ಸ್ವಯಂಸೇವೆಯ ಭಾಗವಾಗಿ ಪಾತ್ರೆ ತೊಳೆದ ರಾಹುಲ್​ ಗಾಂಧಿ​ ಗೋಲ್ಡನ್​ ಟೆಂಪಲ್​ಗೆ ಭೇಟಿ

ಅಮೃತಸರ (ಪಂಜಾಬ್​) : ಕಾಂಗ್ರೆಸ್​ ನಾಯಕ, ಲೋಕಸಭೆ ಸಂಸದ ರಾಹುಲ್​ ಗಾಂಧಿ ಅವರು ಸೋಮವಾರ ಅಮೃತಸರದ ಪ್ರಸಿದ್ಧ ಗೋಲ್ಡನ್​ ಟೆಂಪಲ್​ಗೆ ಭೇಟಿ ನೀಡಿ, ಸ್ವಯಂಸೇವೆಯ ಭಾಗವಾಗಿ ಭಕ್ತರು ಬಳಸಿದ ಪಾತ್ರೆಗಳನ್ನು ತೊಳೆದರು.ಇದಕ್ಕೂ ಮೊದಲು ಸಿಖ್​ ಸಂಪ್ರದಾಯದಂತೆ ತಲೆಗೆ ನೀಲಿ ಬಣ್ಣದ ಬಟ್ಟೆ ಸುತ್ತಿ ದೇಗುಲದ ಗರ್ಭಗುಡಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯ ಬಳಿಕ ಸಿಖ್ಖರ ಅತ್ಯುನ್ನತ ಸ್ಥಾನ ಅಕಾಲ್​ ತಕ್ತ್​ಗೆ ಭೇಟಿ ನೀಡಿದರು. ಇಂದು ರಾಹುಲ್​ ಇಲ್ಲಿ ನಡೆಯುವ ಫಲ್ಕಿ ಸೇವಾದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಪಂಜಾಬ್​ನ […]

ನಾಗ್ಪುರ-ಬೆಂಗಳೂರು ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಪ್ರಯತ್ನಿಸಿದ ಹಿನ್ನೆಲೆ : ಪ್ರಯಾಣಿಕನ ಬಂಧನ, ಬಿಡುಗಡೆ

ಬೆಂಗಳೂರು: ಮಹಾರಾಷ್ಟ್ರದ ನಾಗ್ಪುರದಿಂದ ಬೆಂಗಳೂರಿಗೆ ಆಗಮಿಸಿದ ಇಂಡಿಗೋ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದರು.ಬಳಿಕ ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಘಟನೆ ಸೆಪ್ಟೆಂಬರ್ 30ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಪೊಲೀಸರ ಪ್ರಕಾರ, ಪ್ರಯಾಣಿಕ ಸ್ವಪ್ನಿಲ್​ ಹೋಲೆ ವಿಮಾನದ ತುರ್ತು ನಿರ್ಗಮನ ಬಾಗಿಲಿನ ಪಕ್ಕದಲ್ಲಿ ಕುಳಿತಿದ್ದ. ಟೇಕ್‌ಆಫ್‌ಗೆ ಮುನ್ನ ವಿಮಾನ ಸಿಬ್ಬಂದಿ ಪ್ರಯಾಣಿಕರಿಗೆ ಮಾಹಿತಿ ನೀಡುತ್ತಿದ್ದಾಗ, ಸ್ವಪ್ನಿಲ್​ ಎಮರ್ಜೆನ್ಸಿ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಯಾಕಾಗಿ ಆತ ಹೀಗೆ ವರ್ತಿಸಿದ ಎಂಬ […]

ಭಾರತದ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ಜಿಂಬಾಬ್ವೆಯಲ್ಲಿ ವಿಮಾನ ಅಪಘಾತ ಸಾವು

ಜೊಹಾನಸ್‌ಬರ್ಗ್‌:ನೈಋತ್ಯ ಜಿಂಬಾಬ್ವೆಯ ವಜ್ರದ ಗಣಿಯ ಸಮೀಪ ಖಾಸಗಿ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡು ಭಾರತೀಯ ಗಣಿ ಉದ್ಯಮಿ ಹರ್ಪಾಲ್ ರಾಂಧವಾ ಮತ್ತು ಅವರ 22 ವರ್ಷದ ಪುತ್ರ ಸೇರಿದಂತೆ ಒಟ್ಟು ಆರು ಜನ ಮೃತಪಟ್ಟಿರುವ ಘಟನೆ ಸೆ.29ರಂದು ನಡೆದಿದ್ದು, ಇಂದು ವರದಿಯಾಗಿದೆ.ಖಾಸಗಿ ವಿಮಾನ ಅಪಘಾತಕ್ಕೀಡಾಗಿ ಭಾರತದ ಗಣಿ ಉದ್ಯಮಿ, ಅವರ ಪುತ್ರ ಸೇರಿದಂತೆ ಆರು ಮಂದಿ ಮೃತಪಟ್ಟಿರುವ ಘಟನೆ ಜಿಂಬಾಬ್ವೆಯಲ್ಲಿ ಸಂಭವಿಸಿದೆ. ಮೃತಪಟ್ಟವರಲ್ಲಿ ನಾಲ್ವರು ವಿದೇಶಿಯರು ಮತ್ತು ಇತರ ಇಬ್ಬರು ಜಿಂಬಾಬ್ವೆಯವರು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ […]

NIAಯ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ ಶಂಕಿತ ಐಸಿಸ್ ಭಯೋತ್ಪಾದಕನನ್ನು ಬಂಧಿಸಿದ ದೆಹಲಿ ಪೊಲೀಸ್

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವ ಶಂಕಿತ ಐಸಿಸ್ ಭಯೋತ್ಪಾದಕನನ್ನು ಭಯೋತ್ಪಾದನಾ ನಿಗ್ರಹ ದಳದ ದೊಡ್ಡಕಾರ್ಯಾಚರಣೆಯ ವೇಳೆ ದೆಹಲಿಯಲ್ಲಿ ಬಂಧಿಸಲಾಗಿದೆ. ಶಹನವಾಜ್ ಅಲಿಯಾಸ್ ಶಫಿ ಉಜ್ಜಾಮನನ್ನು ದೆಹಲಿ ಪೊಲೀಸರ ವಿಶೇಷ ಸೆಲ್ ರಾಷ್ಟ್ರ ರಾಜಧಾನಿಯ ಅಡಗುತಾಣದಿಂದ ಬಂಧಿಸಿದೆ. ದೆಹಲಿ ಪೊಲೀಸರ ವಿಶೇಷ ಸೆಲ್ NIA ಯೊಂದಿಗೆ ಸಹಕರಿಸಿದೆ. ಭಯೋತ್ಪಾದಕ ಸಂಘಟನೆಯ ಸ್ಲೀಪರ್ ಸೆಲ್‌ಗಳೆಂದು ಶಂಕಿಸಲಾದ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಶಹನವಾಜ್ ಐಸಿಸ್ ಪುಣೆ ಮಾಡ್ಯೂಲ್ ಪ್ರಕರಣದಲ್ಲಿ ಬೇಕಾಗಿದ್ದ. ಮೂಲಗಳ […]

’14 ನಿಮಿಷಗಳ ಮಿರಾಕಲ್​’ ಸ್ವಚ್ಛತೆ ಆರಂಭ : ವಂದೇ ಭಾರತ್​ ರೈಲು

ನವದೆಹಲಿ: ಭಾರತೀಯ ರೈಲ್ವೆಯು ಇಂದಿನಿಂದ ರೈಲುಗಳ ತ್ವರಿತ ಶುಚಿಗೊಳಿಸುವಿಕೆಗಾಗಿ ’14 ನಿಮಿಷಗಳ ಮಿರಾಕಲ್​’ ಪರಿಕಲ್ಪನೆಯನ್ನು ಪರಿಚಯಿಸುತ್ತಿದೆ. ಅಧಿಕೃತವಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ದೆಹಲಿ ಕ್ಯಾಂಟ್ ರೈಲು ನಿಲ್ದಾಣದಲ್ಲಿ ಪ್ರಾರಂಭಿಸಲಿದ್ದಾರೆ. ದೇಶಾದ್ಯಂತ 29 ವಂದೇ ಭಾರತ್ ರೈಲುಗಳಲ್ಲಿ ಅವುಗಳ ನಿಗದಿತ ನಿಲ್ದಾಣದಲ್ಲಿ ಈ ಕಾರ್ಯ ಆರಂಭವಾಗಲಿದೆ.ವಂದೇ ಭಾರತ್​ ರೈಲುಗಳಲ್ಲಿ ಇಂದಿನಿಂದ 14 ನಿಮಿಷದ ಮಿರಾಕಲ್​ ಸ್ವಚ್ಛತಾ ಪರಿಕಲ್ಪನೆ ಆರಂಭ. ಈಗಾಗಲೇ ಈ ಚಟುವಟಿಕೆಯಲ್ಲಿ ತೊಡಗಿರುವ ಮುಂಚೂಣಿಯಲ್ಲಿರುವ ಕಾರ್ಮಿಕರ ಸಂಖ್ಯೆಯನ್ನು ಹೆಚ್ಚಿಸದೆ ಸ್ವಚ್ಛತಾ ವ್ಯಕ್ತಿಗಳ ದಕ್ಷತೆ, ಕೌಶಲ್ಯ […]