ತನಿಖೆಗೆ ಸಹಕರಿಸುವಂತೆ ಭಾರತಕ್ಕೆ ಹಲವು ಬಾರಿ ಅಮೆರಿಕ ಮನವಿ: ನಿಜ್ಜರ್ ಹತ್ಯೆ

ವಾಷಿಂಗ್ಟನ್: ಅಮೆರಿಕ ಆಡಳಿತವು ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ತನಿಖೆಯಲ್ಲಿ ಕೆನಡಾದೊಂದಿಗೆ ಸಹಕರಿಸುವಂತೆ ಭಾರತ ಸರ್ಕಾರದೊಂದಿಗೆ ಹಲವಾರು ಸಂದರ್ಭಗಳಲ್ಲಿ ಒತ್ತಾಯಿಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ತಿಳಿಸಿದ್ದಾರೆ.ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್, ಕಳೆದ ವಾರ ಇಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಆ ಸಂದರ್ಭದಲ್ಲಿ ಆಂಟೋನಿ ಬ್ಲಿಂಕೆನ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದರು. ಆಗ ಅವರು ಸ್ಪಷ್ಟಪಡಿಸಿದಂತೆ, […]
ಉಗ್ರರನ್ನು ಬೆನ್ನಟ್ಟಿರುವ ಭದ್ರತಾ ಪಡೆ , ಕಣಿವೆ ನಾಡಲ್ಲಿ ಮತ್ತೆ ಗುಂಡಿನ ಸದ್ದು

ರಾಜೌರಿ, ಜಮ್ಮು ಮತ್ತು ಕಾಶ್ಮೀರ: ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ.ಕಲಕೋಟ್ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಲಭಿಸಿತ್ತು. ಕೂಡಲೇ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ, ಉಗ್ರರು ಮತ್ತು ಯೋಧರ ಮಧ್ಯೆ ಗುಂಡಿನ ದಾಳಿ ನಡೆದಿದೆ.ಕಲಕೋಟ್ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ಚಟುವಟಿಕೆಯ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಇಲ್ಲಿ ಭದ್ರತಾ ಪಡೆ ಇಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ಅಷ್ಟರಲ್ಲಿ […]
ನಾಳೆ ಭಾರತ vs ನೇಪಾಳ ಪಂದ್ಯ, ಚಿನ್ನ ಗೆಲ್ಲುವತ್ತ IPL ಸ್ಟಾರ್ಗಳ ಚಿತ್ತ: ಏಷ್ಯನ್ ಗೇಮ್ಸ್

ಹ್ಯಾಂಗ್ಝೌ (ಚೀನಾ): ಯಶಸ್ವಿ ಜೈಸ್ವಾಲ್ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೆಸ್ಟ್ ಮತ್ತು ಟಿ20 ಪಂದ್ಯಗಳನ್ನಾಡಿದ್ದು, ಒಂದು ಶತಕ ಮತ್ತು ಎರಡು ಅರ್ಧಶತಕದಿಂದ ಒಟ್ಟಾರೆ 7 ಅಂತರರಾಷ್ಟ್ರೀಯ ಪಂದ್ಯಗಳಿಂದ 398 ರನ್ ಕಲೆಹಾಕಿದ್ದಾರೆ. ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳನ್ನಾಡಿದ ರಿಂಕು ಸಿಂಗ್ಗೆ ಬ್ಯಾಟಿಂಗ್ನಲ್ಲಿ ಹೆಚ್ಚಿನ ಅವಕಾಶ ಸಿಕ್ಕಿರಲಿಲ್ಲ. 19ನೇ ಏಷ್ಯಾಡ್ನಲ್ಲಿ ಭಾರತ ಕ್ರಿಕೆಟ್ ತಂಡ ಭಾಗವಹಿಸುತ್ತಿದ್ದು, ಚೊಚ್ಚಲ ಪ್ರಯತ್ನದಲ್ಲೇ ಚಿನ್ನ ಗೆಲ್ಲುವ ಭರವಸೆ ಇದೆ. ಏಷ್ಯಾಡ್ನಲ್ಲಿ ಅವರ ಬ್ಯಾಟ್ನಿಂದ ರನ್ಗಳನ್ನು ನಿರೀಕ್ಷಿಸಲಾಗುತ್ತಿದೆ. ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಪ್ರೀಮಿಯರ್ […]
ಸ್ವಯಂಸೇವೆಯ ಭಾಗವಾಗಿ ಪಾತ್ರೆ ತೊಳೆದ ರಾಹುಲ್ ಗಾಂಧಿ ಗೋಲ್ಡನ್ ಟೆಂಪಲ್ಗೆ ಭೇಟಿ

ಅಮೃತಸರ (ಪಂಜಾಬ್) : ಕಾಂಗ್ರೆಸ್ ನಾಯಕ, ಲೋಕಸಭೆ ಸಂಸದ ರಾಹುಲ್ ಗಾಂಧಿ ಅವರು ಸೋಮವಾರ ಅಮೃತಸರದ ಪ್ರಸಿದ್ಧ ಗೋಲ್ಡನ್ ಟೆಂಪಲ್ಗೆ ಭೇಟಿ ನೀಡಿ, ಸ್ವಯಂಸೇವೆಯ ಭಾಗವಾಗಿ ಭಕ್ತರು ಬಳಸಿದ ಪಾತ್ರೆಗಳನ್ನು ತೊಳೆದರು.ಇದಕ್ಕೂ ಮೊದಲು ಸಿಖ್ ಸಂಪ್ರದಾಯದಂತೆ ತಲೆಗೆ ನೀಲಿ ಬಣ್ಣದ ಬಟ್ಟೆ ಸುತ್ತಿ ದೇಗುಲದ ಗರ್ಭಗುಡಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯ ಬಳಿಕ ಸಿಖ್ಖರ ಅತ್ಯುನ್ನತ ಸ್ಥಾನ ಅಕಾಲ್ ತಕ್ತ್ಗೆ ಭೇಟಿ ನೀಡಿದರು. ಇಂದು ರಾಹುಲ್ ಇಲ್ಲಿ ನಡೆಯುವ ಫಲ್ಕಿ ಸೇವಾದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಪಂಜಾಬ್ನ […]
ನಾಗ್ಪುರ-ಬೆಂಗಳೂರು ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಪ್ರಯತ್ನಿಸಿದ ಹಿನ್ನೆಲೆ : ಪ್ರಯಾಣಿಕನ ಬಂಧನ, ಬಿಡುಗಡೆ

ಬೆಂಗಳೂರು: ಮಹಾರಾಷ್ಟ್ರದ ನಾಗ್ಪುರದಿಂದ ಬೆಂಗಳೂರಿಗೆ ಆಗಮಿಸಿದ ಇಂಡಿಗೋ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದರು.ಬಳಿಕ ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಘಟನೆ ಸೆಪ್ಟೆಂಬರ್ 30ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಪೊಲೀಸರ ಪ್ರಕಾರ, ಪ್ರಯಾಣಿಕ ಸ್ವಪ್ನಿಲ್ ಹೋಲೆ ವಿಮಾನದ ತುರ್ತು ನಿರ್ಗಮನ ಬಾಗಿಲಿನ ಪಕ್ಕದಲ್ಲಿ ಕುಳಿತಿದ್ದ. ಟೇಕ್ಆಫ್ಗೆ ಮುನ್ನ ವಿಮಾನ ಸಿಬ್ಬಂದಿ ಪ್ರಯಾಣಿಕರಿಗೆ ಮಾಹಿತಿ ನೀಡುತ್ತಿದ್ದಾಗ, ಸ್ವಪ್ನಿಲ್ ಎಮರ್ಜೆನ್ಸಿ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಯಾಕಾಗಿ ಆತ ಹೀಗೆ ವರ್ತಿಸಿದ ಎಂಬ […]