ಭಾರೀ ಮಳೆಗೆ ಭೂಕುಸಿತ; ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತವಾಗುತ್ತಿದೆ. ಇದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬಳು ಸಿಲುಕಿ ಮೃತಪಟ್ಟಿದ್ದಾರೆ. ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತವಾಗಿದೆ. ಭೂಕುಸಿತದಲ್ಲಿ ಸಿಲುಕಿದ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸ್ಥಳದಲ್ಲಿ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳು ಸ್ಥಳದಲ್ಲಿರುವ ಯಾತ್ರಿಗಳ […]
ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ

ನವದೆಹಲಿ: ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಮರಣದಂಡನೆಗೆ ಗುರಿಪಡಿಸಲು ಯೆಮೆನ್ ಜೈಲು ಅಧಿಕಾರಿಗಳು ನಿರ್ಧರಿಸಿದ್ದರು. ಕೇರಳದ ಪಾಲಕ್ಕಾಡ್ ಜಿಲ್ಲೆಯ ನಿಮಿಷಾ ಅವರು ತನ್ನ ಕ್ಲಿನಿಕ್ ಪಾಲುದಾರನಾಗಿದ್ದ ಯೆಮೆನ್ ದೇಶದ ಪ್ರಜೆ ತಲಾಲ್ ಅಬ್ದು ಮಹ್ದಿ ಎಂಬವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. 2017ರಲ್ಲಿ ಕೊಲೆ ಪ್ರಕರಣ ನಡೆದಿತ್ತು. ಯೆಮೆನ್ನ ವಿಚಾರಣಾ ನ್ಯಾಯಾಲಯ 2020ರಲ್ಲಿ ನಿಮಿಷಾ ಅವರಿಗೆ […]
ಐಆರ್ಸಿಟಿಸಿ’ ಯಿಂದ ‘ಶ್ರೀ ರಾಮಾಯಣ ಯಾತ್ರೆ’ ವಿಶೇಷ ರೈಲು ಪ್ರವಾಸ ಆರಂಭ.

ನವದೆಹಲಿ: ಭಾರತೀಯ ರೈಲ್ವೆ ಆಹಾರ ಸರಬರಾಜು ಮತ್ತು ಪ್ರವಾಸೋದ್ಯಮ ನಿಗಮವು (ಐಆರ್ಸಿಟಿಸಿ) ‘ಶ್ರೀ ರಾಮಾಯಣ ಯಾತ್ರೆ’ಯ ವಿಶೇಷ ರೈಲು ಪ್ರವಾಸವನ್ನು ಇದೇ ಜು.25ರಿಂದ ಕೈಗೊಂಡಿದೆ.ಅಯೋಧ್ಯಯಿಂದ ಪ್ರಾರಂಭವಾಗಿ ನಂದಿಗ್ರಾಮ, ಸೀತಾಮರ್ಹಿ, ಜನಕಪುರ, ಬಕ್ಸರ್, ವಾರಾಣಸಿ, ಪ್ರಯಾಗರಾಜ್, ಚಿತ್ರಕೂಟ, ನಾಸಿಕ್, ಹಂಪಿ ಮತ್ತು ರಾಮೇಶ್ವರ ದ್ವೀಪ ಸೇರಿದಂತೆ 17 ದಿನಗಳು ರಾಮನಿಗೆ ಸಂಬಂಧಿಸಿದ ಸುಮಾರು 30 ಸ್ಥಳಗಳನ್ನು ಒಳಗೊಂಡಿರಲಿದೆ.‘ರಾಮಮಂದಿರ ಉದ್ಘಾಟನೆಯ ಬಳಿಕ, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಈ ಸ್ಥಳಗಳಿಗೆ ಭೇಟಿ ನೀಡುವುದರಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರವಾಸೋದ್ಯಮಕ್ಕೆ ಹೆಚ್ಚು ಉತ್ತೇಜನ […]
ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಹುಕೋಟಿ ಹಗರಣ: ನೀರವ್ ಮೋದಿ ಸಹೋದರ ನೇಹಲ್ ಮೋದಿ ಬಂಧನ.

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ಬಿ) ಬಹುಕೋಟಿ ಹಗರಣದ ಪ್ರಮುಖ ಆರೋಪಿ, ದೇಶಭ್ರಷ್ಟ ವಜ್ರ ವ್ಯಾಪಾರಿ ನೀರವ್ ಮೋದಿ ಅವರ ಕಿರಿಯ ಸಹೋದರ ನೇಹಲ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನೇಹಲ್ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಮೆರಿಕಕ್ಕೆ ಜಂಟಿಯಾಗಿ ಮನವಿ ಸಲ್ಲಿಸಿದ್ದವು. ನೇಹಲ್ ಮೋದಿಯನ್ನು ಶುಕ್ರವಾರ ಕಸ್ಟಡಿಗೆ ಪಡೆಯಲಾಗಿದೆ ಎಂದು ಅಮೆರಿಕದ ಅಧಿಕಾರಿಗಳು ಭಾರತಕ್ಕೆ ಮಾಹಿತಿ ನೀಡಿದ್ದಾರೆ. ‘ಈ ಪ್ರಕರಣದ ಮುಂದಿನ ವಿಚಾರಣೆ […]
ಐ ಲವ್ ಯೂ ಹೇಳುವುದು ಭಾವನೆಯ ಅಭಿವ್ಯಕ್ತಿ, ಲೈಂಗಿಕ ಕಿರುಕುಳವಲ್ಲ:ಹೈ ಕೋರ್ಟ್

ಮಹಾರಾಷ್ಟ್ರ: ಐ ಲವ್ ಯೂ ಎಂದು ಹೇಳುವುದು ಭಾವನೆ ಅಭಿವ್ಯಕ್ತಿ. ಈ ಮಾತಿನ ಹಿಂದೆ ಲೈಂಗಿಕ ಉದ್ದೇಶ ಇರುವುದಿಲ್ಲ ಎಂದು ಮುಂಬೈ ಹೈ ಕೋರ್ಟ್ ನ ನಾಗಪುರ ಪೀಠ ಹೇಳಿದೆ. 17 ವರ್ಷದ ಬಾಲಕಿಗೆ 35 ವರ್ಷದ ವ್ಯಕ್ತಿಯೊಬ್ಬ ಐ ಲವ್ ಯೂ ಎನ್ನುವ ಮೂಲಕ ಪ್ರೇಮ ನಿವೇದನೆ ಮಾಡಿದ್ದ ಇದರ ವಿರುದ್ಧ ಬಾಲಕಿ ದೂರು ನೀಡಿದ್ದಳು. ಆರೋಪಿಯ ಮೇಲೆ ಪೊಲೀಸರು ಫೋಕ್ಸೋ ಕೇಸ್ ದಾಖಲಿಸಿದ್ದರು.ಈ ಪ್ರಕರಣವಾಗಿ ಹತ್ತು ವರ್ಷಗಳಾದ ಮೇಲೆ ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ […]