RCB’ಗೆ ಅಧಿಕೃತ ಡೈರಿ ಪಾರ್ಟ್ನರ್ ಆದ ಕೆಎಂಎಫ್‌ ನಂದಿನಿ.

ಬೆಂಗಳೂರು: ಪ್ರತಿಷ್ಠಿತ ಐಪಿಎಲ್ ಟಿ-20 ಲೀಗ್ ಪಂದ್ಯಾವಳಿಯು ಇದೇ 28ರಿಂದ ಆರಂಭವಾಗುತ್ತಿದ್ದು, ರಾಜ್ಯದ ಹೆಮ್ಮಯ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನಂದಿನಿ ಬ್ರ್ಯಾಂಡ್ ಅನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅಧಿಕೃತ ಡೇರಿ ಪಾಲುದಾರರಾಗಿ ಕೈಜೋಡಿಸಿದೆ. ನಂದಿನಿ ಬ್ರ್ಯಾಂಡ್ ಸದಾ ಕ್ರೀಡೆ ಮತ್ತು ಯುವ ಜನತೆಯನ್ನು ಪ್ರೋತ್ಸಾಹಿಸುವ ಧ್ಯೇಯವನ್ನು ಹೊಂದಿದ್ದು, ರಾಜ್ಯದ ಹೆಮ್ಮೆಯ ಎರಡು ಪ್ರತಿಷ್ಠಿತ ಬ್ರ್ಯಾಂಡ್‌ಗಳಾದ ‘ನಂದಿನಿ ಮತ್ತು ಆರ್‌ಸಿಬಿ’ ಒಂದಾಗಿರುವುದು ಅತ್ಯಂತ ಸಂತೋಷದ ವಿಷಯವಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ ತಿಳಿಸಿದ್ದಾರೆ. […]

ಕೊಲಂಬಿಯಾ ಸೇನಾ ವಿಮಾನ ಅಪಘಾತ: 66 ಸೈನಿಕರು ಮೃತ್ಯು.

ಕೊಲಂಬಿಯಾ: ನಿನ್ನೆ ಕೊಲಂಬಿಯಾದ ಸೇನಾ ವಿಮಾನದ ಅಪಘಾತದಲ್ಲಿ ಮೃತ ಸೈನಿಕರ ಸಂಖ್ಯೆ 66 ಎಂದು ಕೊಲಂಬಿಯಾ ಸೇನಾ ವಕ್ತಾರರು ಅಧಿಕೃತ ಮಾಹಿತಿ ನೀಡಿದ್ದಾರೆ. ವಿಮಾನದಲ್ಲಿ ಸಿಬ್ಬಂದಿ ಸೇರಿ ಒಟ್ಟು 115 ಜನ ಇದ್ದರು ಎಂದು ತಿಳಿಸಿದ್ದಾರೆ. 66 ಶವಗಳನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಇನ್ನೂ 15 ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವಿವರಿಸಿದ್ದಾರೆ. ಮೃತರಲ್ಲಿ 6 ವಾಯುಸೇನೆ ಇಬ್ಬರು ಪೊಲೀಸ್ ಅಧಿಕಾರಿಗಳು ಹಾಗೂ ಉಳಿದವರು ಸೇನೆಗೆ ಸಂಬಂಧಿಸಿದವರು ಎಂದು ತಿಳಿಸಿದ್ದಾರೆ. ಕೊಲಂಬಿಯಾದ ಈಕ್ವೆಡಾರ್‌ ಗಡಿ ಬಳಿ […]

ಅಮೆರಿಕ ಇಂಧನ ಸೌಲಭ್ಯಗಳ ಮೇಲೆ ದಾಳಿ ಮಾಡಿದರೆ, ಹೊರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಚ್ಚುತ್ತೇವೆ: ಇರಾನ್ ಎಚ್ಚರಿಕೆ.!

ದುಬೈ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಬೆದರಿಕೆಯಂತೆ ಇರಾನಿನ ಇಂಧನ ಸೌಲಭ್ಯಗಳ ಮೇಲೆ ದಾಳಿ ನಡೆದರೆ, ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗುವುದು ಎಂದು ಇರಾನ್‌ ರೆವಲ್ಯೂಷನರಿ ಗಾರ್ಡ್ಸ್ ಭಾನುವಾರ ಎಚ್ಚರಿಕೆ ನೀಡಿದೆ. ಹೊರ್ಮುಜ್‌ ಜಲಸಂಧಿಯನ್ನು 48 ಗಂಟೆಗಳ ಒಳಗಾಗಿ ಸಂಚಾರಕ್ಕೆ ಮುಕ್ತಗೊಳಿಸಬೇಕು. ಇಲ್ಲದಿದ್ದರೆ, ಇರಾನ್‌ನ ಅತಿದೊಡ್ಡ ವಿದ್ಯುತ್‌ ಸ್ಥಾವರದಿಂದ ಆರಂಭಿಸಿ ಎಲ್ಲ ಸ್ಥಾವರಗಳನ್ನು ನಾಶ ಮಾಡಲಾಗುವುದು’ ಎಂದು ಟ್ರಂಪ್‌ ಎಚ್ಚರಿಕೆ ನೀಡಿದ್ದರು. ಪಶ್ಚಿಮ ಏಷ್ಯಾದಲ್ಲಿನ ಯುದ್ಧವನ್ನು ಶೀಘ್ರವೇ ಮುಕ್ತಾಯಗೊಳಿಸುವುದಾಗಿ ಒಂದು ದಿನದ ಹಿಂದಷ್ಟೇ ಹೇಳಿದ್ದ ಟ್ರಂಪ್‌, ಇದೀಗ ಈ […]

ಆಕಾಶಕ್ಕೇರಿದ ಗ್ಯಾಸ್ ಸಿಲಿಂಡರ್ ಬೆಲೆ: ನಿಮ್ಮ ಜಿಲ್ಲೆಗಳಲ್ಲಿ ಗ್ಯಾಸ್ ಬೆಲೆ ಎಷ್ಟಿದೆ?ಇಲ್ಲಿದೆ ನೋಡಿ ಲಿಸ್ಟ್

ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ನಡುವೆ ಉಂಟಾದ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ದರಗಳು ಏರಿಕೆಯಾಗಿವೆ. ಇದರ ಪ್ರಭಾವ ಭಾರತದಲ್ಲಿಯೂ ಸ್ಪಷ್ಟವಾಗಿ ಕಂಡುಬಂದಿದ್ದು, ತೈಲ ಕಂಪನಿಗಳು LPG ದರದಲ್ಲಿ ಹೆಚ್ಚಳ ಘೋಷಿಸಿವೆ.ದೇಶೀಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಸುಮಾರು ₹60 ಹೆಚ್ಚಳವಾಗಿದ್ದರೆ, ವಾಣಿಜ್ಯ LPG ಸಿಲಿಂಡರ್ ದರದಲ್ಲಿ ₹114.5 ರಷ್ಟು ಏರಿಕೆಯಾಗಿದೆ. ಈ ಬೆಲೆ ಏರಿಕೆಯಿಂದ ಹೊಟೇಲ್ ಮತ್ತು ಉಪಹಾರ ಗೃಹಗಳ ನಿರ್ವಹಣಾ ವೆಚ್ಚ ಹೆಚ್ಚಾಗಿದೆ. […]

ಮಧ್ಯಪ್ರಾಚ್ಯದಲ್ಲಿ ಯುದ್ದದ ಉದ್ವಿಗ್ನತೆ: ಉಡುಪಿ ಧರ್ಮಪ್ರಾಂತ್ಯದಲ್ಲಿ ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಕೆ

ಉಡುಪಿ: ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ನೀಡದಂತೆ ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.ಭಾನುವಾರ ಬೆಳಗ್ಗಿನ ಬಲಿಪೂಜೆಯ ವೇಳೆ ಧರ್ಮಪ್ರಾಂತ್ಯ ವ್ಯಾಪ್ತಿಯ ಚರ್ಚುಗಳಲ್ಲಿ ಧರ್ಮಗುರುಗಳು ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಮಾಡಿದರು. ವಿವಿಧ ಚರ್ಚುಗಳಲ್ಲಿ ಬಲಿಪೂಜೆಗೂ ಮುನ್ನ ಪರಮಪ್ರಸಾದದ ಆರಾಧನೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಯುದ್ದದ ಭೀತಿ ಕಡಿಮೆಯಾಗಿ ಮಧ್ಯಪ್ರಾಚ್ಯ […]