫೈನಲ್ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಶೂಟಿಂಗ್ನಲ್ಲಿ ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಹಾಗೂ ಒಟ್ಟಾರೆ ಪದಕಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಆ.31 ರಂದು ನಡೆದ ಮಹಿಳೆಯರ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್ನಲ್ಲಿ ರುಬಿನಾ ಒಟ್ಟು 211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. […]