ಐಸಿಐಸಿಐ ಬ್ಯಾಂಕ್​ಗೆ ₹12 ಕೋಟಿ ದಂಡ ವಿಧಿಸಿದ ಆರ್​ಬಿಐ : ತನ್ನದೇ ನಿರ್ದೇಶಕರ ಕಂಪನಿಗಳಿಗೆ ಸಾಲ

ನವದೆಹಲಿ: ಐಸಿಐಸಿಐ ಬ್ಯಾಂಕ್ ಲಿಮಿಟೆಡ್​ನಲ್ಲಿ ನಿರ್ದೇಶಕರಾಗಿರುವ ಇಬ್ಬರು ವ್ಯಕ್ತಿಗಳು ತಾವೇ ನಿರ್ದೇಶಕರಾಗಿರುವ ಮತ್ತೊಂದು ಕಂಪನಿಗಳಿಗೆ ಸಾಲ ಮಂಜೂರು ಮಾಡಿದ್ದಕ್ಕಾಗಿ ಅಥವಾ ಸಾಲ ಮಂಜೂರಿಗೆ ಯತ್ನಿಸಿದ್ದಕ್ಕಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್​ಬಿಐ) ಐಸಿಐಸಿಐ ಬ್ಯಾಂಕ್​ಗೆ 12.19 ಕೋಟಿ ರೂ.ಗಳ ದಂಡ ವಿಧಿಸಿದೆ.ಸಾಲ ನೀಡುವಿಕೆಯಲ್ಲಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಆರ್​ಬಿಐ ಐಸಿಐಸಿಐ ಬ್ಯಾಂಕ್​ಗೆ 12 ಕೋಟಿ ರೂ. ದಂಡ ವಿಧಿಸಿದೆ. ಬ್ಯಾಂಕಿಂಗ್ ನಿಯಂತ್ರಣ (ಬಿಆರ್) ಕಾಯ್ದೆಯ ನಿಬಂಧನೆಗಳು ಮತ್ತು ಬ್ಯಾಂಕಿಂಗ್ ನಿಯಂತ್ರಕ ಹೊರಡಿಸಿದ ನಿರ್ದೇಶನಗಳನ್ನು ಅನುಸರಿಸಲು ವಿಫಲವಾದ ಕಾರಣ ಐಸಿಐಸಿಐ […]

50 ಲಕ್ಷದ ಗಡಿ ದಾಟಿದ ಭಕ್ತರ ಸಂಖ್ಯೆ ಚಾರ್​ಧಾಮ್​ ಯಾತ್ರೆ 2023

ಡೆಹರಾಡೂನ್​( ಉತ್ತರಾಖಂಡ): ದೇವಭೂಮಿ ಎಂದೇ ಪ್ರಸಿದ್ಧಿ ಪಡೆದಿರುವ ವಿಶ್ವವಿಖ್ಯಾತ ಉತ್ತರಾಖಂಡದ ಪುಣ್ಯ ಕ್ಷೇತ್ರಗಳಾದ ಚಾರ್ ​ಧಾಮ್​​ನಲ್ಲಿ ಅಪಾರ ಸಂಖ್ಯೆಯ ಭಕ್ತ ಸಮೂಹ ಕಂಡು ಬರುತ್ತಿದೆ.ಈ ಬಾರಿಯ ಚಾರ್ ​ಧಾಮ್​ ಯಾತ್ರೆಯಲ್ಲಿ ಭಕ್ತರು ಈ ಹಿಂದಿನ ಎಲ್ಲ ದಾಖಲೆಗಳನ್ನೂ ಮುರಿದಿದ್ದಾರೆ. ಹೌದು 2023ರ ಪವಿತ್ರ ಯಾತ್ರೆಯಲ್ಲಿ ಭಕ್ತರ ಸಂಖ್ಯೆ 50 ಲಕ್ಷವನ್ನು ದಾಟಿ ಮುನ್ನುಗ್ಗುತ್ತಿದೆ. ಈ ಮೂಲಕ ಹೊಸ ದಾಖಲೆ ಇತಿಹಾಸದ ಪುಟ ಸೇರಿದೆ. ಈ ಬಾರಿಯ ಚಾರ್ ​ಧಾಮ್ ಯಾತ್ರೆಯನ್ನು ಏಪ್ರಿಲ್ 22 ರಂದು ಆರಂಭಿಸಲಾಗಿತ್ತು. ಅಂದಿನಿಂದ […]

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವಂತಿಲ್ಲ: ಕೇಂದ್ರದ ಪ್ರಸ್ತಾವಿತ ಉನ್ನತ ಅಧಿಕಾರ ಸಮಿತಿಗೆ ಜವಾಬ್ದಾರಿ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವಂತಿಲ್ಲ ಎಂದು 3-2 ಬಹುಮತದಿಂದ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಸರ್ವೋಚ್ಚ ನ್ಯಾಯಾಲಯವು ನಾಲ್ಕು ತೀರ್ಪುಗಳನ್ನು ನೀಡಿತು ಮತ್ತು ಹಲವಾರು ಅವಲೋಕನಗಳನ್ನು ಮಾಡಿತು. ಮೇ 11 ರಂದು, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರು 10 ದಿನಗಳ ಮ್ಯಾರಥಾನ್ ವಿಚಾರಣೆಯ […]

ಕೇಂದ್ರ ಸಶಸ್ತ್ರ ಪಡೆಗಳ 11 ಸಾವಿರ ಹಳೆಯ ವಾಹನ ಗುಜರಿಗೆ : ಹೊಸ ಅಟೊಮೊಬೈಲ್ ನೀತಿ

ನವದೆಹಲಿ: ಭಾರತ ಸರ್ಕಾರದ ‘ವೆಹಿಕಲ್ ಸ್ಕ್ರ್ಯಾಪಿಂಗ್ ಪಾಲಿಸಿ’ ಪ್ರಕಾರ 15 ವರ್ಷಕ್ಕಿಂತ ಹಳೆಯದಾದ ವಾಹನಗಳನ್ನು ಗುಜರಿಗೆ ಹಾಕುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಗೃಹ ಸಚಿವಾಲಯ ಕ್ರಮಗಳನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. 15 ವರ್ಷಕ್ಕಿಂತ ಹಳೆಯದಾದ ಎಲ್ಲ ವಾಹನಗಳನ್ನು ವಿಲೇವಾರಿ ಮಾಡುವ ಕೇಂದ್ರ ಸರ್ಕಾರದ ನೀತಿಯ ಭಾಗವಾಗಿ ಬಿಎಸ್‌ಎಫ್, ಸಿಆರ್​ಪಿಎಫ್ ಮತ್ತು ಸಿಐಎಸ್‌ಎಫ್​ನಂಥ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಸೇರಿದ 11,000 ವಾಹನಗಳನ್ನು ಗುಜರಿಗೆ ಹಾಕಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೇಂದ್ರ ಸಶಸ್ತ್ರ ಪಡೆಗಳಿಗೆ ಸೇರಿದ 11 […]

ಮಾನವಸಹಿತ ‘ಗಗನಯಾನ’​ ಅಕ್ಟೋಬರ್ 21ಕ್ಕೆ ಮೊದಲ ಹಾರಾಟ ಪರೀಕ್ಷೆ: ಇಸ್ರೋ

ನವದೆಹಲಿ: ಚಂದ್ರಯಾನ, ಸೂರ್ಯಯಾನ ಯೋಜನೆಗಳ ಯಶಸ್ಸಿನ ಮೂಲಕ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಮತ್ತೊಂದು ಮಹತ್ವದ ಯೋಜನೆಗೆ ಸಜ್ಜಾಗುತ್ತಿದೆ.ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮಾನವಸಹಿತ ಗಗನಯಾನ ಮಿಷನ್‌ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಡೆಸಲಿದೆ ಎಂದು ಸೋಮವಾರ ತಿಳಿಸಿತು. ಮಾನವಸಹಿತ ಗಗನಯಾನ ಯೋಜನೆಯ ಪರೀಕ್ಷಾರ್ಥ ಪ್ರಯೋಗವನ್ನು ನಡೆಸುವುದಾಗಿ ಇಸ್ರೋ ಇಂದು ಪ್ರಕಟಿಸಿದೆ. ಇದರಲ್ಲಿ ಮೂವರು ಗಗನಯಾತ್ರಿಗಳು ಹಾರಾಟ ನಡೆಸಲಿದ್ದಾರೆ ಎಂದು ಇಸ್ರೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ […]