ಉಡುಪಿ ಕೃಷ್ಣಮಠದಲ್ಲಿ ಸೌರಮಾನ ಯುಗಾದಿ ಆಚರಣೆ

ಉಡುಪಿ: ಇಂದು ಸೌರಮಾನ ಯುಗಾದಿ. ಉಡುಪಿ ಜಿಲ್ಲೆಯಲ್ಲಿ ವೈದಿಕ ಮತ್ತು ಜನಪದ ಸಂಪ್ರದಾಯದಂತೆ ಈ ಹಬ್ಬವನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಯ್ತು. ಕೃಷ್ಣಮಠದಲ್ಲಿ ಅಷ್ಟಮಠಾಧೀಶರ ಸಮ್ಮುಖದಲ್ಲಿ ಪಂಚಾಂಗ ಶ್ರವಣ, ಮಹೋತ್ಸವ ಜರುಗಿತು. ಉಡುಪಿಯಲ್ಲಿ ಸೌರಮಾನ ಪದ್ಧತಿಯಂತೆ ಯುಗಾದಿ ಆಚರಿಸಲಾಯ್ತು. ಕೃಷ್ಣ ದೇವರ ಮಠದಲ್ಲಿ ಜ್ಯೋತಿಷ್ಯರ ಮೂಲಕ ವರ್ಷದ ಗ್ರಹಗತಿಗಳನ್ನು ತಿಳಿಯಲು ಭಕ್ತಗಣ ಉತ್ಸುಕತೆಯಿಂದ ಭಾಗವಹಿಸಿದ್ದರು. ಕೃಷ್ಣ ದೇವರ ಸಮ್ಮುಖದಲ್ಲಿರುವ ಚಂದ್ರಶಾಲೆಯಲ್ಲಿ ಪುರೋಹಿತರಾದ ಸುದರ್ಶನ ಆಚಾರ್ಯರು ಪಂಚಾಂಗ ಶ್ರವಣ ನಡೆಸಿದರು. ಅಷ್ಟಮಠಾಧೀಶರು ಭಕ್ತರ ಜೊತೆ ಕುಳಿತು ವರ್ಷದ ಗ್ರಹಗತಿಗಳನ್ನು ಕೇಳಿದರು. ಉಡುಪಿ ಪಂಚಾಂಗಕ್ಕೆ […]
ಅಜೆಕಾರು ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆ, ಪ.ಪೂ. ಕಾಲೇಜು: ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

ಕಾರ್ಕಳ: ಅಜೆಕಾರು ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಿರ್ಮಾಣಗೊಂಡ ಶಿಲಾಮಯ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ ನಡೆಯಿತು. ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ ಆಶ್ರೀವಚನ ನೀಡಿ ಮಾತನಾಡಿ ತಾನು ಬದುಕುವ ಜತೆಗೆ ಇತರರನ್ನು ಬದುಕಲು ಬಿಡುವುದೇ ಜೀವನ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಸಕ ಸುನೀಲ್ ಕುಮಾರ್ ವಹಿಸಿ ಮಾತನಾಡಿ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಶಿಕ್ಷಣ ಕ್ರಾಂತಿ ಮಾಡಿದೆ ಎಂದರು. ಫಲಪುಷ್ಪ ಸಮರ್ಪಣೆಯನ್ನು […]
ಕಾರ್ಕಳ ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್

ಉಡುಪಿ: ಕಾರ್ಕಳದ ಗೊಮ್ಮಟೇಶ್ವರ ಬೆಟ್ಟದಲ್ಲಿ ಕ್ರಿ.ಶ.1432ರಲ್ಲಿ ಪ್ರತಿಷ್ಠಾಪನೆಗೊಂಡಿರುವ ಭಗವಾನ್ ಶ್ರೀಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಮುಂದಿನ ಕಾರ್ಯಕ್ರಮ 2027ರ ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ. ಇದಕ್ಕಾಗಿ ಎಲ್ಲಾ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಹಾಮಸ್ತಕಾಭಿಶೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ತಿಳಿಸಿದ್ದಾರೆ. ಕಾರ್ಕಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಲಯದ ಉದ್ಘಾಟನೆ ಮತ್ತು ಮಹಾಮಸ್ತಕಾಭಿಷೇಕದ ದಿನಾಂಕ ಘೋಷಣೆಯ ಕಾರ್ಯಕ್ರಮ ಎ.19ರಂದು ಬೆಳಿಗ್ಗೆ 10:30ಕ್ಕೆ ಕಾರ್ಕಳದ ದಾನಶಾಲೆ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಲಿದೆ […]
ಉಡುಪಿ: ಎ.11ರಂದು ಕಟಪಾಡಿ ಎಸ್ವಿಎಸ್ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ “ಶ್ರೀನಿವಾಸ ಕಲ್ಯಾಣೋತ್ಸವ”

ಉಡುಪಿ: ಕಟಪಾಡಿ ಎಸ್ವಿಎಸ್ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಏ. 11ರಂದು ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ತಿರುಪತಿಯಿಂದಲೇ ದೇವರ ವಿಗ್ರಹ ತಂದು, ತಿರುಪತಿ ತಿರುಮಲ ದೇವಸ್ಥಾನ ಸಮಿತಿಯ ಪ್ರಧಾನ ಅರ್ಚಕರಿಂದಲೇ ಕಲ್ಯಾಣೋತ್ಸವದ ಧಾರ್ಮಿಕ ಅನುಷ್ಠಾನ ಜರಗಲಿವೆ. ಮಧ್ಯಾಹ್ನ 3.30ಕ್ಕೆ ಕಟಪಾಡಿ ಪೇಟೆಯಲ್ಲಿ ಶ್ರೀನಿವಾಸ ದೇವರನ್ನು ಸ್ವಾಗತಿಸಿ, ಕಟಪಾಡಿ ಪೇಟೆಯಿಂದ ಕಲ್ಯಾಣ ಮಂಟಪದ ವೇದಿಕೆಗೆ ಮೆರವಣಿಗೆಯಲ್ಲಿ ಕರೆತರಲಾಗುವುದು’ ಎಂದರು. ಕೆ. ಕೃಷ್ಣಮೋಹನ್ ಪೈ ಯುಎಸ್ಎ ಅವರ ಸಂಕಲ್ಪದಂತೆ ಕಟಪಾಡಿ ವಿಜಯಾ ಪೈ, ಪುರುಷೋತ್ತಮ ಪೈ ಹಾಗೂ ಕುಟುಂಬಸ್ಥರ ವತಿಯಿಂದ ಕಟಪಾಡಿ […]
ನೀವೂ ತಿರುಪತಿಗೆ ಹೋಗುವ ಪ್ಲಾನ್ ಮಾಡ್ತಿದೀರಾ? ಹಾಗಾದ್ರೆ ಈ ವಿಷಯ ತಿಳಿದಿರಲೇಬೇಕು- ದರ್ಶನದ ಅವಧಿ ಇಲ್ಲಿದೆ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗೋದು ಭಗವದ್ಭಕ್ತರಿಗೆ ಪುಣ್ಯದ ಕೆಲಸ. ಜೀವಮಾನದಲ್ಲಿ ಒಮ್ಮೆಯಾದರೂ ತಿರುಪತಿ ತಿಮ್ಮಪ್ಪನ ದರ್ಶನ ಮಾಡುವ ಆಸೆ ಇರುತ್ತದೆ. ಅದರೊಂದಿಗೆ ಪ್ರತಿವರ್ಷವೂ ಇಲ್ಲಿಗೆ ಭೇಟಿ ನೀಡುವ ಭಕ್ತರೂ ಹಲವರಿರುತ್ತಾರೆ. ಇದೀಗ ಬೇಸಗೆ ರಜೆ ಪ್ರಾರಂಭವಾಗಿದೆ. ಹಾಗಾಗಿ ತಿರುಪತಿಗೆ ಹೋಗುವವರ ಸಂಖ್ಯೆಯೂ ದೊಡ್ಡದಿದೆ. ನೀವೂ ತಿರುಪತಿಗೆ ಹೋಗಲು ಪ್ಲಾನ್ ಮಾಡ್ತಿದೀರಾದ್ರೆ ಈ ವಿಷಯ ನಿಮ್ಮ ಗಮನದಲ್ಲಿರಲಿ ಏ.5 ಭಾನುವಾರ ಒಂದೇ ದಿನದಲ್ಲಿ 83,271 ಭಕ್ತರು ತಿಮ್ಮಪ್ಪನ ದರ್ಶನ ಮಾಡಿರುತ್ತಾರೆ. 25,018 ಜನರು ಕೆಲ ಸೇವೆಗಳಲ್ಲೂ ಭಾಗವಹಿಸಿದ್ರು. ಹೋದ […]