ಕಂಟೈನರ್ ಹಡಗು ಬಡಿದು ಅಮೇರಿಕಾದ ಪ್ರಮುಖ ಸೇತುವೆ ಕುಸಿತ: ಹಲವು ವಾಹನಗಳು ನೀರು ಪಾಲು

ವಾಷಿಂಗ್ಟನ್: ಕಂಟೈನರ್ ಹಡಗೊಂದು ಡಿಕ್ಕಿ ಹೊಡೆದದ್ದರಿಂದ ಅಮೆರಿಕದ ಬಾಲ್ಟಿಮೋರ್ ನಗರದ ಪ್ರಮುಖ ಸೇತುವೆ ಮಂಗಳವಾರ ಕುಸಿದು ಬಿದ್ದಿದೆ. ಈ ವೇಳೆ ಸೇತುವೆಯಲ್ಲಿದ್ದ ವಾಹನಗಳು ಕೂಡಾ ನೀರಿಗೆ ಬಿದ್ದಿವೆ. ನಾಟಕೀಯ ಸಿಸಿಟಿವಿ ದೃಶ್ಯಾವಳಿಯು ಕಂಟೇನರ್ ಹಡಗು ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಯ ಬುಡಕ್ಕೆ ಬಡಿದು, ಸೇತುವೆಯು ಪಾಲಾಪ್ಸ್ಕೋ ನದಿಯ ಪಾಲಾಗುತ್ತಿರುವುದನ್ನು ತೋರಿಸುತ್ತಿದೆ. ಸೇತುವೆ ನದಿಗೆ ಕುಸಿದಿದ್ದು, ಸುಮಾರು 20 ಮಂದಿ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಬಾಲ್ಟಿಮೋರ್ ಅಗ್ನಿಶಾಮಕ ಇಲಾಖೆಯ ಕೆವಿನ್ ಕಾರ್ಟ್‌ರೈಟ್ ಪ್ರಕಾರ ಇಡೀ ಸೇತುವೆ ಕುಸಿದಿದೆ […]

ISRO ದಿಂದ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಜಾಗೃತಿ ತರಬೇತಿ: ಏಪ್ರಿಲ್ 8 ರಿಂದ ನೋಂದಾವಣೆ

ಬೆಂಗಳೂರು: Space Science and Technology Awareness Training (START) – 2024(ಆನ್ ಲೈನ್ ಮಾದರಿ) ಅನ್ನು ಘೋಷಿಸಲಾಗಿದ್ದು, ವಿದ್ಯಾರ್ಥಿಗಳು https://jigyasa.iirs.gov.in/START ನಲ್ಲಿ ನೋಂದಾಯಿಸಿಕೊಳ್ಳಬಹುದು. ಏ. 15 ರಿಂದ ಮೇ.3 ರವರೆಗೆ ತರಬೇತಿ ನಡೆಯಲಿದೆ. ಥೀಮ್: ಸೌರ ಮಂಡಲದ ಪರಿಶೋಧನೆ ನೋಡಲ್ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಆಸಕ್ತರಾಗಿರುವ ಶೈಕ್ಷಣಿಕ ಸಂಸ್ಥೆಗಳು ಏಪ್ರಿಲ್ 2, 2024 ರೊಳಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಏಪ್ರಿಲ್ 8, 2024 ರಿಂದ ನೋಂದಾಯಿಸಿಕೊಳ್ಳಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ತಿಳಿಸಿದೆ.

ಪಾಕ್ ಆಕ್ರಮಿತ ಕಾಶ್ಮೀರ ನಮ್ಮದು, ಅಲ್ಲಿನ ಜನರೇ ಭಾರತದೊಂದಿಗೆ ವಿಲೀನಗೊಳ್ಳುವ ಬೇಡಿಕೆ ಇಟ್ಟಿದ್ದಾರೆ: ರಾಜನಾಥ್ ಸಿಂಗ್

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದ (POK) ಜನರೇ ಭಾರತದೊಂದಿಗೆ ವಿಲೀನಗೊಳ್ಳುವ ಬೇಡಿಕೆಯನ್ನು ಎತ್ತುತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajanath Singh) ಭಾನುವಾರ ಹೇಳಿದ್ದಾರೆ. ಪಿಒಕೆ ಜನರು ಭಾರತದೊಂದಿಗೆ ವಿಲೀನಗೊಳ್ಳುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ಬಗ್ಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಇತ್ತೀಚಿನ ಟೀಕೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜನಾಥ್ ಸಿಂಗ್, ” ಅವರು ಎಂದಾದರೂ ಕಾಶ್ಮೀರವನ್ನು ಪಡೆಯಬಹುದೆ? ಅವರು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಚಿಂತಿಸಬೇಕು. ದಾಳಿ ಮಾಡುವ […]

ಮಂಡಿ ಕ್ಷೇತ್ರದಿಂದ ಕಂಗನಾ ರಣಾವತ್, ಮೀರತ್ ನಿಂದ ಅರುಣ್ ಗೋವಿಲ್ ಕಣಕ್ಕಿಳಿಸಿದ ಬಿಜೆಪಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯ ಇತ್ತೀಚಿನ ಅಭ್ಯರ್ಥಿಗಳ ಪಟ್ಟಿಯಲ್ಲಿ ಜನಪ್ರಿಯ ನಟರಾದ ಕಂಗನಾ ರಣಾವತ್ ಮತ್ತು ಅರುಣ್ ಗೋವಿಲ್ ಕಾಣಿಸಿಕೊಂಡಿದ್ದಾರೆ. ಜನಪ್ರಿಯ ಟಿವಿ ಧಾರಾವಾಹಿ ‘ರಾಮಾಯಣ’ದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ಗೋವಿಲ್ ಅವರು ಮೀರತ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಮತ್ತು ಬಾಲಿವುಡ್ ನಟಿ ಕಂಗನಾ ತಮ್ಮ ತವರು ಹಿಮಾಚಲ ಪ್ರದೇಶದ ಮಂಡಿಯಿಂದ ಸ್ಪರ್ಧಿಸಲಿದ್ದಾರೆ. 37 ವರ್ಷದ ನಟಿ, ತಮ್ಮನ್ನು ಮಂಡಿಯಿಂದ ಲೋಕಸಭೆಯ ಅಭ್ಯರ್ಥಿಯಾಗಿ ಘೋಷಿಸಿದ್ದಕ್ಕಾಗಿ ಪಕ್ಷಕ್ಕೆ ಧನ್ಯವಾದ ಅರ್ಪಿಸಿದರು. ಪ್ರಸ್ತುತ ಕ್ಷೇತ್ರವನ್ನು ಕಾಂಗ್ರೆಸ್ ನಾಯಕಿ ಪ್ರತಿಭಾ […]

ರಷ್ಯಾದಲ್ಲಿ ಐಸಿಸ್ ಭಯೋತ್ಪಾದಕ ದಾಳಿ: ಕನಿಷ್ಠ 60 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ಮಾಸ್ಕೋ: ಇಲ್ಲಿನ ಕ್ರೋಕಸ್ ಸಿಟಿ ಹಾಲ್‌ನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮವೊಂದಕ್ಕೆ ನುಗ್ಗಿದ ಅಪರಿಚಿತ ಶಸ್ತ್ರಧಾರಿಗಳ ಗುಂಪೊಂದು ಏಕಾಏಕಿ ಗುಂಡಿನ ಮಳೆಗರೆದಿದ್ದು, ಈ ಘಟನೆಯಲ್ಲಿ ಕನಿಷ್ಟ 60 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, 100 ಕ್ಕೂ ಅಧಿಕ ಮಂದಿ ತೀವ್ರ ಗಾಯಗೊಂಡಿದ್ದಾರೆ. ಐದು ಮಕ್ಕಳು ಸೇರಿದಂತೆ 115 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ರಷ್ಯಾದ ಆರೋಗ್ಯ ಸಚಿವ ಮಿಖಾಯಿಲ್ ಮುರಾಶ್ಕೊ ಹೇಳಿದ್ದಾರೆ. 110 ವಯಸ್ಕ ರೋಗಿಗಳಲ್ಲಿ 60 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಅವರು […]