ರಜೌರಿಯಲ್ಲಿ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ: ಹ್ಯಾಂಡ್ಲರ್ ರಕ್ಷಣೆಗಾಗಿ ತನ್ನ ಪ್ರಾಣವನ್ನೇ ತೆತ್ತ ‘ಕೆಂಟ್’ ಆರ್ಮಿ ಶ್ವಾನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ ಮಂಗಳವಾರ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸೇನಾ ಯೋಧ ಮತ್ತು ಶಂಕಿತ ಪಾಕಿಸ್ತಾನಿ ಭಯೋತ್ಪಾದಕ ಗುಂಡಿನ ಚಕಮಕಿಯಲ್ಲಿ ಹತರಾಗಿದ್ದಾರೆ. ಸ್ಥಳದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರ ಜಾಡು ಹಿಡಿಯುತ್ತಿದ್ದ ಸೈನಿಕರ ತುಕುಡಿಯನ್ನು ಕೆಂಟ್ ಎಂಬ ಆರು ವರ್ಷದ ನಾಯಿ ಮುನ್ನಡೆಸುತ್ತಿತ್ತು. ಆರ್ಮಿಯ ಹೆಣ್ಣು ಶ್ವಾನ ಕೆಂಟ್ ‘ಆಪರೇಷನ್ ಸುಜಲಿಗಲ’ದ ಮುಂಚೂಣಿಯಲ್ಲಿತ್ತು. ಕೆಂಟ್ ಪಲಾಯನ ಮಾಡುವ ಭಯೋತ್ಪಾದಕರ ಜಾಡು ಹಿಡಿಯುತ್ತಾ ಸೈನಿಕರ ತುಕುಡಿಯನ್ನು ಮುನ್ನಡೆಸುತ್ತಿತ್ತು. ಈ ಸಂದರ್ಭ ಭಾರೀ […]
ಮೇಕ್ ಇನ್ ಇಂಡಿಯಾ ಯೋಜನೆಗೆ ರಷ್ಯಾ ಅಧ್ಯಕ್ಷರ ಶ್ಲಾಘನೆ: ಮೋದಿ ಸರಿಯಾದ ಕೆಲಸ ಮಾಡುತ್ತಿದ್ದಾರೆ ಎಂದ ಪುತಿನ್

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ವ್ಲಾಡಿವೋಸ್ಟಾಕ್ನಲ್ಲಿ ನಡೆದ 8ನೇ ಈಸ್ಟರ್ನ್ ಎಕನಾಮಿಕ್ ಫೋರಮ್ (EEF) ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳನ್ನು ಶ್ಲಾಘಿಸಿದರು. ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸುವಲ್ಲಿ ಪ್ರಧಾನಿ ಮೋದಿ “ಸರಿಯಾದ ಕೆಲಸ” ಮಾಡುತ್ತಿದ್ದಾರೆ ಎಂದು ಪುಟಿನ್ ಹೇಳಿದರು. 8 ನೇ ಇಇಎಫ್ನಲ್ಲಿ ಅವರ ಭಾಷಣದ ಸಮಯದಲ್ಲಿ, ಅವರು ದೇಶೀಯವಾಗಿ ಉತ್ಪಾದಿಸುವ ಆಟೋಮೊಬೈಲ್ಗಳನ್ನು ಬಳಸಿಕೊಳ್ಳುವ ಪ್ರಾಮುಖ್ಯತೆಯನ್ನು ಒತ್ತಿಹೇಳುವ ಮೂಲಕ ರಷ್ಯಾದ ನಿರ್ಮಿತ ಕಾರುಗಳ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ […]
ರಾಜಸ್ಥಾನ: ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದ ಟ್ರಕ್, ಕನಿಷ್ಠ 11 ಸಾವು; 12 ಜನ ಗಾಯಾಳು

ಭರತ್ಪುರ: ರಾಜಸ್ಥಾನದ ಭರತ್ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ. ಬಸ್ ರಾಜಸ್ಥಾನದ ಪುಷ್ಕರ್ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿದ್ದಾಗ ಮುಂಜಾನೆ 4.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇತುವೆ ಮೇಲೆ ಬಸ್ ಕೆಟ್ಟು ನಿಂತಿದ್ದಾಗ ಈ ಘಟನೆ ನಡೆದಿದೆ. ಬಸ್ ಚಾಲಕ ಮತ್ತು ಕೆಲವು ಪ್ರಯಾಣಿಕರು ಬಸ್ನ ಹಿಂದೆ ನಿಂತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಟ್ರಕ್ ವಾಹನಕ್ಕೆ […]
24 ಗಂಟೆಗಳಲ್ಲಿ 19 ಮಂದಿ ಸಾವು ; ಉತ್ತರ ಪ್ರದೇಶದಲ್ಲಿ ವರುಣಾರ್ಭಟ

ಲಕ್ನೋ (ಉತ್ತರ ಪ್ರದೇಶ): ರಾಜ್ಯದ ವಿವಿಧ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದ ಕಳೆದ 24 ಗಂಟೆಗಳ ಅವಧಿಯಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ನಿರಂತರ ಮಳೆಯಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಕೆಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.ಉತ್ತರ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿ ಪ್ರತ್ಯೇಕ ಅವಘಡಗಳಲ್ಲಿ ಹಲವರು ಸಾವಿಗೀಡಾಗಿದ್ದಾರೆ. ರಾಜ್ಯದ ಕೆಲವೆಡೆ ಮೇಲ್ಛಾವಣಿ ಕುಸಿತ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣಗಳು ವರದಿಯಾಗಿವೆ. ರಾಜಧಾನಿ ಲಕ್ನೋದ ಕೆಲವು ಪ್ರದೇಶಗಳು ಜಲಾವೃತಗೊಂಡಿವೆ. […]
ಭೂಕುಸಿತದಿಂದ ಜಮ್ಮು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ವರು ಸಾವು
ಜಮ್ಮು ಮತ್ತು ಕಾಶ್ಮೀರ: ಇಲ್ಲಿನರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಮಂಗಳವಾರ) ಭೂಕುಸಿತ ಸಂಭವಿಸಿತು. ಪರಿಣಾಮ ಟ್ರಕ್ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಆಗಸ್ಟ್ನಲ್ಲೂ ಸಂಭವಿಸಿತ್ತು ಗುಡ್ಡಕುಸಿತ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಪ್ರದೇಶದಲ್ಲಿ ಆಗಸ್ಟ್ 6ರಂದು ಗುಡ್ಡ ಕುಸಿತವಾಗಿತ್ತು. ಅಪಾರ ಪ್ರಮಾಣದ ಮಣ್ಣು ರಸ್ತೆ ಮೇಲೆ ಬೀಳುತ್ತಿರುವ ದೃಶ್ಯಗಳನ್ನು ಮೊಬೈಲ್ನಲ್ಲಿ ಪ್ರಯಾಣಿಕರು ಸೆರೆಹಿಡಿದಿದ್ದರು. ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಯಾವುದೇ ಪ್ರಾಣಹಾನಿಯಾಗಿರಲಿಲ್ಲ. ಜುಲೈ ತಿಂಗಳಲ್ಲೂ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಭಾರಿ ಮಳೆಯಿಂದಾಗಿ ಗುಡ್ಡದಿಂದ ಕಲ್ಲು, ಮಣ್ಣು ರಸ್ತೆ […]