ಕಾಂಗ್ರೆಸ್​​ನಿಂದ ಪೊಲೀಸರಿಗೆ ದೂರು: ರಾಹುಲ್ ಗಾಂಧಿ ವಿರುದ್ಧ “ಆಕ್ಷೇಪಾರ್ಹ” ಪೋಸ್ಟ್‌

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರೊಬ್ಬರು ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್​ ಮುಖಂಡರೊಬ್ಬರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ರಾಜಸ್ಥಾನದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಕಾರ್ಮಿಕರ ರಕ್ಷಣಾ ಕಾರ್ಯ ಸ್ಥಗಿತ : ಉತ್ತರಕಾಶಿ: ಮತ್ತೊಂದು ತಾಂತ್ರಿಕ ದೋಷ

ಉತ್ತರಕಾಶಿ (ಉತ್ತರಾಖಂಡ): ಗುರುವಾರ ರಾತ್ರಿ ತಾಂತ್ರಿಕ ದೋಷ ಕಾಣಿಸಿಕೊಂಡು ಹಲವು ಗಂಟೆಗಳ ಕಾಲ ಸ್ಥಗಿತಗೊಂಡಿದ್ದ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿಕೊಂಡಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಕ್ಕೆ ತಂಡ ತಯಾರಿ ಮಾಡಿಕೊಂಡಿತ್ತು. ಆದರೆ ಡ್ರಿಲ್ಲಿಂಗ್​ ಪ್ರಾರಂಭಿಸುವ ಹೊತ್ತಿಗೆ ಮತ್ತೆ ಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.ದುರಸ್ತಿಗೊಂಡಿದ್ದ ಅಗರ್​ ಯಂತ್ರದಲ್ಲಿ ಇದೀಗ ಮತ್ತೊಮ್ಮೆ ತಾಂತ್ರಿಕ ದೋಷ ಎದುರಾಗಿದ್ದು, ಡ್ರಿಲ್ಲಿಂಗ್​ ಅನ್ನು ಸ್ಥಗಿತಗೊಳಿಸಿ, ಯಂತ್ರವನ್ನು ಹೊರತರಲಾಗುತ್ತಿದೆ.ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಾಮಿ, ಕಾರ್ಯಾಚರಣೆಯನ್ನು ಪರಿಶೀಲಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಕೊನೆಯ ಹಂತವನ್ನು ತ್ವರಿತ ಗತಿಯಲ್ಲಿ ಹಾಗೂ ಸಂಪೂರ್ಣ […]

ನೇಪಾಳದಲ್ಲಿ ರಾಜಪ್ರಭುತ್ವವನ್ನು ಮರುಸ್ಥಾಪಿಸುವಂತೆ ಪ್ರತಿಭಟನಾಕಾರರಿಂದ ಪ್ರತಿಭಟನೆ; ಬೀದಿಯಲ್ಲಿ ಗುಂಪು ಘರ್ಷಣೆ

ಕಠ್ಮಂಡು: ರಾಜಪ್ರಭುತ್ವವನ್ನು ಮರುಸ್ಥಾಪಿಸುವ ಮತ್ತು ‘ವೆಚ್ಚದ ಒಕ್ಕೂಟ ವ್ಯವಸ್ಥೆಯನ್ನು’ ರದ್ದುಪಡಿಸುವ ಪರವಾಗಿ ನೇಪಾಳದಲ್ಲಿ ಪ್ರತಿಭಟನೆಗಳು ಪ್ರಾರಂಭವಾಗಿವೆ. ಉದ್ಯಮಿ ಮತ್ತು ಮಾಜಿ ಮಾವೋವಾದಿ ಕಾರ್ಯಕರ್ತ ದುರ್ಗಾ ಪ್ರಸಾಯಿ ನೇತೃತ್ವದಲ್ಲಿ ರಾಜಪ್ರಭುತ್ವದ ಪರ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಬೀದಿಗಿಳಿದಿದ್ದಾರೆ. ಇದರಿಂದ ಪೊಲೀಸರು ಮತ್ತು ಪ್ರತಿಭಟನಾ ಗುಂಪುಗಳ ಮಧ್ಯೆ ಸಂಘರ್ಷ ಉಂಟಾಗಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದಾರೆ. ಸಂಘರ್ಷ ತಾರಕ್ಕೇರದಂತೆ ನೇಪಾಳ ಸೇನೆಯನ್ನೂ ಕಾಯ್ದಿರಿಸಲಾಗಿದೆ. ಆದಾಗ್ಯೂ, ಸೇನೆಯನ್ನು ಬಳಸುವ ಅಗತ್ಯ ಬಂದಿಲ್ಲ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿ […]

ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧರಿಗೆ ಅಂತಿಮ ನಮನ ಸಲ್ಲಿಕೆ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮನಾದ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಅವರ ಪಾರ್ಥಿವ ಶರೀರವನ್ನು ಇಂದು ಸಂಜೆ ಬೆಂಗಳೂರಿಗೆ ಕರೆತರಲಾಗುವುದು ಎಂದು ರಕ್ಷಣಾ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದಿದ್ದ ಗುಂಡಿನ ಚಕಮಕಿಯಲ್ಲಿ 66RR ಬೆಟಾಲಿಯನ್ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರು ಹುತಾತ್ಮರಾಗಿದ್ದಾರೆ. ತಮ್ಮ ಏಕೈಕ ಪುತ್ರನ ಸಾವಿನಿಂದಾಗಿ ಆಹತರಾಗಿರುವ ತಂದೆ ವೆಂಕಟೇಶ್ ಮತ್ತು ತಾಯಿ […]

ನಟ ‘ಪ್ರಕಾಶ್ ರಾಜ್’ಗೆ ED ಸಮನ್ಸ್: ಪ್ರಣವ್ ಜ್ಯುವೆಲ್ಲರ್ಸ್ ಅಕ್ರಮ ಹಣ ವರ್ಗಾವಣೆ ಪ್ರಕರಣ

ನವದೆಹಲಿ : ಖ್ಯಾತ ನಟ ಪ್ರಕಾಶ್ ರಾಜ್ ಅವರು ಪ್ರಣವ್ ಜ್ಯುವೆಲರ್ಸ್ ಜಾಹೀರಾತು ನೀಡುತ್ತಿದ್ದರು. ಈಗ ಈ ಪ್ರಕರಣದಲ್ಲಿ ಪ್ರಕಾಶ್ ರಾಜ್ ಅವರನ್ನೂ ವಿಚಾರಣೆಗೆ ಒಳಪಡಿಸಬಹುದು. ಸಧ್ಯ ಇಡಿ ಖ್ಯಾತ ನಟನಿಗೆ ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಇಡಿ ಮೂಲಗಳ ಪ್ರಕಾರ, ತಮಿಳುನಾಡಿನ ತಿರುಚ್ಚಿಯ ಪ್ರಸಿದ್ಧ ಪ್ರಣವ್ ಜ್ಯುವೆಲ್ಲರ್ಸ್‌ ಮೇಲೆ ಪಿಎಂಎಲ್‌ಎ ಅಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ, ಅಂತಹ ಹಲವು ದಾಖಲೆಗಳು ಪತ್ತೆಯಾಗಿದ್ದು, ಸುಮಾರು 23 ಲಕ್ಷ 70 ಸಾವಿರ ಮೌಲ್ಯದ ಅನುಮಾನಾಸ್ಪದ ವಹಿವಾಟಿನ ಬಗ್ಗೆ […]