ನ್ಯೂಯಾರ್ಕ್ ಸ್ಟ್ರೈಕರ್ಸ್​​ಗೆ ಚಾಂಪಿಯನ್ ಪಟ್ಟ: ಅಬುಧಾಬಿ ಟಿ10

ಅಬುಧಾಬಿ:ಕಳೆದ ಎರಡು ಆವೃತ್ತಿಯಲ್ಲಿ ಡೆಕ್ಕನ್ ಗ್ಲಾಡಿಯೇಟರ್ಸ್‌ ಜಯ ದಾಖಲಿಸಿತ್ತು. ಅದರಲ್ಲೂ 2022ರ ಆವೃತ್ತಿಯ ಫೈನಲ್​ನಲ್ಲಿ ನ್ಯೂಯಾರ್ಕ್ ಸ್ಟ್ರೈಕರ್ಸ್ ತಂಡವನ್ನೇ ಮಣಿಸಿ ಡೆಕ್ಕನ್​​ ಚಾಂಪಿಯನ್​ ಆಗಿತ್ತು. 2023ರ ಫೈನಲ್​​ನಲ್ಲಿ ಈ ಎರಡು ತಂಡಗಳೇ ಮುಖಾಮುಖಿ ಆದವು. ಆದರೆ ಈ ಬಾರಿ ಕಿರನ್​ ಪೊಲಾರ್ಡ್​​ ನಾಯಕತ್ವದ ನ್ಯೂಯಾರ್ಕ್​ ತಂಡ ಗೆದ್ದು ಬೀಗಿತು. ನ್ಯೂಯಾರ್ಕ್ ಸ್ಟ್ರೈಕರ್ಸ್​​ ತಂಡಕ್ಕೆ ಇದು ಎರಡನೇ ಆವೃತ್ತಿಯಾಗಿದೆ. ಕಳೆದ ಬಾರಿ ಫೈನಲ್ಸ್​ ಪ್ರವೇಶಿಸಿ ರನ್​ರ್​ ಅಪ್​ ಆಗಿದ್ದ ಪಡೆ ಎರಡನೇ ಆವೃತ್ತಿಯಲ್ಲಿ ಚಾಂಪಿಯನ್​ ಆಗಿದೆ.\ ಇಲ್ಲಿನ ಝಾಯೆದ್ […]

ಇಸ್ರೋ : ಪೂರ್ಣ ಸೂರ್ಯನ ಮೊದಲ ಚಿತ್ರ ಸೆರೆಹಿಡಿದು ಭೂಮಿಗೆ ರವಾನಿಸಿದ ಆದಿತ್ಯ ಎಲ್​-1 ನೌಕೆ

ಹೈದರಾಬಾದ್: ಅಲ್ಟ್ರಾವೈಲೆಟ್ ತರಂಗಾಂತರದ ಬಳಿಯ ಈ ಫೋಟೋಗಳಿಂದ ಸೂರ್ಯನ ಫೋಟೋಸ್ಪಿಯರ್ (ದ್ಯುತಿಗೋಳ) ಹಾಗೂ ಕ್ರೋಮೋಸ್ಪಿಯರ್ ಸಂಕೀರ್ಣವಾದ ಒಳನೋಟಗಳನ್ನು ಇದು ಒದಗಿಸುತ್ತದೆ ಎಂದು ಇಸ್ರೋ ತಿಳಿಸಿದೆಸೌರ ಅಧ್ಯಯನಕ್ಕಾಗಿ ಹಾರಿ ಬಿಡಲಾದ ಭಾರತದ ಆದಿತ್ಯ ಎಲ್ 1 ಮಿಷನ್ ಮೊದಲ ಬಾರಿಗೆ ಸೂರ್ಯನ ಚಿತ್ರಗಳನ್ನು ಸೆರೆ ಹಿಡಿದು ಕಳುಹಿಸಿದೆ.ಸೂರ್ಯನ ಅಧ್ಯಯನ ನಡೆಸುತ್ತಿರುವ ಆದಿತ್ಯ ಎಲ್​ 1 ಸೌರ ನೌಕೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಪೂರ್ಣ ಸೂರ್ಯನ ಮೊದಲ ಚಿತ್ರವನ್ನು ಸೆರೆಹಿಡಿದು ಭೂಮಿಗೆ ರವಾನಿಸಿದೆ..ನವೆಂಬರ್ 20 ರಂದು SUIT ಪೇಲೋಡ್ ಅನ್ನು […]

ಸೋಲಾರ್ ಅಲ್ಟ್ರಾ ವಯೋಲೆಟ್ ಇಮೇಜಿಂಗ್ ಟೆಲಿಸ್ಕೋಪ್ ಮೂಲಕ ಸೂರ್ಯನ ಮೊದಲ ಪೂರ್ಣ-ಡಿಸ್ಕ್ ಚಿತ್ರ ಸೆರೆಹಿಡಿದ ಆದಿತ್ಯ-L1 ನೌಕೆ

ಬೆಂಗಳೂರು: ಆದಿತ್ಯ-L1 ಬಾಹ್ಯಾಕಾಶ ನೌಕೆಯಲ್ಲಿರುವ ಸೋಲಾರ್ ಅಲ್ಟ್ರಾ ವಯೋಲೆಟ್ ಇಮೇಜಿಂಗ್ ಟೆಲಿಸ್ಕೋಪ್ (SUIT) ಉಪಕರಣವು 200-400 nm ತರಂಗಾಂತರ ಶ್ರೇಣಿಯಲ್ಲಿ ಸೂರ್ಯನ ಮೊದಲ ಪೂರ್ಣ-ಡಿಸ್ಕ್ ಚಿತ್ರಗಳನ್ನು ಯಶಸ್ವಿಯಾಗಿ ಸೆರೆಹಿಡಿಯಿತು. ವಿವಿಧ ವೈಜ್ಞಾನಿಕ ಶೋಧಕಗಳನ್ನು ಬಳಸಿಕೊಂಡು ಈ ತರಂಗಾಂತರ ವ್ಯಾಪ್ತಿಯಲ್ಲಿ ಸೂರ್ಯನ ದ್ಯುತಿಗೋಳ ಮತ್ತು ವರ್ಣಗೋಳದ ಚಿತ್ರಗಳನ್ನು SUIT ಸೆರೆಹಿಡಿದಿದೆ ಎಂದು ಇಸ್ರೋ ತಿಳಿಸಿದೆ. ನವೆಂಬರ್ 20, 2023 ರಂದು, SUIT (ಸೌರ ನೇರಳಾತೀತ ಚಿತ್ರಣ ದೂರದರ್ಶಕ) ಪೇಲೋಡ್ ಅನ್ನು ಆನ್ ಮಾಡಲಾಗಿದೆ. ಯಶಸ್ವಿ ಪೂರ್ವ ನಿಯೋಜಿತ ಹಂತದ […]

ಮಹಾರಾಷ್ಟ್ರ ಮತ್ತು ಕರ್ನಾಟಕದಾದ್ಯಂತ 41 ಸ್ಥಳಗಳಲ್ಲಿ ಎನ್.ಐ.ಎ ದಾಳಿ: ಭಯೋತ್ಪಾದಕಾ ಸಂಚಿನಲ್ಲಿ 15 ಜನ ವಶಕ್ಕೆ

ನವದೆಹಲಿ: ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದನೆ ಸಂಚಿನ ಪ್ರಕರಣದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದಾದ್ಯಂತ 41 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡಗಳು ಶನಿವಾರ ದಾಳಿ ನಡೆಸಿದ್ದು, 15 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬಂಧಿತರು ಪುಣೆ ಮೂಲದವರಾಗಿದ್ದು, ಇಸ್ಲಾಮಿಕ್ ಸ್ಟೇಟ್ ಜೊತೆ ನಂಟು ಹೊಂದಿದ್ದರು. ವರದಿಗಳ ಪ್ರಕಾರ, ಕರ್ನಾಟಕದ ಕೆಲವು ಸ್ಥಳಗಳಲ್ಲಿ ದಾಳಿಗಳು ನಡೆಯುತ್ತಿದ್ದರೆ, ಮಹಾರಾಷ್ಟ್ರದಲ್ಲಿ ಪುಣೆ, ಥಾಣೆ ಗ್ರಾಮಾಂತರ, ಥಾಣೆ ನಗರ ಮತ್ತು ಮೀರಾ ಭಯಂದರ್‌ನಲ್ಲಿ ದಾಳಿ ನಡೆಸಲಾಗುತ್ತಿದೆ. ಅಂತರರಾಷ್ಟ್ರೀಯ ಸಂಪರ್ಕಗಳೊಂದಿಗೆ ದೊಡ್ಡ ಪಿತೂರಿ ಮತ್ತು ತನಿಖೆ ನಡೆಯುತ್ತಿರುವ […]

ರೆಪೊ ದರದಲ್ಲಿ ಯಥಾಸ್ಥಿತಿ, ಜಿಡಿಪಿ ಬೆಳವಣಿಗೆ ಶೇ 7, ಹಣದುಬ್ಬರ ಶೇ 5.4 ಹೆಚ್ಚಳ : ಆರ್‌ಬಿಐನಿಂದ ಹಣಕಾಸು ನೀತಿ ಪ್ರಕಟ

ನವದೆಹಲಿ: ಮೂರು ದಿನಗಳಿಂದ ಭಾರತೀಯ ರಿಸರ್ವ್ ಬ್ಯಾಂಕ್​ನಿಂದ(ಆರ್‌ಬಿಐ) ನಡೆಯುತ್ತಿರುವ ಸುದೀರ್ಘ ಹಣಕಾಸು ನೀತಿ ಸಮಿತಿ ಸಭೆ ಇಂದು (ಶುಕ್ರವಾರ) ಕೊನೆಗೊಂಡಿದೆ. ಸಭೆಯ ನಂತರ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹಣಕಾಸು ನೀತಿಯನ್ನು ಬಿಡುಗಡೆಗೊಳಿಸಿದ್ದಾರೆ. ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದಕೊಳ್ಳಲಾಗಿದೆ. ರೆಪೊ ದರ ಶೇ 6.5 ಇದೆ. ಜಿಡಿಪಿ ಬೆಳವಣಿಗೆ ಶೇ 7ರಷ್ಟು ಆಗಲಿದೆ ಅಂದಾಜಿಸಿದ್ದಾರೆ. ಹಣದುಬ್ಬರ ಶೇ 5.4ರಷ್ಟಿದೆ ಎಂದು ಆರ್​​ಬಿಐ ಹೇಳಿದೆ. ಬಡ್ಡಿದರಗಳು ಹೆಚ್ಚಾಗುತ್ತವೆಯೋ ಅಥವಾ ಕಡಿಮೆಯಾಗುತ್ತವೆಯೋ ಎಂಬ ಪ್ರಶ್ನೆಗಳಿಗೆ ಇಂದು ಉತ್ತರ ಲಭಿಸಿದೆ.ಭಾರತೀಯ ರಿಸರ್ವ್ […]