ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ: ಕನಿಷ್ಠ 129 ಸಾವು; ಭಾರತದ ಗಡಿ ಜಿಲ್ಲೆಗಳಲ್ಲೂ ಕಂಪನದ ಅನುಭವ

ಕಾಠ್ಮಂಡು: ನೇಪಾಳದ ವಾಯುವ್ಯ ಜಿಲ್ಲೆಗಳಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಭೂಕಂಪನದ ನಂತರ ಪಶ್ಚಿಮ ನೇಪಾಳದ ಜಜರ್ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ ಜಜರ್ಕೋಟ್ ಉಪಮೇಯರ್ ಸೇರಿದಂತೆ ಸುಮಾರು 129 ಜನರು ಸಾವನ್ನಪ್ಪಿದ್ದಾರೆ ಮತ್ತು 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ನೇಪಾಳದ ದೂರದರ್ಶನ ತಿಳಿಸಿದೆ. ರಾಜಧಾನಿ ಕಠ್ಮಂಡುವಿನಿಂದ ಸುಮಾರು 150 ಕಿ.ಮೀ ದೂರದಲ್ಲಿರುವ ಜಾಜರ್ಕೋಟ್ ಜಿಲ್ಲೆಯ ಲಾಮಿಡಾಂಡ ಪ್ರದೇಶದಲ್ಲಿ ಭೂಕಂಪನದ ಕೇಂದ್ರಬಿಂದುವಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ತಿಳಿಸಿದೆ. ಭೂಕಂಪನದ ಪರಿಣಾಮ ದೆಹಲಿ […]
ಎಲೆಕ್ಟ್ರಿಕ್, ಸಿಎನ್ಜಿ, ಬಿಎಸ್-VIಗೆ ಮಾತ್ರ ಅನುಮತಿ : ದೆಹಲಿಯಲ್ಲಿ ಹಳೆಯ ಬಸ್ಗಳಿಗಿಲ್ಲ ಅವಕಾಶ

ನವದೆಹಲಿ: ಸರ್ಕಾರದ ನಿರ್ದೇಶನದಂತೆ ಇಂದಿನಿಂದ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್ಸಿಆರ್) ಹಳೆಯ ಡೀಸೆಲ್ ಬಸ್ಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.ವಾಯುಮಾಲಿನ್ಯ ನಿಯಂತ್ರಿಸುವ ಸಲುವಾಗಿ ದೆಹಲಿ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ.ರಾಷ್ಟ್ರ ರಾಜದಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ತೀರಾ ಕಳಪೆಯಾಗಿದೆ. ವಾಯು ಗುಣಮಟ್ಟ ನಿರ್ವಹಣಾ ಸಮಿತಿಯು ನಗರಕ್ಕೆ ಬರುವ ರಾಸಾಯನಿಕಸಮೇತ ಹೊಗೆ ಸೂಸುವ ಬಸ್ಗಳಿಗೆ ಇದೀಗ ನಿರ್ಬಂಧ ಹೇರಿದೆ. ಸಾರಿಗೆ ಇಲಾಖೆಯ ಪ್ರಕಾರ, ಮುಂದಿನ ವರ್ಷ ಜುಲೈ 1 ರಿಂದ ಯಾವುದೇ ನಗರದಿಂದ ದೆಹಲಿಗೆ ಬರುವ ಎಲ್ಲಾ […]
ಪತ್ರಕರ್ತರ ಹತ್ಯೆ: 30 ವರ್ಷದಲ್ಲಿ ವಿಶ್ವದಾದ್ಯಂತ 1,600ಕ್ಕೂ ಅಧಿಕ ಜನ ಹತ್ಯೆ

ಹೈದರಾಬಾದ್: ವಿಶ್ವಸಂಸ್ಥೆಯ ಮಾಹಿತಿ ಪ್ರಕಾರ, ಹತ್ತರ ಪೈಕಿ ಒಂಬತ್ತು ಪತ್ರಕರ್ತರ ಹತ್ಯೆ ಪ್ರಕರಣ ಬಗೆಹರಿದಿಲ್ಲ. ಪತ್ರಕರ್ತರ ಹತ್ಯೆ ಅಸ್ಪಷ್ಟವಾಗಿ ಉಳಿಯಬಾರದು. ಅಪರಾಧಿಗಳಿಗೆ ಶಿಕ್ಷೆ ಆಗಲೇಬೇಕು. ಈ ನಿಟ್ಟಿನಲ್ಲಿ 2014ರಿಂದ ಪ್ರತಿ ವರ್ಷ ‘ಇಂಟರ್ನ್ಯಾಷನಲ್ ಡೇ ಟು ಎಂಡ್ ಇಂಪ್ಯೂನಿಟಿ ಫಾರ್ ಕ್ರೈಮ್ಸ್ ಅಗೈನ್ಸ್ಟ್ ಜರ್ನಲಿಸ್ಟ್ಸ್’ ಎಂಬ ದಿನವನ್ನು ನವೆಂಬರ್ 2ರಂದು ಆಚರಿಸಲಾಗುತ್ತದೆ. ಈ ವರ್ಷದ ದಿನದ ಕಾರ್ಯಕ್ರಮವನ್ನು ‘ಪತ್ರಕರ್ತರ ಮೇಲಿನ ಹಿಂಸಾಚಾರ, ಚುನಾವಣಾ ಸಮಗ್ರತೆ ಮತ್ತು ಸಾರ್ವಜನಿಕ ನಾಯಕತ್ವದ ಪಾತ್ರ’ ಎಂಬ ಘೋಷ ವಾಕ್ಯದೊಂದಿಗೆ ಚರ್ಚಿಸಲಾಗುತ್ತದೆ. ಮಾನವ […]
ಭಾರತೀಯರಿಗೆ ಅತ್ಯಧಿಕ ಲಾಭ : 5 ಲಕ್ಷ ವಲಸಿಗರಿಗೆ ವೀಸಾ ನೀಡಲಿದೆ ಕೆನಡಾ

ಟೊರೊಂಟೊ: 2024-26ರ ವಲಸೆ ಯೋಜನೆಗಳನ್ನು ಅನಾವರಣಗೊಳಿಸಿದ ವಲಸೆ, ನಿರಾಶ್ರಿತರು ಮತ್ತು ಪೌರತ್ವ ಸಚಿವ ಮಾರ್ಕ್ ಮಿಲ್ಲರ್, 2026ರಿಂದ ವಲಸೆ ಮಟ್ಟವನ್ನು 5,00,000ಕ್ಕೆ ಹೆಚ್ಚಿಸಲಾಗುವುದು ಎಂದು ಹೇಳಿದರು.2023ರ ವೇಳೆಗೆ ಕೆನಡಾ ತನ್ನ ದೇಶದೊಳಗೆ 4,85,000 ಹೊಸ ವಲಸಿಗರಿಗೆ ಪ್ರವೇಶಾವಕಾಶ ಕಲ್ಪಿಸಲಿದ್ದು, 2025ರ ವೇಳೆಗೆ ಈ ಸಂಖ್ಯೆಯನ್ನು 5,00,000ಕ್ಕೆ ಹೆಚ್ಚಿಸಲು ಅದು ಯೋಜಿಸಿದೆ.ಕೆನಡಾ 2025ರ ವರ್ಷದಲ್ಲಿ ತನ್ನ ದೇಶದೊಳಗೆ 5 ಲಕ್ಷ ವಲಸಿಗರನ್ನು ಬರಮಾಡಿಕೊಳ್ಳಲಿದೆ. ಕಳೆದ ವರ್ಷ 1,18,000 ಕ್ಕೂ ಹೆಚ್ಚು ಭಾರತೀಯರು ಕೆನಡಿಯನ್ ಪರ್ಮನೆಂಟ್ ರೆಸಿಡೆನ್ಸಿ (ಪಿಆರ್) ಯನ್ನು […]
ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ಅರವಿಂದ್ ಕೇಜ್ರಿವಾಲ್ ನಕಾರ

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗುವುದಿಲ್ಲ ಮತ್ತು ಚುನಾವಣಾ ಪ್ರಚಾರಕ್ಕಾಗಿ ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಮೂಲಗಳ ಪ್ರಕಾರ ಕೇಜ್ರಿವಾಲ್ ಇಡಿಗೆ ಪತ್ರ ಬರೆದಿದ್ದು, ತನಿಖಾ ಸಂಸ್ಥೆಯು ವಿಚಾರಣೆಗೆ ಕರೆದಿರುವ ತನ್ನ ನೋಟಿಸ್ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಕರೆಸಿತ್ತು. […]