ಇಸ್ರೋ : ಚಂದ್ರನ ಕಕ್ಷೆಯಿಂದ ಭೂ ಕಕ್ಷೆಗೆ ಮರಳಿದ ಚಂದ್ರಯಾನ-3ರ ಪ್ರೊಪಲ್ಷನ್ ಮಾಡ್ಯೂಲ್

ನವದೆಹಲಿ: ಚಂದ್ರನ ಕಕ್ಷೆಯಲ್ಲಿ ಗಿರಕಿ ಹೊಡೆಯುತ್ತಿದ್ದ ಚಂದ್ರಯಾನ-3 ರ ಪ್ರೊಪಲ್ಷನ್ ಮಾಡ್ಯೂಲ್ ಅನ್ನು ಭೂಕಕ್ಷೆಗೆ ಸ್ಥಳಾಂತರಿಸುವ ವಿಶಿಷ್ಟ ಪ್ರಯೋಗದಲ್ಲಿ ಯಶಸ್ವಿಯಾಗಿದೆ.ಚಂದ್ರಯಾನ-3 ಯೋಜನೆಯಲ್ಲಿನ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಸಿ ಬಾಹ್ಯಾಕಾಶ ಸಂಶೋಧನೆಗಳಲ್ಲಿ ಚರಿತ್ರೆ ಸೃಷ್ಟಿಸಿದ್ದ ಇಸ್ರೋ, ಇದೀಗ ಮತ್ತೊಂದು ಮಹತ್ವದ ಸಾಧನೆ ಮಾಡಿದೆ.ಚಂದ್ರನ ಸುತ್ತ ಕಾರ್ಯಾಚರಣೆ ನಡೆಸುತ್ತಿದ್ದ ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಪ್ರೊಪಲ್ಷನ್ ಮಾಡ್ಯೂಲ್ ಯಶಸ್ವಿಯಾಗಿ ಭೂಮಿಯ ಕಕ್ಷೆಗೆ ಮರಳಿದೆ. ಮಾಡ್ಯೂಲ್ನಲ್ಲಿ ಹೆಚ್ಚುವರಿ ಇಂಧನ: ಚಂದ್ರಯಾನ-3ರ ಎಲ್ಲ ಯೋಜಿತ ಉದ್ದೇಶಗಳು ಸಂಪೂರ್ಣವಾಗಿ ಯಶಸ್ಸು […]
2015ರ ಬಳಿಕ ಭೀಕರ ಮಳೆ ಕಂಡ ತಮಿಳುನಾಡು, ವಿಮಾನ ಸೇವೆ ಪುನಾರಂಭ : ಇಳಿದ ಮಿಚೌಂಗ್ ಅಬ್ಬರ

ಚೆನ್ನೈ (ತಮಿಳುನಾಡು): ಕೆಲ ನದಿಗಳು ಉಕ್ಕಿ ಹರಿಯುತ್ತಿದ್ದು, ವಿಮಾನ ಸಂಚಾರ ಪುನಾರಂಭವಾಗಿದೆ. 2015 ರ ಬಳಿಕ ದೊಡ್ಡ ಮಳೆಯನ್ನು ರಾಜ್ಯ ಕಂಡಿದೆ ಎಂದು ಸರ್ಕಾರ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿದ್ದ ಮಿಚೌಂಗ್ ಚಂಡಮಾರುತ ಅಬ್ಬರಿಸಿ ಚೆನ್ನೈನ ವಿವಿಧ ಭಾಗಗಳಲ್ಲಿ ಭಾರಿ ಮಳೆ ಸುರಿಸಿ ಇದೀಗ ಶಾಂತವಾಗಿದೆ. ತಮಿಳುನಾಡಿನಲ್ಲಿ ಅಬ್ಬರಿಸಿದ ಮಿಚೌಂಗ್ ಚಂಡಮಾರುತದ ಅಬ್ಬರ ಇಳಿದಿದೆ. ಸ್ಥಗಿತಗೊಂಡಿದ್ದ ವಿಮಾನ ಸೇವೆ ಪುನಾರಂಭಿಸಲಾಗಿದೆ. 2015 ರ ಬಳಿಕ ದೊಡ್ಡ ಮಳೆ: ರಾಜ್ಯದಲ್ಲಿ ಈಗ ಬಿದ್ದಿರುವ ಮಳೆ 2015 ರ […]
ಆದಿತ್ಯ ಎಲ್1 : ಶೀಘ್ರದಲ್ಲೇ ಸೌರ ನೇರಳಾತೀತ ಇಮೇಜಿಂಗ್ ಟೆಲಿಸ್ಕೋಪ್ನಿಂದ ಚಿತ್ರಗಳನ್ನು ಕಳುಹಿಸಲಿದೆ ಎಂದ ವಿಜ್ಞಾನಿ ತ್ರಿಪಾಠಿ

ಪ್ರಯಾಗರಾಜ್ (ಉತ್ತರ ಪ್ರದೇಶ): ವಿಚಾರ ಸಂಕಿರಣದಲ್ಲಿ ಪ್ರೊ.ದುರ್ಗೇಶ್ ತ್ರಿಪಾಠಿ ಮಾತನಾಡಿ, ಸೂರ್ಯನಿಂದ ಹೊರಹೊಮ್ಮುವ ನೇರಳಾತೀತ ಕಿರಣಗಳು ಮಾನವನ ಮತ್ತು ವಾತಾವರಣದ ಮೇಲೆ ಹೇಗೆ ಪರಿಣಾಮ ಬೀರುತ್ತವೆ. ಸೂರ್ಯನ ಸುತ್ತ ಬೀಸುವ ಸೌರ ಮಾರುತಗಳು ಹಾಗೂ ಸೂರ್ಯನ ಕಲೆಗಳ ಕುರಿತು ಸಮಗ್ರವಾದ ಮಾಹಿತಿ ನೀಡಿದರು. ಈ ವಿಚಾರ ಸಂಕಿರಣದ ಮೂಲಕ ವಿದ್ಯಾರ್ಥಿಗಳು ಸೂರ್ಯನ ಬಗ್ಗೆ ಅಧ್ಯಯನ ಮಾಡಲು ಪ್ರೇರೇಪಿಸಲಾಗುವುದು ಎಂದು ಅವರು ತಿಳಿಸಿದರು. ಅಲಹಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದಲ್ಲಿ ಆದಿತ್ಯ ಎಲ್1 ಮಿಷನ್ ಮೇಲೆ ಕೇಂದ್ರೀಕರಿಸಿದ ಸೌರ […]
ಡಿಸೆಂಬರ್ 2ನೇ ವಾರದಲ್ಲಿ ಸುಪ್ರೀಂಕೋರ್ಟ್ನಿಂದ ತೀರ್ಪು ಪ್ರಕಟ ಸಾಧ್ಯತೆ : 370ನೇ ವಿಧಿ ರದ್ದು ಪ್ರಕರಣ

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಸಂವಿಧಾನದ 370ನೇ ವಿಧಿ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ, ರಾಜ್ಯವನ್ನು 2 ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಾಗಿಸಿದ್ದರ ವಿರುದ್ಧದ ಅರ್ಜಿಗಳ ಅಂತಿಮ ತೀರ್ಪನ್ನು ಸುಪ್ರೀಂಕೋರ್ಟ್ ಈ ತಿಂಗಳ (ಡಿಸೆಂಬರ್) ಎರಡನೇ ವಾರದಲ್ಲಿ ನೀಡುವ ಸಾಧ್ಯತೆ ಇದೆ.ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ಸಾಂವಿಧಾನಿಕ ಪೀಠ ಪ್ರಕರಣ ವಿಚಾರಣೆಯನ್ನು ಮುಗಿಸಿದ್ದು, ಡಿಸೆಂಬರ್ ಎರಡನೇ ವಾರದ ಅಂತ್ಯದೊಳಗೆ ತನ್ನ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಈಟಿವಿ ಭಾರತ್ಗೆ […]
ಐಸಿಆರ್ಎ ವರದಿ : ನಿಧಾನವಾಗಲಿದೆ ಐಟಿ ಉದ್ಯೋಗಿಗಳ ನೇಮಕಾತಿ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ಅಲೆಯ ನಂತರ ಡಿಜಿಟಲೀಕರಣದ ಬೇಡಿಕೆ ವೇಗಗೊಂಡಿದ್ದರಿಂದ, ಭಾರತೀಯ ಐಟಿ ಸೇವಾ ಕಂಪನಿಗಳು ಹಣಕಾಸು ವರ್ಷ 2021 ರ ಎರಡನೇ ತ್ರೈಮಾಸಿಕದಿಂದ ಹಣಕಾಸು ವರ್ಷ 2023 ರ ಎರಡನೇ ತ್ರೈಮಾಸಿಕದವರೆಗೆ ವ್ಯಾಪಕವಾಗಿ ಉದ್ಯೋಗಿಗಳನ್ನು ನೇಮಿಸಿಕೊಂಡಿವೆ ಎಂದು ಕ್ರೆಡಿಟ್ ರೇಟಿಂಗ್ ಏಜೆನ್ಸಿ ಐಸಿಆರ್ಎ ವರದಿ ತಿಳಿಸಿದೆ.ಮುಂದಿನ ಎರಡು-ಮೂರು ತ್ರೈಮಾಸಿಕಗಳಲ್ಲಿ ಭಾರತದ ಐಟಿ ವಲಯದ ನೇಮಕಾತಿ ಬಹುತೇಕ ಸ್ತಬ್ಧವಾಗುವ ಸಾಧ್ಯತೆಯಿದೆ ಎಂದು ಹೊಸ ವರದಿಯೊಂದು ಸೋಮವಾರ ತಿಳಿಸಿದೆ. ಬೇಡಿಕೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಐಟಿ ಕಂಪನಿಗಳು ತಮ್ಮ […]