ಭೂಕುಸಿತದಿಂದ ಜಮ್ಮು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ವರು ಸಾವು

ಜಮ್ಮು ಮತ್ತು ಕಾಶ್ಮೀರ: ಇಲ್ಲಿನರಾಂಬನ್​ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಮಂಗಳವಾರ) ಭೂಕುಸಿತ ಸಂಭವಿಸಿತು. ಪರಿಣಾಮ ಟ್ರಕ್‌ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಆಗಸ್ಟ್​ನಲ್ಲೂ ಸಂಭವಿಸಿತ್ತು ಗುಡ್ಡಕುಸಿತ: ಜಮ್ಮು ಮತ್ತು ಕಾಶ್ಮೀರದ ರಾಂಬನ್​ ಪ್ರದೇಶದಲ್ಲಿ ಆಗಸ್ಟ್ 6ರಂದು ಗುಡ್ಡ ಕುಸಿತವಾಗಿತ್ತು. ಅಪಾರ ಪ್ರಮಾಣದ ಮಣ್ಣು ರಸ್ತೆ ಮೇಲೆ ಬೀಳುತ್ತಿರುವ ದೃಶ್ಯಗಳನ್ನು ಮೊಬೈಲ್​ನಲ್ಲಿ ಪ್ರಯಾಣಿಕರು ಸೆರೆಹಿಡಿದಿದ್ದರು. ರಸ್ತೆ ಸಂಪೂರ್ಣ ಬಂದ್​ ಆಗಿತ್ತು. ಯಾವುದೇ ಪ್ರಾಣಹಾನಿಯಾಗಿರಲಿಲ್ಲ. ಜುಲೈ ತಿಂಗಳಲ್ಲೂ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಭಾರಿ ಮಳೆಯಿಂದಾಗಿ ಗುಡ್ಡದಿಂದ ಕಲ್ಲು, ಮಣ್ಣು ರಸ್ತೆ […]

ವಿದೇಶಿ ವಿಮಾನ ಹಾರಾಟ ಶುರು: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್​ 2

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್​ 2ರಲ್ಲಿ ಇಂದಿನಿಂದ ಟರ್ಮಿನಲ್​ 2ರಲ್ಲಿ ವಿದೇಶಿ ವಿಮಾನಗಳ ಹಾರಾಟ ಪ್ರಾರಂಭವಾಗಿದೆ. ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): 5 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಗಾರ್ಡನ್​ ಟರ್ಮಿನಲ್ ಅತ್ಯಾಧುನಿಕ ತಂತ್ರಜ್ಞಾನವುಳ್ಳದ್ದಾಗಿದೆ.​ ಕಳೆದ ವರ್ಷ ನವೆಂಬರ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಟರ್ಮಿನಲ್​ ಅನ್ನು ಉದ್ಘಾಟನೆ ಮಾಡಿದ್ದರು.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್​ 2ರಲ್ಲಿ ವಿದೇಶಿ ವಿಮಾನಗಳ ಹಾರಾಟ ಇಂದಿನಿಂದ ಪ್ರಾರಂಭವಾಗಿದೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಇಂದಿನಿಂದ ಟರ್ಮಿನಲ್​ 2ಗೆ ಶಿಫ್ಟ್​ ಆಗಿದೆ. […]

ಕೆನಡಾ ಪ್ರಧಾನಿ ಟ್ರುಡೊ ವಿಮಾನದಲ್ಲಿನ ತಾಂತ್ರಿಕ ದೋಷ ನಿವಾರಣೆ; ಸ್ವದೇಶಕ್ಕೆ ವಾಪಾಸ್

ನವದೆಹಲಿ: ಕೆನಡಾದ ಪ್ರಧಾನ ಮಂತ್ರಿ ಕಚೇರಿಯ ಪತ್ರಿಕಾ ಕಾರ್ಯದರ್ಶಿ ಮೊಹಮ್ಮದ್ ಹುಸೇನ್ ಮಾಧ್ಯಮವೊಂದಕ್ಕೆ ಈ ಮಾಹಿತಿ ನೀಡಿದ್ದಾರೆ. ವಿಮಾನದಲ್ಲಿನ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಲಾಗಿದೆ ಮತ್ತು ಈಗ ವಿಮಾನ ಮತ್ತೆ ಹಾರಾಟ ನಡೆಸಬಹುದಾಗಿದೆ. ಕೆನಡಾದ ನಿಯೋಗ ಈ ವಿಮಾನದಲ್ಲಿ ಇಂದು ಮಧ್ಯಾಹ್ನ ಹೊರಡುವ ನಿರೀಕ್ಷೆಯಿದೆ ಎಂದು ಹುಸೇನ್ ತಿಳಿಸಿದರು.ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಮತ್ತು ಅವರ ನಿಯೋಗವು ಮಂಗಳವಾರ ಮಧ್ಯಾಹ್ನ ಸ್ವದೇಶಕ್ಕೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೆನಡಾ ಪ್ರಧಾನಿ ಇಂದು ಸ್ವದೇಶಕ್ಕೆ ಮರಳಲಿದ್ದಾರೆ ಎಂದು ಕೆನಡಾದ […]

ಸಿಂಗಾಪುರದಲ್ಲಿ ಚೀನಾದ ವಿಮಾನ ತುರ್ತು ಭೂಸ್ಪರ್ಶ, 9 ಜನರು ಅಸ್ವಸ್ಥ: ಇಂಜಿನ್​ನಲ್ಲಿ ಕಾಣಿಸಿಕೊಂಡ ಬೆಂಕಿ

ಬೀಜಿಂಗ್ (ಚೀನಾ): ಎಂಜಿನ್​ನಲ್ಲಿ ಬೆಂಕಿ ಕಾಣಿಕೊಂಡಿರುವ ಹಿನ್ನೆಲೆ ವಿಮಾನದ ಕ್ಯಾಬಿನ್‌ನಲ್ಲಿ ಹೊಗೆ ಆವರಿಸಿದೆ. ಪರಿಣಾಮ 9 ಪ್ರಯಾಣಿಕರು ಅಸ್ವಸ್ಥಗೊಂಡಿದ್ದಾರೆ. ಚೀನಾದ ಏರ್‌ಲೈನ್‌ನ ಏರ್‌ ಚೀನಾ ವಿಮಾನದ ಇಂಜಿನ್‌ಗೆ ಬೆಂಕಿ ತಗುಲಿ, ಅದರ ಕ್ಯಾಬಿನ್‌ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿತ್ತು. ಇದರಿಂದ ಸಿಂಗಾಪುರದ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಲಾಯಿತು.146 ಪ್ರಯಾಣಿಕರು ಮತ್ತು ಒಂಬತ್ತು ಸಿಬ್ಬಂದಿಯೊಂದಿಗೆ A320 ಚೀನಾದ ವಿಮಾನ ಭಾನುವಾರ ಸಂಜೆ 4.15ರ ಸುಮಾರಿಗೆ ಸಿಂಗಾಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿತು ಎಂದು ಚಾಂಗಿ ವಿಮಾನ ನಿಲ್ದಾಣದ ಅಧಿಕೃತ ಮೂಲಗಳು […]

ಎರಡು ದಿನ ಕಾಶಿ ಪ್ರವಾಸ G20 ಶೃಂಗಸಭೆ ಬಳಿಕ ವಾರಾಣಸಿಗೆ ಭೇಟಿ ನೀಡಿದ ಮಾರಿಷಸ್​ ಪ್ರಧಾನಿ

ವಾರಾಣಸಿ: ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಬಳಿಕ ಮಾರಿಷಸ್​ ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ನೇರವಾಗಿ ವಾರಾಣಸಿಗೆ ಭೇಟಿ ನೀಡಿದ್ದಾರೆ.ಸೋಮವಾರ ವಾರಾಣಸಿಗೆ ಬಂದಿಳಿದ ಇವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಲಾಲ್​ ಬಹದ್ದೂರು ಶಾಸ್ತ್ರಿ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್​ ಅನುಸಾರ ಅವರಿಗೆ ಸ್ವಾಗತ ನೀಡಲಾಗಿದ್ದು, ಮಂಗಳವಾರ ಮಧ್ಯಾಹ್ನ ಅವರು ಮಾರಿಷಸ್​ ಮರಳಲಿದ್ದಾರೆಮಾರಿಷಸ್​ ಪ್ರಧಾನಿ ಪ್ರವಿಂದ್​ ಜುಗ್ನಾಥ್​ ಅವರಿಗೆ ವಾರಾಣಸಿಯೊಂದಿಗೆ ವಿಶೇಷ ನಂಟಿದೆ. ಇದೇ ಕಾರಣಕ್ಕೆ ಅವರು ಭಾರತಕ್ಕೆ ಭೇಟಿ ನೀಡಿದಾಗ ತಪ್ಪದೇ ಇಲ್ಲಿಗೆ ಆಗಮಿಸುತ್ತಾರೆ ವಾರಾಣಸಿಯೊಂದಿಗೆ ಇದೆ […]