ವಿಟ್ಲಪಿಂಡಿ, ಕೃಷ್ಣಾಷ್ಟಮಿಗೆ ಬಿಗಿ ಪೊಲೀಸ್ ಬಂದೋಬಸ್ತ್

ಉಡುಪಿ: ಉಡುಪಿ ನಗರದ ಪ್ರಸಿದ್ಧ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಮಹೋತ್ಸವದ ಬಂದೋಬಸ್ತ್ಗಾಗಿ ಒಬ್ಬರು ಪೊಲೀಸ್ ಅಧೀಕ್ಷಕರು, ಒಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಇಬ್ಬರು ಡಿವೈಎಸ್ಪಿಗಳು, ಆರು ಪೊಲೀಸ್ ಇನ್ಸ್ಪೆಕ್ಟರ್ಗಳು, 25 ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳು ಹಾಗೂ 35 ಸಹಾಯಕ ಸಬ್ಇನ್ಸ್ಪೆಕ್ಟರ್ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, 186 ಹೆಡ್ ಕಾನ್ಸ್ಟೆಬಲ್, ಪೊಲೀಸ್ ಕಾನ್ಸ್ಟೆಬಲ್ […]
ವಿಶ್ವದ ಏಕೈಕ ‘ಓಂ’ ಆಕಾರದ ಶಿವ ದೇವಾಲಯ; ಇಲ್ಲಿದೆ 1,008 ಶಿವಲಿಂಗಗಳು

ದೇವಾಲಯಗಳ ವಾಸ್ತುಶಿಲ್ಪವೇ ಒಂದು ಅದ್ಭುತ. ‘ಓಂ ಆಶ್ರಮ’ ತನ್ನ ವಿಶಿಷ್ಟ ಆಕಾರದಿಂದಲೇ ಎಲ್ಲರ ಗಮನ ಸೆಳೆಯುತ್ತದೆ. ‘ಓಂ’ ಸಂಕೇತದ ಆಕಾರದಲ್ಲಿ ನಿರ್ಮಿಸಲಾದ ಭವ್ಯ ದೇವಾಲಯವು ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಅಪರೂಪದ ಸಂಗಮವಾಗಿದ್ದು, ರಾಜಸ್ಥಾನದ ಪಾಲಿ ಜಿಲ್ಲೆಯ ಜಾದನ್ ಗ್ರಾಮದಲ್ಲಿದೆ ಈ ದೇವಾಲಯ. ಸುಮಾರು 250 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ದೇವಾಲಯ ಸಂಕೀರ್ಣವು ನಾಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದೆ. ಸುಮಾರು 2,000 ಕಂಬಗಳ ಮೇಲೆ ನಿಂತಿರುವ ಮುಖ್ಯ ರಚನೆ ಸುಮಾರು 135 ಅಡಿ ಎತ್ತರ ಹೊಂದಿದೆ. 1,008 ಶಿವಲಿಂಗಗಳು, […]
ನಾಗರ ಪಂಚಮಿ: ಹುತ್ತಕ್ಕೆ ಹಾಲೆರೆಯುವ ಮುನ್ನ ಈ ವಿಷಯ ತಿಳಿಯಿರಿ; ನಾಗನಿಗೆ ಬೇಕಿರುವುದು ಹಾಲಲ್ಲ!

ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹಬ್ಬಗಳ ಸಂಭ್ರಮವೂ ಶುರುವಾಗುತ್ತದೆ. ಮಳೆಯಿಂದ ಹಸಿರಾದ ಪ್ರಕೃತಿ, ತುಂಬಿ ಹರಿಯುವ ನದಿಗಳು, ಹೊಲ-ಗದ್ದೆಗಳಲ್ಲಿ ಕಾಣಿಸುವ ಹೊಸ ಚೈತನ್ಯ… ಇವೆಲ್ಲದರ ನಡುವೆ ಮನೆಮನೆಗಳಲ್ಲೂ ಹಬ್ಬದ ಸಡಗರ ಮನೆ ಮಾಡುತ್ತದೆ. ಶ್ರಾವಣದ ಮೊದಲ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವುದು ನಾಗರ ಪಂಚಮಿ. ನಾಗನ ಕಲ್ಲಿಗೆ ಪೂಜೆ ಸಲ್ಲಿಸುವುದು, ಹುತ್ತಕ್ಕೆ ಹಾಲು ಎರೆಯುವುದು, ಹೂವು, ಅರಿಶಿನ-ಕುಂಕುಮ ಅರ್ಪಿಸುವುದು ನಮ್ಮಲ್ಲಿ ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಆದರೆ ಈ ಬಾರಿ ನಾಗರ ಪಂಚಮಿಯಂದು ಪೂಜೆ ಮಾಡುವಾಗ ಒಂದು ಪ್ರಶ್ನೆಯನ್ನು […]
ಕಾಲ್ನಡಿಗೆಯಲ್ಲೇ 3,550 ಮೆಟ್ಟಿಲೇರಿ ಹರಕೆ ಪೂರೈಸಿದ 116 ವರ್ಷದ ಲಕ್ಷ್ಮವ್ವ: ಕರ್ನಾಟಕದ ಈ ಛಲಗಾತಿ ಅಜ್ಜಿಯ ಸಾಹಸಕ್ಕೆ ಬೆರಗಾದ ಭಕ್ತರು

ತಿರುಪತಿ: ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು ಕರ್ನಾಟಕ ಮೂಲದ ಶತಾಯುಷಿ ವೃದ್ಧೆ ಲಕ್ಷ್ಮವ್ವ ಅವರು ತಮ್ಮ ಅಪರೂಪದ ಸಾಧನೆಯ ಮೂಲಕ ಸಾಬೀತುಪಡಿಸಿದ್ದಾರೆ. ಕುಟುಂಬ ಸದಸ್ಯರೊಂದಿಗೆ ತಿರುಮಲಕ್ಕೆ ಆಗಮಿಸಿದ ಅವರು, ಅಲಿಪಿರಿ ಮಾರ್ಗದ ಸುಮಾರು 3,550 ಮೆಟ್ಟಿಲುಗಳನ್ನು ಏರಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ತಲುಪಿರುವುದು ಭಕ್ತರಲ್ಲಿ ಆಶ್ಚರ್ಯ ಮೂಡಿಸಿದೆ. ಸ್ಥಳೀಯವಾಗಿ ಭೀಮವ್ವ ಎಂದೂ ಕರೆಯಲ್ಪಡುವ ಲಕ್ಷ್ಮವ್ವ ಅವರಿಗೆ ಕುಟುಂಬಸ್ಥರ ಮಾಹಿತಿ ಪ್ರಕಾರ 116 ವರ್ಷ ವಯಸ್ಸಾಗಿದೆ. ಅವರ ಅಧಿಕೃತ ವಯಸ್ಸಿನ ದಾಖಲೆಗಳು ಲಭ್ಯವಾಗದಿದ್ದರೂ, ಶತಾಯುಷಿಯಾಗಿರುವುದು ವಿಡಿಯೊಗಳಲ್ಲಿ […]
ಕಟೀಲ್ ದೇವಸ್ಥಾನದಲ್ಲಿ ಬದಲಾಗಿದೆ ರೂಲ್ಸ್: ಭೇಟಿ ನೀಡುವ ಮುನ್ನ ಈ ವಿಷಯ ತಿಳಿದಿರಲಿ

ಕಟೀಲು: ಇಲ್ಲಿನ ಶ್ರೀ ದುರ್ಗಾ ಪರಮೇಶ್ವರಿ Kateel Durga Parameshwari Temple ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಕ್ಷೇತ್ರದ ಪಾವಿತ್ರ್ಯತೆ ಮತ್ತು ಶಿಸ್ತು ಕಾಪಾಡಲು ದೇವಸ್ಥಾನ ಆಡಳಿತ ಮಂಡಳಿ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಈ ನಿಯಮಗಳನ್ನು ಮುಂಚಿತವಾಗಿ ತಿಳಿದುಕೊಂಡು ಭೇಟಿ ನೀಡುವುದು ಒಳ್ಳೆಯದು. ಸಂಪೂರ್ಣ ನಿಷೇಧ ಉಡುಗೆ ಮತ್ತು ಆಚರಣೆ ನಿಯಮಗಳು ಮಹಿಳೆಯರಿಗೆ ಸಂಬಂಧಿಸಿದ ನಿಯಮಗಳು ಪೂಜೆ ಮತ್ತು ಪ್ರಸಾದ ಸಂಬಂಧಿತ ಸೂಚನೆಗಳು ದೇವಸ್ಥಾನ ಆಡಳಿತ ಮಂಡಳಿ, ಹೆಚ್ಚಿನ […]