ಕಾಲ್ನಡಿಗೆಯಲ್ಲೇ 3,550 ಮೆಟ್ಟಿಲೇರಿ ಹರಕೆ ಪೂರೈಸಿದ 116 ವರ್ಷದ ಲಕ್ಷ್ಮವ್ವ: ಕರ್ನಾಟಕದ ಈ ಛಲಗಾತಿ ಅಜ್ಜಿಯ ಸಾಹಸಕ್ಕೆ ಬೆರಗಾದ ಭಕ್ತರು

ತಿರುಪತಿ: ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು ಕರ್ನಾಟಕ ಮೂಲದ ಶತಾಯುಷಿ ವೃದ್ಧೆ ಲಕ್ಷ್ಮವ್ವ ಅವರು ತಮ್ಮ ಅಪರೂಪದ ಸಾಧನೆಯ ಮೂಲಕ ಸಾಬೀತುಪಡಿಸಿದ್ದಾರೆ. ಕುಟುಂಬ ಸದಸ್ಯರೊಂದಿಗೆ ತಿರುಮಲಕ್ಕೆ ಆಗಮಿಸಿದ ಅವರು, ಅಲಿಪಿರಿ ಮಾರ್ಗದ ಸುಮಾರು 3,550 ಮೆಟ್ಟಿಲುಗಳನ್ನು ಏರಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ತಲುಪಿರುವುದು ಭಕ್ತರಲ್ಲಿ ಆಶ್ಚರ್ಯ ಮೂಡಿಸಿದೆ. ಸ್ಥಳೀಯವಾಗಿ ಭೀಮವ್ವ ಎಂದೂ ಕರೆಯಲ್ಪಡುವ ಲಕ್ಷ್ಮವ್ವ ಅವರಿಗೆ ಕುಟುಂಬಸ್ಥರ ಮಾಹಿತಿ ಪ್ರಕಾರ 116 ವರ್ಷ ವಯಸ್ಸಾಗಿದೆ. ಅವರ ಅಧಿಕೃತ ವಯಸ್ಸಿನ ದಾಖಲೆಗಳು ಲಭ್ಯವಾಗದಿದ್ದರೂ, ಶತಾಯುಷಿಯಾಗಿರುವುದು ವಿಡಿಯೊಗಳಲ್ಲಿ […]

ಕಟೀಲ್ ದೇವಸ್ಥಾನದಲ್ಲಿ ಬದಲಾಗಿದೆ ರೂಲ್ಸ್: ಭೇಟಿ ನೀಡುವ ಮುನ್ನ ಈ ವಿಷಯ ತಿಳಿದಿರಲಿ

ಕಟೀಲು: ಇಲ್ಲಿನ ಶ್ರೀ ದುರ್ಗಾ ಪರಮೇಶ್ವರಿ Kateel Durga Parameshwari Temple ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಕ್ಷೇತ್ರದ ಪಾವಿತ್ರ್ಯತೆ ಮತ್ತು ಶಿಸ್ತು ಕಾಪಾಡಲು ದೇವಸ್ಥಾನ ಆಡಳಿತ ಮಂಡಳಿ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಈ ನಿಯಮಗಳನ್ನು ಮುಂಚಿತವಾಗಿ ತಿಳಿದುಕೊಂಡು ಭೇಟಿ ನೀಡುವುದು ಒಳ್ಳೆಯದು. ಸಂಪೂರ್ಣ ನಿಷೇಧ ಉಡುಗೆ ಮತ್ತು ಆಚರಣೆ ನಿಯಮಗಳು ಮಹಿಳೆಯರಿಗೆ ಸಂಬಂಧಿಸಿದ ನಿಯಮಗಳು ಪೂಜೆ ಮತ್ತು ಪ್ರಸಾದ ಸಂಬಂಧಿತ ಸೂಚನೆಗಳು ದೇವಸ್ಥಾನ ಆಡಳಿತ ಮಂಡಳಿ, ಹೆಚ್ಚಿನ […]

ಸಾತ್ವಿಕ ಯಾಗ, ದಾನ, ಜ್ಞಾನ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ- ಒಡಿಯೂರು ಶ್ರೀ

ಉಡುಪಿ: ಯಾಗ, ದಾನ ಮತ್ತು ತಪಸ್ಸು ಇವು ಮೂರು ಕೂಡ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ. ಆದರೆ ಅವುಗಳಲ್ಲಿ ಶ್ರೇಷ್ಠವಾದುದು ಸಾತ್ವಿಕವಾದ ಯಾಗ, ದಾನ ಮತ್ತು ಜ್ಞಾನ. ಇವು ಮೂರಕ್ಕೂ ಅನುಕೂಲವಾಗುವಂತೆ ಪ್ರಸಾದ್ ರಾಜ್ ಕಾಂಚನ್ ಅವರು ಈ ಮಹಾರುದ್ರಯಾಗವನ್ನು ಆಯೋಜಿಸಿದ್ದಾರೆ. ಅದು ಸಾತ್ವಿಕವಾಗಿದ್ದು, ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಒಡಿಯೂರು ಗುರು ದೇವದತ್ತಾ ಸಂಸ್ಥಾನದ ಗುರು ದೇವಾನಂದ ಸ್ವಾಮೀಜಿ ಹೇಳಿದರು. ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್‌ರಾಜ್‌ ಕಾಂಚನ್‌ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಮಹಾ […]

ಕುಕ್ಕೆ ಸುಬ್ರಹ್ಮಣ್ಯ: ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಅನುಕೂಲಕ್ಕಾಗಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಹೊಸ ವೇಳಾಪಟ್ಟಿಯನ್ನು ಜಾರಿಗೆ ತಂದಿದ್ದು, ಭಕ್ತರಿಗೆ ಇದೀಗ ಪ್ರತಿದಿನ ಹೆಚ್ಚುವರಿ ಒಂದು ಗಂಟೆ ದರ್ಶನದ ಅವಕಾಶ ದೊರೆಯಲಿದೆ. ಈ ಮೊದಲು ಮಧ್ಯಾಹ್ನ 1.30ರಿಂದ 3.30ರವರೆಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತಿತ್ತು. ಆದರೆ ಹೊಸ ನಿರ್ಧಾರದಂತೆ ಇದೀಗ ಮಧ್ಯಾಹ್ನ 2.00ರಿಂದ 3.00ರವರೆಗೆ ಮಾತ್ರ ದೇವಸ್ಥಾನ ಬಂದ್ ಮಾಡಲಾಗುತ್ತದೆ. ಇದರಿಂದ ಮಧ್ಯಾಹ್ನದ ವೇಳೆಯಲ್ಲಿ ಭಕ್ತರಿಗೆ ಹೆಚ್ಚುವರಿ ದರ್ಶನ ಸೌಲಭ್ಯ […]

ಇಲ್ಲಿದೆ ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದರ ಹಿಂದಿನ ಅರ್ಥ!

ಹಿಂದೂ ಧರ್ಮ ಮತ್ತು ಭಾರತೀಯ ಸಂಪ್ರದಾಯದಲ್ಲಿ ವಿವಾಹವು ಕೇವಲ ಒಂದು ಸಾಮಾಜಿಕ ಕಾರ್ಯಕ್ರಮವಲ್ಲ, ಅದು ಪವಿತ್ರ ಸಂಸ್ಕಾರವೆಂದು ಪರಿಗಣಿಸಲಾಗುತ್ತದೆ. ಮದುವೆಯ ಸಂದರ್ಭದಲ್ಲಿ ವರ ವಧುವಿನ ಕೊರಳಿಗೆ ತಾಳಿ ಅಥವಾ ಮಾಂಗಲ್ಯಸೂತ್ರ ಕಟ್ಟುವ ಕ್ಷಣ ಅತ್ಯಂತ ಮಹತ್ವದ್ದಾಗಿದೆ. ಈ ತಾಳಿ ದಾಂಪತ್ಯ ಜೀವನದ ಶಾಶ್ವತ ಬಾಂಧವ್ಯದ ಪ್ರತೀಕವೆಂದು ನಂಬಲಾಗುತ್ತದೆ. ಆದರೆ ತಾಳಿ ಕಟ್ಟುವಾಗ ಸಾಮಾನ್ಯವಾಗಿ ಮೂರು ಗಂಟುಗಳನ್ನು ಹಾಕುವ ಸಂಪ್ರದಾಯದ ಹಿಂದೆ ಏನು ಅರ್ಥ ಇದೆ ಎಂಬುದನ್ನು ಅನೇಕರು ತಿಳಿದಿರಲಾರರು. ಹಿಂದೂ ಶಾಸ್ತ್ರಗಳ ಪ್ರಕಾರ ಈ ಮೂರು ಗಂಟುಗಳಿಗೆ […]