ಎನ್ಡಿಎಂಎ : ಸಿಲ್ಕ್ಯಾರಾ ಸುರಂಗ ಘಟನೆ: ಕಾರ್ಮಿಕರ ಸುರಕ್ಷತೆ ಮುಖ್ಯ, ಯಾವುದೇ ಆತುರವಿಲ್ಲ

ಉತ್ತರಕಾಶಿ/ನವದೆಹಲಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿದು 16 ದಿನಗಳಿಂದ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ತಲುಪಿದೆ. ಸುರಂಗದ ಒಳಗೆ 41 ಜನ ಕಾರ್ಮಿಕರಿದ್ದಾರೆ. ಹೊರಗೆ ಹಲವಾರು ಜನರು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಜನರ ಸುರಕ್ಷತೆ ಮತ್ತು ಭದ್ರತೆ ಮುಖ್ಯ. ನಮಗೆ ಯಾವುದೇ ಆತುರವಿಲ್ಲ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ಸುಮಾರು 3-4 ನಾಲ್ಕು ಗಂಟೆಗಳು […]
ಸಮೀಕ್ಷಾ ವರದಿ ಸಲ್ಲಿಕೆಗೆ ಮತ್ತೆ 3 ವಾರ ಕಾಲಾವಕಾಶ ಕೇಳಿದ ಎಎಸ್ಐ : ಜ್ಞಾನವಾಪಿ ಪ್ರಕರಣ

ವಾರಣಾಸಿ (ಉತ್ತರ ಪ್ರದೇಶ): ಮಸೀದಿ ಸಂಕೀರ್ಣದ ವೈಜ್ಞಾನಿಕ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಮಂಗಳವಾರ(ನ.28) ಕೊನೇ ದಿನವಾಗಿತ್ತು. ಮಸೀದಿಯ ವೈಜ್ಞಾನಿಕ ಸಮೀಕ್ಷೆ ಒಂದು ತಿಂಗಳ ಹಿಂದೆಯೇ ಮುಕ್ತಾಯಗೊಂಡಿದೆ. ಆದರೂ ವರದಿ ಸಲ್ಲಿಸಲು ನ್ಯಾಯಾಲಯ ನೀಡಿದ್ದ ಗಡುವುಗಳನ್ನು ವಿಸ್ತರಿಸಲು ಎಎಸ್ಐ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದೆ. ಎಎಸ್ಐ ನವೆಂಬರ್ 17 ರಂದು ವರದಿಯನ್ನು ಸಲ್ಲಿಸಬೇಕಾಗಿತ್ತು. ಆದರೆ ನವೆಂಬರ್ 18 ರಂದು ಹೆಚ್ಚುವರಿ 15 ದಿನಗಳ ಕಾಲಾವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಜ್ಞಾನವಾಪಿ ಮಸೀದಿ […]
ಅವಕಾಶ ಮತ್ತು ಸವಾಲುಗಳು : ಭಾರತಕ್ಕೆ APEC ಸದಸ್ಯತ್ವ

ಹೈದರಾಬಾದ್: ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ (ಎಪಿಇಸಿ) ವೇದಿಕೆಯ ನಾಯಕರ ಸಭೆ 2023 ರ ನವೆಂಬರ್ 17 ರಂದು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಮುಕ್ತಾಯಗೊಂಡಿತು. ಈ ಸಭೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಎಪಿಇಸಿ (ಅಪೆಕ್) ಸದಸ್ಯತ್ವ ಸಿಗುವ ವಿಷಯ ನೀತಿ ನಿರೂಪಕರ ವಲಯದಲ್ಲಿ ಮತ್ತು ಹಣಕಾಸು ಪತ್ರಿಕೆಗಳಲ್ಲಿ ಮತ್ತೊಮ್ಮೆ ಚರ್ಚೆಯ ವಿಷಯವಾಗಿದೆ. ಅಪೆಕ್ನ ಕಾರ್ಯತಂತ್ರದ ಪ್ರಾಮುಖ್ಯತೆ ಕಾರಣದಿಂದ ಭಾರತಕ್ಕೆ ಇದರ ಸದಸ್ಯತ್ವ ಮಹತ್ವ ಪಡೆದುಕೊಂಡಿದೆ. ಆಸ್ಟ್ರೇಲಿಯಾ, ಬ್ರೂನಿ, ಕೆನಡಾ, ಚೀನಾ, ಹಾಂಕಾಂಗ್, ಚಿಲಿ, ನ್ಯೂಜಿಲೆಂಡ್, ಪಪುವಾ […]
ಇಬ್ಬರ ಬಂಧನ : ₹15 ಕೋಟಿ ಮೌಲ್ಯದ ಡ್ರಗ್ಸ್ ಸಾಗಣೆ

ಗುವಾಹಟಿ (ಅಸ್ಸೋಂ) : ಪೊಲೀಸರು ಸುಮಾರು 15 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ ಎಂಬುದು ತಿಳಿದು ಬಂದಿದೆ. ಕಾರ್ಯಾಚರಣೆಯ ಸಮಯದಲ್ಲಿ ತಪ್ಪಿಸಿಕೊಳ್ಳಲು ಮುಂದಾದ ಮಾದಕವಸ್ತು ಕಳ್ಳಸಾಗಣೆದಾರರನ್ನು ಹಿಡಿಯಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ಇಬ್ಬರನ್ನು ಬಂಧಿಸಿದ್ದಾರೆ.ಗುವಾಹಟಿ ಕ್ರಮೇಣ ಡ್ರಗ್ಸ್ ಟ್ರಾಫಿಕಿಂಗ್ ಕಾರಿಡಾರ್ ಆಗಿ ಮಾರ್ಪಟ್ಟಿದೆ. ಉತ್ತರ ಗುವಾಹಟಿಯ ಭೇತಮುಖ ನಯನಪಾರಾದಲ್ಲಿ ಮಂಗಳವಾರ ನಗರ ಪೊಲೀಸರು ಭಾರಿ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಗುವಾಹಟಿಯಲ್ಲಿ ಸುಮಾರು ₹15 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ದಂಧೆಯಲ್ಲಿ […]
ಓರ್ವ ಸಾವು, ಭಾರತೀಯರು ಸೇರಿ 12 ಮಂದಿ ನಾಪತ್ತೆ : ಬಿರುಗಾಳಿಯ ಹೊಡೆತಕ್ಕೆ ಸರಕು ಸಾಗಣೆ ಹಡಗು ಮುಳುಗಡೆ

ಅಥೆನ್ಸ್: ಹಡಗಿನಲ್ಲಿ ನಾಲ್ವರು ಭಾರತೀಯರು, ಇಬ್ಬರು ಸಿರಿಯಾ ಮತ್ತು ಎಂಟು ಮಂದಿ ಈಜಿಪ್ಟ್ ದೇಶದವರು ಸೇರಿ 14 ಮಂದಿ ಸಿಬ್ಬಂದಿ ಇದ್ದರು. ದುರಂತದಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರನ್ನು ರಕ್ಷಿಸಲಾಗಿದೆ. ಸಮುದ್ರದಲ್ಲಿ ಉಂಟಾದ ಪ್ರಕ್ಷುಬ್ಧ ವಾತಾವರಣದಿಂದಾಗಿ ಈ ಹಡಗು ಮುಳುಗಿದೆ ಎಂದು ತಿಳಿದುಬಂದಿದೆ. ಗ್ರೀಸ್ ದ್ವೀಪ ಲೆಸ್ಬೋಸ್ನಲ್ಲಿ ಸರಕು ಸಾಗಣೆ ಹಡಗು ಮುಳುಗಿದ್ದು, ನಾಲ್ವರು ಭಾರತೀಯರು ಸೇರಿದಂತೆ 12 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.ಗ್ರೀಸ್ ಕರಾವಳಿಯಲ್ಲಿ ಸರಕು ಸಾಗಣೆ ಹಡಗು ಮುಳುಗಿದೆ. ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ನಾಲ್ವರು ಭಾರತೀಯರೂ […]