ಪಂಚ ರಾಜ್ಯ ಚುನಾವಣಾ ದಿನಾಂಕ ಪ್ರಕಟ: ನವೆಂಬರ್ 7 ರಿಂದ 30 ಚುನಾವಣೆ; ಡಿ.3 ರಂದು ಫಲಿತಾಂಶ

ನವದೆಹಲಿ: ಭಾರತದ ಚುನಾವಣಾ ಆಯೋಗವು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದ್ದು ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ಚುನಾವಣೆಯ ದಿನಾಂಕ ನಿಗದಿಯಾಗಿದೆ. ಛತ್ತೀಸ್ಗಢ : 7-17 ನವೆಂಬರ್ ಮಧ್ಯಪ್ರದೇಶ : 17 ನವೆಂಬರ್ ರಾಜಸ್ಥಾನ: 23 ನವೆಂಬರ್ ತೆಲಂಗಾಣ: 30 ನವೆಂಬರ್ ಮಿಜೋರಾಂ: 7 ನವೆಂಬರ್ ಫಲಿತಾಂಶಗಳ ಪ್ರಕಟಣೆ: 3 ಡಿಸೆಂಬರ್

ಹಮಾಸ್ ಮೇಲೆ ದಾಳಿ ತೀವ್ರಗೊಳಿಸಿದ ಇಸ್ರೇಲ್: ಕಚ್ಚಾ ತೈಲ ಬೆಲೆ ಗಗನಕ್ಕೇರಿಕೆ

ಟೆಲ್ ಅವೀವ್: ಹಮಾಸ್ ಭಯೋತ್ಪಾದಕರು ಇಸ್ರೇಲ್ ಮೇಲ್ ದಾಳಿ ನಡೆಸಿ 600ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟ ದಾರುಣ ಘಟನೆಯ ಬಳಿಕ ಇಸ್ರೇಲ್‌ನ ಸೇನೆಯು ಭಾನುವಾರದಂದು ಗಾಜಾದ ಪ್ಯಾಲೇಸ್ಟಿನಿಯನ್ ಎನ್‌ಕ್ಲೇವ್ ಅನ್ನು ಹೊಡೆದುರುಳಿಸಿದೆ. ಇಸ್ರೇಲಿನ ಇತಿಹಾಸದಲ್ಲಿ ಅತ್ಯಂತ ಕೆಟ್ಟ ದಿನಗಳಲ್ಲಿ ಒಂದಾಗಿರುವ ಈ ಸನ್ನಿವೇಶವನ್ನು ದೇಶವು ಸಮರ್ಥವಾಗಿ ಎದುರಿಸುತ್ತಿದ್ದು, ಭಾರತ ಸಹಿತ ವಿಶ್ವದಾದ್ಯಂತದ ದೇಶಗಳು ಇಸ್ರೇಲಿಗೆ ಬೆಂಬಲ ನೀಡುತ್ತಿವೆ. For the past 15 hours, Israel has been at war with Hamas terrorists who […]

ಇಸ್ರೋ : ಆದಿತ್ಯ-ಎಲ್1 ಮಿಷನ್: ಬಾಹ್ಯಾಕಾಶ ನೌಕೆ ಸುಸ್ಥಿತಿಯಲ್ಲಿದೆ

ನವದೆಹಲಿ : ಭಾರತದ ಮಹತ್ವಾಕಾಂಕ್ಷೆಯ ಆದಿತ್ಯ-ಎಲ್ 1 ಯೋಜನೆ ಕುರಿತು ಭಾರತೀಯ ಬಾಹ್ಯಾಕಾಶ ಸಂಸೋಧನಾ ಸಂಸ್ಥೆ (ಇಸ್ರೋ) ಮಾಹಿತಿ ನೀಡಿದ್ದು, ನೌಕೆಯು ನಿಗದಿತ ಪಥದಲ್ಲಿ ಸಂಚರಿಸುವಂತೆ ಮಾಡುವ ಸುಮಾರು 16 ಸೆಕೆಂಡುಗಳ ಪಥ ಸರಿಪಡಿಸುವಿಕೆ ಕಾರ್ಯ (TCM – Trajectory Correction Maneuvre) ಯಶಸ್ವಿಯಾಗಿ ನೆರವೇರಿದೆ ಎಂದು ಹೇಳಿದೆ.ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆ ಸುಸ್ಥಿತಿಯಲ್ಲಿದ್ದು, ನಿರಂತರವಾಗಿ ಸೂರ್ಯನ ಕಡೆಗೆ ಚಲಿಸುತ್ತಿದೆ. ಇಂದು (ಅಕ್ಟೋಬರ್ 6 ರಂದು) ನೌಕೆಯ ಪಥ ಸರಿಪಡಿಸುವಿಕೆ ಪ್ರಕ್ರಿಯೆ ಮಾಡಲಾಯಿತು. ಬಾಹ್ಯಾಕಾಶ ನೌಕೆಯು L1 ಸುತ್ತ […]

ಪಕ್ಷದಲ್ಲಿ ಬೇಗುದಿ : ಮಧ್ಯಪ್ರದೇಶ ಸಿಎಂ ಅಭ್ಯರ್ಥಿ ಘೋಷಿಸದ ಬಿಜೆಪಿ

ಭೋಪಾಲ್: ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ (PTI) ಪ್ರಮುಖ ವಿಧಾನಸಭಾ ಚುನಾವಣೆಗೆ ಮಧ್ಯಪ್ರದೇಶ ಸಜ್ಜಾಗಿರುವ ನಡುವೆಯೇ ಆಡಳಿತಾರೂಢ ಬಿಜೆಪಿಯಲ್ಲಿ ಅಸಮಾಧಾನ ಬೂದಿಮುಚ್ಚಿದ ಕೆಂಡವಾಗಿದೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೇ ಚುನಾವಣೆ ಎದುರಿಸಲು ಪಕ್ಷದ ಹೈಕಮಾಂಡ್ ನಿರ್ಧರಿಸಿದ್ದು, ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರನ್ನು ಕಂಗೆಡಿಸಿದೆ. ಆದಿವಾಸಿಗಳ ಪ್ರಾಬಲ್ಯದ ದಿಂಡೋರಿ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಶಿವರಾಜ್ ಸಿಂಗ್, “ನಾನು ಒಳ್ಳೆಯ ಸರ್ಕಾರ ನಡೆಸುತ್ತಿದ್ದೇನೆಯೇ ಅಥವಾ ಕೆಟ್ಟ ಸರ್ಕಾರ ನಡೆಸುತ್ತಿದ್ದೇನೆಯೇ ಎಂದು ನಾನು ಕೇಳಬಯಸುತ್ತೇನೆ. ಈ ಸರ್ಕಾರ ಮುಂದುವರಿಯಬೇಕೇ […]

ಇಸ್ರೇಲ್​ಗೆ ಏರ್​ ಇಂಡಿಯಾ ವಿಮಾನ ಅಕ್ಟೋಬರ್​ 14 ರ ವರೆಗೆ ಹಾರಾಟ ರದ್ದು

ನವದೆಹಲಿ: ಇಸ್ರೇಲ್​ ಮತ್ತು ಹಮಾಸ್​ ಉಗ್ರರ ನಡುವೆ ನಡೆಯುತ್ತಿರುವ ‘ರಾಕೆಟ್​ ಕಾಳಗ’ದಲ್ಲಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬಿಕ್ಕಟ್ಟು ಇನ್ನೂ ಮುಂದುವರೆದಿರುವ ಕಾರಣ ಭಾರತದ ವಿಮಾನಯಾನ ಸಂಸ್ಥೆಯಾದ ಏರ್​ ಇಂಡಿಯಾ ಇಸ್ರೇಲ್​ಗೆ ತನ್ನೆಲ್ಲಾ ವಿಮಾನಗಳ ಹಾರಾಟವನ್ನು ಅಕ್ಟೋಬರ್​ 14ರ ವರೆಗೆ ನಿಲ್ಲಿಸಿದೆ. ಇಸ್ರೇಲ್​ನ ಪ್ರಮುಖ ನಗರ​ ಟೆಲ್ ಅವೀವ್‌ಗೆ ಹೊರಡುವ ಮತ್ತು ಅಲ್ಲಿಂದ ಬರುವ ತನ್ನೆಲ್ಲಾ ವಿಮಾನಗಳನ್ನು ಮುಂದಿನ 6 ದಿನಗಳ ಕಾಲ ರದ್ದುಗೊಳಿಸಿರುವುದಾಗಿ ಏರ್ ಇಂಡಿಯಾ ಭಾನುವಾರ ತಿಳಿಸಿದೆ.ಹಮಾಸ್ ಉಗ್ರರು ಮತ್ತು ಇಸ್ರೇಲ್ ಪಡೆಗಳ ನಡುವೆ […]