₹60,000 ಕೋಟಿ ‘ಗೃಹ ಸಾಲ ಸಬ್ಸಿಡಿ ಯೋಜನೆ’ಗೆ ಸರ್ಕಾರ ಗ್ರೀನ್ ಸಿಗ್ನಲ್: ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ : ಕಳೆದ ತಿಂಗಳು, ಚುನಾವಣೆಗೆ ಮುಂಚಿತವಾಗಿ ಹಣದುಬ್ಬರವನ್ನ ನಿಯಂತ್ರಿಸಲು ಸರ್ಕಾರವು ಕುಟುಂಬಗಳಿಗೆ ಅಡುಗೆ ಅನಿಲ ಬೆಲೆಯನ್ನ ಸುಮಾರು 18 ಪ್ರತಿಶತದಷ್ಟು ಕಡಿತಗೊಳಿಸಿತು.ಈ ವರ್ಷದ ಕೊನೆಯಲ್ಲಿ ಪ್ರಮುಖ ರಾಜ್ಯ ಚುನಾವಣೆಗಳು ಮತ್ತು 2024ರ ಮಧ್ಯದಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಬ್ಯಾಂಕುಗಳು ಒಂದೆರಡು ತಿಂಗಳಲ್ಲಿ ಈ ಯೋಜನೆಯನ್ನ ಹೊರತರುವ ಸಾಧ್ಯತೆಯಿದೆ. ಮುಂದಿನ ಐದು ವರ್ಷಗಳಲ್ಲಿ ಸಣ್ಣ ನಗರ ವಸತಿಗಳಿಗೆ ಸಬ್ಸಿಡಿ ಸಾಲಗಳನ್ನ ಒದಗಿಸಲು 60,000 ಕೋಟಿ (7.2 ಬಿಲಿಯನ್ ಡಾಲರ್) ಖರ್ಚು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ […]
ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ: ಹೈದರಾಬಾದ್-ಬೆಂಗಳೂರು ಮಾರ್ಗಕ್ಕೂ ರೈಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಈ ರೈಲುಗಳ ಪ್ರಾರಂಭವು 11 ರಾಜ್ಯಗಳ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುತ್ತದೆ. ಪ್ರಧಾನಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ಇವು ವಂದೇ ಭಾರತ್ ರೈಲುಗಳ ಪ್ರಾರಂಭದಿಂದ ಪ್ರಯೋಜನ ಪಡೆಯುವ ರಾಜ್ಯಗಳು. ಈ ವಂದೇ […]
ಎನ್ಐಎ : ಖಲಿಸ್ತಾನಿ ಉಗ್ರ ಪನ್ನುಗೆ ಸೇರಿದ ಕೃಷಿ ಭೂಮಿ, ಮನೆ ಮುಟ್ಟುಗೋಲು

ಚಂಡೀಗಢ (ಪಂಜಾಬ್): ಖಲಿಸ್ತಾನ ಪರ ನಾಯಕ, ನಿಷೇಧಿತ ಸಿಖ್ ಫಾರ್ ಜಸ್ಟಿಸ್ (ಎಸ್ಎಫ್ಜೆ) ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುವಿಗೆ ಸೇರಿದ ಸ್ಥಿರಾಸ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮುಟ್ಟುಗೋಲು ಹಾಕಿದೆ.ಶನಿವಾರ ಚಂಡೀಗಢ ಮತ್ತು ಅಮೃತಸರದಲ್ಲಿ ಸ್ಥಿರಾಸ್ತಿಗಳ ಜಪ್ತಿ ನೋಟಿಸ್ಅನ್ನು ಎನ್ಐಎ ಅಂಟಿಸಿದೆ.ಪಂಜಾಬ್ನ ಅಮೃತಸರ ಹಾಗೂ ಚಂಡೀಗಢದಲ್ಲಿ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುವಿಗೆ ಸೇರಿದ ಕೃಷಿ ಭೂಮಿ ಹಾಗೂ ಮನೆಯನ್ನು ಎನ್ಐಎ ಮುಟ್ಟುಗೋಲು ಹಾಕಿದೆ. ”ಎನ್ಐಎ ಪ್ರಕರಣದಲ್ಲಿ ಘೋಷಿತ ಅಪರಾಧಿ ಗುರುಪತ್ವಂತ್ ಸಿಂಗ್ ಪನ್ನು ಒಡೆತನದ […]
ಜಾನುವಾರು ಕಳ್ಳಸಾಗಣೆ ವೇಳೆ ಬಿಎಸ್ಎಫ್ ಗುಂಡಿಗೆ ಓರ್ವ ಬಲಿ

ಜಾನುವಾರು ಕಳ್ಳಸಾಗಣೆ ವೇಳೆ ಬಿಎಸ್ಎಫ್ ಗುಂಡಿಗೆ ಓರ್ವ ಬಲಿದಕ್ಷಿಣ ಸಲ್ಮಾರಾ ಮಂಕಾಚಾರ್ (ಅಸ್ಸಾಂ) : ಬಾಂಗ್ಲಾದೇಶಕ್ಕೆ ಜಾನುವಾರುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಗುಂಡಿಕ್ಕಿ ಕೊಂದಿರುವ ಘಟನೆ ಅಸ್ಸಾಂನ ದಕ್ಷಿಣ ಸಲ್ಮಾರಾ ಮಂಕಾಚಾರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಡೋ-ಬಾಂಗ್ಲಾದೇಶ ಗಡಿಯ ಖರುವಾಬಂಧಾ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಭಾರತದಿಂದ ಅಸ್ಸಾಂಗೆ ಜಾನುವಾರು ಕಳ್ಳಸಾಗಣೆ ಮಾಡುತ್ತಿದ್ದ ಶಂಕೆಯ ಮೇಲೆ […]
ಅಖಂಡ ಭಾರತವರ್ಷವನ್ನು ಏಕಸೂತ್ರದಲ್ಲಿ ಬೆಸೆದ ಜಗದ್ಗುರು ಆದಿಶಂಕರಾಚಾರ್ಯರ 108 ಅಡಿಯ ‘ಏಕತ್ವದ ಪ್ರತಿಮೆ’ ಅನಾವರಣ

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು 8ನೇ ಶತಮಾನದ ಹಿಂದೂ ತತ್ವಜ್ಞಾನಿ ಮತ್ತು ಸಂತ ಆದಿ ಶಂಕರಾಚಾರ್ಯರ ಬೃಹತ್ 108 ಅಡಿ ಪ್ರತಿಮೆಯನ್ನು ಸೆಪ್ಟೆಂಬರ್ 21, ಗುರುವಾರದಂದು ಪವಿತ್ರ ಪಟ್ಟಣವಾದ ಓಂಕಾರೇಶ್ವರದಲ್ಲಿ ಅನಾವರಣಗೊಳಿಸಿದ್ದಾರೆ. “ಏಕತ್ಮಾತಾ ಕಿ ಪ್ರತಿಮಾ” ಅಥವಾ “ಏಕತ್ವದ ಪ್ರತಿಮೆ” ಎಂದು ಹೆಸರಿಸಲಾದ ಈ ಪ್ರಭಾವಶಾಲಿ ಶಿಲ್ಪವು ಆದಿ ಶಂಕರಾಚಾರ್ಯರ ನಿರಂತರ ಪರಂಪರೆ ಮತ್ತು ಆಳವಾದ ಬೋಧನೆಗಳಿಗೆ ಒಂದು ಸ್ಮಾರಕ ಗೌರವವಾಗಿದೆ. ಖಾಂಡ್ವಾ ಜಿಲ್ಲೆಯ ನರ್ಮದಾ ನದಿಯ ಮೇಲಿರುವ ರಮಣೀಯ ಮಂಧಾತ ಬೆಟ್ಟದ […]