76 ಮಂದಿ ನಾಪತ್ತೆ : ಸಿಕ್ಕಿಂ ಮೇಘಸ್ಪೋಟ ಮೃತರ ಸಂಖ್ಯೆ 40ಕ್ಕೆ ಏರಿಕೆ

ಗ್ಯಾಂಗ್ಟಕ್ (ಸಿಕ್ಕಿಂ) : ಸಿಕ್ಕಿಂನಲ್ಲಿ ಉಂಟಾಗಿದ್ದ ಮೇಘಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.ಸಿಕ್ಕಿಂನಲ್ಲಿ ಉಂಟಾಗಿರುವ ಮೇಘಸ್ಫೋಟದಿಂದಾಗಿ ಇದುವರೆಗೆ 40 ಮಂದಿ ಸಾವನ್ನಪ್ಪಿದ್ದಾರೆ. 76 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸಿಕ್ಕಿಂ ಸರ್ಕಾರ ಹೇಳಿದೆ.ಈ ಬಗ್ಗೆ ಮಾಹಿತಿ ನೀಡಿರುವ ಸಿಕ್ಕಿಂ ಸರ್ಕಾರ, ಸದ್ಯ 76 ಮಂದಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ ಎಂದು ತಿಳಿಸಿದೆ. ಕಳೆದ ಅಕ್ಟೋಬರ್​ 2ರಂದು ಸಿಕ್ಕಿಂನಲ್ಲಿ ಮೇಘಸ್ಫೋಟ ಉಂಟಾಗಿತ್ತು. ಮೇಘಸ್ಫೋಟದಿಂದಾಗಿ ಇಲ್ಲಿನ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ ಅಪಾರ ಪ್ರಮಾಣ […]

500 ಜನ ಬಲಿ : ಗಾಜಾದ ಅಲ್-ಅಹ್ಲಿ ಸಿಟಿ ಆಸ್ಪತ್ರೆ ಮೇಲೆ ವೈಮಾನಿಕ ದಾಳಿ

ಜೆರುಸಲೇಂ: ಗಾಜಾದಲ್ಲಿ ಭಯಾನಕ ಘಟನೆಯೊಂದು ಜರುಗಿದೆ.ಇಸ್ರೇಲ್ ವೈಮಾನಿಕ ದಾಳಿ ಮಾಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹಮಾಸ್ ಗುಂಪು ಆರೋಪಿಸಿದೆ. ಗಾಜಾ ನಗರದ ಅಲ್ ಅಹ್ಲಿ ಆಸ್ಪತ್ರೆ ಮೇಲೆ ಈ ದಾಳಿ ನಡೆದಿದೆ. ದಶಕಗಳಿಂದ ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ಟೈನ್ ಸಂಘರ್ಷದಲ್ಲಿ ಇದು ಅತ್ಯಂತ ಭೀಕರ ಘಟನೆಯಾಗಿದೆ. ಆಸ್ಪತ್ರೆಯ ಮೇಲೆ ದಾಳಿ ನಡೆಸಿದ ಪರಿಣಾಮ 500 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಗಾಜಾ ಅಲ್-ಅಹ್ಲಿ ಸಿಟಿ ಆಸ್ಪತ್ರೆಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 500 ಜನರು ಸಾವನ್ನಪ್ಪಿದ್ದಾರೆ. ”ಗಾಜಾದಲ್ಲಿನ ಆಸ್ಪತ್ರೆಯ ಮೇಲೆ […]

ಉಲ್ಬಣಗೊಂಡ ಇಸ್ರೇಲ್ – ಪ್ಯಾಲೆಸ್ಟೈನ್ ಸಂಘರ್ಷ: ಗಾಜಾದ ಆಸ್ಪತ್ರೆಯಲ್ಲಿ ಸ್ಫೋಟಕ್ಕೆ 500 ಬಲಿ

ಟೆಲ್ ಅವಿವ್: ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನಡುವಿನ ಸಂಘರ್ಷವು ಉಲ್ಬಣಗೊಳ್ಳುತ್ತಲೇ ಇದ್ದು, ಗಾಜಾದ ಆಸ್ಪತ್ರೆಯಲ್ಲಿ ಸ್ಫೋಟ ಸಂಭವಿಸಿದ ನಂತರ ನೂರಾರು ಜನರು ಸಾವನ್ನಪ್ಪಿದ್ದು ಸಾವಿರಾರು ಜನ ಸ್ಥಳಾಂತರಗೊಂಡಿದ್ದಾರೆ. ಮಂಗಳವಾರ ಗಾಜಾದ ಆಸ್ಪತ್ರೆಯಲ್ಲಿ ಸ್ಫೋಟ ಸಂಭವಿಸಿದ್ದು ಸುಮಾರು 500 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಭೀಕರ ದಾಳಿಗಳನ್ನು ವಿಶ್ವವೇ ಖಂಡಿಸಿದೆ. ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ಸ್ಫೋಟಗಳಿಗೆ ಇಸ್ರೇಲಿನ ನಿರ್ದಯ ಪ್ರತೀಕಾರವನ್ನು ದೂಷಿಸಿದ್ದರೆ, ಇಸ್ರೇಲ್ ಇದು ಹಮಾಸ್ ನಿಂದ ಗುರಿತಪ್ಪಿದ ದಾಳಿ ಎಂದಿದೆ. ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಅವರ […]

ಐಸಿಐಸಿಐ ಬ್ಯಾಂಕ್​ಗೆ ₹12 ಕೋಟಿ ದಂಡ ವಿಧಿಸಿದ ಆರ್​ಬಿಐ : ತನ್ನದೇ ನಿರ್ದೇಶಕರ ಕಂಪನಿಗಳಿಗೆ ಸಾಲ

ನವದೆಹಲಿ: ಐಸಿಐಸಿಐ ಬ್ಯಾಂಕ್ ಲಿಮಿಟೆಡ್​ನಲ್ಲಿ ನಿರ್ದೇಶಕರಾಗಿರುವ ಇಬ್ಬರು ವ್ಯಕ್ತಿಗಳು ತಾವೇ ನಿರ್ದೇಶಕರಾಗಿರುವ ಮತ್ತೊಂದು ಕಂಪನಿಗಳಿಗೆ ಸಾಲ ಮಂಜೂರು ಮಾಡಿದ್ದಕ್ಕಾಗಿ ಅಥವಾ ಸಾಲ ಮಂಜೂರಿಗೆ ಯತ್ನಿಸಿದ್ದಕ್ಕಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್​ಬಿಐ) ಐಸಿಐಸಿಐ ಬ್ಯಾಂಕ್​ಗೆ 12.19 ಕೋಟಿ ರೂ.ಗಳ ದಂಡ ವಿಧಿಸಿದೆ.ಸಾಲ ನೀಡುವಿಕೆಯಲ್ಲಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಆರ್​ಬಿಐ ಐಸಿಐಸಿಐ ಬ್ಯಾಂಕ್​ಗೆ 12 ಕೋಟಿ ರೂ. ದಂಡ ವಿಧಿಸಿದೆ. ಬ್ಯಾಂಕಿಂಗ್ ನಿಯಂತ್ರಣ (ಬಿಆರ್) ಕಾಯ್ದೆಯ ನಿಬಂಧನೆಗಳು ಮತ್ತು ಬ್ಯಾಂಕಿಂಗ್ ನಿಯಂತ್ರಕ ಹೊರಡಿಸಿದ ನಿರ್ದೇಶನಗಳನ್ನು ಅನುಸರಿಸಲು ವಿಫಲವಾದ ಕಾರಣ ಐಸಿಐಸಿಐ […]

50 ಲಕ್ಷದ ಗಡಿ ದಾಟಿದ ಭಕ್ತರ ಸಂಖ್ಯೆ ಚಾರ್​ಧಾಮ್​ ಯಾತ್ರೆ 2023

ಡೆಹರಾಡೂನ್​( ಉತ್ತರಾಖಂಡ): ದೇವಭೂಮಿ ಎಂದೇ ಪ್ರಸಿದ್ಧಿ ಪಡೆದಿರುವ ವಿಶ್ವವಿಖ್ಯಾತ ಉತ್ತರಾಖಂಡದ ಪುಣ್ಯ ಕ್ಷೇತ್ರಗಳಾದ ಚಾರ್ ​ಧಾಮ್​​ನಲ್ಲಿ ಅಪಾರ ಸಂಖ್ಯೆಯ ಭಕ್ತ ಸಮೂಹ ಕಂಡು ಬರುತ್ತಿದೆ.ಈ ಬಾರಿಯ ಚಾರ್ ​ಧಾಮ್​ ಯಾತ್ರೆಯಲ್ಲಿ ಭಕ್ತರು ಈ ಹಿಂದಿನ ಎಲ್ಲ ದಾಖಲೆಗಳನ್ನೂ ಮುರಿದಿದ್ದಾರೆ. ಹೌದು 2023ರ ಪವಿತ್ರ ಯಾತ್ರೆಯಲ್ಲಿ ಭಕ್ತರ ಸಂಖ್ಯೆ 50 ಲಕ್ಷವನ್ನು ದಾಟಿ ಮುನ್ನುಗ್ಗುತ್ತಿದೆ. ಈ ಮೂಲಕ ಹೊಸ ದಾಖಲೆ ಇತಿಹಾಸದ ಪುಟ ಸೇರಿದೆ. ಈ ಬಾರಿಯ ಚಾರ್ ​ಧಾಮ್ ಯಾತ್ರೆಯನ್ನು ಏಪ್ರಿಲ್ 22 ರಂದು ಆರಂಭಿಸಲಾಗಿತ್ತು. ಅಂದಿನಿಂದ […]