ಅಮೇರಿಕಾದ ನ್ಯೂಜೆರ್ಸಿಯಲ್ಲಿ ಅತಿದೊಡ್ಡ ಹಿಂದೂ ದೇವಾಲಯ ಉದ್ಘಾಟನೆ

ಯುನೈಟೆಡ್ ಸ್ಟೇಟ್ಸ್ ನ ಅತಿದೊಡ್ಡ ಹಿಂದೂ ದೇವಾಲಯವು ನ್ಯೂಜೆರ್ಸಿಯಲ್ಲಿ ಭಾನುವಾರ ತನ್ನ ಬಾಗಿಲನ್ನು ಭಕ್ತರಿಗಾಗಿ ತೆರೆದಿದೆ. ರಾಬಿನ್ಸ್ವಿಲ್ಲೆಯ ಸಣ್ಣ ಟೌನ್ಶಿಪ್ನಲ್ಲಿ 183-ಎಕರೆ ಜಾಗದಲ್ಲಿ BAPS ಸ್ವಾಮಿನಾರಾಯಣ ಅಕ್ಷರಧಾಮ ಮಂದಿರವನ್ನು ಲೋಕಾರ್ಪಣೆ ಮಾಡಲಾಗಿದೆ. ಅಕ್ಟೋಬರ್ 8 ರಂದು ದೇವಾಲಯ ಅಧಿಕೃತವಾಗಿ ಉದ್ಘಾಟನೆಗೊಂಡಿದ್ದು, ಅ.18 ರಿಂದ ಸಾರ್ವಜನಿಕರಿಗೆ ಪ್ರವೇಶ ದೊರೆಯಲಿದೆ. ಭಾರತೀಯ ಅಮೆರಿಕನ್ನರು ಮತ್ತು ಹಿಂದೂ ಅಮೆರಿಕನ್ನರಿಗೆ, ಇದು ಒಂದು ದೊಡ್ಡ ಮೈಲಿಗಲ್ಲನ್ನು ಪ್ರತಿನಿಧಿಸುತ್ತದೆ. #WATCH | The largest Hindu temple in the US – BAPS […]
ಉಚಿತ ಫುಡ್ ಡೆಲಿವರಿ ಮತ್ತು ಡಿಸ್ಕೌಂಟ್ : ಕಡಿಮೆ ದರದ ಸ್ವಿಗ್ಗಿ ಒನ್ ಲೈಟ್ ಮೆಂಬರ್ಶಿಪ್
ನವದೆಹಲಿ: ಉಚಿತ ಆಹಾರ ಡೆಲಿವರಿ, ವಿಶೇಷ ಆಫರ್ಗಳು ಮತ್ತು ಡಿಸ್ಕೌಂಟ್ಗಳಂಥ ಪ್ರಯೋಜನಗಳನ್ನು ನೀಡುವ ಸ್ವಿಗ್ಗಿ ಒನ್ ಲೈಟ್ ಮೆಂಬರ್ಶಿಪ್ ಯೋಜನೆಯನ್ನು ಸ್ವಿಗ್ಗಿ ಸೋಮವಾರ ಪ್ರಕಟಿಸಿದೆ.ಇದಕ್ಕೆ ಮೂರು ತಿಂಗಳಿಗೆ 99 ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ. ಮೂರು ತಿಂಗಳ ಸದಸ್ಯತ್ವದೊಂದಿಗೆ, ಬಳಕೆದಾರರು 149 ರೂ.ಗಿಂತ ಹೆಚ್ಚಿನ ಆರ್ಡರ್ ಮೌಲ್ಯದ 10 ಉಚಿತ ಫುಡ್ ಡೆಲಿವರಿ ಮತ್ತು ಇನ್ಸ್ಟಾಮಾರ್ಟ್ನಲ್ಲಿ 199 ರೂ.ಗಿಂತ ಹೆಚ್ಚಿನ ಆರ್ಡರ್ ಮೌಲ್ಯದ 10 ಉಚಿತ ಡೆಲಿವರಿಗಳನ್ನು ಪಡೆಯುತ್ತಾರೆ. ಉಚಿತ ಫುಡ್ ಡೆಲಿವರಿ ನೀಡುವ ಸ್ವಿಗ್ಗಿ ಒನ್ ಲೈಟ್ […]
ಎಸ್&ಪಿ ವರದಿ : ಏಷ್ಯಾ-ಪೆಸಿಫಿಕ್ ವಲಯದಲ್ಲಿ ಭಾರತದ ಸರ್ಕಾರಿ ಬ್ಯಾಂಕುಗಳ ಷೇರುಗಳೇ ಬೆಸ್ಟ್

ನವದೆಹಲಿ: ಸೆಪ್ಟೆಂಬರ್ 30 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಭಾರತದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಏಷ್ಯಾ-ಪೆಸಿಫಿಕ್ ಮೂಲದ ಬ್ಯಾಂಕ್ಗಳಿಗಿಂತ ದೇಶದ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಷೇರುಗಳು ಅತ್ಯುತ್ತಮವಾಗಿ ವಹಿವಾಟು ನಡೆಸಿವೆ. ಇದು ಈ ಬ್ಯಾಂಕ್ಗಳ ಮೇಲೆ ಹೂಡಿಕೆದಾರರು ಇಟ್ಟಿರುವ ವಿಶ್ವಾಸ ಮತ್ತು ಅವುಗಳ ಹಣಕಾಸು ದೃಢತೆಯನ್ನು ಬಿಂಬಿಸುತ್ತದೆ ಎಂದು ಎಸ್ & ಪಿ ಗ್ಲೋಬಲ್ ಮಾರ್ಕೆಟ್ ಇಂಟೆಲಿಜೆನ್ಸ್ ತಿಳಿಸಿದೆ.ಭಾರತದ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಷೇರುಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿವೆ ಎಂದು ವರದಿ ಹೇಳಿದೆ. ಇಂಡೋನೇಷ್ಯಾದ ಪಿಟಿ ಬ್ಯಾಂಕ್ ನ್ಯಾಷನಲ್ ನೋಬು ಟಿಬಿಕೆ […]
7 ಮಂದಿ ದಾರುಣ ಸಾವು : ತಮಿಳುನಾಡಿನ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ

ಅರಿಯಲೂರು (ತಮಿಳುನಾಡು): ಕರ್ನಾಟಕದ ಅತ್ತಿಬೆಲೆಯಲ್ಲಿ ನಡೆದ ದುರ್ಘಟನೆ ಮಾಸುವ ಮುನ್ನವೇ ತಮಿಳುನಾಡಿನಲ್ಲಿ ಅಂತಹುದೇ ಘಟನೆಯೊಂದು ವರದಿಯಾಗಿದೆ.ತಮಿಳುನಾಡಿನ ಅರಿಯಲೂರು ಜಿಲ್ಲೆಯ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಬೆಳಗ್ಗೆ 9:30ರ ಸುಮಾರಿಗೆ ಪಟಾಕಿ ತಯಾರಿಸುತ್ತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಅರಿಯಲೂರು ಜಿಲ್ಲೆಯ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ರಾಜೇಂದ್ರನ್ ಎಂಬುವರು. ವೀರಕಲೂರು ಗ್ರಾಮದಲ್ಲಿ ಯಾಜ್ ಕ್ರ್ಯಾಕರ್ಸ್ ಎಂಬ ಅಂಗಡಿಯನ್ನು ನಡೆಸುತ್ತಿದ್ದು, […]
ವಿಧಾನಸಭೆ ಸ್ಪೀಕರ್ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್ : ಮಹಾರಾಷ್ಟ್ರ
ನವದೆಹಲಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಅಜಿತ್ ಪವಾರ್ ಮತ್ತು ಇತರ ಏಳು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಶರದ್ ಪವಾರ್ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ಮುಂದಿನ ಶುಕ್ರವಾರ ಅರ್ಜಿಯನ್ನು ಶಿವಸೇನೆ ಪ್ರಕರಣದೊಂದಿಗೆ ಪಟ್ಟಿ ಮಾಡಲು ನಿರ್ಧರಿಸಿದೆ. ಇದರಲ್ಲಿ ನ್ಯಾಯಾಲಯವು ಅನರ್ಹತೆ […]