ಟೀಮ್ ಇಂಡಿಯಾದ ಕೋಚ್ ದ್ರಾವಿಡ್ ನಿಂದ ಚಾಮುಂಡಿ ದೇವಿಯ ದರ್ಶನ

ಟೀಮ್ ಇಂಡಿಯಾದ ಕೋಚ್‌ ರಾಹುಲ್ ದ್ರಾವಿಡ್ ಸದ್ಯ ರಜೆಯ ಮೂಡ್‌ನಲ್ಲಿದ್ದಾರೆ. ಸದ್ಯ ಅವರು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಗಂಣದಲ್ಲಿ ಮೈಸೂರ ವಲಯ ಆಯೋಜಿಸಿದ್ದ ಕೂಚ್ ಬೆಹಾರ್‌ ರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಮಗ ಸುಮೀತ್ ದ್ರಾವಿಡ್‌ ಆಟವನ್ನು ಕಣ್ಣು ತುಂಬಿಕೊಳ್ಳಲು ಆಗಮಿಸಿದ್ದರು. ಭಾರತ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಲಿದೆ.ಟೀಮ್ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್‌ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ದೇವಿಯ ದರ್ಶನ ಪಡೆದಿದ್ದಾರೆ. ದೇವಿಯ ದರ್ಶನದ ವೇಳೆ ರಾಹುಲ್‌ಗೆ ಪತ್ನಿ […]

ಚಂದ್ರಯಾನ : ನಾಸಾದ ಮಾನವಸಹಿತ ಚಂದ್ರಯಾನ 2027ಕ್ಕೆ ಮುಂದೂಡಿಕೆ

ವಾಶಿಂಗ್ಟನ್ : ಬಾಹ್ಯಾಕಾಶ ಪರಿಶೋಧನೆಯಲ್ಲಿ ಅಮೆರಿಕದ ನಾಯಕತ್ವವನ್ನು ಕಾಪಾಡಿಕೊಳ್ಳಲು ಮತ್ತು 2025 ರ ವೇಳೆಗೆ ಮಂಗಳ ಗ್ರಹದಲ್ಲಿ ಭವಿಷ್ಯದ ಕಾರ್ಯಾಚರಣೆಗಳಿಗೆ ತಯಾರಿ ನಡೆಸಲು ಚಂದ್ರನ ಮೇಲೆ ಮತ್ತೊಮ್ಮೆ ಮಾನವರನ್ನು ಕಳುಹಿಸುವ ಗುರಿಯನ್ನು ನಾಸಾ ಹೊಂದಿದೆ. ಆದರೆ ಅದರ ಮಾನವ ಲ್ಯಾಂಡಿಂಗ್ ವ್ಯವಸ್ಥೆ ಮತ್ತು ಸ್ಪೇಸ್ ಸೂಟ್ ವಿನ್ಯಾಸದಲ್ಲಿ ಹಲವಾರು ಸಮಸ್ಯೆಗಳನ್ನು ಜಿಎಒ ಪತ್ತೆ ಮಾಡಿದ್ದು, ಇವುಗಳನ್ನು 2027 ಕ್ಕಿಂತ ಮೊದಲು ಪರಿಹರಿಸಲು ಸಾಧ್ಯವಾಗದು ಎನ್ನಲಾಗಿದೆ. 1972ರ ನಂತರ ಮತ್ತೊಮ್ಮೆ ಚಂದ್ರನಲ್ಲಿಗೆ ಮಾನವರನ್ನು ಕಳುಹಿಸಲು ಯೋಜಿಸಲಾದ ನಾಸಾದ ಆರ್ಟೆಮಿಸ್-3 […]

ಕೇಂದ್ರಕ್ಕೆ ಭರ್ಜರಿ ತೆರಿಗೆ ಆದಾಯ: ನವೆಂಬರ್ ನಲ್ಲಿ 1.68 ಲಕ್ಷ ಕೋಟಿ ರೂ. GST ಸಂಗ್ರಹ

ನವದೆಹಲಿ:ಇತ್ತೀಚಿನ ಜಿಎಸ್ಟಿ ದತ್ತಾಂಶವು 2023-24ರಲ್ಲಿ ಸರಾಸರಿ ಮಾಸಿಕ ಸಂಗ್ರಹವನ್ನು 1.67 ಲಕ್ಷ ಕೋಟಿ ರೂ.ಗೆ ಕೊಂಡೊಯ್ಯುತ್ತದೆ. ಮಾಸಿಕ ಜಿಎಸ್ಟಿ ಸಂಗ್ರಹವು ವರ್ಷಗಳಲ್ಲಿ ಹೆಚ್ಚಾಗಿದೆ. 2017-18ರಲ್ಲಿ ತಿಂಗಳಿಗೆ ಸರಾಸರಿ 1 ಲಕ್ಷ ಕೋಟಿ ರೂ.ಗಿಂತ ಕಡಿಮೆ ಇದ್ದ ಸಂಗ್ರಹವು 2020-21ರ ಸಾಂಕ್ರಾಮಿಕ ಪೀಡಿತ ನಂತರ 2022-23ರಲ್ಲಿ ಸರಾಸರಿ 1.51 ಲಕ್ಷ ಕೋಟಿ ರೂ.ಗೆ ಏರಿದೆ. ಇದು ಸತತ ಒಂಬತ್ತನೇ ತಿಂಗಳು ಮಾಸಿಕ ಜಿಎಸ್ಟಿ ಸಂಗ್ರಹವು 1.5 ಲಕ್ಷ ಕೋಟಿ ರೂ.ಗಿಂತ ಹೆಚ್ಚಾಗಿದೆ. ಸರ್ಕಾರದ ಸರಕು ಮತ್ತು ಸೇವಾ ತೆರಿಗೆ […]

ಪೂರ್ವ ಕರಾವಳಿಯತ್ತ ಮುನ್ನುಗ್ಗುತ್ತಿರುವ ‘ಮೈಚಾಂಗ್’ ಚಂಡಮಾರುತ; ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಸಾಧ್ಯತೆ

ಚೆನ್ನೈ: ‘ಮೈಚಾಂಗ್’ ಚಂಡಮಾರುತದ ಪರಿಣಾಮ ತಮಿಳುನಾಡು ಮತ್ತು ಪುದುಚೇರಿಯ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪುದುಚೇರಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಡಿ.4 ರಂದು ಕರೈಕಾಲ್ ಮತ್ತು ಯಾಣಂ ಪ್ರದೇಶಗಳಲ್ಲಿ ಶಾಲಿಗಳಿಗೆ ರಜೆ ಘೋಷಿಸಲಾಗಿದೆ. ತಮಿಳುನಾಡಿನ ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ಚೆನ್ನೈ, ತೆಂಕಶಿ, ತೂತುಕುಡಿ, ತಿರುನಲ್ವೇಲಿ, ಕನ್ನಿಯಕುಮಾರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ, ವಿಲ್ಲುಪುರಂ, ರಾಣಿಪೇಟ್, ಕಡಲೂರು, ತಂಜಾವೂರು, ನಾಗಪಟ್ಟಣಂ, ಮೈಲಾಡುತುರೈ, ತಿರುವರೂರ್, ರಾಮನಾಥಪುರಂ, ತಿರುಪುರ್, […]

ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ : 2028ರಲ್ಲಿ ಆಯೋಜನೆಯ ಪ್ರಸ್ತಾಪ ಮಾಡಿದ ಭಾರತ

ದುಬೈ: ಜನರ ಸಹಭಾಗಿತ್ವದ ಮೂಲಕ ಕಾರ್ಬನ್ ಸಿಂಕ್‌ಗಳನ್ನು ರಚಿಸುವುದರ ಮೇಲೆ ಕೇಂದ್ರೀಕರಿಸುವ ಗ್ರೀನ್ ಕ್ರೆಡಿಟ್ ಇನಿಶಿಯೇಟಿವ್​ ಪ್ರಾರಂಭಿಸಲಾಗುತ್ತದೆ ಎಂದು ಪ್ರಧಾನಿ ತಿಳಿಸಿದರು.2028ರಲ್ಲಿ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ಅಥವಾ ಕಾಪ್​33 (COP-33) ಸಮ್ಮೇಳನವನ್ನು ಭಾರತದಲ್ಲಿ ಆಯೋಜಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರಸ್ತಾಪಿಸಿದ್ದಾರೆ. ಭಾರತದಲ್ಲಿ 2028ರ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ಅಥವಾ ಕಾಪ್​33 (COP-33) ಸಮ್ಮೇಳನವನ್ನು ಆಯೋಜಿಸುವ ಕುರಿತು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. ದುಬೈನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನದಲ್ಲಿ ವಿವಿಧ ರಾಷ್ಟ್ರಗಳ ನಾಯಕರು ಮತ್ತು ಸರ್ಕಾರಗಳ […]