ಇಸ್ರೇಲ್​ಗೆ ಏರ್​ ಇಂಡಿಯಾ ವಿಮಾನ ಅಕ್ಟೋಬರ್​ 14 ರ ವರೆಗೆ ಹಾರಾಟ ರದ್ದು

ನವದೆಹಲಿ: ಇಸ್ರೇಲ್​ ಮತ್ತು ಹಮಾಸ್​ ಉಗ್ರರ ನಡುವೆ ನಡೆಯುತ್ತಿರುವ ‘ರಾಕೆಟ್​ ಕಾಳಗ’ದಲ್ಲಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬಿಕ್ಕಟ್ಟು ಇನ್ನೂ ಮುಂದುವರೆದಿರುವ ಕಾರಣ ಭಾರತದ ವಿಮಾನಯಾನ ಸಂಸ್ಥೆಯಾದ ಏರ್​ ಇಂಡಿಯಾ ಇಸ್ರೇಲ್​ಗೆ ತನ್ನೆಲ್ಲಾ ವಿಮಾನಗಳ ಹಾರಾಟವನ್ನು ಅಕ್ಟೋಬರ್​ 14ರ ವರೆಗೆ ನಿಲ್ಲಿಸಿದೆ. ಇಸ್ರೇಲ್​ನ ಪ್ರಮುಖ ನಗರ​ ಟೆಲ್ ಅವೀವ್‌ಗೆ ಹೊರಡುವ ಮತ್ತು ಅಲ್ಲಿಂದ ಬರುವ ತನ್ನೆಲ್ಲಾ ವಿಮಾನಗಳನ್ನು ಮುಂದಿನ 6 ದಿನಗಳ ಕಾಲ ರದ್ದುಗೊಳಿಸಿರುವುದಾಗಿ ಏರ್ ಇಂಡಿಯಾ ಭಾನುವಾರ ತಿಳಿಸಿದೆ.ಹಮಾಸ್ ಉಗ್ರರು ಮತ್ತು ಇಸ್ರೇಲ್ ಪಡೆಗಳ ನಡುವೆ […]

ಏಷನ್ ಗೇಮ್ಸ್ ನಲ್ಲಿ ಇತಿಹಾಸ ಸೃಷ್ಟಿ: ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ನಲ್ಲಿ ಸಾತ್ವಿಕ್‌-ಚಿರಾಗ್ ಗೆ ಚಿನ್ನದ ಪದಕ!!

ಏಷ್ಯನ್ ಗೇಮ್ಸ್ 2023 ರ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಈವೆಂಟ್‌ನಲ್ಲಿ ಭಾರತದ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸವನ್ನು ಸೃಷ್ಟಿಸಿದರು. ಸಾತ್ವಿಕ್-ಚಿರಾಗ್ ರಿಪಬ್ಲಿಕ್ ಆಫ್ ಕೊರಿಯಾದ ಚೋಯ್ ಸೊಲ್ಗ್ಯು ಮತ್ತು ಕಿಮ್ ವೊನ್ಹೋ ಅವರನ್ನು ನೇರ ಗೇಮ್‌ಗಳಲ್ಲಿ ಸೋಲಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಈ ಗೆಲುವಿನೊಂದಿಗೆ ಭಾರತವು ಅಕ್ಟೋಬರ್ 7 ರ ಶನಿವಾರದಂದು ತನ್ನ ಪದಕಗಳ ಸಂಖ್ಯೆಯನ್ನು 101 ಕ್ಕೆ ಏರಿಸಿತು. ವಿಶ್ವ ನಂ. 3 ಪುರುಷರ ಡಬಲ್ಸ್ ಜೋಡಿ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ […]

ಏಷ್ಯನ್ ಗೇಮ್ಸ್: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ ಭಾರತೀಯ ಪುರುಷರ ಕಬಡ್ಡಿ ತಂಡ

ಶುಕ್ರವಾರ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಫೈನಲ್‌ಗೆ ಅರ್ಹತೆ ಪಡೆಯಲು ಭಾರತೀಯ ಪುರುಷರ ಕಬಡ್ಡಿ ತಂಡವು ಸೆಮಿಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿತು. ಪವನ್ ಸೆಹ್ರಾವತ್ ನೇತೃತ್ವದ ಭಾರತವು ಆರಂಭದಿಂದಲೇ ಪ್ರಾಬಲ್ಯ ಸಾಧಿಸಿತು ಮತ್ತು ಪ್ರತಿಸ್ಪರ್ಧಿ ಪಾಕಿಸ್ತಾನದ ವಿರುದ್ಧ 61-14 ಅಂತರದಿಂದ ಜಯಗಳಿಸಿತು. ಶನಿವಾರ ಇರಾನ್ ಮತ್ತು ಚೈನೀಸ್ ತೈಪೆ ನಡುವಿನ ಇನ್ನೊಂದು ಸೆಮಿಫೈನಲ್‌ ನಡೆಯಲಿದೆ. ಭಾರತವು ಫೈನಲ್ ನಲ್ಲಿ ಈ ಎರಡಲ್ಲಿ ವಿಜೇತರಾದ ತಂಡವನ್ನು ಎದುರಿಸಲಿದೆ. ಮೊದಲ ನಾಲ್ಕು ಅಂಕಗಳನ್ನು ಗಳಿಸಿದ ಪಾಕಿಸ್ತಾನವು ಪಂದ್ಯವನ್ನು ಬಲಿಷ್ಠವಾಗಿ […]

ಕಾಶ್ಮೀರದಲ್ಲಿ ಅನುರಣಿಸಿತು ಕರಾವಳಿಯ ಗಂಡುಕಲೆ ಯಕ್ಷಗಾನ!! ನವರಾತ್ರಿಗೆ ವೈಷ್ಣೋದೇವಿ ಮಂದಿರದಲ್ಲಿ ಪ್ರದರ್ಶನಕ್ಕೆ ಗವರ್ನರ್ ರಿಂದ ಆಹ್ವಾನ!

ಶ್ರೀನಗರ: ಅ.2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್-ಇ-ಕಾಶ್ಮೀರ್‌ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್‌ ದೆಹಲಿ ಘಟಕ, ಸುಳ್ಯದ ಬೆಳ್ಳಾರೆಯ ನಿನಾದ ಸಾಂಸ್ಕೃತಿಕ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರದ ಕಲೆ, ಸಂಸ್ಕೃತಿ ಮತ್ತು ಭಾಷಾ ಇಲಾಖೆ ವತಿಯಿಂದ ಹಿಂದಿ ಯಕ್ಷಗಾನ ಮತ್ತು ಪಜ್ಜೆ-ಗೆಜ್ಜೆ ತುಳು-ಕನ್ನಡ ಶಾಸ್ತ್ರೀಯ, ಜಾನಪದ ನೃತ್ಯ ಪ್ರಕಾರ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ, ಕರ್ನಾಟಕದ 2 ಕಲಾ […]

ಸಿಕ್ಕಿಂನಲ್ಲಿ ಮೇಘಸ್ಫೋಟ: ಕೊಚ್ಚಿ ಹೋದ ರಾಷ್ಟ್ರೀಯ ಹೆದ್ದಾರಿ; 23 ಸೇನಾ ಸಿಬ್ಬಂದಿ ನಾಪತ್ತೆ

ಕೋಲ್ಕತ್ತಾ: ರಾಜಧಾನಿ ಗ್ಯಾಂಗ್ಟಾಕ್ ಸೇರಿದಂತೆ ಸಿಕ್ಕಿಂನ ಸಂಪರ್ಕವು ಬುಧವಾರ ಉಕ್ಕಿ ಹರಿಯುವ ತೀಸ್ತಾ ನದಿಯು ರಾಜ್ಯವನ್ನು ದೇಶದ ಇತರ ಭಾಗಗಳಿಗೆ ಸಂಪರ್ಕಿಸುವ NH-10 ರ ಭಾಗಗಳನ್ನು ಕೊಚ್ಚಿಕೊಂಡು ಹೋಗಿದೆ. ಮೇಘಸ್ಫೋಟದಿಂದಾಗಿ ಈಶಾನ್ಯ ರಾಜ್ಯದಲ್ಲಿ ಹಠಾತ್ ಪ್ರವಾಹ ಉಂಟಾಗಿ ನದಿ ನೀರು ಆತಂಕಕಾರಿ ಮಟ್ಟಕ್ಕೆ ಏರಿದೆ. ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಮೇಘಸ್ಫೋಟ ಸಂಭವಿಸಿದ್ದು, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಮೂಲಕ ಹರಿಯುವ ನದಿಯ ಪ್ರವಾಹಕ್ಕೆ ಕಾರಣವಾಯಿತು. ಹಠಾತ್ ಪ್ರವಾಹದ ನಂತರ ನಾಪತ್ತೆಯಾಗಿರುವ 23 ಸೇನಾ ಸಿಬ್ಬಂದಿಯನ್ನು […]