ಕುತೂಹಲಕ್ಕೆ ತೆರೆ ಎಳೆದ ಭಾಜಪ: ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆ

ಭೋಪಾಲ್: ಮೋಹನ್ ಯಾದವ್ ಅವರು ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷವು ಘೋಷಿಸಿದ್ದು, ಹಲವು ದಿನಗಳ ಊಹಾಪೋಹಗಳಿಗೆ ತೆರೆ ಎಳೆದಿದೆ. ಉಜ್ಜಯಿನಿಯಿಂದ ಮೂರು ಬಾರಿ ಶಾಸಕರಾಗಿದ್ದ 58 ವರ್ಷದ ಯಾದವ್ ಅವರು ಶಿವರಾಜ್ ಸಿಂಗ್ ಚೌಹಾಣ್ ಅವರ ಸಚಿವ ಸಂಪುಟದ ಭಾಗವಾಗಿದ್ದರು. ಜಗದೀಶ್ ದೇವದಾ ಮತ್ತು ರಾಜೇಂದ್ರ ಶುಕ್ಲಾ ಉಪಮುಖ್ಯಮಂತ್ರಿಗಳಾಗಿ ಹಾಗೂ ಮಾಜಿ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. “ನಾನು ಪಕ್ಷದ ಸಣ್ಣ ಕಾರ್ಯಕರ್ತ, ನಿಮ್ಮೆಲ್ಲರಿಗೂ, ರಾಜ್ಯ ನಾಯಕತ್ವ ಮತ್ತು […]

ಗಾಜಾದಲ್ಲಿ ಹಸಿವಿನಿಂದ ಬಳಲುತ್ತಿರುವ ಶೇಕಡ 90ರಷ್ಟು ಜನ : 7 ಸಾವಿರ ಹಮಾಸ್ ಉಗ್ರರ ಹತ್ಯೆ

ಖಾನ್​ ಯೂನಿಸ್ ​(ಗಾಜಾ): ದಕ್ಷಿಣ ಗಾಜಾದ ಖಾನ್ ಯೂನಿಸ್ ನಗರದಿಂದ ಈಜಿಪ್ಟ್ ಗಡಿ ನಗರವಾದ ರಫಾಗೆ ಹೋಗುವ ರಸ್ತೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲಿ ಬಾಂಬ್ ದಾಳಿ ನಡೆಸಿದೆ ಎಂದು ಹಮಾಸ್ ಉಗ್ರಗಾಮಿ ಗುಂಪು ಹೇಳಿದೆ.ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆ ನಿರ್ಣಯವನ್ನು ಅಮೆರಿಕ ನಿರ್ಬಂಧಿಸಿದ ನಂತರ ಇಸ್ರೇಲಿ ಪಡೆಗಳು ಗಾಜಾದ ಮೇಲೆ ದಾಳಿಯನ್ನು ತೀವ್ರಗೊಳಿಸಿದವು. ಹಮಾಸ್ ಅನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿಯೊಂದಿಗೆ ಇಸ್ರೇಲ್ ದಕ್ಷಿಣ ಗಾಜಾದ ಮೇಲೆ ತನ್ನ ದಾಳಿಯನ್ನು ಹೆಚ್ಚಿಸಿದೆ. ಹಮಾಸ್ ನಿರ್ಮೂಲನೆಯೇ ನಮ್ಮ ಗುರಿ: […]

18 ಶೇಖರಣಾ ಘಟಕಗಳು ಬೆಂಕಿಗಾಹುತಿ: ತೈಲ ಸಂಸ್ಕರಣ ಸ್ಥಳದಲ್ಲಿ ಭಾರಿ ಸ್ಫೋಟ

ಟೆಹ್ರಾನ್(ಇರಾನ್)​: ಪೂರ್ವ ಇರಾನ್‌ನ ಬಿರ್ಜಾಂಡ್ ವಿಶೇಷ ಆರ್ಥಿಕ ವಲಯದಲ್ಲಿರುವ ತೈಲ ಸಂಸ್ಕರಣಾ ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿದೆ.ಈಗ ಸಂಸ್ಕರಣಾಗಾರದ ಎಲ್ಲಾ 18 ಶೇಖರಣಾ ಘಟಕಗಳು ಬೆಂಕಿಗೆ ಆಹುತಿಯಾಗಿವೆ. ನಿರಂತರ ಸ್ಫೋಟದಿಂದಾಗಿ ರಕ್ಷಣಾ ತಂಡಗಳು ತಾತ್ಕಾಲಿಕವಾಗಿ ಸ್ಥಳದಿಂದ ದೂರ ಸರಿದಿವೆ.ಇರಾನ್‌ನ ತೈಲ ಸಂಸ್ಕರಣ ಘಟಕದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕ ಮನೆ ಮಾಡಿದೆ. ಸ್ಫೋಟದ ತೀವ್ರತೆ ಹೆಚ್ಚಾಗ್ತಿದ್ದು, ರಕ್ಷಣಾ ತಂಡಗಳು ಸ್ಥಳದಿಂದ ಹೊರಬಂದಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇತ್ತೀಚಿನ ದಿನಗಳಲ್ಲಿ ಇರಾನ್ ಸ್ಥಾವರಗಳಲ್ಲಿ ಸ್ಫೋಟಗಳು ಮತ್ತು […]

ಸಿಯಾಚಿನ್ ಗ್ಲೇಸಿಯರ್‌ನ 15 ಸಾವಿರ ಅಡಿ ಎತ್ತರದಲ್ಲಿ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿಯಾಗಿ ನಿಯೋಜನೆಗೊಂಡ ಕ್ಯಾ. ಫಾತಿಮಾ ವಾಸಿಮ್

ನವದೆಹಲಿ: ಉತ್ತರ ಭಾರತದ ಸಿಯಾಚಿನ್ ಗ್ಲೇಸಿಯರ್ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾಗಿದೆ.ಇದು ಇಂಡೋ-ಪಾಕ್ ನಿಯಂತ್ರಣ ರೇಖೆಯ ಸಮೀಪದಲ್ಲಿದೆ. ಇದರ ಎತ್ತರ 20,062 ಅಡಿ. ಭಾರತದ ಅತಿದೊಡ್ಡ ಮತ್ತು ವಿಶ್ವದ ಎರಡನೇ ಅತಿದೊಡ್ಡ ಹಿಮನದಿ ಇಲ್ಲಿ ಹರಿಯುತ್ತದೆ. ಈಗ ದೇಶದ ಹೆಣ್ಣು ಮಕ್ಕಳನ್ನೂ ಸಿಯಾಚಿನ್‌ನಲ್ಲಿ ನಿಯೋಜಿಸಲಾಗುತ್ತಿದೆ. ಕ್ಯಾಪ್ಟನ್ ಫಾತಿಮಾ ವಾಸಿಂ ಅವರು ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಕಾರ್ಯಾಚರಣೆ ಹುದ್ದೆಗೆ ನೇಮಕಗೊಂಡ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಹಿಳಾ ಕ್ಯಾಪ್ಟನ್ ಫಾತಿಮಾ ವಾಸಿಂ ಅವರು ಸಿಯಾಚಿನ್ ಗ್ಲೇಸಿಯರ್‌ನಲ್ಲಿ […]

ಛತ್ತೀಸ್‌ಗಢದ ಮೊದಲ ಬುಡಕಟ್ಟು ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಆಯ್ಕೆ: ಮಧ್ಯಪ್ರದೇಶ ಹಾಗೂ ರಾಜಸ್ಥಾನ ಮು.ಮಂ. ಘೋಷಣೆ ಶೀಘ್ರ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ವೀಕ್ಷಕರು ಮಧ್ಯಪ್ರದೇಶದ ಭೋಪಾಲ್‌ಗೆ ತಲುಪಿದ್ದು, ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿನ ನಂತರ ರಾಜ್ಯಕ್ಕೆ ಮುಖ್ಯಮಂತ್ರಿ ಹೆಸರನ್ನು ನಿರ್ಧರಿಸಲು ಸಭೆ ನಡೆಯಲಿದೆ. ರಾಜಸ್ಥಾನ ಸಿಎಂ ಬಗ್ಗೆಯೂ ಕುತೂಹಲ ಮುಂದುವರಿದಿದ್ದು, ನಾಳೆ ಬಿಜೆಪಿ ಸಭೆ ನಡೆಯಲಿದೆ. ಮಧ್ಯಪ್ರದೇಶದ ಬಿಜೆಪಿ ವೀಕ್ಷಕರು, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಮತ್ತು ಬಿಜೆಪಿ ಸಂಸದ ಕೆ ಲಕ್ಷ್ಮಣ್ ಅವರು ಭೋಪಾಲ್‌ನಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದರು. ಅವರನ್ನು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬರಮಾಡಿಕೊಂಡರು. ರಕ್ಷಣಾ ಸಚಿವ […]